Homeಮುಖಪುಟಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ...

ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ರೈತ ಹೋರಾಟದ ಸ್ಫೂರ್ತಿಗಳಾದ ಸಹಜಾನಂದ್‌ ಸರಸ್ವತಿ ಮತ್ತು ಸರ್ದಾರ್‌ ಅಜಿತ್‌ ಸಿಂಗ್‌ರ ನೆನಪಿನಲ್ಲಿ ದೆಹಲಿ ಗಡಿಗಳಲ್ಲಿ ಪಗಡಿ ಸಂಭಾಲ್‌ ದಿನ ಆಚರಣೆ ಇಂದು ನಡೆಯುತ್ತಿದೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ 91ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಂಯುಕ್ತ ಕಿಸಾನ್ ಮೋರ್ಚಾ ‘ಪಗಡಿ ಸಂಭಲ್ ದಿವಸ್’ (ಚಳವಳಿಯ ಸಂಕೇತ ಮತ್ತು ಆತ್ಮ ಪೇಟದ ದಿನ) ಆಚರಣೆಗೆ ಕರೆ ನೀಡಿತ್ತು. ಅದರ ಭಾಗವಾಗಿ ಹುತಾತ್ಮ ಕ್ರಾಂತಿಕಾರಿ ಭಗತ್‌ಸಿಂಗ್‌ ಸಂಬಂಧಿಕರು ಸಿಂಘು ಗಡಿಗೆ ಭೇಟಿ ನೀಡಿ ಹೋರಾಟ ನಿರತ ರೈತರಿಗೆ ಬೆಂಬಲ ಘೋಷಿಸಿದ್ದಾರೆ.

ಅಭಯ್ ಸಂಧು, ತೇಜಿ ಸಂಧು, ಅನುಸ್ ಪ್ರಿಯಾ ಸಂಧು ಮತ್ತು ಗುರ್ಜೀತ್ ಕೌರ್ ಸೇರಿದಂತೆ ಹುತಾತ್ಮ ಭಗತ್ ಸಿಂಗ್ ಅವರ ಕುಟುಂಬ ಸದಸ್ಯರು ಸಿಂಘು ಗಡಿಯಲ್ಲಿ ನಡೆದ ಪಗ್ಡಿ ಸಂಭಲ್ ದಿನ ಆಚರಣೆಯಲ್ಲಿ ಭಾಗಿಯಾದರು. ರೈತ ಹೋರಾಟಗಾರ ದರ್ಶನ್ ಪಾಲ್ ಸೇರಿದಂತೆ ಇತರ ಮುಖಂಡರಿಗೆ ಭಗತ್‌ಸಿಂಗ್‌ರವರ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಲಾಯಿತು.

‘ಪಗ್ಡಿ ಸಂಭಲ್ ದಿವಸ್’ ಎಂದರೇನು?

1907 ರ ಮಾರ್ಚ್ 3 ರಂದು ಲಿಯಾಲ್‌ಪುರದಲ್ಲಿ ನಡೆದ ಬೃಹತ್ ರ‍್ಯಾಲಿಯಲ್ಲಿ, ‘ಜಂಗ್ ಸ್ಯಾಲ್’ ಪತ್ರಿಕೆಯ ಸಂಪಾದಕ ಬಂಕೆ ದಯಾಲ್ ಅವರು, “ಪಗ್ಡಿ ಸಂಭಲ್ ಜಟ್ಟಾ, ಪಗ್ಡಿ ಸಂಭಾಲ್ ಓಯೆ” ಹಾಡನ್ನು ಪರಿಚಯಿಸಿದರು. ಅದು ಚಳವಳಿಯ ಸಂಕೇತ ಮತ್ತು ಆತ್ಮವಾಯಿತು.

ಬ್ರಿಟಿಷರಿಗೆ ಕೃಷಿ ತೆರಿಗೆ ಪಾವತಿಸುವುದನ್ನು ವಿರೋಧಿಸಿ ಆರಂಭವಾದ ಚಳವಳಿ `ಪಗಡಿ ಸಂಭಾಲ್‌ ಜಟ್ಟ’. ಬ್ರಿಟಿಷರು ಅಂಗೀಕರಿಸಿದ್ದ ಪಂಜಾಬ್‌ ಭೂ ವಸಹಾತು ಕಾಯ್ದೆ, ದೋವಾಬ್‌ ಬಾರಿ ಕಾಯ್ದೆ ಹಾಗೂ ಪಂಜಾಬ್‌ ಭೂ ಏಲಿಯನೇಷನ್ ಕಾಯ್ದೆ ವಿರುದ್ಧ ನಡೆದ ಹೋರಾಟ ಇದಾಗಿದೆ.

