Homeಅಂಕಣಗಳುಸರ್ಕಾರ ಎಂದರೆ ದೇಶ ಅಲ್ಲ... ದೇಶವೆಂಬುದು ಸರ್ಕಾರಕ್ಕಿಂತ ದೊಡ್ಡದು: ಡಿ ಉಮಾಪತಿ

ಸರ್ಕಾರ ಎಂದರೆ ದೇಶ ಅಲ್ಲ… ದೇಶವೆಂಬುದು ಸರ್ಕಾರಕ್ಕಿಂತ ದೊಡ್ಡದು: ಡಿ ಉಮಾಪತಿ

- Advertisement -
- Advertisement -

ಸ್ವಾತಂತ್ರ್ಯ- ಸಮಾನತೆ- ಸಾಮಾಜಿಕ ನ್ಯಾಯದ ಮಾತುಗಳನ್ನು ದೇಶದ್ರೋಹದ ಶಿಲುಬೆಗೆ ಏರಿಸಲಾಗಿದೆ.

ಸರ್ಕಾರ ಎಂದರೆ ದೇಶವೆಂಬ ಕಥಾನಕವನ್ನು ಇತ್ತೀಚಿನ ವರ್ಷಗಳಲ್ಲಿ ಕಟ್ಟಿ ಬೆಳೆಸಲಾಗಿದೆ. ದೇಶ ಸರ್ಕಾರಕ್ಕಿಂತ ದೊಡ್ಡದು ಎಂಬ ಸತ್ಯವನ್ನು ಮರೆಮಾಚಲಾಗಿದೆ. ಸರ್ಕಾರವನ್ನು ಟೀಕಿಸಿದರೆ ದೇಶವನ್ನು ಟೀಕಿಸಿದಂತೆ ಎಂಬುದು ಅತ್ಯಂತ ದುಷ್ಟ ಮತ್ತು ಪ್ರತಿಗಾಮಿವಾದ. ಆದರೆ ಈ ವಾದವನ್ನು ವೈಭವೀಕರಿಸಲಾಗಿದೆ.

ಪರಮದೈವ ಎಂದು ಪ್ರಧಾನಿಯವರೇ ಘೋಷಿಸುವ ಅದೇ ಸಂವಿಧಾನದ ಮೌಲ್ಯಗಳನ್ನು ಆಚರಣೆಯ ಮಾತು ಬಂದಾಗ ಹರಿದ ಕಾಗದದ ಚೂರುಗಳಂತೆ ಗಾಳಿಗೆ ತೂರಲಾಗುತ್ತಿದೆ. ಸಮಾಜವನ್ನು ಹರಿದುಹಂಚುವವರು ಭಾರೀ ತ್ರಿವರ್ಣ ಧ್ವಜವನ್ನು ಹಿಡಿದು ವಂದೇಮಾತರಂ ಹೇಳಿ ದೇಶಭಕ್ತರೆಂಬ ಬಿರುದು ಬಾವಲಿ ಗಳಿಸುತ್ತಿದ್ದಾರೆ. ಅಂಬೇಡ್ಕರ್ ಅವರನ್ನು ಶಕಪುರುಷನೆಂದು ಹಾಡಿ ಹೊಗಳಿದ ಅವೇ ನಾಲಗೆಗಳು ಅಂಬೇಡ್ಕರ್‌ವಾದಿಗಳನ್ನು ದೇಶದ್ರೋಹಿಗಳೆಂದು ನಿಂದಿಸಿ ಹಲ್ಲು ಮಸೆಯುತ್ತಿವೆ. ರಕ್ತದಾಹದ ರಾಷ್ಟ್ರಭಕ್ತಿ ಹೂಂಕರಿಸಿ ದೀನ ದುರ್ಬಲರಲ್ಲಿ ಭಯ ಬಿತ್ತತೊಡಗಿವೆ.

