Homeಕರ್ನಾಟಕರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು - ಸಿದ್ದರಾಮಯ್ಯ

ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು- ಸಿದ್ದರಾಮಯ್ಯ

- Advertisement -
- Advertisement -

“ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು” ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಕಾಮನ್‍ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆ ಆಯೋಜಿಸಿದ್ದ “ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಯುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ” ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ಸಿದ್ದರಾಮಯ್ಯ, ” ಚುನಾವಣಾ ವ್ಯವಸ್ಥೆ ಬದಲಾಗದ ಹೊರತು ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯನ್ನು ಸರ್ಕಾರವೇ ನಡೆಸುವ ವ್ಯವಸ್ಥೆ ಜಾರಿಗೆ ತರಬೇಕು. ನಾಮಪತ್ರ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಪ್ರಚಾರಕ್ಕೆ ಹೋಗುವಂತಿರಬಾರದು. ಸುಧಾರಣೆ ತರಬೇಕಾದರೆ ರಾಜಕೀಯ ಪಕ್ಷಗಳಲ್ಲಿಯೂ ಬದಲಾವಣೆ ಅನಿವಾರ್ಯ” ಎಂದು ಹೇಳಿದರು.

 

ಇದನ್ನೂ ಓದಿ: ನಾವಿಬ್ಬರು ನಮಗಿಬ್ಬರು ಎನ್ನುವ ಸತ್ಯ ಬಹಿರಂಗಗೊಳ್ಳುತ್ತಿದೆ: ಮೋದಿ ಕ್ರೀಡಾಂಗಣದ ಬಗ್ಗೆ ರಾಹುಲ್ ವ್ಯಂಗ್ಯ

ಮಾತೃ ಹೃದಯದವರು ಮಾತ್ರ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬಲ್ಲರು. ಕಲಾಪ ಎಷ್ಟು ದಿನ ನಡೆಸಬೇಕು ಎಂಬ ಸ್ವಾತಂತ್ಯ ವಿಧಾನಸಭೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ಇರಬೇಕು. ಕಲಾಪದ ಅವಧಿಯನ್ನು ಸರ್ಕಾರ ನಿರ್ಧಾರ ಮಾಡುವುದು ಸರಿಯಲ್ಲ. ವರ್ಷದಲ್ಲಿ 60 ದಿನಗಳ ಕಾಲ ಕಲಾಪ ನಡೆಯಬೇಕು ಎಂಬ ನಿಯಮವಿದೆ. ಆ ನಿಯಮಕ್ಕೆ ಬದ್ಧವಾಗಿ ಎಲ್ಲರೂ ನಡೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದರು.

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1973ರಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲಾಯಿತು. ಇದಕ್ಕೆ ಪೂರ್ವಭಾವಿಯಾಗಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಭಾರಿ ಚರ್ಚೆ ನಡೆದಿತ್ತು. ಆದರೆ ಈಗ ತರಾತುರಿಯಲ್ಲಿ ಕಾನೂನುಗಳನ್ನು ರೂಪಿಸಿ ಜಾರಿಗೆ ತರಲಾಗುತ್ತಿದೆ. ಯಾವುದೇ ಕಾನೂನು ಜಾರಿಗೆ ತರುವ ಮುನ್ನ ಚರ್ಚೆಗೆ ಅವಕಾಶ ಸಿಗಲೇಬೇಕು. ಅವಸರ ಮಾಡಬಾರದು. ವಿಧೇಯಕ ಮಂಡಿಸಿ ಒಂದೇ ದಿನದಲ್ಲಿ ಅಂಗೀಕಾರ ಮಾಡಿ, ಸುಗ್ರೀವಾಜ್ಞೆ ಜಾರಿಗೆ ತರುವ ಅಭ್ಯಾಸ ಒಳ್ಳೆಯದಲ್ಲ ಎಂದು ಹೇಳಿದರು.

ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವುದನ್ನು ತಪ್ಪಿಸಲು ಕಾನೂನು ಜಾರಿಗೆ ತರಲಾಯಿತು. ಆದರೂ ಶಾಸಕರು ರಂಗೋಲಿ ಕೆಳಗೆ ನುಸುಳುತ್ತಾರೆ. ಚುನಾವಣಾ ವ್ಯವಸ್ಥೆಯಲ್ಲಿ ಬದಲಾವಣೆ ತರದಿದ್ದರೆ ಸಂವಿಧಾನದ ಮೌಲ್ಯಗಳು ಕುಸಿಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು. ಕ್ರಿಮಿನಲ್‍ಗಳು, ಶ್ರೀಮಂತರು, ಹೊಡಿ-ಬಡಿ ಸಂಸ್ಕೃತಿಯವರು ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ನರೇಂದ್ರ ಮೋದಿ ಸ್ಟೇಡಿಯಂ ಟ್ರೋಲ್: ಸರ್ದಾರ್‌ ಪಟೇಲ್‌ಗೆ ಅವಮಾನ ಎಂದ ನೆಟ್ಟಿಗರು!

