Homeಅಂಕಣಗಳುಈ ಐದು ವರ್ಷದಲ್ಲಿ ಮೋದಿಯವರು ಸಾಧಿಸಿದ್ದೇನು?

ಈ ಐದು ವರ್ಷದಲ್ಲಿ ಮೋದಿಯವರು ಸಾಧಿಸಿದ್ದೇನು?

- Advertisement -
- Advertisement -

ಹೆಚ್.ಎಸ್‍.ದೊರೆಸ್ವಾಮಿ |

2019ರ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಭಾರತೀಯ ಜನತಾ ಪಕ್ಷ ಎಲ್ಲಾ ಪಕ್ಷಗಳಿಗಿಂತ ಹೆಚ್ಚಿನ ಹಣವನ್ನು ಕಾರ್ಪೊರೇಟ್ ಕಂಪನಿಗಳಿಂದ ಪಡೆದಿದೆ. ಅವರು ಅಷ್ಟು ಹಣ ಬಿಟ್ಟಿ ಕೊಟ್ಟಿಲ್ಲ. ಮೋದಿ ಸರ್ಕಾರ ಅದಾನಿ, ಅಂಬಾನಿ ಮುಂತಾದ ಕಾರ್ಪೊರೇಟ್‍ಗಳ 50 ಕೋಟಿ ಸಾಲ ಮನ್ನಾ ಮಾಡಿದೆ. ಸರ್ಕಾರದ ಈ ಉಪಕಾರಕ್ಕಾಗಿ ಮೋದಿಯವರ ಪಕ್ಷಕ್ಕೆ ವಿಶೇಷ ಗಿಫ್ಟ್ ಕೊಡಮಾಡಲಾಗಿದೆ. ಮೋದಿ ಸರ್ಕಾರ ಭ್ರಷ್ಟಾಚಾರದಿಂದ ಮುಕ್ತವಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ತಮ್ಮ ಚುನಾವಣಾ ಪ್ರಚಾರದ ಹ್ಯಾಂಡ್‍ಬಿಲ್‍ನಲ್ಲಿ ಹೇಳಿದ್ದಾರೆ. ಮೋದಿಯವರ ಸರ್ಕಾರದ ಭ್ರಷ್ಟಾಚಾರಕ್ಕೆ ಒಂದು ಉದಾಹರಣೆಯಾಗಿ ರಫೆಲ್ ಯುದ್ಧವಿಮಾನ ಖರೀದಿಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಕಛೇರಿಯಿಂದ ಒಪ್ಪಂದ ಕುದುರಿಸಿದ್ದು ಈಗ ಹೊರಬಿದ್ದಿದೆ. ಅದಕ್ಕಾಗಿ ನೇಮಕವಾಗಿದ್ದ ರಕ್ಷಣಾ ಇಲಾಖೆಯ ಸದಸ್ಯರ ನಿಯೋಗ ಅಂತಿಮಗೊಳಿಸಿದ ಕರಾರುಗಳನ್ನು ಬದಲಿಸುವ ಕೆಲಸ ಸರ್ಕಾರದಿಂದ ನಡೆದಿದೆ. ಅದನ್ನು ಪ್ರಶ್ನಿಸಿದ ರಕ್ಷಣಾ ಇಲಾಖೆಯ ನಿಯೋಗದವರು ಸರ್ಕಾರವೇ ಒಪ್ಪಂದವನ್ನು ನೇರವಾಗಿ ಒಪ್ಪಂದ ಮಾಡಿಕೊಳ್ಳಲಿ ನಮಗೆ ಮುಜುಗರ ಉಂಟುಮಾಡುವುದು ಬೇಡ ಎಂದು ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಸರ್ಕಾರ ವಿಮಾನ ನಿರ್ಮಾಣದ ಗಂಧವೇ ಇಲ್ಲದ ಅಂಬಾನಿಯನ್ನು ಒಬ್ಬ ಪಾಲುದಾರನನ್ನಾಗಿ ಮಾಡಿಕೊಂಡು ಅವರಿಗೆ 65 ಕೋಟಿ ರೂಪಾಯಿ ಲಾಭ ಅನಾಯಾಸವಾಗಿ ಮಾಡಿಕೊಡುವ ಹುನ್ನಾರ ಮಾಡಿದೆ.

