Homeಮುಖಪುಟದೆಹಲಿ ಗಲಭೆ: 52 ಕೊಲೆ ಪ್ರಕರಣಗಳಲ್ಲಿ 38 ರಲ್ಲಿ ಚಾರ್ಜ್‌ಶೀಟ್, ಹೆಚ್ಚಿನ ಆರೋಪಿಗಳು ನೇರವಾಗಿ ಭಾಗಿಯಾಗಿಲ್ಲ!

ದೆಹಲಿ ಗಲಭೆ: 52 ಕೊಲೆ ಪ್ರಕರಣಗಳಲ್ಲಿ 38 ರಲ್ಲಿ ಚಾರ್ಜ್‌ಶೀಟ್, ಹೆಚ್ಚಿನ ಆರೋಪಿಗಳು ನೇರವಾಗಿ ಭಾಗಿಯಾಗಿಲ್ಲ!

- Advertisement -
- Advertisement -

2020 ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ನಂತರ ದಾಖಲಾದ 53 ಕೊಲೆ ಪ್ರಕರಣಗಳಲ್ಲಿ ದೆಹಲಿ ಪೊಲೀಸರು 38 ರಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದ್ದಾರೆ ಮತ್ತು 17 ರಲ್ಲಿ ಆರೋಪಗಳ ಕುರಿತು ನ್ಯಾಯಾಲಯದಲ್ಲಿ ವಾದಗಳು ಪ್ರಾರಂಭವಾಗಿವೆ. ಹೆಚ್ಚಿನ ಕೊಲೆ ಆರೋಪಿಗಳು ನೇರವಾಗಿ ಕೊಲೆಯಲ್ಲಿ ಭಾಗಿಯಾಗಿಲ್ಲ, ಆದರೆ ಹಿಂಸಾಚಾರ ನಡೆಸಿದ ಗುಂಪಿನ ಭಾಗವಾಗಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವಿಶೇಷ ವರದಿ ತಿಳಿಸಿದೆ.

44 ಪ್ರಕರಣಗಳಲ್ಲಿ ರಾಜ್ಯ ಸರ್ಕಾರದಿಂದ ಪರಿಹಾರವನ್ನು ಪಡೆಯಲಾಗಿದ್ದು, ಗಲಭೆಯ ನಂತರ ಕನಿಷ್ಠ 12 ಸಂತ್ರಸ್ತ ಕುಟುಂಬಗಳು ವಾಸಸ್ಥಳ ತೊರೆದಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ 15 ಗಲಭೆ ಸಂತ್ರಸ್ತರ ಕುಟುಂಬಗಳನ್ನು ಪತ್ತೆಹಚ್ಚಿ ಮಾತನಾಡಿದ ನಂತರ ಈ ಮಾಹಿತಿ ಕಂಡುಬಂದಿದೆ.

PC: Prajavani

ಕೋಮು ಹಿಂಸಾಚಾರವು 2020 ರ ಫೆಬ್ರವರಿ 24 ಮತ್ತು 26 ರ ನಡುವೆ ಈಶಾನ್ಯ ದೆಹಲಿಯಲ್ಲಿ ಸಂಭವಿಸಿತ್ತು. 53 ಜನ ಅಸುನೀಗಿ, 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು ಮತ್ತು ಕೋಟ್ಯಂತರ ರೂ. ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿತ್ತು. ಹಿಂಸಾಚಾರದ ನಂತರ ಹಲವಾರು ಕುಟುಂಬಗಳು ತಿಂಗಳುಗಟ್ಟಲೆ ತಾತ್ಕಾಲಿಕ ಶಿಬಿರಗಳಲ್ಲಿ ನೆಲೆಸಬೇಕಾಗಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್‌ ಭೂಷಣ್

’ಒಟ್ಟು 755 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 400 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಇಲ್ಲಿಯವರೆಗೆ 1,753 ಜನರನ್ನು ಬಂಧಿಸಲಾಗಿದ್ದು, ಅದರಲ್ಲಿ 933 ಮುಸ್ಲಿಮರು ಮತ್ತು 820 ಹಿಂದೂಗಳು ಇದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