ಭಿನ್ನಮತ ಅಥವಾ ಭಿನ್ನಾಭಿಪ್ರಾಯವನ್ನು, ಶಾಂತಿಯುತ ಪ್ರತಿಭಟನೆಗಳನ್ನು ಕ್ರೂರವಾಗಿ ದಂಡಿಸಲಾಗುತ್ತಿದೆ. ಅದಕ್ಕೆ ಭಯೋತ್ಪಾದನೆ ಇಲ್ಲವೇ ರಾಜದ್ರೋಹದ ಹಣೆಪಟ್ಟಿಗಳನ್ನು ಹಚ್ಚಲಾಗುತ್ತಿದೆ. ಬೇಹುಗಾರಿಕೆ, ಬಂಧನ, ಪೊಲೀಸು-ತೆರಿಗೆ ದಾಳಿಗಳಿಗೆ ಗುರಿಪಡಿಸಲಾಗುತ್ತಿದೆ. ಭಯೋತ್ಪಾದನೆ ನಿಗ್ರಹಕ್ಕೆ ಪ್ರಯೋಗಿಸಲಾಗುವ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಡು ಕಠಿಣ ಕಾಯಿದೆಗಳನ್ನು ಪ್ರಯೋಗಿಸಲಾಗುತ್ತಿದೆ. ಬಾಲಬಡುಕ ಮೀಡಿಯಾ ಸರ್ಕಾರದೊಂದಿಗೆ ಶಾಮೀಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಿನ್ನಮತವನ್ನು ಬೇಟೆಯಾಡಲಾಗುತ್ತಿದೆ. ಸರ್ಕಾರದ ನೀತಿ ನಿರ್ಧಾರಗಳ ವಿರುದ್ಧ ದನಿ ಎತ್ತಿದ ವಿದ್ಯಾರ್ಥಿಗಳು, ಅಲ್ಪಸಂಖ್ಯಾತರು, ರೈತರು, ಪತ್ರಕರ್ತರು, ಸಾಮಾಜಿಕ ಆಂದೋಲನಕಾರರು ಯಾರೇ ಇರಲಿ ಅವರನ್ನು ದೇಶದ್ರೋಹಿಗಳೆಂದು ಬಿಂಬಿಸಿ ಗುಂಡಿಟ್ಟು ಹೊಡೆಯಬೇಕು ಎಂಬ ಘೋಷಣೆಗಳನ್ನು ಆಳುವ ಪಕ್ಷಕ್ಕೆ ಸೇರಿದವರು ಮತ್ತು ಬೆಂಬಲಿಗರು ಕೂಗತೊಡಗಿದ್ದಾರೆ.

ಕವಿಗಳು-ಕಲಾವಿದರ ಸಾಂಸ್ಕೃತಿಕ ಪ್ರತಿರೋಧ, ಮಾನವಹಕ್ಕುಗಳ ಹೋರಾಟಗಾರರ ಅದಮ್ಯ ಛಲ ಪ್ರಭುತ್ವದ ಆಕ್ರೋಶಕ್ಕೆ ಗುರಿಯಾಗುತ್ತಲೇ ಬಂದಿದೆ.

ಸರ್ಕಾರ ಅನಾಯಾಸವಾಗಿ ಹೇಳುವ ಸುಳ್ಳುಗಳನ್ನು ಸುಳ್ಳೆಂದು ಹೇಳುವುದೂ ರಾಜದ್ರೋಹವಾಗಿ ಪರಿಣಮಿಸಿದೆ. “ತೀವ್ರ ದಮನಕಾರಿ ನಾಯಕತ್ವದ ಪ್ರತಿಯೊಂದು ಸಂದೇಶವೂ ಸತ್ಯವನ್ನು ತಿರುವುಮುರುವು ಮಾಡುತ್ತದೆ. ಉದಾಹರಣೆಗೆ ಹೇಳುವುದಾದರೆ ’ಸಮರವೇ ಶಾಂತಿ’ ಮತ್ತು ’ಸ್ವಾತಂತ್ರ್ಯ ಎಂಬುದು ಗುಲಾಮಗಿರಿ’ ಎಂಬುದಾಗಿ ನಿರಂತರ ಪುನರುಚ್ಚರಿಸಲಾಗುತ್ತದೆ. ಸತ್ಯದ ಸಚಿವ ಖಾತೆಯು ಸುಳ್ಳುಗಳನ್ನು ಹರಡುತ್ತಿರುತ್ತದೆ. ಪ್ರೇಮ ಪ್ರೀತಿಯ ಸಚಿವ ಖಾತೆಯು ಪ್ರೇಮಿಗಳನ್ನು ಚಿತ್ರಹಿಂಸೆಗೆ ಗುರಿಪಡಿಸುತ್ತ ಇರುತ್ತದೆ” ಎಂಬ ಜಾರ್ಜ್ ಆರ್ವೆಲ್ ಮಹಾಶಯನ ಮಾತುಗಳು ಈ ಸನ್ನಿವೇಶದಲ್ಲಿ ಉಲ್ಲೇಖಿಸಬೇಕಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನಲ್ಲಿ ಟೀಕಿಸುವ ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕೂ ಅಡಗಿದೆ ಎಂಬುದನ್ನು ಸುಪ್ರೀಮ್ ಕೋರ್ಟು ಈ ಹಿಂದೆ ಹಲವಾರು ಸಲ ಹೇಳಿದೆ.

