Homeಅಂಕಣಗಳುಈ ಐದು ವರ್ಷದಲ್ಲಿ ಮೋದಿಯವರು ಸಾಧಿಸಿದ್ದೇನು?

ಈ ಐದು ವರ್ಷದಲ್ಲಿ ಮೋದಿಯವರು ಸಾಧಿಸಿದ್ದೇನು?

- Advertisement -
- Advertisement -

ಹೆಚ್.ಎಸ್‍.ದೊರೆಸ್ವಾಮಿ |

2019ರ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಭಾರತೀಯ ಜನತಾ ಪಕ್ಷ ಎಲ್ಲಾ ಪಕ್ಷಗಳಿಗಿಂತ ಹೆಚ್ಚಿನ ಹಣವನ್ನು ಕಾರ್ಪೊರೇಟ್ ಕಂಪನಿಗಳಿಂದ ಪಡೆದಿದೆ. ಅವರು ಅಷ್ಟು ಹಣ ಬಿಟ್ಟಿ ಕೊಟ್ಟಿಲ್ಲ. ಮೋದಿ ಸರ್ಕಾರ ಅದಾನಿ, ಅಂಬಾನಿ ಮುಂತಾದ ಕಾರ್ಪೊರೇಟ್‍ಗಳ 50 ಕೋಟಿ ಸಾಲ ಮನ್ನಾ ಮಾಡಿದೆ. ಸರ್ಕಾರದ ಈ ಉಪಕಾರಕ್ಕಾಗಿ ಮೋದಿಯವರ ಪಕ್ಷಕ್ಕೆ ವಿಶೇಷ ಗಿಫ್ಟ್ ಕೊಡಮಾಡಲಾಗಿದೆ. ಮೋದಿ ಸರ್ಕಾರ ಭ್ರಷ್ಟಾಚಾರದಿಂದ ಮುಕ್ತವಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ತಮ್ಮ ಚುನಾವಣಾ ಪ್ರಚಾರದ ಹ್ಯಾಂಡ್‍ಬಿಲ್‍ನಲ್ಲಿ ಹೇಳಿದ್ದಾರೆ. ಮೋದಿಯವರ ಸರ್ಕಾರದ ಭ್ರಷ್ಟಾಚಾರಕ್ಕೆ ಒಂದು ಉದಾಹರಣೆಯಾಗಿ ರಫೆಲ್ ಯುದ್ಧವಿಮಾನ ಖರೀದಿಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಕಛೇರಿಯಿಂದ ಒಪ್ಪಂದ ಕುದುರಿಸಿದ್ದು ಈಗ ಹೊರಬಿದ್ದಿದೆ. ಅದಕ್ಕಾಗಿ ನೇಮಕವಾಗಿದ್ದ ರಕ್ಷಣಾ ಇಲಾಖೆಯ ಸದಸ್ಯರ ನಿಯೋಗ ಅಂತಿಮಗೊಳಿಸಿದ ಕರಾರುಗಳನ್ನು ಬದಲಿಸುವ ಕೆಲಸ ಸರ್ಕಾರದಿಂದ ನಡೆದಿದೆ. ಅದನ್ನು ಪ್ರಶ್ನಿಸಿದ ರಕ್ಷಣಾ ಇಲಾಖೆಯ ನಿಯೋಗದವರು ಸರ್ಕಾರವೇ ಒಪ್ಪಂದವನ್ನು ನೇರವಾಗಿ ಒಪ್ಪಂದ ಮಾಡಿಕೊಳ್ಳಲಿ ನಮಗೆ ಮುಜುಗರ ಉಂಟುಮಾಡುವುದು ಬೇಡ ಎಂದು ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಸರ್ಕಾರ ವಿಮಾನ ನಿರ್ಮಾಣದ ಗಂಧವೇ ಇಲ್ಲದ ಅಂಬಾನಿಯನ್ನು ಒಬ್ಬ ಪಾಲುದಾರನನ್ನಾಗಿ ಮಾಡಿಕೊಂಡು ಅವರಿಗೆ 65 ಕೋಟಿ ರೂಪಾಯಿ ಲಾಭ ಅನಾಯಾಸವಾಗಿ ಮಾಡಿಕೊಡುವ ಹುನ್ನಾರ ಮಾಡಿದೆ.