53 ಕೊಲೆಗಳು ಸೇರಿದಂತೆ ಅರವತ್ತೆರಡು ಪ್ರಕರಣಗಳನ್ನು ಅಪರಾಧ ಶಾಖೆಯ ಮೂರು ವಿಶೇಷ ತನಿಖಾ ತಂಡಗಳು ನಿರ್ವಹಿಸುತ್ತಿವೆ. ಈ ಪೈಕಿ 46 ಪ್ರಕರಣಗಳನ್ನು ಬಗೆಹರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಮೂರು ಎಸ್‌ಐಟಿಗಳು 390 ಜನರನ್ನು ಬಂಧಿಸಿವೆ – 178 ಹಿಂದೂಗಳು ಮತ್ತು 212 ಮುಸ್ಲಿಮರು. ದೊಡ್ಡ ಪಿತೂರಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಘಟಕವು, 21 ಜನರನ್ನು ಬಂಧಿಸಿದೆ, ಇದರಲ್ಲಿ 19 ಮುಸ್ಲಿಮರು ಮತ್ತು ಇಬ್ಬರು ಹಿಂದೂಗಳು ಇದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ವಿಶೇಷ ಸಿಪಿ ಅಪರಾಧ ಶಾಖೆ ಪ್ರವೀರ್ ರಂಜನ್, “38 ಕೊಲೆ ಪ್ರಕರಣಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ದಾಖಲಿಸಲಾಗಿದೆ ಮತ್ತು 17 ರಲ್ಲಿ ಆರೋಪದ ಮೇಲೆ ವಾದಗಳು ಪ್ರಾರಂಭವಾಗಿವೆ” ಎಂದಿದ್ದಾರೆ.

ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ದದ ದೂರುಗಳ ನಿರ್ಲಕ್ಷ್ಯ; ತನಿಖಾ ವರದಿ
ಪೋಟೋ ಕೃಪೆ: ದಿ ಕ್ವಿಂಟ್

ಇಂಡಿಯನ್ ಎಕ್ಸ್ ಪ್ರೆಸ್ ಕಂಡುಕೊಂಡ ಪ್ರಕಾರ, ಹೆಚ್ಚಿನ ಸಂದರ್ಭಗಳಲ್ಲಿ, ಕುಟುಂಬಗಳು ತಮ್ಮ ಕುಟುಂಬದ ಪ್ರಮುಖ ಆದಾಯ ಗಳಿಸುವ ವ್ಯಕ್ತಿಯನ್ನು ಕಳೆದುಕೊಂಡಿವೆ. ಪರಿಹಾರವನ್ನು (ವಯಸ್ಕನ ಸಾವಿಗೆ 10 ಲಕ್ಷ ರೂ. ಮತ್ತು ಅಪ್ರಾಪ್ತ ವಯಸ್ಕನ ಸಾವಿಗೆ 5 ಲಕ್ಷ ರೂ.) 44 ಕುಟುಂಬಗಳಿಗೆ ಒದಗಿಸಲಾಗಿದ್ದು, ಹೆಚ್ಚಿನವರು ತಮ್ಮ ಮನೆಗಳನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯವನ್ನು ಭದ್ರಪಡಿಸಲು ಈ ಮೊತ್ತ ಯಾತಕ್ಕೂ ಸಾಲುವುದಿಲ್ಲ ಎಂದು ಹೇಳಿದ್ದಾರೆ. ಗಲಭೆಯಲ್ಲಿ ಮೃತರಾದವರ ಹೆಂಡತಿಯರು, ವಯಸ್ಕ ಮಕ್ಕಳು ಇನ್ನೂ ಉದ್ಯೋಗವನ್ನು ಹುಡುಕುವಲ್ಲಿ ಯಶಸ್ವಿಯಾಗಲಿಲ್ಲ, ದಿನನಿತ್ಯದ ಖರ್ಚುಗಳಿಗಾಗಿ ಅವರ ಸಂಬಂಧಿಕರ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ’ಝೀ ನ್ಯೂಸ್‌‌’ಗೆ ವರದಿಯ ಆಧಾರ ತಿಳಿಸಿಯೆಂದ ಹೈಕೋರ್ಟ್

