Homeಮುಖಪುಟ'ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ' ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ...

‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್: ದಾಖಲೆಯ 60 ಲಕ್ಷ ಟ್ವೀಟ್‌ಗಳು!

- Advertisement -
- Advertisement -

ಭಾರತದಾದ್ಯಂತ ಯುವಜನರು ನಿರುದ್ಯೋಗದ ವಿರುದ್ಧ ಸಿಡಿದೆದ್ದಿದ್ದು, ಉದ್ಯೋಗಕ್ಕಾಗಿ ದನಿಯೆತ್ತಿದ್ದಾರೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಟ್ವಿಟರ್ ದಾಳಿ ನಡೆಸಿರುವ ಯುವಜನತೆ ಉದ್ಯೋಗ ಕೊಡಿ ಎಂದು ತಾಕೀತು ಮಾಡುತ್ತಿದ್ದಾರೆ.

#modi_job_do, #modi_rojgar_do, ಉದ್ಯೋಗ ಕೊಡಿ ಮೋದಿ ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ವಿಟರ್‌ನಲ್ಲಿ ಸದ್ದು ಮಾಡಿವೆ. ದಾಖಲೆಯ 60 ಲಕ್ಷ ಟ್ವೀಟ್‌ಗಳು ಪ್ರಸಾರವಾಗುವುದರೊಂದಿಗೆ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್ ಆದರೆ, ಪ್ರಪಂಚದಾದ್ಯಂತ ಎರಡನೇ ಸ್ಥಾನದಲ್ಲಿ ಟ್ರೆಂಡ್ ಆಗುವ ಮೂಲಕ ದಾಖಲೆ ಸೃಷ್ಟಿಸಿವೆ.

ಎಸ್‌ಎಸ್‌ಸಿ ಪರೀಕ್ಷೆಯನ್ನು ಸಮಯಕ್ಕೆ ಸರಿಯಾಗಿ ಪಾರದರ್ಶಕವಾಗಿ ನಡೆಸಬೇಕು ಮತ್ತು ಯುವಜನರಿಗೆ ಉದ್ಯೋಗ ಕಲ್ಪಿಸಬೇಕು ಎಂಬ ಹಿನ್ನೆಲೆಯಲ್ಲಿ ಈ ಟ್ವಿಟರ್ ಟ್ರೆಂಡ್ ಆರಂಭವಾಗಿದೆ.

ನರೇಂದ್ರ ಮೋದಿಯವರು 2014ರಲ್ಲಿ ಪ್ರಧಾನಿಯಾಗುವ ಮೊದಲು ವರ್ಷಕ್ಕೆ ಒಂದು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಪ್ರಧಾನಿಯಾದ ನಂತರ ಉದ್ಯೋಗ ಸೃಷ್ಟಿಯಾಗುವುದು ಇರಲಿ, ಇರುವ ಉದ್ಯೋಗಗಳೇ ಕಾಣೆಯಾಗುತ್ತಿವೆ. ಹಲವು ಸರ್ಕಾರೀ ಸಂಸ್ಥೆಗಳು ಖಾಸಗಿಯವರ ಪಾಲಾಗುತ್ತಾ ಬೃಹತ್ ಉದ್ಯೋಗ ನಷ್ಟ ಸಂಭವಿಸುತ್ತಿದ್ದು, ಇದಕ್ಕೆ ಮೋದಿಯವರ ಕೆಟ್ಟ ನೀತಿಗಳೇ ಕಾರಣ ಎಂದು ಯುವಜನರು ದೂರಿದ್ದಾರೆ.

ಈ 45 ವರ್ಷಗಳಲ್ಲೆ ಕಂಡು ಕೇಳರಿಯದಂತಹ ನಿರುದ್ಯೋಗ ಭಾರತದಲ್ಲಿ ಇಂದು ತಲೆಎತ್ತಿದೆ. ಈ ಕುರಿತು ಗಂಭೀರವಾಗಿ ಯೋಚಿಸಬೇಕಾದ ಮೋದಿಯವರು ಖಾಸಗಿಯವರನ್ನು ಉತ್ತೇಜಿಸುವ ಮಾತುಗಳನ್ನಾಡುತ್ತಿದ್ದಾರೆ. ಅಲ್ಲದೇ ಕೆಲಸಕ್ಕೆ ಬಾರದ ಚರ್ಚೆಯಲ್ಲಿ ಮುಳುಗಿದ್ದಾರೆ ಎಂದು ಯುವಜನರು ಕಿಡಿಕಾರಿದ್ದಾರೆ.

ಮೋದಿ ಸರ್ಕಾರ ನಮ್ಮ ರಾಷ್ಟ್ರದ ಆರ್ಥಿಕ ಬೆಳವಣಿಗೆಯನ್ನು ನಾಶಪಡಿಸಿದೆ. ಲಕ್ಷಾಂತರ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಮೋದಿಯವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು. ಆದರೆ ಉದ್ಯೋಗಗಳು ಎಲ್ಲಿವೆ? ಎಂದು ಮಹಮ್ಮದ್ ಕಬೀರ್ ಅಹ್ಮದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ವರ್ಷಕ್ಕೆ ಕೋಟಿ ಉದ್ಯೋಗಗಳು ಇಲ್ಲ,
15 ಲಕ್ಷ ಇಲ್ಲ,
100 ಸ್ಮಾರ್ಟ್ ಸಿಟೀಸ್ ಇಲ್ಲ,
ಬುಲೆಟ್ ರೈಲು ಇಲ್ಲ,
ರೈತರ ಆದಾಯ ಡಬಲ್ ಇಲ್ಲ,
ಭಯೋತ್ಪಾದನೆಯನ್ನು ತೆಗೆದುಹಾಕುವುದು ಇಲ್ಲ,
ಆದರೆ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಮಾತ್ರ ಆಗಿದೆ ಎಂದು ಗೌರವ್ ಪಾಂಡಿ ವ್ಯಂಗ್ಯವಾಡಿದ್ದಾರೆ.

ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಉದ್ಯೋಗಬೇಕು, ಕೌಶಲ್ಯಬೇಕು ಎಂದು ಆಗ್ರಹಿಸಿ ಟ್ವೀಟ್ ಮಾಡಿರುವುದನ್ನು ನೆನಪಿಸಿರುವ ಯುವಜನರು ಹೀಗೇಕೆ ಉದ್ಯೋಗ ಕೊಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಬಿಹಾರ: 19 ಲಕ್ಷ ಉದ್ಯೋಗ ನೀಡದಿದ್ದರೆ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ – ತೇಜಸ್ವಿ ಯಾದವ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Petrol tax decrease immidiatly and also collected tax amt utilize the honestly and important public require ments. Present situation regarding vehicle on different taxes(lifetax, insurence, toll tax , tragic taxes vehicle loan and intrest), fines, is very irritate the common and middle classes, govt concentrate to common rule to vip and common publics.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...