Homeಅಂಕಣಗಳುಮಾಧ್ಯಮದ ವಿಪ್ರ ವೈರಸ್ಸನ್ನು ಲಂಕೇಶರು ಆಗಲೇ ಗುರುತಿಸಿದ್ದರು

ಮಾಧ್ಯಮದ ವಿಪ್ರ ವೈರಸ್ಸನ್ನು ಲಂಕೇಶರು ಆಗಲೇ ಗುರುತಿಸಿದ್ದರು

- Advertisement -
ಬ್ರಾಹ್ಮಣ ಮಾಧ್ಯಮ: ಪ್ರತಿಕ್ರಿಯೆ 2
| ಎಲ್.ಎನ್.ಮುಕುಂದರಾಜ್ |
ಜಗತ್ತಿನ ಚರಿತ್ರೆಯನ್ನು ಗಮನಿಸಿ ಸಾಮಾನ್ಯವಾಗಿ ಸರ್ವಾಧಿಕಾರಿಗಳು ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ ಮಾಧ್ಯಮಗಳನ್ನು ತಮ್ಮ ಕೈವಶ ಮಾಡಿಕೊಳ್ಳುತ್ತಾರೆ. ನಮ್ಮ ದೇಶದಲ್ಲಿಯೂ ಈಗ ಅಂತಹುದೇ ವಾತಾವರಣ ನಿರ್ಮಾಣವಾಗಿದೆ.
ನಾನು ನನ್ನ ಪ್ರಾಯದ ದಿನಗಳಲ್ಲಿ ಬಿಜೆಪಿಯ ಬಹು ನಿಷ್ಠಾವಂತ ಬೆಂಬಲಿಗನಾಗಿದ್ದೆ. ನಾನು ಬಲ್ಲಂತೆ ಬಿಜೆಪಿ ಒಂದು ರಾಜಕೀಯ ಪಕ್ಷವೇ ಅಲ್ಲ. ಅದರ ಬೆನ್ನು ಕಟ್ಟಿ ನಿಲ್ಲಿಸಿದವರು ಪುರೋಹಿತರು. ಕಳೆದ ಎಪ್ಪತ್ತು ವರ್ಷಗಳಲ್ಲಿ ನಮ್ಮ ದೇಶದ ತಳ ಸಮುದಾಯ, ಮುಖ್ಯವಾಗಿ ನಮ್ಮ ಹೆಣ್ಣು ಮಕ್ಕಳು ವಿದ್ಯೆ, ಉದ್ಯೋಗಗಳನ್ನು ಪಡೆದು ನೆಮ್ಮದಿಯ ಬದುಕು ಕಟ್ಟಿಕೊಂಡರು. ಇದಕ್ಕೆ ಪೂರ್ವದಲ್ಲಿ ಸಾವಿರಾರು ವರ್ಷಗಳಿಂದ ಈ ದೇಶದ ಒಂದು ಮೇಲ್ಜಾತಿ ಮಾತ್ರ ವಿದ್ಯೆ, ಉದ್ಯೋಗದ ಅವಕಾಶ ಪಡೆದಿತ್ತು. ಈಗ ಎಲ್ಲಾ ಜಾತಿಯ ಜನ ವಿದ್ಯಾವಂತರಾಗಿ ಸುಖದ ಬದುಕಿನ ಕಡೆಗೆ ನಡೆದ ಪವಾಡವು ಅವರನ್ನು ಧಿಗ್ಭ್ರಾಂತಗೊಳಿಸಿದೆ. ಜೊತೆಗೆ ಅವರ ಹೊಟ್ಟೆಯುರಿಗೂ ಕಾರಣವಾಗಿದೆ.