ಯೋಗ, ಸ್ವಚ್ಛ ಭಾರತ ಎರಡೂ ಹೊಸ ಯೋಜನೆಗಳಲ್ಲ. ಕರ್ನಾಟಕದಲ್ಲಿ ಯೋಗ ತರಗತಿ ಹತ್ತಾರು ವರ್ಷ ಹಿಂದಿನಿಂದ ತರಗತಿಗಳ ಸ್ಥಾನಗಳಿಂದ ನಡೆಯುತ್ತಿವೆ. ಸ್ವಚ್ಛ ಭಾರತದ ಯೋಜನೆಯನ್ನು ಬಿಜೆಪಿಯವರಿಗೂ ಹಿಂದಿನಿಂದಲೂ ನಡೆಸುತ್ತಿದ್ದಾರೆ. ಅದನ್ನು ಪ್ರಥಮವಾಗಿ ರೂಪಿಸಿದವರು ಪ್ರೊ.ಮರುಳಸಿದ್ಧಯ್ಯನವರು. ಅದನ್ನು ಜಾರಿಗೆ ತಂದವರು ಸಚಿವ ಎಂ.ಪಿ.ಪ್ರಕಾಶ್‍ರವರು. ಇನ್ನು ಸ್ವಾವಲಂಬನೆ ಸಾಧಿಸುವ, ಅಂದರೆ ಉದ್ಯೋಗಾವಕಾಶ ಕಲ್ಪಿಸುವ ಕೆಲಸ ಕುಂಟುತ್ತಾ ಸಾಗಿದೆ. ಅದಕ್ಕಾಗಿ ಘೋಷಿಸಲಾದ ಯೋಜನೆಗಳಿಂದ ಲಾಭ ಪಡೆದವರು ಗಣನೀಯ ಸಂಖ್ಯೆಯಲ್ಲಿಲ್ಲ. ಗ್ರಾಮಗಳಲ್ಲಿ ಇರುವವರೆಲ್ಲರಿಗೂ ಉಳುಮೆಗೆ ಭೂಮಿ ಕೊಡಬೇಕು. ದುಡಿದುಕೊಂಡು ತಿನ್ನಲು ಅವಕಾಶ ಮಾಡಿಕೊಡಬೇಕು. ಇದಾಗಬೇಕಾದರೆ ಭೂ ಸುಧಾರಣೆ ಕಾರ್ಯ ಪರಿಣಾಮಕಾರಿಯಾಗಿ ಆಗಬೇಕು. ಭೂ ಮಿತಿ ಶಾಸನವನ್ನು ಪುನರ್ ರೂಪಿಸಬೇಕು. ದುಡಿಯುವ ಎಲ್ಲರಿಗೂ ಕನಿಷ್ಠ 5 ಎಕರೆ ಜಮೀನು ಸಿಗಬೇಕು. ಅನ್ನ ಕಲಸಿ ಕೊಡುವುದು, ಬಡವರ ಖಾತೆಗೆ ಹಣ ಹಾಕುವುದು ಬಡತನ ನಿವಾರಣೆಗೆ ಪರಿಹಾರವಲ್ಲ. ಅದು ಓಟು ಗಿಟ್ಟಿಸಲು ಹೂಡುವ ತಂತ್ರ. ಈ ಗಿಮಿಕ್ ಬಿಟ್ಟು ಬಡವರಿಗೆ ಭೂಮಿ ಹಂಚುವ ಕೆಲಸ ಮಾಡಿದ್ದರೆ ಮೋದಿ ಅವರನ್ನು ಮೆಚ್ಚಿಕೊಳ್ಳಬಹುದಾಗಿತ್ತು.

