Homeಅಂಕಣಗಳು1856ರಲ್ಲೇ ಸಮಾನತೆಯ ಪ್ರಶ್ನೆ ಎತ್ತಿದ್ದ ಧಾರವಾಡದ ಎರ್‍ಲೂ ಬಿನ್ ನಾರಾಯಣ್

1856ರಲ್ಲೇ ಸಮಾನತೆಯ ಪ್ರಶ್ನೆ ಎತ್ತಿದ್ದ ಧಾರವಾಡದ ಎರ್‍ಲೂ ಬಿನ್ ನಾರಾಯಣ್

- Advertisement -
- Advertisement -

ಮೀಸಲಾತಿಯನ್ನು ಹೆಚ್ಚುಸಿವಂತೆ, ಶೋಷಿತ ಸಮುದಾಯಗಳಿಗೆ ಒದಗುತ್ತಿರುವ ಮೀಸಲಾತಿ ವರ್ಗಕ್ಕೆ ತಮ್ಮನ್ನೂ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಕರ್ನಾಟಕದ ಹಲವು ಜಾತಿ ಸಮುದಾಯಗಳ ಮುಖಂಡರು, ಮಠಾಧೀಶರುಗಳು ಎದ್ದು ನಿಂತಿದ್ದಾರೆ. ಶಾಸನಬದ್ಧವಾಗಿ ನೀಡಲಾಗಿರುವ ಮೀಸಲಾತಿಯ ಕಲ್ಪನೆಯ ಬಗ್ಗೆಯೇ ಒಂದು ಕಾಲದಲ್ಲಿ ವಿರೋಧ ಮಾಡಿದ್ದ ಸಮುದಾಯಗಳು ಕೂಡ ಇಂದು ಮೀಸಲಾತಿ ಹೆಚ್ಚಳಕ್ಕೆ ಹಪಾಹಪಿಸುತ್ತಿರುವುದು ವಿಪರ್ಯಾಸ. ಸಾಮಾಜಿಕ ಸಮಾನತೆಯ ಕಲ್ಪನೆಯನ್ನು ನಿಜ ಅರ್ಥದಲ್ಲಿ ತನ್ನೊಳಗೆ ಬಿಟ್ಟುಕೊಳ್ಳದೆ, ಇಂದಿಗೂ ಭ್ರಾತೃತ್ವ ಭಾವನೆಯನ್ನು ಬೆಳೆಸಿಕೊಳ್ಳದೆ ಹೋಗಿದ್ದರೂ ಮತ್ತು ಈ ಸಮುದಾಯಗಳು, ತಮ್ಮ ಜಾತಿಯ ಜನರ ಒಳಿತನ್ನು ಯೋಚಿಸುತ್ತಿರುವಂತೆ ಬಿಂಬಿಸಿದರೂ, ಒಟ್ಟಾರೆಯಾಗಿ ಇದು ಪ್ರಜಾಪ್ರಭುತ್ವ ನಿರೀಕ್ಷಿಸುವ ಸಮಾನತೆಯ ಕನಸಿನ ಸೋಲು ಎಂಬುದನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ಮುಂದುವರೆಯುವ ಮುಂಚೆ ಸಮಾನತೆಯ ಕೂಗು ಹಾಕಿದ್ದ ಧಾರವಾಡದ ವ್ಯಕ್ತಿಯೊಬ್ಬರನ್ನು ಸ್ಮರಿಸಿಕೊಳ್ಳೋಣ.