ದೆಹಲಿ ಸರ್ಕಾರದ ಪ್ರಕಾರ, ಇಲ್ಲಿವರೆಗೆ ಒಟ್ಟು 26.09 ಕೋಟಿ ರೂ. ಪರಿಹಾರ ವಿತರಿಸಲಾಗಿದೆ. 1,100 ಕ್ಲೈಮ್‌ಗಳಲ್ಲಿ ವಾಣಿಜ್ಯ ಆಸ್ತಿಗೆ ಹಾನಿಯಾಗಿದ್ದಕ್ಕಾಗಿ 11.28 ಕೋಟಿ ರೂ. ಪರಿಹಾರ ನೀಡಲಾಗಿದೆ.
ಗಲಭೆಗೆ ಒಳಗಾದವರ ಹೆಚ್ಚಿನ ಕುಟುಂಬಗಳು ಕಳೆದ ವರ್ಷದಂತೆಯೇ ಅದೇ ಮನೆಯಲ್ಲಿಯೇ ಉಳಿದಿದ್ದರೆ, 12 ಕುಟಂಬಗಳು ದೆಹಲಿ-ಎನ್‌ಸಿಆರ್‌ನಲ್ಲಿ ಹೊಸ ಮನೆಗಳಿಗೆ ತೆರಳಿವೆ ಅಥವಾ ನಗರವನ್ನು ತೊರೆದಿವೆ. ಹಿಂತಿರುಗಿದವರಲ್ಲಿ ಅನೇಕರು ತಮ್ಮ ಬಳಿ ಹಣಕಾಸಿನ ಸಂಪನ್ಮೂಲಗಳಿಲ್ಲ ಎಂದು ಹೇಳಿದ್ದಾರೆ. ಪರಿಹರಿಸಿದ 400 ಪ್ರಕರಣಗಳಲ್ಲಿ 342 ರಲ್ಲಿ ಚಾರ್ಜ್‌ಶೀಟ್‌ಗಳು ಮತ್ತು ಪೂರಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ ಎಂದು ಪೋಲಿಸರು ಹೇಳಿದ್ದಾರೆ.

ಬಂಧಿತ 1,753 ಜನರಲ್ಲಿ 1,204 ಜನರು ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು 544 ಜನರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 1,553 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಹಾಕಲಾಗಿದ್ದು, 200 ಮಂದಿಯ ಮೇಲೆ ಇನ್ನೂ ಚಾರ್ಜ್‌ಶೀಟ್ ಮಾಡಲಾಗಿಲ್ಲ. 342 ಚಾರ್ಜ್‌ಶೀಟ್ ಪ್ರಕರಣಗಳಲ್ಲಿ 250 ಪ್ರಕರಣಗಳನ್ನು ವಿಚಾರಣಾ ನ್ಯಾಯಾಲಯಗಳು ಸ್ವೀಕರಿಸಿವೆ ಮತ್ತು ಕೆಲವು ಪ್ರಕರಣಗಳಲ್ಲಿ, ಆರೋಪದ ಮೇಲಿನ ವಾದಗಳು ಪ್ರಾರಂಭವಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣಗಳನ್ನು ಪರಿಹರಿಸಲು ಅವರು, “ವಿಶ್ವಾಸಾರ್ಹ, ವೈಜ್ಞಾನಿಕ ಪುರಾವೆಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು” ಹೆಚ್ಚು ಅವಲಂಬಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ಕೊಲೆ ಆರೋಪದ ಮೇಲೆ ಬಂಧಿಸಲ್ಪಟ್ಟ ಹೆಚ್ಚಿನ ಆರೋಪಿಗಳು ನೇರವಾಗಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ, ಆದರೆ ಕೊಲೆ ನಡೆದ ಜನಸಮೂಹದ ಭಾಗವಾಗಿದ್ದರು” ಎಂದು ಅಧಿಕಾರಿ ಹೇಳಿದ್ದಾರೆ.

ಕೃಪೆ: ದಿ ಇಂಡಿಯನ್ ಎಕ್ಸ್‌‌ಪ್ರೆಸ್

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...