Homeಮುಖಪುಟಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಹೊಸ ಕಾಯ್ದೆ ತರಬೇಕು ಎಂದು ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ರೈತ ಹೋರಾಟ 91ನೇ ದಿನಕ್ಕೆ ಕಾಲಿಟ್ಟಿದೆ. ಈ ರೈತ ಹೋರಾಟ ಬೆಂಬಲಿಸಿ ದಕ್ಷಿಣ ಭಾರತದ ನೂರಾರು ಕಾರ್ಯಕರ್ತರು ದೆಹಲಿಯ ಟಿಕ್ರಿ ಗಡಿಯಲ್ಲಿ ಮೆರವಣಿಗೆ ನಡೆಸಿದ್ದಾರೆ. ಕರ್ನಾಟಕ ಜನಶಕ್ತಿಯ ನೇತೃತ್ವದಲ್ಲಿ 60 ಕ್ಕೂ ಹೆಚ್ಚು ಕಾರ್ಯಕರ್ತರು, ಆಂಧ್ರ ಪ್ರದೇಶದ ವಿವಿಧ ಸಂಘ ಸಂಸ್ಥೆಗಳಿಂದ 40 ಸದಸ್ಯರು, ತೆಲಂಗಾಣದಿಂದ 30 ಮತ್ತು ತಮಿಳುನಾಡಿನ ಸಂಸ್ಥೆಗಳಿಂದ 8 ಸದಸ್ಯರು ಮತ್ತು ಕೇರಳದ ಹಲವು ಸದಸ್ಯರು ದೆಹಲಿ ಹೋರಾಟದ ಭಾಗವಾಗಿದ್ದಾರೆ.

ಇಂದು ಮಧ್ಯಾಹ್ನ ಟಿಕ್ರಿ ಗಡಿಯುದ್ದಕ್ಕೂ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು, ರೈತರ ಹೋರಾಟಕ್ಕೆ ಜಯವಾಗಲಿ ಸೇರಿದಂತೆ ಕನ್ನಡದಲ್ಲಿ ಘೋಷಣೆ ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ನಾವು ದಕ್ಷಿಣ ಭಾರತದ 5 ರಾಜ್ಯಗಳಿಂದ 130 ಕ್ಕೂ ಹೆಚ್ಚು ಪ್ರತಿನಿಧಿಗಳು ನಿಮ್ಮೊಂದಿಗೆ ಸೇರಿ ಹೋರಾಡಲು ಬಂದಿದ್ದೇವೆ. ಇದು ಕೇವಲ ಪಂಜಾಬ್, ಹರಿಯಾಣ ರೈತರ ಹೋರಾಟ, ಒಂದು ಧರ್ಮದ ಹೋರಾಟ, ಖಲಿಸ್ತಾನಿಗಳ, ಅರ್ಬನ್ ನಕ್ಸಲರ ಹೋರಾಟ ಎಂದು ಬ್ರಾಂಡ್‌ ಮಾಡಿರುವುದು ಸುಳ್ಳು ಎಂದು ಸಾರಿ ಹೇಳಲು ನಾವು ಬಂದಿದ್ದೇವೆ. ಇದು ಇಡೀ ದೇಶದ ಹೋರಾಟ ಎಂಬುದನ್ನು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಬಂದಿದ್ದೇವೆ. ದೇಶದ ಎಲ್ಲಾ ರೈತರು ಮತ್ತು ಕಾರ್ಮಿಕರು ಒಂದಾಗಿದ್ದರು, ಈಗಲೂ ಒಂದಾಗಿದ್ದೇವೆ ಮತ್ತು ಮುಂದೆಯೂ ಒಂದಾಗಿರುತ್ತೇವೆ. ಸರ್ಕಾರ ಈ ಕರಾಳ ಕಾನೂನುಗಳನ್ನು ಹಿಂಪಡೆಯುವವರೆಗೂ, ಎಂಎಸ್‌ಪಿ ಜಾರಿಗೊಳಿಸುವವರೆಗೂ ಹೋರಾಡುತ್ತೇವೆ ಎಂದು ಸಾರಿ ಹೇಳಲು ಬಂದಿದ್ದೇವೆ” ಎಂದರು.

ಕಾರ್ಮಿಕ ಸಂಘಟನೆಯ ವರದರಾಜೇಂದ್ರ ಮಾತನಾಡಿ “ನಾವು ಕರ್ನಾಟಕದಲ್ಲಿ ರೈತ-ಕಾರ್ಮಿಕ-ದಲಿತ ಸಂಘಟನೆಗಳು ಒಟ್ಟು ಸೇರಿ ಐಕ್ಯ ಹೋರಾಟ ವೇದಿಕೆಯಡಿ ಕಳೆದ ಆಗಸ್ಟ್ ತಿಂಗಳಿನಿಂದಲೂ ಹೋರಾಟ ನಡೆಸುತ್ತಿದ್ದೇವೆ. ಕರ್ನಾಟಕ ಬಂದ್ ನಡೆಸಿದ್ದೇವೆ. ಆದರೆ ಗೋದಿ ಮಾಧ್ಯಮಗಳು ಅದನ್ನು ಪ್ರಸಾರ ಮಾಡುತ್ತಿಲ್ಲ. ಕರ್ನಾಟಕ ಸರ್ಕಾರ ಕೂಡ ಅತಿ ವೇಗದಲ್ಲಿ ಸುಗ್ರೀವಾಜ್ಞೆಗಳ ಮೂಲಕ ಎಪಿಎಂಸಿ ಕಾನೂನಿಗೆ ತಿದ್ದುಪಡಿ ತಂದಿದೆ. ಕೇಂದ್ರದ ಕಾನೂನುಗಳನ್ನು ಜಾರಿಗೊಳಿಸಿದೆ. ನವೆಂಬರ್ ತಿಂಗಳಿನಿಂದ ಸಂಯುಕ್ತ ಕಿಸಾನ್ ಮೋರ್ಚಾದ ಕರೆ ಮೇರೆಗೆ ಸತತ ಹೋರಾಟ ನಡೆಸುತ್ತಿದ್ದೇವೆ. ಜನವರಿ 26ರ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದೇವೆ. ಇದು ರೈತರ – ಕಾರ್ಮಿಕರ ಹೋರಾಟವಾಗಿದ್ದು ಗೆಲ್ಲುವವರೆಗೂ ನಿಲ್ಲುವುದಿಲ್ಲ” ಎಂದರು.

ಆಂಧ್ರಪ್ರದೇಶದ AIKMS ಉಪಾಧ್ಯಕ್ಷರಾದ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್, ತೆಲಂಗಾನದ ಹನುಮೇಶ್, ತಮಿಳುನಾಡು ರೈತ ಸಂಘಟನೆಯ ಅರುಣ್ ಚೌರಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ರೈತ ಹೋರಾಟದ ಸ್ಫೂರ್ತಿಗಳಾದ ಸಹಜಾನಂದ್‌ ಸರಸ್ವತಿ ಮತ್ತು ಸರ್ದಾರ್‌ ಅಜಿತ್‌ ಸಿಂಗ್‌ರ ನೆನಪಿನಲ್ಲಿ ದೆಹಲಿ ಗಡಿಗಳಲ್ಲಿ ನಡೆದ ಪಗಡಿ ಸಂಭಾಲ್‌ ದಿನದ ಆಚರಣೆಯಲ್ಲಿ ದಕ್ಷಿಣ ಭಾರತದ ತಂಡ ಭಾಗವಹಿಸಿತ್ತು.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...