Homeಅಂಕಣಗಳುಈ ಐದು ವರ್ಷದಲ್ಲಿ ಮೋದಿಯವರು ಸಾಧಿಸಿದ್ದೇನು?

ಈ ಐದು ವರ್ಷದಲ್ಲಿ ಮೋದಿಯವರು ಸಾಧಿಸಿದ್ದೇನು?

- Advertisement -
- Advertisement -

ಹೆಚ್.ಎಸ್‍.ದೊರೆಸ್ವಾಮಿ |

2019ರ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಭಾರತೀಯ ಜನತಾ ಪಕ್ಷ ಎಲ್ಲಾ ಪಕ್ಷಗಳಿಗಿಂತ ಹೆಚ್ಚಿನ ಹಣವನ್ನು ಕಾರ್ಪೊರೇಟ್ ಕಂಪನಿಗಳಿಂದ ಪಡೆದಿದೆ. ಅವರು ಅಷ್ಟು ಹಣ ಬಿಟ್ಟಿ ಕೊಟ್ಟಿಲ್ಲ. ಮೋದಿ ಸರ್ಕಾರ ಅದಾನಿ, ಅಂಬಾನಿ ಮುಂತಾದ ಕಾರ್ಪೊರೇಟ್‍ಗಳ 50 ಕೋಟಿ ಸಾಲ ಮನ್ನಾ ಮಾಡಿದೆ. ಸರ್ಕಾರದ ಈ ಉಪಕಾರಕ್ಕಾಗಿ ಮೋದಿಯವರ ಪಕ್ಷಕ್ಕೆ ವಿಶೇಷ ಗಿಫ್ಟ್ ಕೊಡಮಾಡಲಾಗಿದೆ. ಮೋದಿ ಸರ್ಕಾರ ಭ್ರಷ್ಟಾಚಾರದಿಂದ ಮುಕ್ತವಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ತಮ್ಮ ಚುನಾವಣಾ ಪ್ರಚಾರದ ಹ್ಯಾಂಡ್‍ಬಿಲ್‍ನಲ್ಲಿ ಹೇಳಿದ್ದಾರೆ. ಮೋದಿಯವರ ಸರ್ಕಾರದ ಭ್ರಷ್ಟಾಚಾರಕ್ಕೆ ಒಂದು ಉದಾಹರಣೆಯಾಗಿ ರಫೆಲ್ ಯುದ್ಧವಿಮಾನ ಖರೀದಿಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಕಛೇರಿಯಿಂದ ಒಪ್ಪಂದ ಕುದುರಿಸಿದ್ದು ಈಗ ಹೊರಬಿದ್ದಿದೆ. ಅದಕ್ಕಾಗಿ ನೇಮಕವಾಗಿದ್ದ ರಕ್ಷಣಾ ಇಲಾಖೆಯ ಸದಸ್ಯರ ನಿಯೋಗ ಅಂತಿಮಗೊಳಿಸಿದ ಕರಾರುಗಳನ್ನು ಬದಲಿಸುವ ಕೆಲಸ ಸರ್ಕಾರದಿಂದ ನಡೆದಿದೆ. ಅದನ್ನು ಪ್ರಶ್ನಿಸಿದ ರಕ್ಷಣಾ ಇಲಾಖೆಯ ನಿಯೋಗದವರು ಸರ್ಕಾರವೇ ಒಪ್ಪಂದವನ್ನು ನೇರವಾಗಿ ಒಪ್ಪಂದ ಮಾಡಿಕೊಳ್ಳಲಿ ನಮಗೆ ಮುಜುಗರ ಉಂಟುಮಾಡುವುದು ಬೇಡ ಎಂದು ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಸರ್ಕಾರ ವಿಮಾನ ನಿರ್ಮಾಣದ ಗಂಧವೇ ಇಲ್ಲದ ಅಂಬಾನಿಯನ್ನು ಒಬ್ಬ ಪಾಲುದಾರನನ್ನಾಗಿ ಮಾಡಿಕೊಂಡು ಅವರಿಗೆ 65 ಕೋಟಿ ರೂಪಾಯಿ ಲಾಭ ಅನಾಯಾಸವಾಗಿ ಮಾಡಿಕೊಡುವ ಹುನ್ನಾರ ಮಾಡಿದೆ.