ಭಿನ್ನಮತವಿಲ್ಲದೆ ಜನತಂತ್ರವಿಲ್ಲ. ಭಿನ್ನಾಭಿಪ್ರಾಯ ಎಂಬುದು ಪ್ರಜಾಪ್ರಭುತ್ವದ ಜೀವಾಳ ಎಂಬುದು ಕಾಯಂ ಮೌಲ್ಯವೇ ವಿನಾ ಕೇವಲ ಮಾತಲ್ಲ.

ಭಾರತದ ಸಂವಿಧಾನದ ಪೀಠಿಕೆಯಲ್ಲಿ ಆಲೋಚನೆ, ಅಭಿವ್ಯಕ್ತಿ, ನಂಬಿಕೆ, ಶ್ರದ್ಧೆ ಹಾಗೂ ಆರಾಧನೆಯ ಸ್ವಾತಂತ್ರ್ಯಗಳನ್ನು ನೀಡಲಾಗಿದೆ. 19 (1)ನೆಯ ಪರಿಚ್ಛೇದದ (ಎ)(ಬಿ)(ಸಿ) ಅಡಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ, ಹತಾರುಗಳಿಲ್ಲದೆ ಶಾಂತಿಯುತವಾಗಿ ಸಭೆ ಸೇರುವ ಹಾಗೂ ಸಂಘಸಂಸ್ಥೆಗಳನ್ನು ಕಟ್ಟಿಕೊಳ್ಳುವ ಸ್ವಾತಂತ್ರ್ಯಗಳನ್ನು ನಮೂದಿಸಲಾಗಿದೆ. ಈ ಮೂರೂ ಸ್ವಾತಂತ್ರ್ಯಗಳು ಭಿನ್ನಮತವನ್ನು ವ್ಯಕ್ತಪಡಿಸಬಹುದಾದ ವಾಹಕಗಳು. ಅಭಿಪ್ರಾಯ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯಗಳಲ್ಲಿ ಒಪ್ಪದೆ ಇರುವ ಸ್ವಾತಂತ್ರ್ಯ ನಿಹಿತವಾಗಿದೆ. ಒಪ್ಪದೆ ಇರುವ ಹಕ್ಕು, ಭಿನ್ನಮತದ ಹಕ್ಕು ಹಾಗೂ ಭಿನ್ನದೃಷ್ಟಿಕೋನವನ್ನು ತಳೆಯುವ ಹಕ್ಕುಗಳು ಈ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಉಂಟು.

