Homeಅಂಕಣಗಳುಮಾಧ್ಯಮದ ವಿಪ್ರ ವೈರಸ್ಸನ್ನು ಲಂಕೇಶರು ಆಗಲೇ ಗುರುತಿಸಿದ್ದರು

ಮಾಧ್ಯಮದ ವಿಪ್ರ ವೈರಸ್ಸನ್ನು ಲಂಕೇಶರು ಆಗಲೇ ಗುರುತಿಸಿದ್ದರು

- Advertisement -
ಬ್ರಾಹ್ಮಣ ಮಾಧ್ಯಮ: ಪ್ರತಿಕ್ರಿಯೆ 2
| ಎಲ್.ಎನ್.ಮುಕುಂದರಾಜ್ |
ಜಗತ್ತಿನ ಚರಿತ್ರೆಯನ್ನು ಗಮನಿಸಿ ಸಾಮಾನ್ಯವಾಗಿ ಸರ್ವಾಧಿಕಾರಿಗಳು ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ ಮಾಧ್ಯಮಗಳನ್ನು ತಮ್ಮ ಕೈವಶ ಮಾಡಿಕೊಳ್ಳುತ್ತಾರೆ. ನಮ್ಮ ದೇಶದಲ್ಲಿಯೂ ಈಗ ಅಂತಹುದೇ ವಾತಾವರಣ ನಿರ್ಮಾಣವಾಗಿದೆ.
ನಾನು ನನ್ನ ಪ್ರಾಯದ ದಿನಗಳಲ್ಲಿ ಬಿಜೆಪಿಯ ಬಹು ನಿಷ್ಠಾವಂತ ಬೆಂಬಲಿಗನಾಗಿದ್ದೆ. ನಾನು ಬಲ್ಲಂತೆ ಬಿಜೆಪಿ ಒಂದು ರಾಜಕೀಯ ಪಕ್ಷವೇ ಅಲ್ಲ. ಅದರ ಬೆನ್ನು ಕಟ್ಟಿ ನಿಲ್ಲಿಸಿದವರು ಪುರೋಹಿತರು. ಕಳೆದ ಎಪ್ಪತ್ತು ವರ್ಷಗಳಲ್ಲಿ ನಮ್ಮ ದೇಶದ ತಳ ಸಮುದಾಯ, ಮುಖ್ಯವಾಗಿ ನಮ್ಮ ಹೆಣ್ಣು ಮಕ್ಕಳು ವಿದ್ಯೆ, ಉದ್ಯೋಗಗಳನ್ನು ಪಡೆದು ನೆಮ್ಮದಿಯ ಬದುಕು ಕಟ್ಟಿಕೊಂಡರು. ಇದಕ್ಕೆ ಪೂರ್ವದಲ್ಲಿ ಸಾವಿರಾರು ವರ್ಷಗಳಿಂದ ಈ ದೇಶದ ಒಂದು ಮೇಲ್ಜಾತಿ ಮಾತ್ರ ವಿದ್ಯೆ, ಉದ್ಯೋಗದ ಅವಕಾಶ ಪಡೆದಿತ್ತು. ಈಗ ಎಲ್ಲಾ ಜಾತಿಯ ಜನ ವಿದ್ಯಾವಂತರಾಗಿ ಸುಖದ ಬದುಕಿನ ಕಡೆಗೆ ನಡೆದ ಪವಾಡವು ಅವರನ್ನು ಧಿಗ್ಭ್ರಾಂತಗೊಳಿಸಿದೆ. ಜೊತೆಗೆ ಅವರ ಹೊಟ್ಟೆಯುರಿಗೂ ಕಾರಣವಾಗಿದೆ.