ಯೋಗ, ಸ್ವಚ್ಛ ಭಾರತ ಎರಡೂ ಹೊಸ ಯೋಜನೆಗಳಲ್ಲ. ಕರ್ನಾಟಕದಲ್ಲಿ ಯೋಗ ತರಗತಿ ಹತ್ತಾರು ವರ್ಷ ಹಿಂದಿನಿಂದ ತರಗತಿಗಳ ಸ್ಥಾನಗಳಿಂದ ನಡೆಯುತ್ತಿವೆ. ಸ್ವಚ್ಛ ಭಾರತದ ಯೋಜನೆಯನ್ನು ಬಿಜೆಪಿಯವರಿಗೂ ಹಿಂದಿನಿಂದಲೂ ನಡೆಸುತ್ತಿದ್ದಾರೆ. ಅದನ್ನು ಪ್ರಥಮವಾಗಿ ರೂಪಿಸಿದವರು ಪ್ರೊ.ಮರುಳಸಿದ್ಧಯ್ಯನವರು. ಅದನ್ನು ಜಾರಿಗೆ ತಂದವರು ಸಚಿವ ಎಂ.ಪಿ.ಪ್ರಕಾಶ್‍ರವರು. ಇನ್ನು ಸ್ವಾವಲಂಬನೆ ಸಾಧಿಸುವ, ಅಂದರೆ ಉದ್ಯೋಗಾವಕಾಶ ಕಲ್ಪಿಸುವ ಕೆಲಸ ಕುಂಟುತ್ತಾ ಸಾಗಿದೆ. ಅದಕ್ಕಾಗಿ ಘೋಷಿಸಲಾದ ಯೋಜನೆಗಳಿಂದ ಲಾಭ ಪಡೆದವರು ಗಣನೀಯ ಸಂಖ್ಯೆಯಲ್ಲಿಲ್ಲ. ಗ್ರಾಮಗಳಲ್ಲಿ ಇರುವವರೆಲ್ಲರಿಗೂ ಉಳುಮೆಗೆ ಭೂಮಿ ಕೊಡಬೇಕು. ದುಡಿದುಕೊಂಡು ತಿನ್ನಲು ಅವಕಾಶ ಮಾಡಿಕೊಡಬೇಕು. ಇದಾಗಬೇಕಾದರೆ ಭೂ ಸುಧಾರಣೆ ಕಾರ್ಯ ಪರಿಣಾಮಕಾರಿಯಾಗಿ ಆಗಬೇಕು. ಭೂ ಮಿತಿ ಶಾಸನವನ್ನು ಪುನರ್ ರೂಪಿಸಬೇಕು. ದುಡಿಯುವ ಎಲ್ಲರಿಗೂ ಕನಿಷ್ಠ 5 ಎಕರೆ ಜಮೀನು ಸಿಗಬೇಕು. ಅನ್ನ ಕಲಸಿ ಕೊಡುವುದು, ಬಡವರ ಖಾತೆಗೆ ಹಣ ಹಾಕುವುದು ಬಡತನ ನಿವಾರಣೆಗೆ ಪರಿಹಾರವಲ್ಲ. ಅದು ಓಟು ಗಿಟ್ಟಿಸಲು ಹೂಡುವ ತಂತ್ರ. ಈ ಗಿಮಿಕ್ ಬಿಟ್ಟು ಬಡವರಿಗೆ ಭೂಮಿ ಹಂಚುವ ಕೆಲಸ ಮಾಡಿದ್ದರೆ ಮೋದಿ ಅವರನ್ನು ಮೆಚ್ಚಿಕೊಳ್ಳಬಹುದಾಗಿತ್ತು.

