Homeಕರ್ನಾಟಕದಲಿತ ಮಹಿಳೆ ಮೇಲೆ ನಿರಂತರ ಲೈಂಗಿಕ ಕಿರುಕುಳ, ವಂಚನೆ ಆರೋಪ: ಕ್ರಮಕ್ಕೆ ಮಹಿಳೆಯ ಆಗ್ರಹ

ದಲಿತ ಮಹಿಳೆ ಮೇಲೆ ನಿರಂತರ ಲೈಂಗಿಕ ಕಿರುಕುಳ, ವಂಚನೆ ಆರೋಪ: ಕ್ರಮಕ್ಕೆ ಮಹಿಳೆಯ ಆಗ್ರಹ

- Advertisement -
- Advertisement -

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಅಕ್ಕಿಆಲೂರ ಸರಕಾರಿ ಆಸ್ಪತ್ರೆಯಲ್ಲಿ ಟೆಕ್ನಿಷಿಯನ್ ಆದ ಕುಬೇರ ಸಾವಂತ ಎಂಬುವವನು ತನಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದು, ಕೆಲಸ ಖಾಯಂ ಮಾಡುವುದಾಗಿ 50,000 ರೂ ಪಡೆದು ವಂಚಿಸಿದ್ದಾನೆ ಎಂದು ಅದೇ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ದಲಿತ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಈ ಕುರಿತು ‘ಲೈಂಗಿಕ ಕಿರುಕುಳ ಕುರಿತು ದೂರು’ ಹೆಸರಿನಲ್ಲಿ ತಾಲೂಕು ವೈದ್ಯಾಧಿಕಾರಿಗಳು, ಹಾವೇರಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಮಹಿಳಾ ಆಯೋಗ ಸೇರಿದಂತೆ ಹತ್ತಾರು ಜನರಿಗೆ ದೂರು ನೀಡಿದ್ದರು ತನಗೆ ಯಾವುದೇ ನ್ಯಾಯ ಸಿಕ್ಕಿಲ್ಲ ಎಂದು ಸಂತ್ರಸ್ತ ಮಹಿಳೆ ದೂರಿದ್ದಾರೆ.

ನಾನು ದಲಿತ ಜಾತಿಗೆ ಸೇರಿದ್ದು, ಹಾನಗಲ್ಲ ತಾಲೂಕಿನ ಅಕ್ಕಿಆಲೂರ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 7-8 ವರ್ಷಗಳಿಂದ ಹೊರಗುತ್ತಿಗೆ ನೌಕರಳಾಗಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದೇನೆ. ಆರಂಭದಲ್ಲಿ ದಿನಕ್ಕೆ ಕೇವಲ 100 ರೂ ನೀಡುತ್ತಿದ್ದರು. ನನ್ನ ಕೆಲಸ ಖಾಯಂ ಮಾಡುವುದಾಗಿ ದವಾಖಾನೆಯ ಮ್ಯಾನೆಜರ ಆದ ಕುಬೇರ ಸಾವಂತ 60,000 ರೂ ಪಡೆದಿದ್ದಾರೆ. ಆದರೆ ಕಳೆದ ಎರಡು ವರ್ಷಗಳಿಂದ ಕುಬೇರ ಸಾವಂತ ಇವನು ನನಗೆ ಹೊರಗುತ್ತಿಗೆ ನೌಕರಿ ಕಾಯಂ ಮಾಡಿಕೊಟ್ಟಾಗಿನಿಂದ ನನಗೆ ತುಂಬಾ ಲೈಂಗಿಕ ಕಿರುಕುಳ ಕೊಡುತ್ತಿದ್ದಾನೆ. ಕೆಟ್ಟದಾಗಿ ಮಾತಾನಾಡುವುದು, ಮೈಮುಟ್ಟುವುದು, ವಿವಸ್ತ್ರಗೊಳಿಸುವುದು, ಬಲವಂತವಾಗಿ ಹಿಂಸಿಸುವುದು, ಮನೆಗೆ ಬಾ ಎಂದು ಒತ್ತಾಯಿಸುವುದು ಮಾಡುತ್ತಿದ್ದಾನೆ. ಜನವರಿ 26 ರಂದು ನನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ. ನಾನು ಅದನ್ನು ವಿರೋಧಿಸಿ ಕೂಗಾಡಿದ್ದರಿಂದ ಓಡಿ ಹೋಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಕುಬೇರ ಸಾವಂತನ ಈ ಎಲ್ಲ ಲೈಂಗಿಕ ಛೇಷ್ಟೆಗಳ ಕಾರಣಗಳಿಂದಾಗಿ ನನಗೆ ಮಾನಸಿಕವಾಗಿ,
ದೈಹಿಕವಾಗಿ, ಹಾಗೂ ಆರ್ಥಿಕವಾಗಿ ಭರಿಸಲಾಗದಷ್ಟು ಹಾನಿಯಾಗಿದೆ. ನನಗಾದ ಅನ್ಯಾಯ ಬೇರೆ ಯಾರಿಗೂ ಆಗಬಾರದೆಂದು ಫೆಬ್ರವರಿ 6ನೇ ತಾರೀಖಿನಂದೇ ದೂರು ನೀಡಿದ್ದೇನೆ. ಈ ಕೂಡಲೇ ಕುಬೇರ ಸಾವಂತನನ್ನು ಕೆಲಸದಿಂದ ಅಮಾನತ್ತಿನಲ್ಲಿಟ್ಟು, ಬಂಧಿಸಿ, ವಿಚಾರಣೆ ನಡೆಸಿ ನ್ಯಾಯ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ.