1856ರಲ್ಲಿ ಧಾರವಾಡ ಬಾಂಬೆ ಪ್ರೆಸಿಡೆನ್ಸಿಯ ಭಾಗವಾಗಿತ್ತು. ಬ್ರಿಟಿಷ್ ಆಳ್ವಿಕೆಯಲ್ಲಿತ್ತು. ಅದೇ ಇಸವಿಯಲ್ಲಿ ಮಹಾರ್ ಸಮುದಾಯಕ್ಕೆ ಸೇರಿದ್ದ ಎರ್‍ಲೂ ಬಿನ್ ನಾರಾಯಣ್, ಸರ್ಕಾರ ನಡೆಸುತ್ತಿರುವ ಮರಾಠಿ ಶಾಲೆಯಲ್ಲಿ, ತನ್ನ ಜಾತಿಯ ಕಾರಣಕ್ಕಾಗಿ ನೇಮಕಾತಿ ಸಿಗದೆ ಶಿಕ್ಷಣ ನಿರಾಕರಿಸುತ್ತಿದ್ದರ ಬಗ್ಗೆ ಅಂದಿನ ಮೊದಲನೇ ಅಸಿಸ್ಟೆಂಟ್ ಕಲೆಕ್ಟರ್ ಸ್ಟುವರ್ಟ್ ಎಂ ಐ ಗೋರ್ಡೋನ್ ಅವರ ಮುಖಾಂತರ, ಅಂದಿನ ಬಾಂಬೆ ಪ್ರೆಸಿಡೆನ್ಸಿ ಗವರ್ನರ್ ಆಗಿದ್ದ ಲಾರ್ಡ್ ಎಲ್ಫಿನ್‌ಸ್ಟೋನ್ ಅವರಿಗೆ ಪೆಟಿಶನ್ ಕಳುಹಿಸಿದ್ದರು.

ತಾವು ಮುಕ್ತ ಶಿಕ್ಷಣ ನೀತಿಯ ಪ್ರತಿಪಾದಕರು ಮತ್ತು ನೆಲದ ಕಾನೂನು ಪಾಲಕರು ಎಂದು ಬ್ರಿಟಿಷ್ ಆಡಳಿತ ವ್ಯವಸ್ಥೆ ಕರೆದುಕೊಂಡಿದ್ದರೂ, ಭಾರತದ ಮೇಲ್ಜಾತಿಗಳ ಹಿಡಿತದಲ್ಲಿದ್ದ ಶಿಕ್ಷಣವನ್ನು, ಶೋಷಿತರಿಗೂ ವಿಸ್ತರಿಸಲು ಸಾಧ್ಯವಾಗದೆ ಸೋತ ಕಥೆ ಎರ್‍ಲೂ ಬಿನ್ ನಾರಾಯಣ್ ಅವರದ್ದು. ಎರ್‍ಲೂ ಬಿನ್ ನಾರಾಯಣ್ ಅವರ ಹಿನ್ನೆಲೆಯಲ್ಲಿ ಮಹಾರ್ ಮತ್ತು ಇತರ ಶೋಷಿತರನ್ನು ಶಾಲೆಗಳಿಗೆ ಸೇರಿಸಿಕೊಳ್ಳುವ ಪ್ರಶ್ನೆ ಪಡುವಣ-ಬಡಗಣವನ್ನೆಲ್ಲಾ ಸುತ್ತಿ ಕೊನೆಗೆ ಅಲ್ಲಿಗೇ ಬಂದು ನಿಲ್ಲುತ್ತದೆ. ಮೊದಲಿಗೆ ಈ ಪ್ರಶ್ನೆ ಅಂದಿನ ಭಾರತ ಸರ್ಕಾರಕ್ಕೆ (GOI) ತೆರಳುತ್ತದೆ. ಸರ್ಕಾರದ ಗೃಹಸಚಿವಾಲಯದ ಕಾರ್ಯದರ್ಶಿ ಈ ವಿಷಯದಲ್ಲಿ ಯಾವುದೇ ಹೊಸ ನಿರ್ಧಾರಕ್ಕೆ ಮುಂದಾಗದೆ ಯಥಾಸ್ಥಿತಿಯನ್ನು ಮುಂದುವರೆಸುವ ಬಾಂಬೆ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿ “ಬೆಂಗಾಳ ಪ್ರಸೆಡೆನ್ಸಿಯಲ್ಲಿ ಆಗಿದ್ದರೆ ಆ ಹುಡುಗನಿಗೆ ನೇಮಕಾತಿಯನ್ನು ನಿರಾಕರಿಸುತ್ತಿರಲಿಲ್ಲ ಎಂಬ ಅಂಶವನ್ನು ಸೇರಿಸುತ್ತಾರೆ.