ಯೋಗ, ಸ್ವಚ್ಛ ಭಾರತ ಎರಡೂ ಹೊಸ ಯೋಜನೆಗಳಲ್ಲ. ಕರ್ನಾಟಕದಲ್ಲಿ ಯೋಗ ತರಗತಿ ಹತ್ತಾರು ವರ್ಷ ಹಿಂದಿನಿಂದ ತರಗತಿಗಳ ಸ್ಥಾನಗಳಿಂದ ನಡೆಯುತ್ತಿವೆ. ಸ್ವಚ್ಛ ಭಾರತದ ಯೋಜನೆಯನ್ನು ಬಿಜೆಪಿಯವರಿಗೂ ಹಿಂದಿನಿಂದಲೂ ನಡೆಸುತ್ತಿದ್ದಾರೆ. ಅದನ್ನು ಪ್ರಥಮವಾಗಿ ರೂಪಿಸಿದವರು ಪ್ರೊ.ಮರುಳಸಿದ್ಧಯ್ಯನವರು. ಅದನ್ನು ಜಾರಿಗೆ ತಂದವರು ಸಚಿವ ಎಂ.ಪಿ.ಪ್ರಕಾಶ್‍ರವರು. ಇನ್ನು ಸ್ವಾವಲಂಬನೆ ಸಾಧಿಸುವ, ಅಂದರೆ ಉದ್ಯೋಗಾವಕಾಶ ಕಲ್ಪಿಸುವ ಕೆಲಸ ಕುಂಟುತ್ತಾ ಸಾಗಿದೆ. ಅದಕ್ಕಾಗಿ ಘೋಷಿಸಲಾದ ಯೋಜನೆಗಳಿಂದ ಲಾಭ ಪಡೆದವರು ಗಣನೀಯ ಸಂಖ್ಯೆಯಲ್ಲಿಲ್ಲ. ಗ್ರಾಮಗಳಲ್ಲಿ ಇರುವವರೆಲ್ಲರಿಗೂ ಉಳುಮೆಗೆ ಭೂಮಿ ಕೊಡಬೇಕು. ದುಡಿದುಕೊಂಡು ತಿನ್ನಲು ಅವಕಾಶ ಮಾಡಿಕೊಡಬೇಕು. ಇದಾಗಬೇಕಾದರೆ ಭೂ ಸುಧಾರಣೆ ಕಾರ್ಯ ಪರಿಣಾಮಕಾರಿಯಾಗಿ ಆಗಬೇಕು. ಭೂ ಮಿತಿ ಶಾಸನವನ್ನು ಪುನರ್ ರೂಪಿಸಬೇಕು. ದುಡಿಯುವ ಎಲ್ಲರಿಗೂ ಕನಿಷ್ಠ 5 ಎಕರೆ ಜಮೀನು ಸಿಗಬೇಕು. ಅನ್ನ ಕಲಸಿ ಕೊಡುವುದು, ಬಡವರ ಖಾತೆಗೆ ಹಣ ಹಾಕುವುದು ಬಡತನ ನಿವಾರಣೆಗೆ ಪರಿಹಾರವಲ್ಲ. ಅದು ಓಟು ಗಿಟ್ಟಿಸಲು ಹೂಡುವ ತಂತ್ರ. ಈ ಗಿಮಿಕ್ ಬಿಟ್ಟು ಬಡವರಿಗೆ ಭೂಮಿ ಹಂಚುವ ಕೆಲಸ ಮಾಡಿದ್ದರೆ ಮೋದಿ ಅವರನ್ನು ಮೆಚ್ಚಿಕೊಳ್ಳಬಹುದಾಗಿತ್ತು.

