Homeಮುಖಪುಟಪಾಂಡಿಚೇರಿ ನಂತರ ಮಹಾರಾಷ್ಟ್ರ ಸರ್ಕಾರ ಪತನಕ್ಕೆ ಬಿಜೆಪಿ ಯತ್ನ: ಶಿವಸೇನೆ ಆರೋಪ

ಪಾಂಡಿಚೇರಿ ನಂತರ ಮಹಾರಾಷ್ಟ್ರ ಸರ್ಕಾರ ಪತನಕ್ಕೆ ಬಿಜೆಪಿ ಯತ್ನ: ಶಿವಸೇನೆ ಆರೋಪ

- Advertisement -
- Advertisement -

ಪಾಂಡಿಚೇರಿ ಸರ್ಕಾರ ಪತನದ ನಂತರ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನ ಮಾಡಲು ಬಿಜೆಪಿಯು ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ ಎಂದು ಶಿವಸೇನೆ ಪಕ್ಷ ಆರೋಪಿಸಿದೆ.

ಪಕ್ಷದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ “ಪಾಂಡಿಚೇರಿಯಲ್ಲಿ ಕಾಂಗ್ರೆಸ್-ಡಿಎಂಕೆ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯು ಗವರ್ನರ್ ಆಗಿದ್ದ ಕಿರಣ್ ಬೇಡಿಯನ್ನು ಬಳಸಿಕೊಂಡಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿಯೂ ಸರ್ಕಾರ ಬೀಳಿಸುವ ಕನಸು ಕಾಣುತ್ತಿದೆ. ಆದರೆ ಅದು ಎಂದಿಗೂ ಸಾಧ್ಯವಾಗುವುದಿಲ್ಲ” ಎಂದು ಬರೆಯಲಾಗಿದೆ.

ಇನ್ನು ನಾಲ್ಕು ತಿಂಗಳಲ್ಲಿ ಪಾಂಡಿಚೇರಿಯಲ್ಲಿ ಅಸೆಂಬ್ಲಿ ಚುನಾವಣೆಗಳಿದ್ದವು. ಅಲ್ಲಿಯವರೆಗೂ ಬಿಜೆಪಿ ಕಾಯಬಹುದಿತ್ತು. ಆದರೆ ಅವರ ಅಧಿಕಾರ ಕಸಿದುಕೊಳ್ಳುವ ಹೆಗ್ಗಳಿಕೆಗಾಗಿ ಸರ್ಕಾರ ಉರುಳಿಸಿದರು ಎಂದು ಸಾಮ್ನಾದಲ್ಲಿ ಆರೋಪಿಸಲಾಗಿದೆ.

ಈಗ ಪಾಂಡಿಚೇರಿ ಸರ್ಕಾರ ಪತನವಾಗಿದೆ. ಮುಂದಿನ ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಆರಂಭಿಸುವ ಯತ್ನದಲ್ಲಿದ್ದಾರೆ ಎಂದು ಬಿಜೆಪಿಯೊಳಗಿನ ಮೂಲಗಳು ತಿಳಿಸಿವೆ. ಮಧ್ಯಪ್ರದೇಶ ಸರ್ಕಾರ ಪತನಗೊಂಡ ನಂತರ ಸಹ ಇದೇ ರೀತಿಯ ಪ್ರಯತ್ನಗಳನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ ಮಾಡಿತ್ತು. ಆನಂತರ ಬಿಹಾರ ಚುನಾವಣೆ ನಂತರವೂ ಈ ಕುರಿತು ಮಾತುಕತೆಗಳು ನಡೆಯುತ್ತಿದ್ದವು. ಈಗ ಪಾಂಡಿಚೇರಿ ಹಿನ್ನೆಲೆಯಲ್ಲಿ ಅದೇ ಮಾತುಗಳನ್ನಾಡುತ್ತಿದ್ದಾರೆ. ಆದರೆ ದೆಹಲಿ ಬಹಳ ದೂರದಲ್ಲಿದೆ ಎಂಬ ಮಾತಿನ ರೀತಿ ಮಹಾರಾಷ್ಟ್ರವು ಅವರಿಗೆ ಬಹಳ ದೂರದಲ್ಲಿದೆ ಎಂಬುದು ಅರ್ಥವಾಗಲಿ ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.

ಮಧ್ಯಪ್ರದೇಶ ಮತ್ತು ಪಾಂಡಿಚೇರಿಯಲ್ಲಿ ಕೇವಲ ಕಾಂಗ್ರೆಸ್ ಆಳ್ವಿಕೆಯಲ್ಲಿತ್ತು. ಆದರೆ ಮಹಾರಾಷ್ಟ್ರದಲ್ಲಿ ಅದಕ್ಕೆ ಶಿವಸೇನೆಯ ರಕ್ಷಣೆಯಿದೆ ಎಂಬುದನ್ನು ಬಿಜೆಪಿ ಮರೆಯಬಾರದು ಎಂದು ಶಿವಸೇನೆ ಎಚ್ಚರಿಕೆ ನೀಡಿದೆ.

ಪಾಂಡಿಚೇರಿಯಲ್ಲಿ ಕಿರಣ್ ಬೇಡಿಯವರನ್ನು ಬಳಸಿಕೊಂಡ ನಂತರ ಬೀಸಾಡಲಾಗಿದೆ. ಅಂದರೆ ಒಗ್ಗರಣೆಗೆ ಹಾಕಿದ ನಂತರ ಕರಿಬೇವನ್ನು ಬೀಸಾಡಿದ ಹಾಗೆ. ಅದು ತನ್ನ ಆಹಾರಕ್ಕೆ ತನ್ನ ಪರಿಮಳ ಕೊಟ್ಟ ನಂತರ ಏನು ಉಪಯೋಗ ಎಂಬ ರೀತಿಯಲ್ಲಿ. ಇದನ್ನು ಮಹಾರಾಷ್ಟ್ರ ರಾಜ್ಯಪಾಲರು ಸಹ ಆದಷ್ಟು ಬೇಗ ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಶಿವಸೇನೆ ಎಚ್ಚರಿಕೆ ನೀಡಿದೆ.


ಇದನ್ನೂ ಓದಿ: ಪ್ರಿಯಾಂಕ ಗಾಂಧಿ ಭಾಷಣದ ನಡುವೆ ಅತ್ಯಾಚಾರ ಸಂತ್ರಸ್ತೆಯ ತಾಯಿಯ ಘೋಷಣೆ: ಮುಂದೇನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...