Homeಮುಖಪುಟ'ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ' ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ...

‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ ಟ್ವೀಟ್‌ಗಳು!

- Advertisement -
- Advertisement -

ಭಾರತದಾದ್ಯಂತ ಯುವಜನರು ನಿರುದ್ಯೋಗದ ವಿರುದ್ಧ ಸಿಡಿದೆದ್ದಿದ್ದು, ಉದ್ಯೋಗಕ್ಕಾಗಿ ದನಿಯೆತ್ತಿದ್ದಾರೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಟ್ವಿಟರ್ ದಾಳಿ ನಡೆಸಿರುವ ಯುವಜನತೆ ಉದ್ಯೋಗ ಕೊಡಿ ಎಂದು ತಾಕೀತು ಮಾಡುತ್ತಿದ್ದಾರೆ.

#modi_job_do, #modi_rojgar_do, ಉದ್ಯೋಗ ಕೊಡಿ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಸದ್ದು ಮಾಡಿವೆ. ದಾಖಲೆಯ 60 ಲಕ್ಷ ಟ್ವೀಟ್‌ಗಳು ಪ್ರಸಾರವಾಗುವುದರೊಂದಿಗೆ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್ ಆದರೆ, ಪ್ರಪಂಚದಾದ್ಯಂತ ಎರಡನೇ ಸ್ಥಾನದಲ್ಲಿ ಟ್ರೆಂಡ್ ಆಗುವ ಮೂಲಕ ದಾಖಲೆ ಸೃಷ್ಟಿಸಿವೆ.

ಎಸ್‌ಎಸ್‌ಸಿ ಪರೀಕ್ಷೆಯನ್ನು ಸಮಯಕ್ಕೆ ಸರಿಯಾಗಿ ಪಾರದರ್ಶಕವಾಗಿ ನಡೆಸಬೇಕು ಮತ್ತು ಯುವಜನರಿಗೆ ಉದ್ಯೋಗ ಕಲ್ಪಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ಟ್ವಿಟರ್ ಟ್ರೆಂಡ್ ಆರಂಭವಾಗಿದೆ.

ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿಯಾಗುವ ಮೊದಲು ವರ್ಷಕ್ಕೆ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಪ್ರಧಾನಿಯಾದ ನಂತರ ಉದ್ಯೋಗ ಸೃಷ್ಟಿಯಾಗುವುದು ಇರಲಿ, ಇರುವ ಉದ್ಯೋಗಗಳೇ ಕಾಣೆಯಾಗುತ್ತಿವೆ. ಹಲವು ಸರ್ಕಾರೀ ಸಂಸ್ಥೆಗಳು ಖಾಸಗಿಯವರ ಪಾಲಾಗುತ್ತಾ ಬೃಹತ್ ಉದ್ಯೋಗ ನಷ್ಟ ಸಂಭವಿಸುತ್ತಿದ್ದು, ಇದಕ್ಕೆ ಮೋದಿಯವರ ಕೆಟ್ಟ ನೀತಿಗಳೇ ಕಾರಣ ಎಂದು ಯುವಜನರು ದೂರಿದ್ದಾರೆ.

ಈ 45 ವರ್ಷಗಳಲ್ಲೆ ಕಂಡು ಕೇಳರಿಯದಂತಹ ನಿರುದ್ಯೋಗ ಭಾರತದಲ್ಲಿ ಇಂದು ತಲೆಎತ್ತಿದೆ. ಈ ಕುರಿತು ಗಂಭೀರವಾಗಿ ಯೋಚಿಸಬೇಕಾದ ಮೋದಿಯವರು ಖಾಸಗಿಯವರನ್ನು ಉತ್ತೇಜಿಸುವ ಮಾತುಗಳನ್ನಾಡುತ್ತಿದ್ದಾರೆ. ಅಲ್ಲದೇ ಕೆಲಸಕ್ಕೆ ಬಾರದ ಚರ್ಚೆಯಲ್ಲಿ ಮುಳುಗಿದ್ದಾರೆ ಎಂದು ಯುವಜನರು ಕಿಡಿಕಾರಿದ್ದಾರೆ.

ಮೋದಿ ಸರ್ಕಾರ ನಮ್ಮ ರಾಷ್ಟ್ರದ ಆರ್ಥಿಕ ಬೆಳವಣಿಗೆಯನ್ನು ನಾಶಪಡಿಸಿದೆ. ಲಕ್ಷಾಂತರ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಮೋದಿಯವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು. ಆದರೆ ಉದ್ಯೋಗಗಳು ಎಲ್ಲಿವೆ? ಎಂದು ಮಹಮ್ಮದ್ ಕಬೀರ್ ಅಹ್ಮದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ವರ್ಷಕ್ಕೆ ಕೋಟಿ ಉದ್ಯೋಗಗಳು ಇಲ್ಲ,
15 ಲಕ್ಷ ಇಲ್ಲ,
100 ಸ್ಮಾರ್ಟ್ ಸಿಟೀಸ್ ಇಲ್ಲ,
ಬುಲೆಟ್ ರೈಲು ಇಲ್ಲ,
ರೈತರ ಆದಾಯ ಡಬಲ್ ಇಲ್ಲ,
ಭಯೋತ್ಪಾದನೆಯನ್ನು ತೆಗೆದುಹಾಕುವುದು ಇಲ್ಲ,
ಆದರೆ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಮಾತ್ರ ಆಗಿದೆ ಎಂದು ಗೌರವ್ ಪಾಂಡಿ ವ್ಯಂಗ್ಯವಾಡಿದ್ದಾರೆ.

ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಉದ್ಯೋಗಬೇಕು, ಕೌಶಲ್ಯಬೇಕು ಎಂದು ಆಗ್ರಹಿಸಿ ಟ್ವೀಟ್ ಮಾಡಿರುವುದನ್ನು ನೆನಪಿಸಿರುವ ಯುವಜನರು ಹೀಗೇಕೆ ಉದ್ಯೋಗ ಕೊಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Petrol tax decrease immidiatly and also collected tax amt utilize the honestly and important public require ments. Present situation regarding vehicle on different taxes(lifetax, insurence, toll tax , tragic taxes vehicle loan and intrest), fines, is very irritate the common and middle classes, govt concentrate to common rule to vip and common publics.

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...