Homeಕರ್ನಾಟಕದಲಿತ ಮಹಿಳೆ ಮೇಲೆ ನಿರಂತರ ಲೈಂಗಿಕ ಕಿರುಕುಳ, ವಂಚನೆ ಆರೋಪ: ಕ್ರಮಕ್ಕೆ ಮಹಿಳೆಯ ಆಗ್ರಹ

ದಲಿತ ಮಹಿಳೆ ಮೇಲೆ ನಿರಂತರ ಲೈಂಗಿಕ ಕಿರುಕುಳ, ವಂಚನೆ ಆರೋಪ: ಕ್ರಮಕ್ಕೆ ಮಹಿಳೆಯ ಆಗ್ರಹ

- Advertisement -
- Advertisement -

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಅಕ್ಕಿಆಲೂರ ಸರಕಾರಿ ಆಸ್ಪತ್ರೆಯಲ್ಲಿ ಟೆಕ್ನಿಷಿಯನ್ ಆದ ಕುಬೇರ ಸಾವಂತ ಎಂಬುವವನು ತನಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದು, ಕೆಲಸ ಖಾಯಂ ಮಾಡುವುದಾಗಿ 50,000 ರೂ ಪಡೆದು ವಂಚಿಸಿದ್ದಾನೆ ಎಂದು ಅದೇ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ದಲಿತ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಈ ಕುರಿತು ‘ಲೈಂಗಿಕ ಕಿರುಕುಳ ಕುರಿತು ದೂರು’ ಹೆಸರಿನಲ್ಲಿ ತಾಲೂಕು ವೈದ್ಯಾಧಿಕಾರಿಗಳು, ಹಾವೇರಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಮಹಿಳಾ ಆಯೋಗ ಸೇರಿದಂತೆ ಹತ್ತಾರು ಜನರಿಗೆ ದೂರು ನೀಡಿದ್ದರು ತನಗೆ ಯಾವುದೇ ನ್ಯಾಯ ಸಿಕ್ಕಿಲ್ಲ ಎಂದು ಸಂತ್ರಸ್ತ ಮಹಿಳೆ ದೂರಿದ್ದಾರೆ.

ನಾನು ದಲಿತ ಜಾತಿಗೆ ಸೇರಿದ್ದು, ಹಾನಗಲ್ಲ ತಾಲೂಕಿನ ಅಕ್ಕಿಆಲೂರ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 7-8 ವರ್ಷಗಳಿಂದ ಹೊರಗುತ್ತಿಗೆ ನೌಕರಳಾಗಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದೇನೆ. ಆರಂಭದಲ್ಲಿ ದಿನಕ್ಕೆ ಕೇವಲ 100 ರೂ ನೀಡುತ್ತಿದ್ದರು. ನನ್ನ ಕೆಲಸ ಖಾಯಂ ಮಾಡುವುದಾಗಿ ದವಾಖಾನೆಯ ಮ್ಯಾನೆಜರ ಆದ ಕುಬೇರ ಸಾವಂತ 60,000 ರೂ ಪಡೆದಿದ್ದಾರೆ. ಆದರೆ ಕಳೆದ ಎರಡು ವರ್ಷಗಳಿಂದ ಕುಬೇರ ಸಾವಂತ ಇವನು ನನಗೆ ಹೊರಗುತ್ತಿಗೆ ನೌಕರಿ ಕಾಯಂ ಮಾಡಿಕೊಟ್ಟಾಗಿನಿಂದ ನನಗೆ ತುಂಬಾ ಲೈಂಗಿಕ ಕಿರುಕುಳ ಕೊಡುತ್ತಿದ್ದಾನೆ. ಕೆಟ್ಟದಾಗಿ ಮಾತಾನಾಡುವುದು, ಮೈಮುಟ್ಟುವುದು, ವಿವಸ್ತ್ರಗೊಳಿಸುವುದು, ಬಲವಂತವಾಗಿ ಹಿಂಸಿಸುವುದು, ಮನೆಗೆ ಬಾ ಎಂದು ಒತ್ತಾಯಿಸುವುದು ಮಾಡುತ್ತಿದ್ದಾನೆ. ಜನವರಿ 26 ರಂದು ನನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ. ನಾನು ಅದನ್ನು ವಿರೋಧಿಸಿ ಕೂಗಾಡಿದ್ದರಿಂದ ಓಡಿ ಹೋಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಕುಬೇರ ಸಾವಂತನ ಈ ಎಲ್ಲ ಲೈಂಗಿಕ ಛೇಷ್ಟೆಗಳ ಕಾರಣಗಳಿಂದಾಗಿ ನನಗೆ ಮಾನಸಿಕವಾಗಿ,
ದೈಹಿಕವಾಗಿ, ಹಾಗೂ ಆರ್ಥಿಕವಾಗಿ ಭರಿಸಲಾಗದಷ್ಟು ಹಾನಿಯಾಗಿದೆ. ನನಗಾದ ಅನ್ಯಾಯ ಬೇರೆ ಯಾರಿಗೂ ಆಗಬಾರದೆಂದು ಫೆಬ್ರವರಿ 6ನೇ ತಾರೀಖಿನಂದೇ ದೂರು ನೀಡಿದ್ದೇನೆ. ಈ ಕೂಡಲೇ ಕುಬೇರ ಸಾವಂತನನ್ನು ಕೆಲಸದಿಂದ ಅಮಾನತ್ತಿನಲ್ಲಿಟ್ಟು, ಬಂಧಿಸಿ, ವಿಚಾರಣೆ ನಡೆಸಿ ನ್ಯಾಯ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ.

