Homeಮುಖಪುಟ‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಸೋಮವಾರ ಸಂವಿಧಾನ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಕಪಿಲ್ ಮಿಶ್ರಾ, ಅಗತ್ಯ ಬಿದ್ದರೆ ಕಳೆದ ವರ್ಷ ಫೆಬ್ರವರಿ 23 ರಂದು ತಾವು ಮಾಡಿದ್ದನ್ನು “ಮತ್ತೆ” ಮಾಡುವುದಾಗಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಆಜ್ ಏಕ್ ಸಾಲ್ ಹೋ ಗಯಾ ಹೈ, ಇಸ್ಲಿಯೆ ಯೆ ಬಾತ್ ದೋಬಾರಾ ಬೊಲ್ನಾ ಚಾಹತಾ ಹೂ- ಫೆಬ್ರವರಿ 23 ಪಿಚ್ಲ್ ಸಾಲ್ ಜೋ ಕಿಯಾ, ಅಗರ್ ಜರೂರತ್ ಪಡೆ ತೋಹ್ ದೋಬಾರಾ ಕರ್ ಲುಂಗಾ (ಈಗ ಒಂದು ವರ್ಷವಾಯಿತು. ಅದಕ್ಕೆ ನಾನು ಈ ಮಾತನ್ನು ಮತ್ತೆ ಹೇಳಲು ಬಯಸುತ್ತೇನೆ. ಫೆಬ್ರವರಿ 23 ರಂದು ನಾನು ಮಾಡಿದ್ದನ್ನು ಮತ್ತೆ ಮಾಡುವ ಅವಶ್ಯಕತೆ ಬಿದ್ದರೆ, ನಾನು ಅದನ್ನು ಮತ್ತೆ ಮಾಡುತ್ತೇನೆ) ” ಎಂದು ಅವರು ಹೇಳಿದ್ದಾರೆ.

‘ದೆಹಲಿ ರಾಯಿಟ್ಸ್: ದಿ ಅನ್ಟೋಲ್ಡ್ ಸ್ಟೋರಿ’ ಪುಸ್ತಕದ ಲೇಖಕರೊಂದಿಗೆ ವೇದಿಕೆ ಹಂಚಿಕೊಂಡು ಮೇಲಿನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿ ಅಂಕಿತ್ ಶರ್ಮಾ ಮತ್ತು ಕಾನ್‌ಸ್ಟೇಬಲ್ ರತನ್ ಲಾಲ್ ಅವರನ್ನು ಉಳಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು.

ಸರಿಯಾಗಿ ಒಂದು ವರ್ಷದ ಹಿಂದೆ ಫೆಬ್ರುವರಿ 23ರಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕಳೆದ ವರ್ಷ ಈಶಾನ್ಯ ದೆಹಲಿಯಲ್ಲಿ ಸಿಎಎ ಪರ ರ‍್ಯಾಲಿಯ ನೇತೃತ್ವ ವಹಿಸಿದ್ದರು ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಈ ಪ್ರದೇಶದಿಂದ ತೆರವುಗೊಳಿಸುವಂತೆ ಪೊಲೀಸರಿಗೆ ಎಚ್ಚರಿಕೆ ನೀಡಿದ್ದರು, ವಿಫಲವಾದರೆ ತಾವು ಬೀದಿಗೀಳಿಯ ಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲೇ ಪೊಲೀಸರಿಗೆ ವಾರ್ನಿಂಗ್ ಮಾಡಿದ್ದರು.

ಕಳೆದ ವರ್ಷ ಫೆಬ್ರವರಿ 23 ರಂದು ಅವರು ಟ್ವೀಟ್ ಮಾಡಿದ ವೀಡಿಯೊದಲ್ಲಿ, ಅವರು ಮೌಜ್ಪುರ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರವಾದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ ಮತ್ತು ಅವರು ಪೊಲೀಸರಿಗೆ ಎಚ್ಚರಿಕೆ ನೀಡಿದಾಗ ಡಿಸಿಪಿ (ಈಶಾನ್ಯ) ವೇದ ಪ್ರಕಾಶ್ ಸೂರ್ಯ ಅವರ ಪಕ್ಕದಲ್ಲೆ ನಿಂತಿದ್ದಾರೆ.