ಇದನ್ನು ನಿಯಂತ್ರಿಸಲು ಸಂವಿಧಾನವನ್ನೇ ಬುಡಮೇಲು ಮಾಡಬೇಕಾದ ಅನಿವಾರ್ಯತೆ ವೈದಿಕರಿಗೆ ಇದೆ. ತಮ್ಮ ಈ ಒಳ ದುರುದ್ದೇಶವನ್ನು ಕಾರ್ಯರೂಪಕ್ಕೆ ತರಲು ಅವರು ಬಿಜೆಪಿ ಎಂಬ ಪಕ್ಷವನ್ನು ಕಟ್ಟಿದರು. 90% ಶೂದ್ರರ ಓಟು ಗಿಟ್ಟಿಸಲು ಮುಸ್ಲಿಮರೆಂಬ ಬೆದರು ಗೊಂಬೆಯನ್ನು ಮುಂದು ಮಾಡಿದರು. ತಮ್ಮ ನೀತಿಯನ್ನು ಶೂದ್ರರ ದಡ್ಡ ತಲೆಗಳಿಗೆ ತುಂಬುವ ಆಧುನಿಕ ಮಾಧ್ಯಮಗಳನ್ನು ಬಳಸಿಕೊಳ್ಳುವಲ್ಲಿ ಯಶಸ್ವಿಯಾದರು.
ಖಾಸಗಿ ಟಿ.ವಿ ವಾಹಿನಿಗಳಿಗೆ ಬಂಡವಾಳ ಹೂಡುವವರು ಶ್ರೀಮಂತ ಶೂದ್ರರು. ಆದರೆ ಅಲ್ಲಿ ಕೆಲಸ ಮಾಡುವವರು ಬಹುತೇಕ ಬ್ರಾಹ್ಮಣರು. ಇಂದಿನ 99% ಮಾಧ್ಯಮಗಳು ಬ್ರಾಹ್ಮಣರು ಹಿಡಿತದಲ್ಲಿವೆ. ಅವರು ಜಾತಿ ಮತ್ತು ಹಣದ ಕಾರಣಕ್ಕಾಗಿ ಸಂಪೂರ್ಣ ಬಿಜೆಪಿಯ ಬೆಂಬಲಿಗರಾಗಿ ಕೆಲಸ ಮಾಡುತ್ತಿದ್ದಾರೆ.
ರಾಮಕೃಷ್ಣ ಹೆಗಡೆಯಂತಹ ಗುಳ್ಳೆನರಿಯಂತಹ ರಾಜಕಾರಣಿಯನ್ನು ಬಹು ದೊಡ್ಡ ತತ್ವಜ್ಞಾನಿಯಂತೆ ಆ ಕಾಲದ ಪತ್ರಿಕೆಗಳು ಬಿಂಬಿಸಿದ್ದವು. ಇದಕ್ಕೆ ಏಕೈಕ ಕಾರಣ ಹೆಗಡೆ ಜಾತಿ. ಆಗಲೆ ವೈದಿಕ ವಿಕೃತತೆಯನ್ನು ಲಂಕೇಶರಂತಹ ಲೇಖಕರು ಗ್ರಹಿಸಿದ್ದರು. ನಂತರ ನಿಧಾನವಾಗಿ ಈ ವಿಕೃತ ವೈರಸ್ ಎಲ್ಲ ಮಾಧ್ಯಮಗಳನ್ನೂ ಆಕ್ರಮಿಸತೊಡಗಿತು.
ಬಿಜೆಪಿಯ ಸರ್ವಾಧಿಕಾರಿ ಆಡಳಿತಕ್ಕೆ ತಡೆಯೊಡ್ಡಲು ಪ್ರತಿಯೊಬ್ಬರು ಆಲೋಚಿಸಬೇಕು. ಟಿ.ವಿ ವಾಹಿನಿಗಳು ಸೇರಿದಂತೆ ಎಲ್ಲ ಮಾಧ್ಯಮಗಳಿಗೂ ದಲಿತ, ಶೂದ್ರ ಹುಡುಗರನ್ನು ಪತ್ರಕರ್ತರನ್ನಾಗಿ ಸೇರಿಸುವ ಬಗ್ಗೆ ಜಾತ್ಯತೀತರು ಪ್ರಯತ್ನ ಪಡಬೇಕು. ಆ ಮೂಲಕ ಮಾಧ್ಯಮಕ್ಕೆ ಹತ್ತಿದ ವಿಪ್ರ ವೈರಸ್ಸನ್ನು ನಾಶ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....