Homeಕರ್ನಾಟಕಯತ್ನಾಳ್ ಹಿಂದೂತ್ವವಾದಿಯಾಗಿರುವುದಕ್ಕೆ ಖುಷಿ ಇದೆ, ಪಕ್ಷದ ಶಿಸ್ತು ಕಾಪಾಡಬೇಕು: ಈಶ್ವರಪ್ಪ

ಯತ್ನಾಳ್ ಹಿಂದೂತ್ವವಾದಿಯಾಗಿರುವುದಕ್ಕೆ ಖುಷಿ ಇದೆ, ಪಕ್ಷದ ಶಿಸ್ತು ಕಾಪಾಡಬೇಕು: ಈಶ್ವರಪ್ಪ

- Advertisement -
- Advertisement -

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಂದು ಪ್ರಕಾರದ ಹಿಂದೂತ್ವವಾದಿ. ಅದಕ್ಕೆ ನಾನು ಖುಷಿ ಪಡುತ್ತೇನೆ. ಆದರೆ ಅವರು ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಯಡಿಯೂರಪ್ಪ ವಿರುದ್ಧ ಹಲವು ಹೇಳಿಕೆಗಳನ್ನು ನೀಡಿ ಇಕ್ಕಟ್ಟಿಗೆ ಸಿಲುಕಿಸಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯತ್ನಾಳ್ ಅವರು ಸಿಎಂ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದಕ್ಕೆ ನಾನು ಒಪ್ಪಲ್ಲ. ಅವರು ಒಂದು ಪ್ರಕಾರದ ಹಿಂದೂತ್ವವಾದಿ, ಅದಕ್ಕೆ ನಾನು ಖುಷಿ ಪಡುತ್ತೇನೆ. ಆದರೆ, ಅವರು ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು” ಎಂದು ತಿಳಿಸಿದ್ದಾರೆ.

“ಯತ್ನಾಳ್ ಬಗ್ಗೆ ಏನು ಕ್ರಮ ತೆಗೆದು ಕೊಳ್ಳಬೇಕು ಎಂಬ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕಳುಹಿಸಿ ಕೊಡಲಾಗಿದೆ. ಕೇಂದ್ರದ ನಾಯಕರು ಅವರಿಗೆ ನೋಟಿಸ್ ನೀಡಿದ್ದಾರೆ. ಅದಕ್ಕೆ ಯತ್ನಾಳ್ ಉತ್ತರ ಸಹ ನೀಡಿದ್ದಾರೆ. ಕೇಂದ್ರದ ನಾಯಕರು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಈಶ್ವರಪ್ಪ ತಿಳಿಸಿದ್ದಾರೆ.


ಇದನ್ನೂ ಓದಿ: ಹೈಕಮಾಂಡ್ ನೀಡಿದ ನೋಟಿಸ್‌ಗೆ ಉತ್ತರಿಸಿದ ಯತ್ನಾಳ್: ಯಡಿಯೂರಪ್ಪ ವಿರುದ್ಧ 11 ಪುಟಗಳ ಆರೋಪ


ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಾಂಗ್ರೆಸ್‌ನ ಬಿ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ನೂತನ ಬಿಜೆಪಿ ಸಚಿವ ಮುರುಗೇಶ ನಿರಾಣಿ ನಿನ್ನೆ ವಾಗ್ದಾಳಿ ನಡೆಸಿದ್ದರು.

“ಪಂಚಮಸಾಲಿ ಮಂತ್ರಿಗಳು ಮತ್ತು ಶಾಸಕರು ರಾಜೀನಾಮೆ ನೀಡಬೇಕು ಎಂದು ಯತ್ನಾಳ್ ಸಮಾವೇಶದಲ್ಲಿ ಹೇಳಿದ್ದಾರೆ. ನಾವು ನಮ್ಮ ನಮ್ಮ ಕ್ಷೇತ್ರಗಳ ಎಲ್ಲ ಮತದಾರರ ಆಶೀರ್ವಾದದಿಂದ ಗೆದ್ದು ಬಂದಿದ್ದೇವೆ. ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಯವರು ನಮ್ಮನ್ನು ಮಂತ್ರಿ ಮಾಡಿದ್ದು. ಮೊದಲಿಗೆ ಅವರು (ಯತ್ನಾಳ) ರಾಜೀನಾಮೆ ಕೊಟ್ಟು, ವಿಜಯಪುರದಿಂದ ಸ್ವರ್ಧಿಸಿ ಗೆದ್ದು ಬರಲಿ” ಎಂದು ಮುರಗೇಶ ನಿರಾಣಿ ಸವಾಲು ಹಾಕಿದ್ದರು.

