Homeಮುಖಪುಟಪ್ರಮಾಣಪತ್ರವಿಲ್ಲದೆ ಕೊರೊನಿಲ್ ಮಾರಾಟಕ್ಕೆ ಅವಕಾಶವಿಲ್ಲ: ಮಹಾರಾಷ್ಟ್ರ ಗೃಹ ಸಚಿವರು

ಪ್ರಮಾಣಪತ್ರವಿಲ್ಲದೆ ಕೊರೊನಿಲ್ ಮಾರಾಟಕ್ಕೆ ಅವಕಾಶವಿಲ್ಲ: ಮಹಾರಾಷ್ಟ್ರ ಗೃಹ ಸಚಿವರು

- Advertisement -
- Advertisement -

“ಸರಿಯಾದ ಪ್ರಮಾಣಪತ್ರ ಇಲ್ಲದೆ ಪತಂಜಲಿಯ ಕೊರೊನಿಲ್ ಮಾತ್ರೆಗಳನ್ನು ರಾಜ್ಯದಲ್ಲಿ ಮಾರಾಟ ಮಾಡಲು ಅನುಮತಿಸುವುದಿಲ್ಲ” ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಹೇಳಿದ್ದಾರೆ.

ಕೊರೊನಿಲ್ ಮಾತ್ರೆಗಳಿಗೆ WHO ಪ್ರಮಾಣೀಕರಣ ನೀಡಿದೆ ಎಂಬುದು ಸುಳ್ಳು ಎಂದಿರುವ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆಘಾತ ವ್ಯಕ್ತಪಡಿಸಿದೆ. ಇದಾದ ಒಂದು ದಿನದ ನಂತರ ಅನಿಲ್ ದೇಶ್ಮುಖ್ ಈ ಹೇಳಿಕೆ ನೀಡಿದ್ದಾರೆ.

ಕೊರೊನಾ ವಿರುದ್ಧ ಹೋರಾಡುವಲ್ಲಿ ಇದು ಪರಿಣಾಮಕಾರಿ ಎಂದು ಬಾಬಾ ರಾಮ್‌ದೇವ್ ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರ ಉಪಸ್ಥಿತಿಯಲ್ಲಿ ಈ ಔಷಧಿಯನ್ನು ಬಿಡುಗಡೆ ಮಾಡಲಾಯಿತು.

ಶುಕ್ರವಾರ, ರಾಮದೇವ್ ಅವರು ಪತಂಜಲಿ ಉತ್ಪನ್ನ ಕೊರೊನಿಲ್ ಅನ್ನು ಆರೋಗ್ಯ ಸಚಿವ ಹಷ್‌ವರ್ಧನ್ ಮತ್ತು ಮತ್ತೊಬ್ಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಮ್ಮುಖದಲ್ಲಿ ಬಿಡುಗಡೆ ಮಾಡಿದ್ದರು. ಈ ಮೂವರ ಹಿಂದಿರುವ ದೊಡ್ಡ ಪೋಸ್ಟರ್‌ನಲ್ಲಿ “ಔಷಧಿಯು CoPP ಮತ್ತು WHO- ಜಿಎಂಪಿ ಪ್ರಮಾಣೀಕರಿಸಲ್ಪಟ್ಟಿದೆ ಎಂದು ಬರೆಯಲ್ಪಟ್ಟಿತ್ತು. ಅಂದರೆ ಇದು ಔಷಧೀಯ ಉತ್ಪನ್ನದ ಪ್ರಮಾಣಪತ್ರವನ್ನು (CoPP) ಹೊಂದಿದೆ ಮತ್ತು ಇದನ್ನು ವಿಶ್ವ ಆರೋಗ್ಯ ಸಂಸ್ಥೆಯ ಉತ್ತಮ ಉತ್ಪಾದನಾ ಪ್ರಾಕ್ಟೀಸಸ್ (ಜಿಎಂಪಿ) ಗುರುತಿಸಿದೆ ಎಂದರ್ಥ.

ಈ ಎರಡೂ ಮಾನದಂಡಗಳು ಔಷಧೀಯ ಉತ್ಪನ್ನಗಳಲ್ಲಿ ಗುಣಮಟ್ಟದ ಭರವಸೆಯನ್ನು ಬಹುಪಾಲು ವ್ಯಾಖ್ಯಾನಿಸುತ್ತವೆ.