ಇದನ್ನು ನಿಯಂತ್ರಿಸಲು ಸಂವಿಧಾನವನ್ನೇ ಬುಡಮೇಲು ಮಾಡಬೇಕಾದ ಅನಿವಾರ್ಯತೆ ವೈದಿಕರಿಗೆ ಇದೆ. ತಮ್ಮ ಈ ಒಳ ದುರುದ್ದೇಶವನ್ನು ಕಾರ್ಯರೂಪಕ್ಕೆ ತರಲು ಅವರು ಬಿಜೆಪಿ ಎಂಬ ಪಕ್ಷವನ್ನು ಕಟ್ಟಿದರು. 90% ಶೂದ್ರರ ಓಟು ಗಿಟ್ಟಿಸಲು ಮುಸ್ಲಿಮರೆಂಬ ಬೆದರು ಗೊಂಬೆಯನ್ನು ಮುಂದು ಮಾಡಿದರು. ತಮ್ಮ ನೀತಿಯನ್ನು ಶೂದ್ರರ ದಡ್ಡ ತಲೆಗಳಿಗೆ ತುಂಬುವ ಆಧುನಿಕ ಮಾಧ್ಯಮಗಳನ್ನು ಬಳಸಿಕೊಳ್ಳುವಲ್ಲಿ ಯಶಸ್ವಿಯಾದರು.
ಖಾಸಗಿ ಟಿ.ವಿ ವಾಹಿನಿಗಳಿಗೆ ಬಂಡವಾಳ ಹೂಡುವವರು ಶ್ರೀಮಂತ ಶೂದ್ರರು. ಆದರೆ ಅಲ್ಲಿ ಕೆಲಸ ಮಾಡುವವರು ಬಹುತೇಕ ಬ್ರಾಹ್ಮಣರು. ಇಂದಿನ 99% ಮಾಧ್ಯಮಗಳು ಬ್ರಾಹ್ಮಣರು ಹಿಡಿತದಲ್ಲಿವೆ. ಅವರು ಜಾತಿ ಮತ್ತು ಹಣದ ಕಾರಣಕ್ಕಾಗಿ ಸಂಪೂರ್ಣ ಬಿಜೆಪಿಯ ಬೆಂಬಲಿಗರಾಗಿ ಕೆಲಸ ಮಾಡುತ್ತಿದ್ದಾರೆ.
ರಾಮಕೃಷ್ಣ ಹೆಗಡೆಯಂತಹ ಗುಳ್ಳೆನರಿಯಂತಹ ರಾಜಕಾರಣಿಯನ್ನು ಬಹು ದೊಡ್ಡ ತತ್ವಜ್ಞಾನಿಯಂತೆ ಆ ಕಾಲದ ಪತ್ರಿಕೆಗಳು ಬಿಂಬಿಸಿದ್ದವು. ಇದಕ್ಕೆ ಏಕೈಕ ಕಾರಣ ಹೆಗಡೆ ಜಾತಿ. ಆಗಲೆ ವೈದಿಕ ವಿಕೃತತೆಯನ್ನು ಲಂಕೇಶರಂತಹ ಲೇಖಕರು ಗ್ರಹಿಸಿದ್ದರು. ನಂತರ ನಿಧಾನವಾಗಿ ಈ ವಿಕೃತ ವೈರಸ್ ಎಲ್ಲ ಮಾಧ್ಯಮಗಳನ್ನೂ ಆಕ್ರಮಿಸತೊಡಗಿತು.
ಬಿಜೆಪಿಯ ಸರ್ವಾಧಿಕಾರಿ ಆಡಳಿತಕ್ಕೆ ತಡೆಯೊಡ್ಡಲು ಪ್ರತಿಯೊಬ್ಬರು ಆಲೋಚಿಸಬೇಕು. ಟಿ.ವಿ ವಾಹಿನಿಗಳು ಸೇರಿದಂತೆ ಎಲ್ಲ ಮಾಧ್ಯಮಗಳಿಗೂ ದಲಿತ, ಶೂದ್ರ ಹುಡುಗರನ್ನು ಪತ್ರಕರ್ತರನ್ನಾಗಿ ಸೇರಿಸುವ ಬಗ್ಗೆ ಜಾತ್ಯತೀತರು ಪ್ರಯತ್ನ ಪಡಬೇಕು. ಆ ಮೂಲಕ ಮಾಧ್ಯಮಕ್ಕೆ ಹತ್ತಿದ ವಿಪ್ರ ವೈರಸ್ಸನ್ನು ನಾಶ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...