Homeಮುಖಪುಟದಿಶಾ ರವಿ ಜಾಮೀನು ವಿಚಾರಣೆಯಲ್ಲಿ ಕೋರ್ಟ್ ಹೇಳಿದ್ದೇನು? 10 ಅಂಶಗಳು

ದಿಶಾ ರವಿ ಜಾಮೀನು ವಿಚಾರಣೆಯಲ್ಲಿ ಕೋರ್ಟ್ ಹೇಳಿದ್ದೇನು? 10 ಅಂಶಗಳು

ದಿಶಾ ಅವರಿಗೆ ಜಾಮೀನು ನೀಡುವ ಪ್ರಕ್ರಿಯೆಯಲ್ಲಿ ನ್ಯಾಯಾಧೀಶರು ಅಭಿವ್ಯಕ್ತಿ ಸ್ವಾತಂತ್ರ್ಯ, ಅಸಮ್ಮತಿ, ಭಿನ್ನಧ್ವನಿಯ ಹಕ್ಕುಗಳ ಕುರಿತು ಹಲವು ಉಲ್ಲೇಖಗಳನ್ನು ಮಾಡಿದ್ದಾರೆ.

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ನಡೆದ “ಟೂಲ್‌ಕಿಟ್” ಪ್ರಕರಣದಲ್ಲಿ ಬೆಂಗಳೂರಿನಿಂದ ಬಂಧಿಸಲ್ಪಟ್ಟ 21 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ಜಾಮೀನು ನೀಡಲಾಗಿದೆ. ದೆಹಲಿ ನ್ಯಾಯಾಲಯವು ಅವಳ ಜಾಮೀನು ನೀಡುವಾಗ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದೇಶದಲ್ಲಿ ಭಿನ್ನಾಭಿಪ್ರಾಯದ ಹಕ್ಕಿನ ಪರವಾಗಿ ಬಲವಾದ ಹೇಳಿಕೆಗಳನ್ನು ನೀಡಿದೆ.

ಪ್ರಕರಣದಲ್ಲಿ ನ್ಯಾಯಾಧೀಶರ ಉಲ್ಲೇಖಗಳು ಇಲ್ಲಿವೆ

  • ಜಾಮೀನು ಮನವಿಗೆ ದೆಹಲಿ ಪೊಲೀಸರ ವಿರೋಧವು ಕೇವಲ ಅಲಂಕಾರಿಕವಾಗಿದೆ ಎಂದು ತೋರುತ್ತದೆ… ದಾಖಲೆಯಲ್ಲಿ ಲಭ್ಯವಿರುವ ಅಲ್ಪ ಮತ್ತು ಹುರುಳೇ ಇಲ್ಲದ ಸೂಕ್ಷ್ಮ ಪುರಾವೆಗಳನ್ನು ಗಮನಿಸಿದರೆ, 22 ವರ್ಷದ ಯುವತಿಯ ವಿರುದ್ಧ ‘ಜಾಮೀನು’ ಎಂಬ ಸಾಮಾನ್ಯ ನಿಯಮವನ್ನು ಉಲ್ಲಂಘಿಸಲು ಯಾವುದೇ ಸ್ಪಷ್ಟವಾದ ಕಾರಣಗಳು ಕಂಡುಬಂದಿಲ್ಲ.
  • ಸಂಪೂರ್ಣವಾಗಿ ಯಾವುದೇ ಕ್ರಿಮಿನಲ್ ಕಳಂಕವಿಲ್ಲದ, ಸಮಾಜದಲ್ಲಿ ಸುಭದ್ರ ಸ್ಥಾನಮಾನವನ್ನು ಹೊಂದಿರುವ ಯುವತಿಯನ್ನು ಮತ್ತೆ ಜೈಲಿಗೆ ಕಳುಹಿಸಲು ಯಾವುದೇ ಕಾರಣಗಳು ಕಾಣುತ್ತಿಲ್ಲ.
  • ಆರೋಪಿಗಳು ಪೊಯೆಟಿಕ್ ಜಸ್ಟೀಸ್ ಫೌಂಡೇಶನ್‌ನ ಸಂಸ್ಥಾಪಕರೊಂದಿಗೆ ಸೇರಿ ಜನವರಿ 26 ರಂದು ಹಿಂಸಾಚಾರ ಹುಟ್ಟುಹಾಕಲು ಪ್ರಯತ್ನಿಸಿದ್ದಾರೆ ಅಥವಾ ಅದಕ್ಕಾಗಿ ಟೂಲ್ಕಿಟ್ ಹಂಚಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ಇಲ್ಲದೆ ಇರುವುದರಿಂದ, ಅವರು ಪ್ರತ್ಯೇಕತಾವಾದಿ ಪ್ರವೃತ್ತಿಯನ್ನು ಅಥವಾ ಗಣರಾಜ್ಯೋತ್ಸವದಂದು ಉಂಟಾದ ಹಿಂಸಾಚಾರವನ್ನು ಬೆಂಬಲಿಸಿದರು ಎಂಬುದನ್ನು ಒಪ್ಪಲಾಗದು.

