Homeಮುಖಪುಟಟಿಕ್ರಿ ಗಡಿಯಲ್ಲಿ ಪೊಲೀಸರ ‘ಬೆದರಿಕೆಯ’ ಫಲಕ: ಪ್ರತಿಭಟನಾಕಾರರ ಆಕ್ರೋಶ, ಹೋರಾಟ ಇನ್ನಷ್ಟು ದೃಢ

ಟಿಕ್ರಿ ಗಡಿಯಲ್ಲಿ ಪೊಲೀಸರ ‘ಬೆದರಿಕೆಯ’ ಫಲಕ: ಪ್ರತಿಭಟನಾಕಾರರ ಆಕ್ರೋಶ, ಹೋರಾಟ ಇನ್ನಷ್ಟು ದೃಢ

- Advertisement -
- Advertisement -

ಟಿಕ್ರಿ ಗಡಿಯಲ್ಲಿ ದೆಹಲಿ ಪೊಲೀಸರು ಹಾಕಿರುವ ಫಲಕಗಳು ಪ್ರತಿಭಟನಾಕಾರರು ಮತ್ತು ಕೃಷಿ ಮುಖಂಡರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ‘ಶಾಸನಬದ್ಧ ಎಚ್ಚರಿಕೆ’ ಎಂಬ ಶೀರ್ಷಿಕೆಯಲ್ಲಿ, ಇವುಗಳಲ್ಲಿ ಹಿಂದಿ ಮತ್ತು ಪಂಜಾಬಿ ಭಾಷೆಗಳಲ್ಲಿ ಪಠ್ಯವಿದೆ: “ನಿಮ್ಮ ಸಭೆ ಕಾನೂನುಬಾಹಿರವೆಂದು ಪರಿಗಣಿಸಲಾಗಿದೆ. ನೀವು ಇಲ್ಲಿಂದ ಚದುರಬೇಕೆಂದು ನಿಮಗೆ ಎಚ್ಚರಿಕೆ ನೀಡಲಾಗುತ್ತಿದೆ, ಇಲ್ಲದಿದ್ದರೆ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.”
ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಅವರ ಸಂಕಲ್ಪವನ್ನು ಇನ್ನಷ್ಟು ದೃಢಗೊಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಈಗ ಏಕಾಏಕಿ ಈ ಫಲಕಗಳನ್ನು ಹಾಕಿಲ್ಲ, ಜನವರಿ 26 ರ ಹಿಂಸಾಚಾರದ ನಂತರ ಈ ಫಲಕಗಳನ್ನು ಇರಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ಹೊರ) ಸುಧಾನ್ಶು ಧಮಾ ಸ್ಪಷ್ಟೀಕರಣ ನೀಡಿದ್ದಾರೆ.

“ನಾವು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಗಡಿಯ ಸಮೀಪ ಹಿಂಸಾಚಾರದ ನಂತರ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಂಕ್ಷನ್‌ಗಳಲ್ಲಿ ಬೋರ್ಡ್‌ಗಳನ್ನು ಹಾಕಿದ್ದೇವೆ. ಒಂದು ವೇಳೆ ರೈತರು ಮತ್ತೆ ಕಾನೂನನ್ನು ಉಲ್ಲಂಘಿಸಿದರೆ, ಅದು ಕಾನೂನುಬಾಹಿರ ಎಂದು ಅವರು ತಿಳಿದುಕೊಳ್ಳಬೇಕು” ಎಂದಿದ್ದಾರೆ.

ಭಾರತೀಯ ಕಿಸಾನ್ ಯುನಿಯನ್-ಬಿಕೆಯು ಉಗ್ರಾಹಣ್ ವಲಯದ ಹಿರಿಯ ಉಪಾಧ್ಯಕ್ಷ ಶಿಂಗರಾ ಸಿಂಗ್ ಮಾನ್ ಮಾತನಾಡಿ “ನಾನು ಈ ಸೂಚನೆಯನ್ನು ಸೊಮವಾರ ಸಂಜೆ 5 ಗಂಟೆ ಸುಮಾರಿಗೆ ಟಿಕ್ರಿ ಗಡಿಯ ಬಳಿ, ದೆಹಲಿ ಪೊಲೀಸರ ನಾಕಾದ ಸ್ಥಳದಲ್ಲಿ ನೋಡಿದೆ. ಇದು ರಾಷ್ಟ್ರೀಯ ಹೆದ್ದಾರಿಯ ಕಂಬದಲ್ಲಿದೆ; ಅದು ಇತರ ಸ್ಥಳಗಳಲ್ಲಿಯೂ ಇರಬಹುದು. ಆದಾಗ್ಯೂ, ನಮಗೆ ತೊಂದರೆಯಾಗಿಲ್ಲ; ರೈತರು ದೃಢವಾಗಿದ್ದಾರೆ ಮತ್ತು ನಾವು ಇದರ ಬಗ್ಗೆ ವಿವಾದ ಮಾಡುವುದಿಲ್ಲ. ಕಾನೂನುಗಳನ್ನು ರದ್ದುಗೊಳಿಸುವವರೆಗೂ ನಮ್ಮ ಧರಣಿಗಳು ನಡೆಯುತ್ತವೆ” ಎಂದಿದ್ದಾರೆ.