ಉಚಿತ ಎಲ್‍ಪಿಜಿ ಸೌಲಭ್ಯವನ್ನು ಬಡವರಿಗೆ ನೀಡಿರುವುದು ಅವರ ಸಾಧನೆ ಎಂಬುದನ್ನು ಒಪ್ಪಬಹುದು. ಕೈಗೆಟುಕುವ ದರದಲ್ಲಿ ಜನೌಷಧಿ ಜನರಿಗೆ ಒದಗಿಸುವ ಅವರ ಯೋಜನೆಯೂ ಒಳ್ಳೆಯದೇ.

ಆದರೆ ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹೇಳಿದ್ದರು. ಈ 5 ವರ್ಷದ ಅವರ ಅಧಿಕಾರದ ಅವಧಿಯಲ್ಲಿ 10 ಕೋಟಿ ಉದ್ಯೋಗಗಳು ಸೃಷ್ಠಿಯಾಗಬೇಕಾಗಿತ್ತು. ಉದ್ಯೋಗ ಸೃಷ್ಟಿಸುವ ರೀತಿ ಘೋಷಣೆಯಾಗಿ ಬೆಳೆಯಿತು. ಗುಡಿಸುವ ಕೆಲಸಕ್ಕೆ ಅರ್ಜಿ ಕರೆದರೆ ಒಂದು ಲಕ್ಷ ಅರ್ಜಿಗಳು ಬರುತ್ತವೆ. ಅದರಲ್ಲಿ 2ರಿಂದ 3 ಸಾವಿರ ಜನ ಪದವೀಧರರು, ಸ್ನಾತಕೋತ್ತರ ಪದವೀಧರರೂ ಇರುತ್ತಾರೆ. ಅಂದರೆ ಓದಿದವರಿಗೂ, ಓದದವರಿಗೂ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಎಂಬುದು ಉತ್ಪ್ರೇಕ್ಷೆಯಲ್ಲ.

ಸ್ವಾತಂತ್ರ್ಯ ಬಂದು 72 ವರ್ಷಗಳೇ ಕಳೆದರೂ ಬಡತನವನ್ನೂ ನೀಗುವ ಕೆಲಸ ನಡೆದೇ ಇಲ್ಲ. ಬಡವರ ಓಟನ್ನು ಕಿತ್ತುಕೊಂಡು ಅಧಿಕಾರಕ್ಕೆ ಬರುತ್ತೀರಿ, ಅವರ ಬಗೆಗೆ ಲೋಕಸಭೆ ಸದಸ್ಯರಾಗುವವರಿಗೆ ಕಿಂಚಿತ್ತೂ ಕಾಳಜಿಯಿಲ್ಲ. ಬಡತನದ ಸಂಪೂರ್ಣ ನಿವಾರಣೆಗೆ ಸರ್ಕಾರ ಮತ್ತು ಪಾರ್ಲಿಮೆಂಟ್ ಸದಸ್ಯರು ಒಂದು ಪರಿಣಾಮಕಾರಿ ಕಾನೂನನ್ನು ತರುವುದರಲ್ಲಿ ವಿಫಲರಾಗಿದ್ದಾರೆ. ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲೂ ಅದರ ಪ್ರಸ್ತಾಪ ಇರುವುದಿಲ್ಲ. ಶ್ರೀಮಂತರನ್ನು ಓಲೈಸುವ ಪಕ್ಷ ಭಾರತೀಯ ಜನತಾ ಪಕ್ಷ. ಸಮಾನತೆಯನ್ನು ಸಾಧಿಸುವ ವಿಚಾರ ಅವರಿಗೆ ಬೇಕಾಗಿಲ್ಲ. ಅವರು Statusquoists. ಅಸಮಾನತೆಯ ಸಮಾಜದ ನಿರ್ಮಾಣವೇ ಅವರ ಗುರಿ, ದೊಡ್ಡ ಜಮೀನ್ದಾರರು, ಪಟ್ಟಭದ್ರ ಹಿತಾಸಕ್ತಿಗಳು, ಕಾರ್ಪೊರೇಟ್ ಸಂಸ್ಥೆಗಳ ಮಾಲೀಕರು ಅರೆಸ್ಸೆಸ್ ಮತ್ತು ಬಿಜೆಪಿಯ ಬೆನ್ನೆಲುಬು. ಈ ಕಠೋರ ಮನೋಭಾವದ ಭಾಜಪಕ್ಕೆ ಮತ ನೀಡಬೇಕೇ?.

