Homeಕರ್ನಾಟಕ300 ಕ್ಕೂ ಹೆಚ್ಚು ಗುಡಿಸಲುಗಳ ಧ್ವಂಸ: ಚಿಕ್ಕಮಗಳೂರು ನಗರಸಭೆಯ ವಿರುದ್ದ ಪ್ರತಿಭಟನೆ

300 ಕ್ಕೂ ಹೆಚ್ಚು ಗುಡಿಸಲುಗಳ ಧ್ವಂಸ: ಚಿಕ್ಕಮಗಳೂರು ನಗರಸಭೆಯ ವಿರುದ್ದ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ನಗರಸಭೆ ವ್ಯಾಪ್ತಿಯ ಇಂದಿರಾಗಾಂಧಿ ಬಡಾವಣೆಯಲ್ಲಿ ವಾಸವಿದ್ದ ಸುಮಾರು 300 ರಷ್ಟು ಕುಟುಂಬಗಳಿಗೆ ನಿವೇಶನ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ನಗರದ ಅಝಾದ್‌ ವೃತ್ತದ ಬಳಿ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.

ಜಿಲ್ಲೆಯ ಉಪ್ಪಳ್ಳಿ ಸಮೀಪದ ಕಲ್ದೊಡ್ಡಿಯ ಇಂದಿರಾಗಾಂಧಿ ಬಡಾವಣೆಯಲ್ಲಿ ಸುಮಾರು 300 ಕ್ಕಿಂತಲೂ ಹೆಚ್ಚಿನ ಕುಟುಂಬಗಳು ಹಲವಾರು ವರ್ಷಗಳಿಂದ ವಾಸವಿತ್ತು. ಈ ಗುಡಿಸಲುಗಳನ್ನು ಒಂದೂವರೆ ವರ್ಷಗಳ ಹಿಂದೆ ನಗರ ಸಭೆಯು ಏಕಾಏಕಿ ಧ್ವಂಸ ಮಾಡಿತ್ತು.

ಇದರ ನಂತರ ಇಲ್ಲಿನ ನಿವಾಸಿಗಳು ತಾಲೂಕು ಆಫಿಸೀನ ಬಳಿ ಉಪವಾಸ ಸತ್ಯಾಗ್ರಹ ಮಾಡಿದ್ದರು. ಈ ಹೋರಾಟಕ್ಕೆ ಮಣಿದ ಜಿಲ್ಲಾಧಿಕಾರಿ ಮತ್ತು ನಗರಸಭೆಯ ಅಯುಕ್ತರು 15-20 ದಿನಗಳಲ್ಲಿ ನಿವೇಶನಗಳನ್ನು ಮತ್ತು ಹಕ್ಕು ಪತ್ರಗಳನ್ನು ನೀಡುವುದಾಗಿ ಭರವಸೆ ನೀಡಿ ಮುಷ್ಕರವನ್ನು ಕೈಬಿಡುವಂತೆ ಕೇಳಿಕೊಂಡಿದ್ದರು. ಆದರೆ ಈ ಭರವಸೆಗಳು ಭರವಸೆಗಳಾಗಿಯೇ ಉಳಿದಿವೆ ಎಂದು ಅಲ್ಲಿನ ನಿವಾಸಿಗಳು ದೂರಿದ್ದಾರೆ.

ಇದನ್ನೂ ಓದಿ: ಅಕ್ರಮ ಮದ್ಯ ಮಾರಾಟ ನಿಷೇಧದ ಹೈಕೋರ್ಟ್ ಆದೇಶ ಪಾಲಿಸಿ: ಬೃಹತ್ ಹೋರಾಟ

ಇಂದು ನಗರದ ಆಝಾದ್ ವೃತ್ತದ ಬಳಿ ಸೇರಿದ ಸಂತ್ರಸ್ತ ಜನರು, ತಾವು ವಾಸವಿದ್ದ ಗುಡಿಸಲು ಧ್ವಂಸಮಾಡಿ ತಮ್ಮನ್ನು ಬೀದಿಪಾಲು ಮಾಡಿದ ನಗರಸಭೆಯ ನಡೆಯನ್ನು ಖಂಡಿಸಿ, ಎಲ್ಲರಿಗೂ ಕೂಡಲೇ ನಿವೇಶನ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪ್ರತಿಯೊಂದು ಸಂತ್ರಸ್ತ ಕುಟುಂಬಗಳು ತಮಗೆ ನಿವೇಶನದ ಹಕ್ಕು ಪತ್ರಗಳನ್ನು ನೀಡುವಂತೆ ಆಗ್ರಹಿಸಿ ಮನವಿ ಪತ್ರವನ್ನು ನೀಡಿದರು. ಪ್ರತಿಭಟನಾಕಾರರ ಮನವಿಗಳನ್ನು ನಗರಸಭೆಯ ಆಯುಕ್ತರು ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಗೌಸ್‌ ಮೊಹಿಯುದ್ದೀನ್, ಸಂವಿಧಾನ ಸಂರಕ್ಷಣ ಸಮಿತಿಯ ಕೃಷ್ಣಮೂರ್ತಿ, ವಿಶ್ವರತ್ನ ಯುವ ಸೇನೆಯ ಅಧ್ಯಕ್ಷರಾದ ವೆಂಕಟೇಶ್, ಕರ್ನಾಟಕ ಜನಶಕ್ತಿಯ ಕೆ.ಎಲ್ . ಅಶೋಕ್, ಜಾತ್ಯಾತೀತ ಜನತಾದಳ ಪಕ್ಷದ ಹೆಚ್‌.ಎಸ್. ದೇವರಾಜ್, ಡಿಎಸ್‌ಎಸ್‌ ಚಂದ್ರಶೇಖರ್‌, ನುಡಿಕನ್ನಡ ಪುಸ್ತಕ ಮನೆಯ ನೀಳಗುಳಿ ಪದ್ಮನಾಭ ಸೇರಿದಂತೆ ಹಲವಾರು ಹೋರಾಟಗಾರರು ಭಾಗವಹಿಸಿದ್ದರು.

ತಮ್ಮ ಗುಡಿಸಲುಗಳನ್ನು ನಾಶ ಮಾಡಿದ ಸರ್ಕಾರದ ವಿರುದ್ದ ಸಂತ್ರಸ್ಥೆಯೊಬ್ಬರ ಆಕ್ರೋಶ ವಿಡಿಯೋ ನೋಡಿ

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...