ಮರುದಿನ ಆ ಜಿಲ್ಲೆಯಲ್ಲಿ ಗಲಭೆ-ಹಿಂಸಾಚಾರ ಆರಂಭವಾಗಿ 53 ಮಂದಿ ಸಾವನ್ನಪ್ಪಿದ್ದರು.
“ಜಿಹಾದಿ ಪಡೆಗಳು ದೆಹಲಿಯಲ್ಲಿ ಗಲಭೆಗಳನ್ನು ರೂಪಿಸಿ ಒಂದು ವರ್ಷವಾಗಿದೆ. ಗಣರಾಜ್ಯೋತ್ಸವದಂದು ಏನಾಯಿತು ಎಂಬುದರಂತೆಯೇ ಈಗಲೂ ಅದೇ ಮಾದರಿಯನ್ನು ನೋಡಲಾಗುತ್ತಿದೆ. ವಿಧ್ವಂಸಕರು ಎಂದು ಕರೆಯಲ್ಪಡುವವರು ರಾಜಧಾನಿಯಲ್ಲಿ ಶಾಂತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ, ಭಾರತದ ವಿರೋಧಿ ಪಡೆಗಳ ನೆರವು ಮತ್ತು ಧನಸಹಾಯವನ್ನು ದೇಶದ ಒಳಗೆ ಮತ್ತು ಹೊರಗಿನಿಂದ ಪಡೆಯುತ್ತಿದ್ದಾರೆ. ಮತ್ತು ‘ಪ್ರದರ್ಶನ್ ಸೆ ದಂಗಾ ತಕ್ (ಪ್ರತಿಭಟನೆಯಿಂದ ಗಲಭೆಗಳವರೆಗೆ)’ ಈ ಮಾದರಿ ತುಂಬಾ ಸ್ಪಷ್ಟವಾಗಿದೆ” ಎಂದು ಅವರು ಪರೋಕ್ಷವಾಗಿ ರೈತ ಪ್ರತಿಭಟನೆಯ ಮೇಲೆ ಆರೋಪ ಮಾಡಿದ್ದಾರೆ.

“ನಾವು ಗಲಭೆಯ ಹಿಂದೂ ಸಂತ್ರಸ್ತರಿಗೆ ಪ್ರತ್ಯೇಕವಾಗಿ ಸಹಾಯ ಮಾಡಿದ್ದೇವೆ. ತದನಂತರ ನಾವು ಇನ್ನೊಂದು ಬದಿಗೆ ಏಕೆ ಸಹಾಯ ಮಾಡುವುದಿಲ್ಲ ಎಂದು ಪ್ರಶ್ನಿಸಲಾಗಿತು. ವಕ್ಫ್ ಮಂಡಳಿ, ಇಡೀ ದೆಹಲಿ ಸರ್ಕಾರ ಅವರ ಹಿಂದೆ ನಿಂತಿದೆ. ಮಾಧ್ಯಮ, ಎನ್‌ಜಿಒಗಳು ಎಲ್ಲರೂ ಅವರೊಂದಿಗೆ ಇವೆ. ನಾವೇಕೆ ಸಹಾಯ ಮಾಡಬೇಕು ”ಎಂದು ಮಿಶ್ರಾ ಹೇಳಿದ್ದಾರೆ.

“ಈ ಪುಸ್ತಕವು ಗಲಭೆಯ ಸಂಚುಕೋರರ ಬಗ್ಗೆ ಬಹಳಷ್ಟು ಹೊಂದಿದೆ. ಆದ್ದರಿಂದ ನೀವು ನನ್ನ ಬಗ್ಗೆ ಪುಸ್ತಕದಲ್ಲಿ ಹೆಚ್ಚು ಕಾಣುವುದಿಲ್ಲ” ಎಂದು ಅವರು ನಗುತ್ತಾ ಹೇಳಿದರು.

ಈ ಪುಸ್ತಕವನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲೆ ಮೋನಿಕಾ ಅರೋರಾ ಇತರ ಕೆಲವರೊಂದಿಗೆ ಸೇರಿ ಬರೆದಿದ್ದಾರೆ. ಕಳೆದ ವರ್ಷ ಬ್ಲೂಮ್ಸ್‌ಬರಿ ಪ್ರಕಟಣೆಯಿಂದ ಹೊರ ಹೋದ ನಂತರ ಇದನ್ನು ಗರುಡ ಪ್ರಕಾಶನ ಪ್ರಕಟಿಸಿದೆ.


ಇದನ್ನೂ ಓದಿ: ಆಪ್ ಮುಖಂಡರ ಮೇಲೆ ಆರೋಪ: ಬೇಷರತ್ ಕ್ಷಮೆ ಕೇಳಿದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...