ಉಚಿತ ಎಲ್‍ಪಿಜಿ ಸೌಲಭ್ಯವನ್ನು ಬಡವರಿಗೆ ನೀಡಿರುವುದು ಅವರ ಸಾಧನೆ ಎಂಬುದನ್ನು ಒಪ್ಪಬಹುದು. ಕೈಗೆಟುಕುವ ದರದಲ್ಲಿ ಜನೌಷಧಿ ಜನರಿಗೆ ಒದಗಿಸುವ ಅವರ ಯೋಜನೆಯೂ ಒಳ್ಳೆಯದೇ.

ಆದರೆ ಮೋದಿ ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹೇಳಿದ್ದರು. ಈ 5 ವರ್ಷದ ಅವರ ಅಧಿಕಾರದ ಅವಧಿಯಲ್ಲಿ 10 ಕೋಟಿ ಉದ್ಯೋಗಗಳು ಸೃಷ್ಠಿಯಾಗಬೇಕಾಗಿತ್ತು. ಉದ್ಯೋಗ ಸೃಷ್ಟಿಸುವ ರೀತಿ ಘೋಷಣೆಯಾಗಿ ಬೆಳೆಯಿತು. ಗುಡಿಸುವ ಕೆಲಸಕ್ಕೆ ಅರ್ಜಿ ಕರೆದರೆ ಒಂದು ಲಕ್ಷ ಅರ್ಜಿಗಳು ಬರುತ್ತವೆ. ಅದರಲ್ಲಿ 2ರಿಂದ 3 ಸಾವಿರ ಜನ ಪದವೀಧರರು, ಸ್ನಾತಕೋತ್ತರ ಪದವೀಧರರೂ ಇರುತ್ತಾರೆ. ಅಂದರೆ ಓದಿದವರಿಗೂ, ಓದದವರಿಗೂ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಎಂಬುದು ಉತ್ಪ್ರೇಕ್ಷೆಯಲ್ಲ.

ಸ್ವಾತಂತ್ರ್ಯ ಬಂದು 72 ವರ್ಷಗಳೇ ಕಳೆದರೂ ಬಡತನವನ್ನೂ ನೀಗುವ ಕೆಲಸ ನಡೆದೇ ಇಲ್ಲ. ಬಡವರ ಓಟನ್ನು ಕಿತ್ತುಕೊಂಡು ಅಧಿಕಾರಕ್ಕೆ ಬರುತ್ತೀರಿ, ಅವರ ಬಗೆಗೆ ಲೋಕಸಭೆ ಸದಸ್ಯರಾಗುವವರಿಗೆ ಕಿಂಚಿತ್ತೂ ಕಾಳಜಿಯಿಲ್ಲ. ಬಡತನದ ಸಂಪೂರ್ಣ ನಿವಾರಣೆಗೆ ಸರ್ಕಾರ ಮತ್ತು ಪಾರ್ಲಿಮೆಂಟ್ ಸದಸ್ಯರು ಒಂದು ಪರಿಣಾಮಕಾರಿ ಕಾನೂನನ್ನು ತರುವುದರಲ್ಲಿ ವಿಫಲರಾಗಿದ್ದಾರೆ. ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲೂ ಅದರ ಪ್ರಸ್ತಾಪ ಇರುವುದಿಲ್ಲ. ಶ್ರೀಮಂತರನ್ನು ಓಲೈಸುವ ಪಕ್ಷ ಭಾರತೀಯ ಜನತಾ ಪಕ್ಷ. ಸಮಾನತೆಯನ್ನು ಸಾಧಿಸುವ ವಿಚಾರ ಅವರಿಗೆ ಬೇಕಾಗಿಲ್ಲ. ಅವರು Statusquoists. ಅಸಮಾನತೆಯ ಸಮಾಜದ ನಿರ್ಮಾಣವೇ ಅವರ ಗುರಿ, ದೊಡ್ಡ ಜಮೀನ್ದಾರರು, ಪಟ್ಟಭದ್ರ ಹಿತಾಸಕ್ತಿಗಳು, ಕಾರ್ಪೊರೇಟ್ ಸಂಸ್ಥೆಗಳ ಮಾಲೀಕರು ಅರೆಸ್ಸೆಸ್ ಮತ್ತು ಬಿಜೆಪಿಯ ಬೆನ್ನೆಲುಬು. ಈ ಕಠೋರ ಮನೋಭಾವದ ಭಾಜಪಕ್ಕೆ ಮತ ನೀಡಬೇಕೇ?.