ಸುಮಾರು 9 ತಿಂಗಳ ಕಾಲ ನಡೆದ ಈ ದೀರ್ಘ ಹೋರಾಟವು ಬ್ರಿಟಿಷರು ಕಾನೂನುಗಳನ್ನು ರದ್ದು ಗೊಳಿಸುವುದರೊಂದಿಗೆ ಕೊನೆಗೊಂಡಿತು.

ಈ ರೈತ ಹೋರಾಟದ ಸ್ಫೂರ್ತಿಗಳಾದ ಸಹಜಾನಂದ್‌ ಸರಸ್ವತಿ ಮತ್ತು ಸರ್ದಾರ್‌ ಅಜಿತ್‌ ಸಿಂಗ್‌ರ ನೆನಪಿನಲ್ಲಿ ದೆಹಲಿ ಗಡಿಗಳಲ್ಲಿ ಪಗಡಿ ಸಂಭಾಲ್‌ ದಿನ ಆಚರಣೆ ಇಂದು ನಡೆಯುತ್ತಿದೆ.

ಅಜಯ್ ದೇವಗನ್ ನಾಯಕ ನಟನಾಗಿ ಅಭಿನಯಿಸಿರುವ ‘ದಿ ಲೆಜೆಂಡ್ ಆಫ್ ಭಗತ್‌ ಸಿಂಗ್’ ಚಿತ್ರದಲ್ಲಿ ಇದೇ ಹಾಡನ್ನು ಬಳಸಿದ್ದು ಅದು ಭಾರತದಾದ್ಯಂತ ಪ್ರಸಿದ್ದಿಯಾಗಿದೆ.

ಸಹಜಾನಂದ ಮತ್ತು ಅಜಿತ್ ಸಿಂಗ್: ಕ್ರಾಂತಿಕಾರಿ ರೈತ ಹೋರಾಟಕ್ಕೆ ಸ್ಪೂರ್ತಿಯ ಚಿಲುಮೆಗಳು

ಉತ್ತರಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ 22 ಫೆಬ್ರವರಿ 1889 ರಂದು ಜನಿಸಿ, ಜೂನ್ 26, 1950 ರಂದು ನಿಧನರಾದ ಸಹಜಾನಂದ್ ಸರಸ್ವತಿ ಅವರ ನಿಜವಾದ ಹೆಸರು ನವರಂಗ್ ರೈ. ಹೋರಾಟ ಮನೋಭಾವದ ಸಹಜಾನಂದರು ಬಹುಮುಖ ಪ್ರತಿಭೆ. ಕ್ರಾಂತಿಕಾರಿ ರೈತ ನಾಯಕ, ಇತಿಹಾಸಕಾರ, ದಾರ್ಶನಿಕ, ಬರಹಗಾರ… ಅವರ ಮುಖ್ಯ ಬರಹ-ಕೃತಿ ಬಿಹಾರವನ್ನು ಕೇಂದ್ರೀಕರಿಸಿದೆ. ಅವರು ಬಿಹ್ತಾದಲ್ಲಿ ಆಶ್ರಮವನ್ನು ಸ್ಥಾಪಿಸಿದ್ದರು ಮತ್ತು ಅಲ್ಲಿಂದ ತಮ್ಮ ವೃದ್ದಾಪ್ಯದ ದಿನಗಳಲ್ಲಿ ತಮ್ಮ ಹೆಚ್ಚಿನ ಕಾರ್ಯಗಳನ್ನು ನಿರ್ವಹಿಸಿದರು.