ಕೃಷಿ ಸಚಿವ ನರೇಂದ್ರ ತೋಮರ್, ಅತಿ ಹೆಚ್ಚು ಜನ ಪ್ರತಿಭಟಿಸಿದ ಕಾರಣಕ್ಕೆ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ ನಂತರ ಈ ಸೂಚನೆ ಬಂದಿದೆ. “ಅವರು ಈ ಜನಸಮೂಹದೊಂದಿಗೆ 11 ಸಭೆಗಳನ್ನು ನಡೆಸಿದ್ದು ನಿಜಕ್ಕೂ ಆಶ್ಚರ್ಯಕರವಾಗಿದೆ ಮತ್ತು ಶಾಂತಿಯನ್ನು ಕಾಪಾಡಿಕೊಂಡಿದ್ದಕ್ಕಾಗಿ ಮತ್ತು ಈ ಧರಣಿಯನ್ನು ರಾಜಕೀಯ-ರಹಿತವಾಗಿ ನೋಡಿಕೊಂಡಿದ್ದಕ್ಕಾಗಿ ಸಚಿವರೇ ನಮ್ಮನ್ನು ಅಭಿನಂದಿಸಿದ್ದರು. ನಮ್ಮ ಸಭೆಗಳಲ್ಲಿ ಅವರು ಇದನ್ನು ‘ಕಿಸಾನ್ ಆಂದೋಲನ್’ ಎಂದು ಕರೆಯುತ್ತಿದ್ದರು ಮತ್ತು ಈಗ ನಾವು ಅವರ ಪಾಲಿಗೆ ಬರೀ ಜನಸಮೂಹವಾಗಿದ್ದೇವೆ” ಎಂದಿದ್ದಾರೆ.

ಸಂಯುಕ್ತ್ ಕಿಸಾನ್ ಮೋರ್ಚಾದ ಸದಸ್ಯ ಡಾ. ದರ್ಶನ್ ಪಾಲ್, “ನಾವು ಇಂತಹ ಕ್ರಮಗಳನ್ನು ಬಲವಾಗಿ ಖಂಡಿಸುತ್ತೇವೆ. ಗಡಿಯಲ್ಲಿ 90 ದಿನಗಳ ಕಾಲ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುತ್ತೇವೆ. ನಾವು ದೆಹಲಿಯೊಳಗೇನೂ ಕುಳಿತಿಲ್ಲ” ಎಂದಿದ್ದಾರೆ.

ಮಂಗಳವಾರ ಟಿಕ್ರಿ ಗಡಿಯಲ್ಲಿ, ಪೊಲೀಸ್ ನಿಯೋಜನೆಯ ನೆರಳಿನಲ್ಲಿಯೇ ರೈತರು ಎಂದಿನಂತೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು. ಅನಿಲ್ ಮಲಿಕ್ ಎಂಬ ರೈತ ಮಾತನಾಡಿ “ಅವರು ಇದನ್ನು ಈಗಾಗಲೇ ಗಾಜಿಪುರದಲ್ಲಿ ಪ್ರಯತ್ನಿಸಿದ್ದಾರೆ. ಆದರೆ ಅದು ಹಿಮ್ಮೆಟ್ಟಿತು. ನಾವು ಎಲ್ಲಿಯೂ ಹೋಗುವುದಿಲ್ಲ. ಯಾವುದೇ ಸುಳಿವು ಇದ್ದರೆ ಪೊಲೀಸ್ ಕ್ರಮ ಜರುಗಿಸಲಿ. ಹೆಚ್ಚಿನ ಜನರು ನಮ್ಮೊಂದಿಗೆ ಸೇರಲು ಬರುತ್ತಲೇ ಇದ್ದಾರೆ..” ಎಂದಿದ್ದಾರೆ.


ಇದನ್ನೂ ಓದಿ: ಇದು ಇಡೀ ದೇಶದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ದಕ್ಷಿಣ ಭಾರತದ ಕಾರ್ಯಕರ್ತರ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...