ಹಳ್ಳಿಗಳಲ್ಲಿ ದುಡಿಯಲು ಆಸಕ್ತಿಯುಳ್ಳ ಎಲ್ಲ ಭೂ ಹೀನ ರೈತರಿಗೆ ಮತ್ತು ರೈತ ಕಾರ್ಮಿಕರಿಗೆ ತಲಾ 5 ಎಕರೆ ಜಮೀನು ನೀಡುವ ಮೂಲಕ ಗ್ರಾಮೀಣ ಬಡತನ ನೀಗಬೇಕು. ಅದರಂತೆಯೇ ಪಟ್ಟಣ ಮತ್ತು ತಾಲ್ಲೂಕು ಕೇಂದ್ರದಲ್ಲಿರುವ ಬಡವರ ಬಡತನ ನೀಗಲು ಬಿಜೆಪಿ ಯಾವ ಕಾರ್ಯಕ್ರಮವನ್ನೂ ಹಾಕಿಕೊಂಡಿಲ್ಲ. ಹಳ್ಳಿಗಳಲ್ಲಿ ದುಡಿದುಕೊಂಡು ತಿನ್ನುವ ಸಲುವಾಗಿ ಭೂಮಿ ಹಂಚುವ ರೀತಿಯಲ್ಲಿ ನಗರ ಪ್ರದೇಶಗಳಲ್ಲಿ ಪ್ರತಿಮನೆಯೂ ಒಂದು ಗೃಹ ಕೈಗಾರಿಕೆ, ಗುಡಿ ಕೈಗಾರಿಕೆ ಕೇಂದ್ರವಾಗಬೇಕು. ಆಗ ಜನರು ಸ್ವಾವಲಂಬಿಗಳಾಗುತ್ತಾರೆ.

ಜವಹರಲಾಲ್ ನೆಹ್ರು ಪ್ರಧಾನಿಯಾಗಿದ್ದಾಗ ಈ ಪ್ರಯೋಗ ಪಂಜಾಬಿನಲ್ಲಿ ನಡೆಯಿತು. ಆಗ ಕೈರಾನ್ ಎಂಬುವವರು ಪಂಜಾಬಿನ ಮುಖ್ಯಮಂತ್ರಿ ಆಗಿದ್ದರು. ಅವರು ಪಂಜಾಬನ್ನು ಗೃಹ ಕೈಗಾರಿಕೆಗಳ, ಗುಡಿ ಕೈಗಾರಿಕೆಗಳ ಆಗರ ಮಾಡಲು ಸಂಕಲ್ಪ ಮಾಡಿದರು. ಆ ಕೆಲಸದಲ್ಲಿ ಅವರು ಗೆಲುವನ್ನೂ ಸಂಪಾದಿಸಿದರು. ಬಡತನದ ಖಾಯಂ ನಿವಾರಣೆಗೆ ಬುನಾದಿಯನ್ನು ಹಾಕಿದರು. ಆದರೆ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದರೆಂಬ ಅಪವಾದಕ್ಕೆ ತುತ್ತಾಗಿದ್ದರು. ಅದಕ್ಕಾಗಿ ಅವರ ಕೊಲೆಯಾಯಿತು. ಆದರೆ ಬಡತನ ನಿವಾರಣೆಗೆ ಅವರು ಕೈಗೊಂಡ ಕ್ರಮಗಳ ಬಗೆಗೆ ಪಂಜಾಬಿನ ಜನತೆ ಇಂದಿಗೂ ಕೈರಾನ್‍ರನ್ನು ನೆನೆಯುತ್ತಾರೆ.

ಪಂಜಾಬಿನಲ್ಲಿ ನಡೆದ ಈ ಪ್ರಯೋಗ ಭಾರತದಾದ್ಯಂತ ಪಸರಿಸಬೇಕು. ಈ ಕುರಿತು ಭಾಜಪ ಪ್ರಣಾಳಿಕೆಯಲ್ಲಿ ಪ್ರಸ್ತಾಪವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...