ಉಚಿತ ಎಲ್‍ಪಿಜಿ ಸೌಲಭ್ಯವನ್ನು ಬಡವರಿಗೆ ನೀಡಿರುವುದು ಅವರ ಸಾಧನೆ ಎಂಬುದನ್ನು ಒಪ್ಪಬಹುದು. ಕೈಗೆಟುಕುವ ದರದಲ್ಲಿ ಜನೌಷಧಿ ಜನರಿಗೆ ಒದಗಿಸುವ ಅವರ ಯೋಜನೆಯೂ ಒಳ್ಳೆಯದೇ.

ಆದರೆ ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹೇಳಿದ್ದರು. ಈ 5 ವರ್ಷದ ಅವರ ಅಧಿಕಾರದ ಅವಧಿಯಲ್ಲಿ 10 ಕೋಟಿ ಉದ್ಯೋಗಗಳು ಸೃಷ್ಠಿಯಾಗಬೇಕಾಗಿತ್ತು. ಉದ್ಯೋಗ ಸೃಷ್ಟಿಸುವ ರೀತಿ ಘೋಷಣೆಯಾಗಿ ಬೆಳೆಯಿತು. ಗುಡಿಸುವ ಕೆಲಸಕ್ಕೆ ಅರ್ಜಿ ಕರೆದರೆ ಒಂದು ಲಕ್ಷ ಅರ್ಜಿಗಳು ಬರುತ್ತವೆ. ಅದರಲ್ಲಿ 2ರಿಂದ 3 ಸಾವಿರ ಜನ ಪದವೀಧರರು, ಸ್ನಾತಕೋತ್ತರ ಪದವೀಧರರೂ ಇರುತ್ತಾರೆ. ಅಂದರೆ ಓದಿದವರಿಗೂ, ಓದದವರಿಗೂ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಎಂಬುದು ಉತ್ಪ್ರೇಕ್ಷೆಯಲ್ಲ.

ಸ್ವಾತಂತ್ರ್ಯ ಬಂದು 72 ವರ್ಷಗಳೇ ಕಳೆದರೂ ಬಡತನವನ್ನೂ ನೀಗುವ ಕೆಲಸ ನಡೆದೇ ಇಲ್ಲ. ಬಡವರ ಓಟನ್ನು ಕಿತ್ತುಕೊಂಡು ಅಧಿಕಾರಕ್ಕೆ ಬರುತ್ತೀರಿ, ಅವರ ಬಗೆಗೆ ಲೋಕಸಭೆ ಸದಸ್ಯರಾಗುವವರಿಗೆ ಕಿಂಚಿತ್ತೂ ಕಾಳಜಿಯಿಲ್ಲ. ಬಡತನದ ಸಂಪೂರ್ಣ ನಿವಾರಣೆಗೆ ಸರ್ಕಾರ ಮತ್ತು ಪಾರ್ಲಿಮೆಂಟ್ ಸದಸ್ಯರು ಒಂದು ಪರಿಣಾಮಕಾರಿ ಕಾನೂನನ್ನು ತರುವುದರಲ್ಲಿ ವಿಫಲರಾಗಿದ್ದಾರೆ. ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲೂ ಅದರ ಪ್ರಸ್ತಾಪ ಇರುವುದಿಲ್ಲ. ಶ್ರೀಮಂತರನ್ನು ಓಲೈಸುವ ಪಕ್ಷ ಭಾರತೀಯ ಜನತಾ ಪಕ್ಷ. ಸಮಾನತೆಯನ್ನು ಸಾಧಿಸುವ ವಿಚಾರ ಅವರಿಗೆ ಬೇಕಾಗಿಲ್ಲ. ಅವರು Statusquoists. ಅಸಮಾನತೆಯ ಸಮಾಜದ ನಿರ್ಮಾಣವೇ ಅವರ ಗುರಿ, ದೊಡ್ಡ ಜಮೀನ್ದಾರರು, ಪಟ್ಟಭದ್ರ ಹಿತಾಸಕ್ತಿಗಳು, ಕಾರ್ಪೊರೇಟ್ ಸಂಸ್ಥೆಗಳ ಮಾಲೀಕರು ಅರೆಸ್ಸೆಸ್ ಮತ್ತು ಬಿಜೆಪಿಯ ಬೆನ್ನೆಲುಬು. ಈ ಕಠೋರ ಮನೋಭಾವದ ಭಾಜಪಕ್ಕೆ ಮತ ನೀಡಬೇಕೇ?.