ಸಹಜಾನಂದ್ ಸರಸ್ವತಿ

ಸಹಜಾನಂದರು 1929 ರಲ್ಲಿ ಬಿಹಾರ ಪ್ರಾಂತೀಯ ಕಿಸಾನ್ ಸಭೆಯನ್ನು (ಬಿಪಿಕೆಎಸ್) ರಚಿಸಿದರು. ಜಮೀನ್ದಾರರಿಂದ ಭೂ ಹಿಡುವಳಿ ಕುರಿತಾಗಿ ರೈತರ ಮೇಲೆ ನಡೆಯುತ್ತಿದ್ದ ದಾಳಿಗಳ ವಿರುದ್ಧ ರೈತರ ಕುಂದುಕೊರತೆಗಳನ್ನು ಒಟ್ಟುಗೂಡಿಸುವ ಸಲುವಾಗಿ ಈ ಸಂಘಟನೆ-ಹೋರಾಟವನ್ನು ಅವರು ಆರಂಭಿಸಿದರು. ಆ ಮೂಲಕ ಭಾರತದಲ್ಲಿ ರೈತರ ಚಳುವಳಿಗಳಿಗೆ ನಾಂದಿ ಹಾಡಿದರು. ಕ್ರಮೇಣ ರೈತ ಚಳುವಳಿ ತೀವ್ರಗೊಂಡಿತು ಮತ್ತು ಭಾರತದ ಉಳಿದ ಭಾಗಗಳಿಗೆ ಹರಡಿತು. ಇದು 1936 ರಲ್ಲಿ ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ರಚನೆಗೆ ಕಾರಣವಾಯಿತು, ಅವರು ಅದರ ಮೊದಲ ಅಧ್ಯಕ್ಷರಾಗಿ ಆಯ್ಕೆಯಾದರು. ಕಿಸಾನ್ ಪ್ರಣಾಳಿಕೆ ಜಮೀನ್ದಾರಿ ವ್ಯವಸ್ಥೆಯನ್ನು ರದ್ದುಪಡಿಸಬೇಕು ಮತ್ತು ಗ್ರಾಮೀಣ ಸಾಲಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿತು. ಆ ಜಮೀನ್ದಾರರನ್ನು ಬ್ರಿಟಿಷ್ ಸರ್ಕಾರ ಆದಾಯ ಸಂಗ್ರಹಕ್ಕಾಗಿ ನೇಮಕ ಮಾಡಿಕೊಂಡಿತ್ತು.

ಭೂ ಮಾಲೀಕತ್ವವನ್ನು ಉಳಿಸಲು ಮತ್ತು ರೈತರ ಉಳುಮೆಯ ಹಕ್ಕುಗಳನ್ನು ಉಳಿಸಿಕೊಳ್ಳಲು ನಡೆದ ಈ ಚಳುವಳಿ, ಬಿಹಾರ ಮತ್ತು ಯುನೈಟೆಡ್ ಪ್ರಾಂತ್ಯದ ಕಾಂಗ್ರೆಸ್ ಸರ್ಕಾರಗಳೊಂದಿಗೆ ಸಂಘರ್ಷ ಎದುರಿಸಬೇಕಾಗಿತು.

ಸಹಜಾನಂದ ಸರಸ್ವತಿ 1937-1938 ರಲ್ಲಿ ಬಿಹಾರದಲ್ಲಿ ಬಕಾಶ್ತ್ ಚಳವಳಿಯನ್ನು ಸಂಘಟಿಸಿ ಮುನ್ನಡೆಸಿದರು. ಬಕಾಶ್ತ್ ಎಂದರೆ ಸ್ವಯಂ-ಕೃಷಿ, ಸ್ವಯಂ ಉಳುಮೆ…. ಈ ಆಂದೋಲನವು ಜಮೀನ್ದಾರರ ಬಕಾಶ್ತ್ ಜಮೀನುಗಳಿಂದ ಟೆನೆಂಟ್‌ಗಳನ್ನು ಹೊರಹಾಕುವುದರ ವಿರುದ್ಧವಾಗಿತ್ತು. ಇದು ಬಿಹಾರ ಹಿಡುವಳಿ ಕಾಯ್ದೆ ಮತ್ತು ಬಕಾಶ್ತ್ ಭೂ ತೆರಿಗೆಯನ್ನು ಅಂಗೀಕರಿಸಲು ಕಾರಣವಾಯಿತು.

ಕ್ವಿಟ್ ಇಂಡಿಯಾ ಚಳವಳಿಯ ಸಂದರ್ಭದಲ್ಲಿ ಸಹಜಾನಂದರನ್ನು ಬಂಧಿಸಲಾಗಿತ್ತು.