ಹಳ್ಳಿಗಳಲ್ಲಿ ದುಡಿಯಲು ಆಸಕ್ತಿಯುಳ್ಳ ಎಲ್ಲ ಭೂ ಹೀನ ರೈತರಿಗೆ ಮತ್ತು ರೈತ ಕಾರ್ಮಿಕರಿಗೆ ತಲಾ 5 ಎಕರೆ ಜಮೀನು ನೀಡುವ ಮೂಲಕ ಗ್ರಾಮೀಣ ಬಡತನ ನೀಗಬೇಕು. ಅದರಂತೆಯೇ ಪಟ್ಟಣ ಮತ್ತು ತಾಲ್ಲೂಕು ಕೇಂದ್ರದಲ್ಲಿರುವ ಬಡವರ ಬಡತನ ನೀಗಲು ಬಿಜೆಪಿ ಯಾವ ಕಾರ್ಯಕ್ರಮವನ್ನೂ ಹಾಕಿಕೊಂಡಿಲ್ಲ. ಹಳ್ಳಿಗಳಲ್ಲಿ ದುಡಿದುಕೊಂಡು ತಿನ್ನುವ ಸಲುವಾಗಿ ಭೂಮಿ ಹಂಚುವ ರೀತಿಯಲ್ಲಿ ನಗರ ಪ್ರದೇಶಗಳಲ್ಲಿ ಪ್ರತಿಮನೆಯೂ ಒಂದು ಗೃಹ ಕೈಗಾರಿಕೆ, ಗುಡಿ ಕೈಗಾರಿಕೆ ಕೇಂದ್ರವಾಗಬೇಕು. ಆಗ ಜನರು ಸ್ವಾವಲಂಬಿಗಳಾಗುತ್ತಾರೆ.

ಜವಹರಲಾಲ್ ನೆಹ್ರು ಪ್ರಧಾನಿಯಾಗಿದ್ದಾಗ ಈ ಪ್ರಯೋಗ ಪಂಜಾಬಿನಲ್ಲಿ ನಡೆಯಿತು. ಆಗ ಕೈರಾನ್ ಎಂಬುವವರು ಪಂಜಾಬಿನ ಮುಖ್ಯಮಂತ್ರಿ ಆಗಿದ್ದರು. ಅವರು ಪಂಜಾಬನ್ನು ಗೃಹ ಕೈಗಾರಿಕೆಗಳ, ಗುಡಿ ಕೈಗಾರಿಕೆಗಳ ಆಗರ ಮಾಡಲು ಸಂಕಲ್ಪ ಮಾಡಿದರು. ಆ ಕೆಲಸದಲ್ಲಿ ಅವರು ಗೆಲುವನ್ನೂ ಸಂಪಾದಿಸಿದರು. ಬಡತನದ ಖಾಯಂ ನಿವಾರಣೆಗೆ ಬುನಾದಿಯನ್ನು ಹಾಕಿದರು. ಆದರೆ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದರೆಂಬ ಅಪವಾದಕ್ಕೆ ತುತ್ತಾಗಿದ್ದರು. ಅದಕ್ಕಾಗಿ ಅವರ ಕೊಲೆಯಾಯಿತು. ಆದರೆ ಬಡತನ ನಿವಾರಣೆಗೆ ಅವರು ಕೈಗೊಂಡ ಕ್ರಮಗಳ ಬಗೆಗೆ ಪಂಜಾಬಿನ ಜನತೆ ಇಂದಿಗೂ ಕೈರಾನ್‍ರನ್ನು ನೆನೆಯುತ್ತಾರೆ.

ಪಂಜಾಬಿನಲ್ಲಿ ನಡೆದ ಈ ಪ್ರಯೋಗ ಭಾರತದಾದ್ಯಂತ ಪಸರಿಸಬೇಕು. ಈ ಕುರಿತು ಭಾಜಪ ಪ್ರಣಾಳಿಕೆಯಲ್ಲಿ ಪ್ರಸ್ತಾಪವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...