Homeಮುಖಪುಟಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಹೊಸ ಕಾಯ್ದೆ ತರಬೇಕು ಎಂದು ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರು ರೈತ ಹೋರಾಟ 91ನೇ ದಿನಕ್ಕೆ ಕಾಲಿಟ್ಟಿದೆ. ಈ ರೈತ ಹೋರಾಟ ಬೆಂಬಲಿಸಿ ದಕ್ಷಿಣ ಭಾರತದ ನೂರಾರು ಕಾರ್ಯಕರ್ತರು ದೆಹಲಿಯ ಟಿಕ್ರಿ ಗಡಿಯಲ್ಲಿ ಮೆರವಣಿಗೆ ನಡೆಸಿದ್ದಾರೆ. ಕರ್ನಾಟಕ ಜನಶಕ್ತಿಯ ನೇತೃತ್ವದಲ್ಲಿ 60 ಕ್ಕೂ ಹೆಚ್ಚು ಕಾರ್ಯಕರ್ತರು, ಆಂಧ್ರ ಪ್ರದೇಶದ ವಿವಿಧ ಸಂಘ ಸಂಸ್ಥೆಗಳಿಂದ 40 ಸದಸ್ಯರು, ತೆಲಂಗಾಣದಿಂದ 30 ಮತ್ತು ತಮಿಳುನಾಡಿನ ಸಂಸ್ಥೆಗಳಿಂದ 8 ಸದಸ್ಯರು ಮತ್ತು ಕೇರಳದ ಹಲವು ಸದಸ್ಯರು ದೆಹಲಿ ಹೋರಾಟದ ಭಾಗವಾಗಿದ್ದಾರೆ.

ಇಂದು ಮಧ್ಯಾಹ್ನ ಟಿಕ್ರಿ ಗಡಿಯುದ್ದಕ್ಕೂ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು, ರೈತರ ಹೋರಾಟಕ್ಕೆ ಜಯವಾಗಲಿ ಸೇರಿದಂತೆ ಕನ್ನಡದಲ್ಲಿ ಘೋಷಣೆ ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಮಾತನಾಡಿ “ನಾವು ದಕ್ಷಿಣ ಭಾರತದ 5 ರಾಜ್ಯಗಳಿಂದ 130 ಕ್ಕೂ ಹೆಚ್ಚು ಪ್ರತಿನಿಧಿಗಳು ನಿಮ್ಮೊಂದಿಗೆ ಸೇರಿ ಹೋರಾಡಲು ಬಂದಿದ್ದೇವೆ. ಇದು ಕೇವಲ ಪಂಜಾಬ್, ಹರಿಯಾಣ ರೈತರ ಹೋರಾಟ, ಒಂದು ಧರ್ಮದ ಹೋರಾಟ, ಖಲಿಸ್ತಾನಿಗಳ, ಅರ್ಬನ್ ನಕ್ಸಲರ ಹೋರಾಟ ಎಂದು ಬ್ರಾಂಡ್‌ ಮಾಡಿರುವುದು ಸುಳ್ಳು ಎಂದು ಸಾರಿ ಹೇಳಲು ನಾವು ಬಂದಿದ್ದೇವೆ. ಇದು ಇಡೀ ದೇಶದ ಹೋರಾಟ ಎಂಬುದನ್ನು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಬಂದಿದ್ದೇವೆ. ದೇಶದ ಎಲ್ಲಾ ರೈತರು ಮತ್ತು ಕಾರ್ಮಿಕರು ಒಂದಾಗಿದ್ದರು, ಈಗಲೂ ಒಂದಾಗಿದ್ದೇವೆ ಮತ್ತು ಮುಂದೆಯೂ ಒಂದಾಗಿರುತ್ತೇವೆ. ಸರ್ಕಾರ ಈ ಕರಾಳ ಕಾನೂನುಗಳನ್ನು ಹಿಂಪಡೆಯುವವರೆಗೂ, ಎಂಎಸ್‌ಪಿ ಜಾರಿಗೊಳಿಸುವವರೆಗೂ ಹೋರಾಡುತ್ತೇವೆ ಎಂದು ಸಾರಿ ಹೇಳಲು ಬಂದಿದ್ದೇವೆ” ಎಂದರು.