ಚುನಾವಣೆ ಎಂದರೆ ವ್ಯಾಪಾರ, ಹರಾಜು ಎನ್ನುವಂತಾಗಿದೆ. ಹೀಗಾಗಿ ಚುನಾವಣಾ ವ್ಯವಸ್ಥೆ ದಿಕ್ಕಾಪಾಲಾಗಿದೆ. ಮಾಧ್ಯಮದವರಂತೂ ಉದ್ಯಮಿ, ಪತ್ರಕರ್ತ, ರಾಜಕಾರಣಿ ಹೀಗೆ ಎಲ್ಲ ಪಾತ್ರ ನಿಭಾಯಿಸುವುದರಿಂದ ನಾಲ್ಕನೇ ಆಧಾರ ಸ್ಥಂಭ ಗಟ್ಟಿಯಾಗಿ ನಿಲ್ಲುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ವಾಟಾಳ್ ನಾಗರಾಜ್ ಅವರು ಶಾಸಕರಾಗಿದ್ದಾಗ ಬೆಳಗ್ಗೆ ಬಂದರೆ ಕಲಾಪ ಮುಗಿಯುವ ವರೆಗೆ ಹೋಗುತ್ತಿರಲಿಲ್ಲ. ಸಚಿವರೇ ಈಗ ಕಲಾಪದಲ್ಲಿ ಭಾಗವಹಿಸುವುದಿಲ್ಲ. ಇನ್ನು ಶಾಸಕರಿಗೆ ಬುದ್ಧಿ ಹೇಳುವುದಾದರೂ ಹೇಗೆ? ಸಂಸದೀಯ ವ್ಯವಸ್ಥೆ ನಮ್ಮ ದೇಶಕ್ಕೆ ಹೊಸದೇನೂ ಅಲ್ಲ. ಬುದ್ಧ ಮತ್ತು ಬಸವಣ್ಣನವರ ಕಾಲದಲ್ಲಿಯೇ ಸಂಸದೀಯ ವ್ಯವಸ್ಥೆ ಇತ್ತು. ಈ ಕಾರಣಕ್ಕಾಗಿಯೇ ಬಸವಣ್ಣನವರು ಅನುಭವ ಮಂಟಪ ಸ್ಥಾಪನೆ ಮಾಡಿದರು ಎಂದು ವಿವರಿಸಿದರು.

ಮೌಲ್ಯಗಳ ರಕ್ಷಣೆ ಮತ್ತು ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ಈಗ ಗಂಭೀರವಾದ ಚಿಂತನೆ ನಡೆಯಬೇಕು. ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು. ಇದು ಪ್ರತಿಯೊಬ್ಬರ ಜವಾಬ್ದಾರಿ. ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು. ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವವನ್ನು ಪ್ರಜಾಪ್ರಭುತ್ವ ಒಳಗೊಂಡಿರಬೇಕು. ಈ ಯಾವುದೂ ಇಲ್ಲದಿದ್ದರೆ ದೇಶ ಉಳಿಯುವುದು ಕಷ್ಟ. ಯಾವುದೇ ಬದಲಾವಣೆಗೆ ನಮ್ಮ ಸಂಪೂರ್ಣ ಸಹಮತ ಇದೆ. ಓದಿಕೊಂಡವರು ಹೆಚ್ಚಿನ ಸಂಖ್ಯೆಯಲ್ಲಿ ವಿಧಾನಸಭೆ, ವಿಧಾನ ಪರಿಷತ್ತು ಮತ್ತು ಸಂಸತ್ತಿಗೆ ಆಯ್ಕೆಯಾಗಿ ಬರಬೇಕು ಎಂಬುದೇನೋ ಸರಿ. ಆದರೆ ಜಾತಿ ಭಾವನೆ ವಿದ್ಯಾವಂತರಲ್ಲಿಯೇ ಹೆಚ್ಚು. ಇದು ಅತ್ಯಂತ ಅಪಾಯಕಾರಿ ಎಂದು ಹೇಳಿದರು.


ಇದನ್ನೂ ಓದಿ: ’ಕಾವೇರಿ ಕಾಲಿಂಗ್’ ಕರ್ನಾಟಕ ಸರ್ಕಾರದ ಯೋಜನೆಯೇ?: ತನಿಖೆಯ ಅಗತ್ಯವಿದೆ ಎಂದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...