Homeಮುಖಪುಟಪ್ರಾಮಾಣಿಕ ರಾಜಕೀಯಕ್ಕೆ ಸಿಕ್ಕ ಜಯ: ಗುಜರಾತ್ ಜನರಿಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್

ಪ್ರಾಮಾಣಿಕ ರಾಜಕೀಯಕ್ಕೆ ಸಿಕ್ಕ ಜಯ: ಗುಜರಾತ್ ಜನರಿಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್

ಮೊದಲ ಬಾರಿಯೇ 27 ಸ್ಥಾನಗಳಲ್ಲಿ ಜಯಿಸುವ ಮೂಲಕ ಆಪ್ ಸೂರತ್‌ ಮಹಾನಗರ ಪಾಲಿಕೆಯ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

- Advertisement -
- Advertisement -

ಸೂರತ್ ಸ್ಥಳೀಯ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಗಮನಾರ್ಹ ಸಾಧನೆಯು ಗುಜರಾತ್‌ನಲ್ಲಿನ ಹೊಸ ರಾಜಕೀಯ ಆರಂಭದ ಸೂಚನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಇದು ಪ್ರಾಮಾಣಿಕತೆಗೆ ಸಿಕ್ಕ ಜಯವಾಗಿದ್ದು, ಆಯ್ಕೆಯಾಗಿರುವ ಪ್ರತಿಯೊಬ್ಬ ಆಪ್ ಅಭ್ಯರ್ಥಿಯು ಪ್ರಾಮಾಣಿಕತೆಯಿಂದ ತಮ್ಮ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸೂರತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಪ್ 27 ಸ್ಥಾನಗಳಲ್ಲಿ ಜಯಗಳಿಸಿದೆ. ಗುಜರಾತ್‌ನ ಒಟ್ಟು 576 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 483 ಸ್ಥಾನಗಳಿಸಿ ಮಹತ್ವದ ಸಾಧನೆಗೈದಿದೆ. ಕಾಂಗ್ರೆಸ್ ಕೇವಲ 55 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡು ಮುಖಭಂಗ ಅನುಭವಿಸಿದೆ. ಆದರೆ ಮೊದಲ ಬಾರಿಯೇ 27 ಸ್ಥಾನಗಳಲ್ಲಿ ಜಯಿಸುವ ಮೂಲಕ ಆಪ್ ಭರ್ಜರಿ ಆರಂಭ ಮಾಡಿದೆ. ಸೂರತ್‌ ಮಹಾನಗರ ಪಾಲಿಕೆಯ ಅಧಿಕೃತ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

ಪಕ್ಷದ ವಿಜಯದ ಕುರಿತು ವಿಡಿಯೋ ಸಂದೇಶ ನೀಡಿರುವ ಅರವಿಂದ್ ಕೇಜ್ರಿವಾಲ್ “ಹೊಸ ರಾಜಕೀಯವನ್ನು ಪ್ರಾರಂಭಿಸಿದ ಗುಜರಾತ್ ಜನರಿಗೆ ಅಭಿನಂದನೆಗಳು. ಆಮ್ ಆದ್ಮಿ ಪಕ್ಷದ ಗುಜರಾತ್ ಘಟಕದ ಎಲ್ಲ ಕಾರ್ಯಕರ್ತರ ಶ್ರಮಕ್ಕೆ ನಮಸ್ಕಾರ ಮತ್ತು ಎಲ್ಲರಿಗೂ ಅಭಿನಂದನೆಗಳು. ಭವಿಷ್ಯದಲ್ಲಿ ಉತ್ತಮ ರಾಜಕೀಯವನ್ನು ಸ್ವಾಗತಿಸಲು ಈಗ ಇಡೀ ಗುಜರಾತ್ ಸಿದ್ಧವಾಗಿದೆ ಎಂದು ಸೂರತ್‌ನ ಮತದಾರರು ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

“125 ವರ್ಷ ಇತಿಹಾಸವಿರುವ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಜನತೆ ಆಪ್ ಕೈ ಹಿಡಿದಿದ್ದಾರೆ. ಆಪ್‌ನಿಂದ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಯು ಪ್ರಾಮಾಣಿಕತೆಯಿಂದ ತಮ್ಮ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಗುಜರಾತ್‌ನ ಜನರಿಗೆ ಅಭಿನಂದನೆ ತಿಳಿಸಲು ಫೆಬ್ರವರಿ 26 ರಂದು ಸೂರತ್‌ಗೆ ಭೇಟಿ ನೀಡಲಿದ್ದೇನೆ” ಎಂದು ತಿಳಿಸಿದ್ದಾರೆ.

ಆಪ್‌ನ ಜಯವು ಗುಜರಾತ್‌ನಲ್ಲಿ ಹೊಸ ರಾಜಕೀಯದ ಸೂಚನೆಯಾಗಿದೆ. ಪ್ರಾಮಾಣಿಕ ರಾಜಕಾರಣ, ಉತ್ತಮ ಶಾಲೆಗಳಿಗಾಗಿ ರಾಜಕಾರಣ, ಕಡಿಮೆ ದರದಲ್ಲಿ 24 ಗಂಟೆಗಳ ವಿದ್ಯುತ್ ನೀಡುವುದು ನಮ್ಮ ಆದ್ಯತೆ. ಜನರ ಸಹಭಾಗಿತ್ವದೊಂದಿಗೆ ಗುಜರಾತ್‌ ಅನ್ನು ಅಭಿವೃದ್ದಿಪಡಿಸುತ್ತೇವೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಪಮೇಲಾ-ಡ್ರಗ್ಸ್ ಪ್ರಕರಣ : ಬಂಗಾಳ ಬಿಜೆಪಿ ನಾಯಕ ರಾಕೇಶ್ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...