ದೂರು ನೀಡಿ ಹದಿನೈದು ದಿನ ಕಳೆದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಲಿ, ಆರೋಗ್ಯ ಇಲಾಖೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಪಿಯನ್ನು ಬಂಧಿಸುವ, ವಿಚಾರಣೆ ನಡೆಸುವ ಕೆಲಸ ಮಾಡಿಲ್ಲ. ಈ ಕುರಿತು ದಲಿತ ಸಂಘಟನೆಗಳು ಒತ್ತಾಯ ಮಾಡಿದ ನಂತರ ಮಾತ್ರ ಫೆಬ್ರವರಿ 22 ರ ರಾತ್ರಿ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದರೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಿಸಿಲ್ಲ. ಆರೋಪಿಗೆ ರಾಜಕೀಯ ನಾಯಕರ ಬೆಂಬಲವಿರುವುದರಿಂದ ದಲಿತ ಮಹಿಳೆಗೆ ಅನ್ಯಾಯವಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರಾದ ಪ್ರಶಾಂತ್ ಮುಚ್ಚಂಡಿಯವರು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು “ಆ ಮಹಿಳೆಗೆ ಕೆಲಸ ಖಾಯಂ ಆಗಿಲ್ಲ. ಆಕೆಗೆ ಎಲ್ಲ ರೀತಿಯಿಂದಲೂ ಅನ್ಯಾಯವಾಗಿದೆ. ಹಾಗಾಗಿ ಆರೋಪಿಯ ಮೇಲೆ ಈ ಕೂಡಲೇ ಪೊಲೀಸರು ಲೈಂಗಿಕ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನದ ಪ್ರಕರಣ ದಾಖಲಿಸಬೇಕು. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು. ತಕ್ಷಣ ಕೆಲಸದಿಂದ ಅಮಾನತ್ತು ಮಾಡಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಪುರುಷಾಧಿಪತ್ಯ ಮುರಿಯುವ ಹೋರಾಟ: ಭನ್ವಾರಿ ದೇವಿಯಿಂದ, ನಿರ್ಭಯಳಿಂದ ಪ್ರಿಯಾ ರಮಣಿವರೆಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...