Homeಮುಖಪುಟಕೇರಳ ಗಡಿ ಬಂದ್‌: ಕರ್ನಾಟಕದ ತೀರ್ಮಾನದ ವಿರುದ್ದ ಮೋದಿಗೆ ಪತ್ರ ಬರೆದ ಪಿಣರಾಯಿ ವಿಜಯನ್

ಕೇರಳ ಗಡಿ ಬಂದ್‌: ಕರ್ನಾಟಕದ ತೀರ್ಮಾನದ ವಿರುದ್ದ ಮೋದಿಗೆ ಪತ್ರ ಬರೆದ ಪಿಣರಾಯಿ ವಿಜಯನ್

- Advertisement -
- Advertisement -

ಕೊರೊನಾ ಪ್ರಕರಣ ಹೆಚ್ಚಳದ ಕಾರಣ ನೀಡಿ ದಕ್ಷಿಣ ಕನ್ನಡ ಮತ್ತು ಕೇರಳದ ಗಡಿಯನ್ನು ಬಂದ್ ಮಾಡುವ ರಾಜ್ಯದ ತೀರ್ಮಾನದ ವಿರುದ್ದ ಕೇರಳ ಸರ್ಕಾರ ಪ್ರಧಾನಿ ಮೋದಿಗೆ ಪತ್ರ ಬರೆದಿದೆ. ಯಾವುದೇ ರಾಜ್ಯಗಳು ಅಂತರರಾಜ್ಯ ಪ್ರಯಾಣವನ್ನು ತಡೆಯಬಾರದು ಎಂಬ ಕೇಂದ್ರ ಸರ್ಕಾರದ ಸೂಚನೆಗೆ ವಿರುದ್ಧವಾಗಿ ಈ ನಿರ್ಬಂಧಗಳನ್ನು ಕರ್ನಾಟಕ ಹೇರುತ್ತಿದೆ ಎಂದು ಆರೋಪಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪತ್ರ ಬರೆದಿದ್ದಾರೆ.

ಪತ್ರದಲ್ಲಿ, ತಮ್ಮ ನೆರೆಯ ರಾಜ್ಯವಾದ ಕರ್ನಾಟಕಕ್ಕೆ ಕೇರಳದ ಜನರು ಪ್ರಯಾಣಿಸುವಾಗ ಎದುರಿಸುತ್ತಿರುವ ಕಷ್ಟಗಳನ್ನು ಪರಿಹರಿಸಲು ತುರ್ತು ಹಸ್ತಕ್ಷೇಪ ಮಾಡುವಂತೆ ಕೋರಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

ಅಗತ್ಯ ಸರಕುಗಳನ್ನು ಸಾಗಿಸುವ ಟ್ರಕ್‌ಗಳ ಜೊತೆಗೆ ವಿದ್ಯಾರ್ಥಿಗಳು, ವೈದ್ಯಕೀಯ ಚಿಕಿತ್ಸೆಗಾಗಿ ಹೋಗುವ ರೋಗಿಗಳು ಸೇರಿದಂತೆ ಅನೇಕ ಜನರು ರಾಜ್ಯದ ಗಡಿಯಲ್ಲಿ ಅನಗತ್ಯ ತೊಂದರೆಗಳಿಗೆ ಒಳಗಾಗುತ್ತಾರೆ ಎಂದು ಪಿಣರಾಯಿ ಉಲ್ಲೇಖಿಸಿದ್ದಾರೆ. ರಾಜ್ಯಗಳು ಅಂತರರಾಜ್ಯ ಸಂಚಾರಕ್ಕೆ ನಿರ್ಬಂಧ ಹೇರುವುದು ಭಾರತ ಸರ್ಕಾರದ ಸೂಚನೆಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ – ಈಗ ಚುನಾವಣೆ ನಡೆದರೂ ಕಮ್ಯುನಿಷ್ಟ್ ಸರ್ಕಾರ ಮತ್ತೆ ಅಧಿಕಾರಕ್ಕೆ!

ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸೋಮವಾರದಿಂದ ನೆರೆಯ ರಾಜ್ಯವನ್ನು ಜಿಲ್ಲೆಯೊಂದಿಗೆ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿದೆ ಎಂದು ಹೇಳಿತ್ತು. ಪಾತೂರ್‌ ಮೂಲಕ ಮುಡಿಪು ಮತ್ತು ಸಾಲೆತ್ತೂರ್‌ ನಡುವೆ ಪ್ರಯಾಣಿಸುವ ಜನರು ಈಗ ಮಂಚಿ-ಇರಾ ಮೂಲಕ ಆರು ಕಿಲೋಮೀಟರ್ ದೂರ ಹೆಚ್ಚು ಪ್ರಯಾಣಿಸಬೇಕಾಗತ್ತದೆ. ಗಡಿ ಜಿಲ್ಲೆಗಳ ನಡುವೆ ಜನರ ಸಂಚಾರ ಬಹಳ ಹೆಚ್ಚಿರುವುದರಿಂದ ಕೇರಳದ ಹೆಚ್ಚಿನ ಗಡಿಗಳನ್ನು ಮುಚ್ಚುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಹೇಳಿಕೆಯನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌‌‌ಪ್ರೆಸ್ ವರದಿ ಮಾಡಿದೆ.

“ಇದು ಜನನಿಬಿಡ ಗಡಿಯಾಗಿದ್ದು, ಜಿಲ್ಲೆಗಳ ನಡುವೆ ಪ್ರತಿದಿನ 2 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಾರೆ. ಕೊರೊನಾ ನೆಗೆಟಿವ್‌‌‌ ವರದಿಯನ್ನು ಹದಿನೈದು ದಿನಕ್ಕೊಮ್ಮೆ ದೈನಂದಿನ ಪ್ರಯಾಣಿಕರಿಗೆ ಕಡ್ಡಾಯಗೊಳಿಸಲಾಗಿದ್ದರೂ, ಪ್ರವೇಶ ಗಡಿಗಳಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ನೀಡಿದರೆ ಇದನ್ನು ಕಾರ್ಯಗತಗೊಳಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ, ಕೆಲವು ಗಡಿ ಕೇಂದ್ರಗಳನ್ನು ಮುಚ್ಚಲೇಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಈ ನಿರ್ಧಾರನ್ನು ವಿರೋಧಿಸಿ ಡಿವೈಎಫ್‌ಐ ಮತ್ತು ಎವೈಎಫ್‌ಐ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ಮಾಡಿದ್ದು, ಗಡಿಗಳನ್ನು ತೆರೆಯುವಂತೆ ಒತ್ತಾಯಿಸಿದೆ.

ಇದನ್ನೂ ಓದಿ: ಕೊರೊನಾ – ಕೇರಳ ಸಂಪರ್ಕಿಸುವ 9 ರಸ್ತೆಗಳನ್ನು ಮುಚ್ಚಲಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...