ಹಳ್ಳಿಗಳಲ್ಲಿ ದುಡಿಯಲು ಆಸಕ್ತಿಯುಳ್ಳ ಎಲ್ಲ ಭೂ ಹೀನ ರೈತರಿಗೆ ಮತ್ತು ರೈತ ಕಾರ್ಮಿಕರಿಗೆ ತಲಾ 5 ಎಕರೆ ಜಮೀನು ನೀಡುವ ಮೂಲಕ ಗ್ರಾಮೀಣ ಬಡತನ ನೀಗಬೇಕು. ಅದರಂತೆಯೇ ಪಟ್ಟಣ ಮತ್ತು ತಾಲ್ಲೂಕು ಕೇಂದ್ರದಲ್ಲಿರುವ ಬಡವರ ಬಡತನ ನೀಗಲು ಬಿಜೆಪಿ ಯಾವ ಕಾರ್ಯಕ್ರಮವನ್ನೂ ಹಾಕಿಕೊಂಡಿಲ್ಲ. ಹಳ್ಳಿಗಳಲ್ಲಿ ದುಡಿದುಕೊಂಡು ತಿನ್ನುವ ಸಲುವಾಗಿ ಭೂಮಿ ಹಂಚುವ ರೀತಿಯಲ್ಲಿ ನಗರ ಪ್ರದೇಶಗಳಲ್ಲಿ ಪ್ರತಿಮನೆಯೂ ಒಂದು ಗೃಹ ಕೈಗಾರಿಕೆ, ಗುಡಿ ಕೈಗಾರಿಕೆ ಕೇಂದ್ರವಾಗಬೇಕು. ಆಗ ಜನರು ಸ್ವಾವಲಂಬಿಗಳಾಗುತ್ತಾರೆ.

ಜವಹರಲಾಲ್ ನೆಹ್ರು ಪ್ರಧಾನಿಯಾಗಿದ್ದಾಗ ಈ ಪ್ರಯೋಗ ಪಂಜಾಬಿನಲ್ಲಿ ನಡೆಯಿತು. ಆಗ ಕೈರಾನ್ ಎಂಬುವವರು ಪಂಜಾಬಿನ ಮುಖ್ಯಮಂತ್ರಿ ಆಗಿದ್ದರು. ಅವರು ಪಂಜಾಬನ್ನು ಗೃಹ ಕೈಗಾರಿಕೆಗಳ, ಗುಡಿ ಕೈಗಾರಿಕೆಗಳ ಆಗರ ಮಾಡಲು ಸಂಕಲ್ಪ ಮಾಡಿದರು. ಆ ಕೆಲಸದಲ್ಲಿ ಅವರು ಗೆಲುವನ್ನೂ ಸಂಪಾದಿಸಿದರು. ಬಡತನದ ಖಾಯಂ ನಿವಾರಣೆಗೆ ಬುನಾದಿಯನ್ನು ಹಾಕಿದರು. ಆದರೆ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದರೆಂಬ ಅಪವಾದಕ್ಕೆ ತುತ್ತಾಗಿದ್ದರು. ಅದಕ್ಕಾಗಿ ಅವರ ಕೊಲೆಯಾಯಿತು. ಆದರೆ ಬಡತನ ನಿವಾರಣೆಗೆ ಅವರು ಕೈಗೊಂಡ ಕ್ರಮಗಳ ಬಗೆಗೆ ಪಂಜಾಬಿನ ಜನತೆ ಇಂದಿಗೂ ಕೈರಾನ್‍ರನ್ನು ನೆನೆಯುತ್ತಾರೆ.

ಪಂಜಾಬಿನಲ್ಲಿ ನಡೆದ ಈ ಪ್ರಯೋಗ ಭಾರತದಾದ್ಯಂತ ಪಸರಿಸಬೇಕು. ಈ ಕುರಿತು ಭಾಜಪ ಪ್ರಣಾಳಿಕೆಯಲ್ಲಿ ಪ್ರಸ್ತಾಪವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....