ಅಜಿತ್ ಸಿಂಗ್, (ಭಗತ್‌ ಸಿಂಗ್‌ರವರ ಚಿಕ್ಕಪ್ಪ)

ಆ ಸಮಯದಲ್ಲಿ ಪಂಜಾಬ್‌ನ ರೈತರು ಹೊಸ ವಸಾಹತುಶಾಹಿ ಕಾನೂನುಗಳಾದ ಹೊಸ ವಸಾಹತು ಕಾಯ್ದೆ ಮತ್ತು ‘ದೋಆಬ್ ಬಾರಿ’ ಕಾಯ್ದೆಯ ವಿರುದ್ಧ ಕುದಿಯುತ್ತಿದ್ದರು. ಈ ಕಾಯ್ದೆಗಳ ಹಿನ್ನೆಲೆ ಏನೆಂದರೆ, ಬ್ರಿಟಿಷ್ ಸರ್ಕಾರವು ಚೆನಾಬ್ ನದಿಯಿಂದ ನೀರನ್ನು ಸೆಳೆಯಲು ಕಾಲುವೆಗಳನ್ನು ನಿರ್ಮಿಸಿ, ಅದನ್ನು ಜನವಸತಿ ಇಲ್ಲದ ಪ್ರದೇಶಗಳಲ್ಲಿ ವಸಾಹತುಗಳನ್ನು ಸ್ಥಾಪಿಸಲು ಲಿಯಾಲ್‌ಪುರಕ್ಕೆ (ಈಗ ಪಾಕಿಸ್ತಾನದಲ್ಲಿದೆ) ಹರಿಸತೊಡಗಿತು. ಹಲವಾರು ಸೌಕರ್ಯಗಳೊಂದಿಗೆ ಉಚಿತ ಭೂಮಿಯನ್ನು ನೀಡುವುದಾಗಿ ಭರವಸೆ ನೀಡಿದ ಬ್ರಿಟಿಷ್ ಸರ್ಕಾರ, ಜಲಂಧರ್, ಅಮೃತಸರ, ಮತ್ತು ಹೋಶಿಯಾರ್‌ಪುರದ ರೈತರು ಮತ್ತು ಮಾಜಿ ಸೈನಿಕರನ್ನು ಅಲ್ಲಿ ನೆಲೆಸಲು ಮನವೊಲಿಸಿತ್ತು.

ಈ ಜಿಲ್ಲೆಗಳ ರೈತರು ತಮ್ಮ ಮೂಲ ಭೂಮಿ ಮತ್ತು ಆಸ್ತಿಯನ್ನು ಬಿಟ್ಟು, ಹೊಸ ಪ್ರದೇಶಗಳಲ್ಲಿ ನೆಲೆಸಿದರು ಮತ್ತು ಬಂಜರು ಭೂಮಿಯನ್ನು ಕೃಷಿಗೆ ಯೋಗ್ಯವಾಗಿಸಲು ಶ್ರಮಿಸಿದರು. ಆದರೆ ಅವರು ಹಾಗೆ ಮಾಡಿದ ಕೂಡಲೇ, ಸರ್ಕಾರವು ಈ ಫಲವತ್ತಾದ ಭೂಮಿಯ ಒಡೆಯ ತಾನೇ ಎಂದು ಘೋಷಿಸಲು, ರೈತರಿಗೆ ಮಾಲೀಕತ್ವದ ಹಕ್ಕನ್ನು ನಿರಾಕರಿಸಲು ಹೊಸ ಕಾನೂನುಗಳನ್ನು ಜಾರಿಗೆ ತಂದಿತು. ರೈತರು ಈ ಜಮೀನುಗಳಲ್ಲಿ ಮರಗಳನ್ನು ಕಡಿಯಲು ಸಾಧ್ಯವಿರಲಿಲ್ಲ, ಮನೆಗಳು ಅಥವಾ ಗುಡಿಸಲುಗಳನ್ನು ನಿರ್ಮಿಸಲು ಅಥವಾ ಅಂತಹ ಭೂಮಿಯನ್ನು ಮಾರಾಟ ಮಾಡಲು ಅಥವಾ ಖರೀದಿಸಲು ಅವಕಾಶವಿರಲಿಲ್ಲ್ಲ ಮತ್ತು ಹಿರಿಯ ಮಗನಿಗೆ ಮಾತ್ರ ತನ್ನ ತಂದೆಯಿಂದ ಬೇಸಾಯ ಮಾಡಿದ ಭೂಮಿಗೆ ಪ್ರವೇಶಿಸಲು ಅವಕಾಶವಿತ್ತು. ಇದರಲ್ಲಿ ಏನನ್ನಾದರೂ ಉಲ್ಲಂಘಿಸಿದರೆ, ಜಮೀನು ಸರ್ಕಾರದ ಆಸ್ತಿಯಾಗಿ ಬಿಡುತ್ತಿತ್ತು.