ಇದನ್ನೂ ಓದಿ: ಸುಳ್ಳು ಹೇಳಿದ ಬಾಬಾ ರಾಮ್‌ದೇವ್! – ಪತಂಜಲಿ ಕೊರೊನಿಲ್ ಕುರಿತು ಐಎಂಎ ಆಕ್ರೋಶ

ಈ ಕುರಿತು ಟ್ವೀಟ್ ಮಾಡಿರುವ ದೇಶ್ಮುಖ್ ಯಾರನ್ನೂ ಹೆಸರಿಸದೆ, ‘ಹಿರಿಯ ಕೇಂದ್ರ ಸಚಿವರು ಔಷಧಿಯನ್ನು ಅನುಮೋದಿಸಿದ್ದಾರೆ’ ಎಂದು ಕಾಲೆಳೆದಿದ್ದಾರೆ.

ಆದರೆ, ಕೊವಿಡ್-19 ಗೆ ಚಿಕಿತ್ಸೆ ನೀಡಲು ಅಥವಾ ತಡೆಗಟ್ಟಲು ಯಾವುದೇ ಸಾಂಪ್ರದಾಯಿಕ ಔಷಧಿಯನ್ನು ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ ಎಂದು ಡಬ್ಲೂಎಚ್‌ಒ ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದೆ. #COVID19 ಚಿಕಿತ್ಸೆಗಾಗಿ ಯಾವುದೇ ಸಾಂಪ್ರದಾಯಿಕ ಔಷಧದ ಪರಿಣಾಮಕಾರಿತ್ವವನ್ನು WHO ಪರಿಶೀಲಿಸಿಲ್ಲ ಅಥವಾ ಪ್ರಮಾಣೀಕರಿಸಿಲ್ಲ” ಎಂದು WHO ಆಗ್ನೇಯ ಏಷ್ಯ ಟ್ವೀಟ್ ಮಾಡಿದೆ.

ಕಳೆದ ವರ್ಷ, ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ಲಸಿಕೆಗಳು ಇನ್ನೂ ಪ್ರಯೋಗದ ಹಂತದಲ್ಲಿದ್ದವು, ಕೊರೊನಿಲ್ ಕೊರೊನಾವೈರಸ್ ವಿರುದ್ಧ ಬಲವಾದ ರಕ್ಷಣೆ ನೀಡಬಹುದೆಂದು ಪತಂಜಲಿ ಆಯುರ್ವೇದ ಹೇಳಿಕೊಂಡಿತ್ತು. ಅದರ ಸಮರ್ಥನೆಗಳ ಬಗ್ಗೆ ದೊಡ್ಡ ವಿವಾದದ ನಂತರ, ಆಯುಷ್ ಸಚಿವಾಲಯವು ಕೊರೊನಿಲ್ ಅನ್ನು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಾಧನವಾಗಿ ಮಾತ್ರ ಮಾರಾಟ ಮಾಡಬಹುದೆಂದು ಹೇಳಿತ್ತು.

ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು WHO ಟ್ವೀಟ್‌ಗೆ ಸ್ವಲ್ಪ ಮೊದಲು ಸ್ಪಷ್ಟನೆ ನೀಡಿದ್ದರು.

“ಕೊರೊನಿಲ್‌ಗೆ WHO ಜಿಎಂಪಿ ಕಂಪ್ಲೈಂಟ್ CoPP ಪ್ರಮಾಣಪತ್ರವನ್ನು ಭಾರತ ಸರ್ಕಾರದ ಡಿಸಿಜಿಐ ನೀಡಿದೆ. WHO ಯಾವುದೇ ಔಷಧಿಗಳನ್ನು ಅನುಮೋದಿಸುವುದಿಲ್ಲ ಅಥವಾ ನಿರಾಕರಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಜನರಿಗೆ ಉತ್ತಮ, ಆರೋಗ್ಯಕರ ಭವಿಷ್ಯವನ್ನು ನಿರ್ಮಿಸಲು WHO ಕೆಲಸ ಮಾಡುತ್ತದೆ ಎಂದು ಬಾಲಕೃಷ್ಣ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...