ಅಪ್ಪ ನೆಟ್ಟ ಆಲಕ್ಕೇ ಜೋತುಬೀಳುವುದು ಸಾಮಾಜಿಕ ಅಧಃಪತನಕ್ಕೆ ದಾರಿ ಮಾಡುತ್ತದೆ. ಸರ್ವಮಾನ್ಯ ಕಟ್ಟು ಕಟ್ಟಳೆಗಳನ್ನು ಪ್ರಶ್ನಿಸುವ ಪ್ರಕ್ರಿಯೆಯು ಕಾಲಕಾಲಕ್ಕೆ ಹೊಸ ಚಿಂತಕರು ಮತ್ತು ಸಮಾಜ ಸುಧಾರಕರ ಹುಟ್ಟಿಗೆ ಕಾರಣವಾಗಿದೆ. ತುಳಿದುಕೊಂಡು ಬಂದಿರುವ ಹಾದಿಯನ್ನೇ ಎಲ್ಲರೂ ಕಟ್ಟುನಿಟ್ಟಾಗಿ ತುಳಿಯುತ್ತ ಹೋದರೆ ಹೊಸ ದಾರಿಗಳು ಹುಟ್ಟುವುದಿಲ್ಲ, ಹೊಸ ಶೋಧನೆಗಳು ಆಗುವುದಿಲ್ಲ, ಹೊಸ ದಿಗಂತಗಳು ಕಾಣುವುದಿಲ್ಲ. ಸನಾತನ ವ್ಯವಸ್ಥೆಯ ಕುರಿತು ಪ್ರಶ್ನೆಗಳನ್ನೇ ಕೇಳದೆ ಹೋದರೆ, ಸಂದೇಹಗಳನ್ನು ಪ್ರಕಟಿಸದೆ ಹೋದರೆ ಹೊಸ ವ್ಯವಸ್ಥೆಗಳು ವಿಕಸಿಸುವುದಿಲ್ಲ, ಮನೋದಿಗಂತಗಳು ವಿಸ್ತರಿಸುವುದಿಲ್ಲ. ಬುದ್ಧ, ಮಹಾವೀರ, ಯೇಸುಕ್ರಿಸ್ತ, ಪ್ರವಾದಿ ಮಹಮ್ಮದ್, ಗುರುನಾನಕ್, ಮಾರ್ಟಿನ್ ಲೂಥರ್, ಕಬೀರ್, ರಾಜಾರಾಮ್ ಮೋಹನ್ ರಾಯ್, ಕಾರ್ಲ್ ಮಾರ್ಕ್ಸ್, ಮಹಾತ್ಮಾ ಗಾಂಧೀ ಅವರು ಒಪ್ಪಿತ ಮೌಲ್ಯಗಳನ್ನು, ಆಚರಣೆಗಳೂ-ರೂಢಿ ಸಂಪ್ರದಾಯಗಳನ್ನು ಪ್ರಶ್ನಿಸದೆ ಎತ್ತಿ ಹಿಡಿಯುತ್ತ ಹೋಗಿದ್ದರೆ ಹೊಸ ಚಿಂತನೆಗಳಿಗೆ ಅವಕಾಶವೇ ಇರುತ್ತಿರಲಿಲ್ಲ ಎನ್ನುತ್ತಾರೆ ಸುಪ್ರೀಮ್ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ದೀಪಕ್ ಗುಪ್ತ.

ಬಹುಮತದ ಆಳ್ವಿಕೆ ಜನತಂತ್ರದ ಅವಿಭಾಜ್ಯ ಅಂಗ ಎಂಬುದು ಸರಿ. ಆದರೆ ಬಹುಸಂಖ್ಯಾತರ ಆಳ್ವಿಕೆಯು ಜನತಾಂತ್ರಿಕ ತಿರುಳಿನ ಉಲ್ಲಂಘನೆ. ನಮ್ಮ ಹಾಲಿ ಚುನಾವಣಾ ವ್ಯವಸ್ಥೆಯ ಪ್ರಕಾರ ಆಯ್ಕೆಯಾಗುವ ಸರ್ಕಾರಗಳು ಜನಸಂಖ್ಯೆಯ ಬಹುಮತವನ್ನು ಪ್ರತಿನಿಧಿಸುವುದಿಲ್ಲ. ಅಷ್ಟೇ ಅಲ್ಲ, ಮತ ಚಲಾಯಿಸಿದವರ ಸಂಖ್ಯೆಯನ್ನು ಲೆಕ್ಕಕ್ಕೆ ಹಿಡಿದರೂ ಸರ್ಕಾರಗಳು ಬಹುಮತದ ಮತದಾರರನ್ನು ಪ್ರತಿನಿಧಿಸುವುದಿಲ್ಲ.