ದೂರು ನೀಡಿ ಹದಿನೈದು ದಿನ ಕಳೆದರೂ ಪೊಲೀಸರಾಗಲಿ, ಜಿಲ್ಲಾಡಳಿತವಾಗಲಿ, ಆರೋಗ್ಯ ಇಲಾಖೆಯಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಪಿಯನ್ನು ಬಂಧಿಸುವ, ವಿಚಾರಣೆ ನಡೆಸುವ ಕೆಲಸ ಮಾಡಿಲ್ಲ. ಈ ಕುರಿತು ದಲಿತ ಸಂಘಟನೆಗಳು ಒತ್ತಾಯ ಮಾಡಿದ ನಂತರ ಮಾತ್ರ ಫೆಬ್ರವರಿ 22 ರ ರಾತ್ರಿ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆದರೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಿಸಿಲ್ಲ. ಆರೋಪಿಗೆ ರಾಜಕೀಯ ನಾಯಕರ ಬೆಂಬಲವಿರುವುದರಿಂದ ದಲಿತ ಮಹಿಳೆಗೆ ಅನ್ಯಾಯವಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರಾದ ಪ್ರಶಾಂತ್ ಮುಚ್ಚಂಡಿಯವರು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು “ಆ ಮಹಿಳೆಗೆ ಕೆಲಸ ಖಾಯಂ ಆಗಿಲ್ಲ. ಆಕೆಗೆ ಎಲ್ಲ ರೀತಿಯಿಂದಲೂ ಅನ್ಯಾಯವಾಗಿದೆ. ಹಾಗಾಗಿ ಆರೋಪಿಯ ಮೇಲೆ ಈ ಕೂಡಲೇ ಪೊಲೀಸರು ಲೈಂಗಿಕ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನದ ಪ್ರಕರಣ ದಾಖಲಿಸಬೇಕು. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು. ತಕ್ಷಣ ಕೆಲಸದಿಂದ ಅಮಾನತ್ತು ಮಾಡಬೇಕು. ಇಲ್ಲದಿದ್ದರೆ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಪುರುಷಾಧಿಪತ್ಯ ಮುರಿಯುವ ಹೋರಾಟ: ಭನ್ವಾರಿ ದೇವಿಯಿಂದ, ನಿರ್ಭಯಳಿಂದ ಪ್ರಿಯಾ ರಮಣಿವರೆಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...