ಕಾರ್ಮಿಕ ಸಂಘಟನೆಯ ವರದರಾಜೇಂದ್ರ ಮಾತನಾಡಿ “ನಾವು ಕರ್ನಾಟಕದಲ್ಲಿ ರೈತ-ಕಾರ್ಮಿಕ-ದಲಿತ ಸಂಘಟನೆಗಳು ಒಟ್ಟು ಸೇರಿ ಐಕ್ಯ ಹೋರಾಟ ವೇದಿಕೆಯಡಿ ಕಳೆದ ಆಗಸ್ಟ್ ತಿಂಗಳಿನಿಂದಲೂ ಹೋರಾಟ ನಡೆಸುತ್ತಿದ್ದೇವೆ. ಕರ್ನಾಟಕ ಬಂದ್ ನಡೆಸಿದ್ದೇವೆ. ಆದರೆ ಗೋದಿ ಮಾಧ್ಯಮಗಳು ಅದನ್ನು ಪ್ರಸಾರ ಮಾಡುತ್ತಿಲ್ಲ. ಕರ್ನಾಟಕ ಸರ್ಕಾರ ಕೂಡ ಅತಿ ವೇಗದಲ್ಲಿ ಸುಗ್ರೀವಾಜ್ಞೆಗಳ ಮೂಲಕ ಎಪಿಎಂಸಿ ಕಾನೂನಿಗೆ ತಿದ್ದುಪಡಿ ತಂದಿದೆ. ಕೇಂದ್ರದ ಕಾನೂನುಗಳನ್ನು ಜಾರಿಗೊಳಿಸಿದೆ. ನವೆಂಬರ್ ತಿಂಗಳಿನಿಂದ ಸಂಯುಕ್ತ ಕಿಸಾನ್ ಮೋರ್ಚಾದ ಕರೆ ಮೇರೆಗೆ ಸತತ ಹೋರಾಟ ನಡೆಸುತ್ತಿದ್ದೇವೆ. ಜನವರಿ 26ರ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದೇವೆ. ಇದು ರೈತರ – ಕಾರ್ಮಿಕರ ಹೋರಾಟವಾಗಿದ್ದು ಗೆಲ್ಲುವವರೆಗೂ ನಿಲ್ಲುವುದಿಲ್ಲ” ಎಂದರು.

ಆಂಧ್ರಪ್ರದೇಶದ AIKMS ಉಪಾಧ್ಯಕ್ಷರಾದ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್, ತೆಲಂಗಾನದ ಹನುಮೇಶ್, ತಮಿಳುನಾಡು ರೈತ ಸಂಘಟನೆಯ ಅರುಣ್ ಚೌರಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ರೈತ ಹೋರಾಟದ ಸ್ಫೂರ್ತಿಗಳಾದ ಸಹಜಾನಂದ್‌ ಸರಸ್ವತಿ ಮತ್ತು ಸರ್ದಾರ್‌ ಅಜಿತ್‌ ಸಿಂಗ್‌ರ ನೆನಪಿನಲ್ಲಿ ದೆಹಲಿ ಗಡಿಗಳಲ್ಲಿ ನಡೆದ ಪಗಡಿ ಸಂಭಾಲ್‌ ದಿನದ ಆಚರಣೆಯಲ್ಲಿ ದಕ್ಷಿಣ ಭಾರತದ ತಂಡ ಭಾಗವಹಿಸಿತ್ತು.


ಇದನ್ನೂ ಓದಿ: ಪಗಡಿ ಸಂಭಲ್ ದಿನ: ಸಿಂಘು ಗಡಿಗೆ ಹುತಾತ್ಮ ಭಗತ್ ಸಿಂಗ್ ಸಂಬಂಧಿಕರ ಭೇಟಿ, ರೈತ ಹೋರಾಟಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...