ಹೀಗಾಗಿ ತಾವು ಜನಮತವನ್ನು ಪ್ರನಿಧಿಸುತ್ತಿದ್ದೇವೆ ಎಂದು ಸರ್ಕಾರ ನಡೆಸುವವರು ಹೇಳಿಕೊಳ್ಳುವುದಕ್ಕೆ ಆಧಾರವೇ ಇಲ್ಲ. ಸರ್ಕಾರ ನಡೆಸುವವರನ್ನು ಜನ ಆಯ್ಕೆ ಮಾಡಿರಬಹುದು. ಆದರೆ ಅವರು ದೇಶದ ಇಡೀ ಜನಸಂಖ್ಯೆಯ ಬೆಂಬಲವನ್ನು ಪ್ರತಿನಿಧಿಸುತ್ತಿದ್ದಾರೆ ಎಂದು ಹೇಳಲು ಬರುವುದಿಲ್ಲ.

ಆಳುವವರಿಗೆ ಶೇ.50ಕ್ಕಿಂತ ಹೆಚ್ಚು ಮತಗಳು ಬಿದ್ದಿವೆ ಎಂದು ಒಂದು ವೇಳೆ ಅಂದುಕೊಂಡರೂ, ಉಳಿದ ಶೇ.49ರಷ್ಟು ಜನರಿಗೆ ಈ ದೇಶದ ಆಳ್ವಿಕೆಯಲ್ಲಿ ದನಿಯೇ ಇಲ್ಲ ಎನ್ನಲಾದೀತೇ? ಈ ಶೇ.49ರಷ್ಟು ಜನ ಮುಂದಿನ ಐದು ವರ್ಷಗಳ ಕಾಲ ಬಾಯಿ ಹೊಲಿದುಕೊಂಡಿರಬೇಕೇ, ಅವರು ಸರ್ಕಾರವನ್ನು ವಿರೋಧಿಸಿದರೆ ಅದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಬೇಕೇ? ಖಂಡಿತ ಸಾಧ್ಯವಿಲ್ಲ ಎನ್ನುತ್ತಾರೆ ನ್ಯಾಯಮೂರ್ತಿ ಗುಪ್ತ.

ಐದು ವರ್ಷಗಳಿಗೊಮ್ಮೆ ಮತದಾನ ಮಾಡಿದ ನಂತರ ನಾಗರಿಕನ ಹಕ್ಕು ಹೊಣೆಗಾರಿಕೆ ಎರಡೂ ತೀರಿತು ಎಂಬುದು ಆಳುವ ಸರ್ವಾಧಿಕಾರಿ ಸರ್ಕಾರಗಳ ಧೋರಣೆ. ಆದರೆ ಮತದಾನ ಮಾಡಿದ ನಂತರ ದೇಶವನ್ನು ಯಾವ ರೀತಿ ನಡೆಸಲಾಗುತ್ತಿದೆ ಎಂಬುದರಲ್ಲಿ ಪಾಲ್ಗೊಳ್ಳುವುದೂ ಪ್ರತಿಯೊಬ್ಬ ನಾಗರಿಕನ ಹಕ್ಕು. ಸರ್ಕಾರದ ನಡೆನುಡಿಗಳನ್ನು ಟೀಕಿಸುವ ಬಾಯಿಗಳಿಗೆ ಬೀಗ ಹಾಕಿ ಸೆರೆಮನೆಗೆ ತಳ್ಳಿದರೆ ಈ ಹಕ್ಕಿಗೆ ಯಾವ ಅರ್ಥವೂ ಉಳಿಯುವುದಿಲ್ಲ. ಆಳುವವರ ಅಭಿಮತಗಳಿಗೆ ಸಾರಾಸಗಟು ವ್ಯತಿರಿಕ್ತ ಅಭಿಪ್ರಾಯವನ್ನು ಕೂಡ ವ್ಯಕ್ತಪಡಿಸುವ ಹಕ್ಕು ನಾಗರಿಕನಿಗೆ ಉಂಟು. ಆದರೆ ಈ ಅಭಿಪ್ರಾಯವನ್ನು ಪ್ರಕಟಿಸುವ ರೀತಿನೀತಿಗಳು ಶಾಂತಿಯುತವಾಗಿರಬೇಕು ಅಷ್ಟೇ. ಸರ್ಕಾರದ ಕ್ರಮಗಳು ಸರಿಯಾಗಿಲ್ಲವೆಂದು ನಾಗರಿಕರಿಗೆ ಅನಿಸಿದರೆ ಶಾಂತಿಯುತವಾಗಿ ಸಭೆ ಸೇರಿ ಪ್ರತಿಭಟಿಸುವ ಹಕ್ಕು ಅವರಿಗೆ ಇದ್ದೇ ಇದೆ. ನಾಗರಿಕರ ತಿಳಿವಳಿಕೆ ಸದಾ ಸರಿಯಿರಲೇಬೇಕಿಲ್ಲ. ಹಾಗೆಯೇ ಸರ್ಕಾರದ ಕ್ರಮ ಕೂಡ ದಾರಿ ತಪ್ಪಿರುವ ಸಾಧ್ಯತೆ ಇದೆ ಎಂದು ನ್ಯಾಯಮೂರ್ತಿ ವಾದಿಸಿದ್ದಾರೆ.