ಅಜಿತ್ ಸಿಂಗ್

20 ಲಕ್ಷ ಎಕರೆ ಭೂಮಿಗೆ ನೀರಾವರಿ ಮಾಡಲು ಕಾಲುವೆಗಳ ಮೇಲೆ ವಿಧಿಸಲಾಗಿದ್ದ ತೆರಿಗೆಗಳಲ್ಲಿ, ಸರ್ಕಾರವು ತನ್ನ ಆರಂಭಿಕ ಹೂಡಿಕೆಯನ್ನು ಮರಳಿ ಪಡೆಯಿತಲ್ಲದೇ, ಅಬ್ಬಾಶಿ ತೆರಿಗೆಯ ಆಧಾರದಲ್ಲಿ ವಾರ್ಷಿಕ 7 ಲಕ್ಷ ರೂಪಾಯಿಗಳನ್ನು ಅಕ್ರಮವಾಗಿ ಗಳಿಸತೊಡಗಿತು.

ಅಜಿತ್ ಸಿಂಗ್ ಮತ್ತು ಅವರ ಒಡನಾಡಿಗಳು ಈ ವಿಷಯಗಳ ಬಗ್ಗೆ ಜನಪ್ರಿಯ ಸಾಮೂಹಿಕ ಪ್ರತಿರೋಧವನ್ನು ಬೆಳೆಸಿದರು. ಈ ಆಂದೋಲನವನ್ನು ಮುನ್ನಡೆಸಲು ಕಾಂಗ್ರೆಸ್ ವಿಫಲವಾಗಿದೆ, ಮಸೂದೆಯನ್ನು ಈಗಾಗಲೇ ಕಾನೂನಾಗಿ ಅಂಗೀಕರಿಸಲಾಗಿದೆ ಎಂದು ವಾದಿಸಿದರು. ರೈತ ವಿರೋಧಿ ಕಾನೂನುಗಳಿಗೆ ನಿರ್ಭೀತ ಪ್ರತಿರೋಧವನ್ನು ವ್ಯಕ್ತಪಡಿಸುತ್ತಿದ್ದ ಅಜಿತ್ ಸಿಂಗ್ ಮತ್ತು ಅವರ ಭಾರತ್ ಮಾತಾ ಸಮಾಜದ ನಾಯಕತ್ವವನ್ನು ರೈತರು ಒಪ್ಪಿಕೊಂಡರು.

ಆಗ, ಲಾಹೋರ್ ಮತ್ತು ಅದರ ನೆರೆಹೊರೆಯ ಪ್ರದೇಶಗಳಲ್ಲಿ ಸಾವಿರಾರು ಜನರು ಭಾಗವಹಿಸಿದ ರ‍್ಯಾಲಿಗಳು, ಪ್ರದರ್ಶನಗಳು ಮತ್ತು ಸಾಮೂಹಿಕ ಸಮಾವೇಶಗಳ ನಿಜವಾದ ಅಲೆ ಕಾಣಿಸಿಕೊಂಡಿತು. ಈ ಸಭೆಗಳು ಈ ದಮನಕಾರಿ ಕಾನೂನುಗಳ ಬಗ್ಗೆ ಮತ್ತು ಬ್ರಿಟಿಷ್ ವಸಾಹತುಶಾಹಿಯಿಂದ ಧ್ವಂಸಗೊಂಡ ರಾಷ್ಟ್ರದ ನಿಜವಾದ ಚಿತ್ರಣದ ಬಗ್ಗೆ ಚರ್ಚಿಸಿದವು. ಅಂತಿಮವಾಗಿ ವಿದೇಶಿ ಆಡಳಿತದ ವಿರುದ್ಧ ಸಂಪೂರ್ಣ ದಂಗೆಗಾಗಿ ಪ್ರಚೋದಿಸುವ ಕರೆಯೊಂದಿಗೆ ಕೊನೆಗೊಂಡವು. ಅಜಿತ್ ಸಿಂಗ್ ಅವರ ಭಾಷಣಗಳನ್ನು ಕೇಳದಂತೆ ನಿಷೇಧ ಹೊರಡಿಸಲಾಗಿತ್ತು!

-ಎಐಕೆಎಂಎಸ್ ಪ್ರಕಟಣೆ


ಇದನ್ನೂ ಓದಿ: ದೇಶಕ್ಕಾಗಿ 3 ಯುದ್ಧಗಳಲ್ಲಿ ಹೋರಾಡಿದ್ದೆ; ಆದರೆ ಈಗ ನಾನು ಭಯೋತ್ಪಾದಕ ಅಂತೆ! – 80 ವರ್ಷದ ಗುರುಮುಖ್ ಸಿಂಗ್ ವಿಷಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...