ಇದನ್ನೂ ಓದಿ: ಟೂಲ್‌ಕಿಟ್ ಪ್ರಕರಣ: ಪರಿಸರ ಕಾರ್ಯಕರ್ತೆ ದಿಶಾ ರವಿಗೆ ಜಾಮೀನು ಮಂಜೂರು

  • ಅವರು ಕಾನೂನುಗಳನ್ನು ವಿರೋಧಿಸಲು ಬೇಕಾಗಿ ಜನರೊಂದಿಗೆ ಒಂದು ವೇದಿಕೆಯನ್ನು ಹಂಚಿಕೊಂಡಿದ್ದಾರೆ ಅಷ್ಟೇ.
  • ಜನವರಿ 26 ರ ಹಿಂಸಾಚಾರದ ದುಷ್ಕರ್ಮಿಗಳು ಮತ್ತು ಪಿಜೆಎಫ್ ಹಾಗೂ ಆರೋಪಿಗಳ ನಡುಬಿನ ಸಂಪರ್ಕವಿರುವ ಯಾವ ಸಾಕ್ಷ್ಯಾಧಾರಗಳೂ ಕೂಡಾ ಇಲ್ಲ. “ಟೂಲ್ಕಿಟ್”ನಲ್ಲಿ ಯಾವುದೇ ರೀತಿಯ ಹಿಂಸಾಚಾರಕ್ಕೆ ನೆರವಾಗುವ ಕರೆಯನ್ನು ನೀಡಿಲ್ಲ.
  • ಯಾವುದೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿನ ನಾಗರಿಕರು ಸರ್ಕಾರದ ಆತ್ಮಸಾಕ್ಷಿಯ ಪಾಲಕರು. ಸರ್ಕಾರದ ನೀತಿಗಳನ್ನು ಒಪ್ಪುವುದಿಲ್ಲ ಎಂದ ಮಾತ್ರಕ್ಕೆ ಅವರನ್ನು ಜೈಲಲಿನಲ್ಲಿ ಇಡಲಾಗುವುದಿಲ್ಲ.
  • ನಮ್ಮ ಸಂವಿಧಾನದ ಕರ್ತೃರು ಸಹ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕು ಎಂದು ಗುರುತಿಸುವ ಮೂಲಕ ಅಭಿಪ್ರಾಯದ ಭಿನ್ನತೆಗೆ ಸರಿಯಾದ ಗೌರವವನ್ನು ನೀಡಿದರು.
  • ಭಿನ್ನಾಭಿಪ್ರಾಯದ ಹಕ್ಕನ್ನು ಭಾರತದ ಸಂವಿಧಾನದ 19 ನೇ ಪರಿಚ್ಛೇದದ ಅಡಿಯಲ್ಲಿ ದೃಢವಾಗಿ ಪ್ರತಿಪಾದಿಸಲಾಗಿದೆ.
  • ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಜಾಗತಿಕ ಬೆಂಬಲ ಪಡೆಯು ಹಕ್ಕನ್ನು ಒಳಗೊಂಡಿದೆ.
  • ವಿಚಾರ ವಿನಿಮಯಕ್ಕೆ ಯಾವುದೇ ಭೌಗೋಳಿಕ ಅಡೆತಡೆಗಳು ಇಲ್ಲ. ಕಾನೂನು ಚೌಕಟ್ಟಿನೊಳಗಡೆ ವಿದೇಶದಲ್ಲಿರುವವರೊಂದಿಗೂ ವಿಚಾರ ವಿನಿಮಯ ಮಾಡುವುದು ನಾಗರಿಕರ ಮೂಲಭೂತ ಹಕ್ಕಾಗಿದೆ.

ಇದನ್ನೂ ಓದಿ: ದಿಶಾ ರವಿಯ ಬಂಧನ ಒಂದೇ ಕಲ್ಲಲ್ಲಿ ಮೂರು ಹಕ್ಕಿಗಳನ್ನು ಹೊಡೆದ ಹಾಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...