ವಕೀಲರು, ಪ್ರಾಧ್ಯಾಪಕರು, ಕವಿಗಳು, ಮಾನವ ಹಕ್ಕುಗಳ ಹೋರಾಟಗಾರರು, ಸಾಮಾಜಿಕ ಕಾರ್ಯಕರ್ತರು ದಮನಿತರ ಪರವಾಗಿ ಧೈರ್ಯದಿಂದ ದನಿಯೆತ್ತುವವರು. ಕೋಟಿ ಕೋಟಿ ಭಾರತೀಯರು ಕೇಳಲು ಹೆದರುವ ಪ್ರಶ್ನೆಗಳನ್ನು ಅಂಜಿಕೆಯಿಲ್ಲದೆ ಕೇಳುವವರು. ಅವರ ದಮನ ಜನಕೋಟಿಯ ದನಿಯ ದಮನ. ಈ ದಮನದ ಖಂಡನೀಯ ಕೃತ್ಯಕ್ಕೆ ಆಳುವ ಸರ್ಕಾರದ ಮಡಿಲಿನಲ್ಲಿ ಹಚ್ಚಗೆ ಬೆಚ್ಚಗೆ ಆಡಿಕೊಂಡಿರುವ ಮಾಧ್ಯಮಗಳು ಗಾಳಿ ಹಾಕತೊಡಗಿರುವುದು ಘೋರ ವಿಪರ್ಯಾಸ.

ಪ್ರತಿಕಿಚ್ಚನ್ನು ಹಚ್ಚಿ ಕಾಳ್ಗಿಚ್ಚನ್ನು ಅಡಗಿಸುವುದು ಅರಣ್ಯದಲ್ಲಿ ಸಾಧ್ಯ. ಆದರೆ ಸಮಾಜ ಅರಣ್ಯ ಅಲ್ಲ. ಮನುಷ್ಯರೆಂದರೆ ಹುಲ್ಲಿನ ಒಣಹುಲ್ಲಿನ ಎಸಳುಗಳಲ್ಲ. ಸ್ವತಂತ್ರ ಚೇತನಗಳು ಎಂದು ಹಿಂದೊಮ್ಮೆ ಸುಪ್ರೀಂ ಕೋರ್ಟ್ ಹೇಳಿದ್ದ ಮಾತುಗಳು, ಹುಲ್ಲುಕಡ್ಡಿಗೂ ಸಮನಲ್ಲ ಎಂಬಂತೆಯೇ ಸರ್ಕಾರಗಳು ನಡೆದುಕೊಂಡು ಬಂದಿವೆ. ಈ ಸರ್ಕಾರ ಈ ಮಾತುಗಳನ್ನು ಗಾಳಿಗೆ ತೂರಿ ಬಹುಕಾಲವಾಗಿದೆ.

ಪ್ರಚಂಡ ನಾಯಕರು ಮತ್ತು ಬಹುಮತದ ಸರ್ಕಾರಗಳಿಗಿಂತ ದೇಶ ದೊಡ್ಡದು. ಮಾನವೀಯ ಮೌಲ್ಯಗಳು ದೇಶಕ್ಕಿಂತ ದೊಡ್ಡವು.


ಇದನ್ನೂ ಓದಿ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ: ಪೌರಕಾರ್ಮಿಕರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...