ಇನ್ನು ಮೊನ್ನೆ ಯತ್ನಾಳ್ ಮಾತನಾಡಿ “ಪಕ್ಷದಿಂದ ನನಗೆ ನೋಟಿಸ್ ಬಂದಿರುವುದು ನಿಜ. ಅದಕ್ಕೆ ಪ್ರತಿಕ್ರಿಯೆಯಾಗಿ ಹನ್ನೊಂದು ಪುಟಗಳ ಉತ್ತರ ನೀಡಿದ್ದೇನೆ. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ 45 ಪ್ಯಾರಾಗಳಲ್ಲಿ ವಿವರಿಸಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ ಎಂಬುದನ್ನು ಪತ್ರದಲ್ಲಿ ಪ್ರಸ್ತಾಪಿಸಿದ್ದೇನೆ. ಸರ್ಕಾರದಲ್ಲಿ ಕುಟುಂಬದ ಹಸ್ತಕ್ಷೇಪ ಇರಬಾರದು ಎನ್ನುವುದು ನರೇಂದ್ರ ಮೋದಿ ಆಶಯ. ಆದರೆ, ಅವರ ಆಶಯದಂತೆ ಇಲ್ಲಿ ಸರ್ಕಾರ ಇಲ್ಲ. ಯಡಿಯೂರಪ್ಪ ಅವರ ಕುಟುಂಬ ಬಿಜೆಪಿ ಶಾಸಕರನ್ನು ಗೌರವಿಸುತ್ತಿಲ್ಲ. ಯಡಿಯೂರಪ್ಪ ಅವರ ಕುಟುಂಬದ ಬಗ್ಗೆಯೂ ತನಿಖೆ ಮಾಡಬೇಕು ಮತ್ತು ಭ್ರಷ್ಟಾಚಾರ, ಹಸ್ತಕ್ಷೇಪ, ವರ್ಗಾವಣೆ ದಂಧೆ ಬಗ್ಗೆಯೂ ತನಿಖೆ ಮಾಡಬೇಕು ಒತ್ತಾಯಿಸಿದ್ದೇನೆ” ಎಂದು ತಿಳಿಸಿದ್ದಾರೆ.

ನೋಟಿಸ್‌ಗೆ ಉತ್ತರ ಕೊಡುವಾಗ ಪತ್ರದಲ್ಲಿ ಎಲ್ಲೂ ಕ್ಷಮೆ ಯಾಚಿಸಿಲ್ಲ. ಸಿಡಿ, ಇಡಿ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿದ್ದೇನೆ.‌ ಮಾರಿಷಸ್ ವಿಚಾರವನ್ನೂ ಬರೆದಿದ್ದೇನೆ. ಮಾರಿಷಸ್‌ಗೆ ಯಾಕೆ ಹೋಗಿದ್ದರು. ಎಷ್ಟು ಮಂದಿ ಹೋಗಿದ್ದರು. ಯಾವ ವಿಮಾನದಲ್ಲಿ ಹೋಗಿದ್ದರು, ಮಾಜಿ ಗೃಹ ಸಚಿವರೊಬ್ಬರ ಆಪ್ತ ಸಹಾಯಕನ ಮೂಲಕ ಮಾರಿಷಸ್‌ಗೆ ಹೋಗಿ ಏನೇನು ತೆಗೆದುಕೊಂಡಿದ್ದಾರೆ ಎಲ್ಲವನ್ನೂ ಪತ್ರದಲ್ಲಿ ಉಲ್ಲೇಖಿಸಿದ್ದೇನೆ. ಇದರ ಬಗ್ಗೆಯೂ ತನಿಖೆ ಮಾಡಲು‌ ಆಗ್ರಹಿಸಿದ್ದೇನೆ” ಎಂದು ಯತ್ನಾಳ್ ಹೇಳಿದ್ದಾರೆ.


ಇದನ್ನೂ ಓದಿ: ಯತ್ನಾಳ್ ಕಾಂಗ್ರೆಸ್‌ನ ‘ಬಿ’ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ – ಸಚಿವ ಮುರುಗೇಶ ನಿರಾಣಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...