ಈ ರೀತಿ ಈ ವಿಷಯದ ಸುತ್ತ ಅಂದಿನ ಭಾರತ ಸರ್ಕಾರದ ಉನ್ನತ ವಲಯಗಳಲ್ಲಿ ಕೆಲವು ವಾದವಿವಾದಗಳು ನಡೆಯುತ್ತವಾದರೂ, ಶೋಷಕ ಮೇಲ್ಜಾತಿಗಳ ಜೊತೆಗೆ ಈ ವಿಷಯದಲ್ಲಿ ಜಟಾಪಟಿಗೆ ಬೀಳುವುದಕ್ಕೆ ಹೆದರಿ, ನೆಲೆಯೂರಿದ್ದ ತಾರತಮ್ಯದ ನಿಯಮಗಳನ್ನು ಮೀರಲು ಸೋತು, ಶಾಲೆಗೆ ಮಹಾರ್ ಜಾತಿಯ ಬಾಲಕನಿಗೆ ನೇಮಕಾತಿ ನೀಡಲು ಬ್ರಿಟಿಷ್ ಸರ್ಕಾರ ನಿರಾಕರಿಸುತ್ತದೆ. ಇದರ ಬಗ್ಗೆ ಬರೆದಿರುವ ಅರವಿಂದ ಗಣಚಾರಿಯವರು ದಾಖಲಿಸುವಂತೆ, ’ನ್ಯಾಯ ಮತ್ತು ಸಮತೆ’ಯ ಬಗ್ಗೆ ಬ್ರಿಟಿಷರು ಎಷ್ಟೇ ಕೊಚ್ಚಿಕೊಂಡರೂ ತಮ್ಮ ರಾಜಕೀಯ ಅನುಕೂಲಕ್ಕಾಗಿ ಯಾವುದೇ ಪರಂಪರೆಯನ್ನು ಮುರಿಯಲು ಅವರು ಸಿದ್ಧರಿರಲಿಲ್ಲ ಎನ್ನುತ್ತಾರೆ.

ಈ ಪ್ರಕರಣ ಕರ್ನಾಟಕ ಮತ್ತು ಡಾ. ಬಿ ಆರ್ ಅಂಬೇಡ್ಕರ ಅವರ ಸಂಬಂಧಕ್ಕೆ ಕಾರಣವಾಗಿತ್ತು ಎಂಬುದು ಕೂಡ ಕುತೂಹಲಕಾರಿ ಸಂಗತಿ. ಎರ್‍ಲೂ ಬಿನ್ ನಾರಾಯಣ್ ಅವರು 1856ರಲ್ಲಿಯೇ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದ ವಿಷಯವನ್ನು 1920ರಲ್ಲಿ ತಿಳಿಯುವ ಡಾ. ಬಿ ಆರ್ ಅಂಬೇಡ್ಕರ್ ಅವರು, 1927ರಲ್ಲಿ ನಾರಾಯಣ್ ಅವರ ಕುಟುಂಬವನ್ನು ಹುಡುಕಿಕೊಂಡು ಧಾರವಾಡಕ್ಕೆ ಬರುತ್ತಾರೆ. ಆದರೆ ನಾರಾಯಣ್ ಅವರ ಕುಟುಂಬದ ಬಗ್ಗೆ ಪತ್ತೆಹಚ್ಚಲು ಸಾಧ್ಯವಾಗದೆ ಹಿಂದಿರುಗುತ್ತಾರೆ.

ನಂತರ 1929ರಲ್ಲಿ ಅಂಬೇಡ್ಕರ್ ಅವರ ಪತ್ನಿ ರಮಾಭಾಯಿ ಅವರ ಅರೋಗ್ಯದ ಸಮಸ್ಯೆಯುಂಟಾದಾಗ, ಪರಿಸರ ಬದಲಾವಣೆಗಾಗಿ ಅಂಬೇಡ್ಕರ್ ಮತ್ತು ರಮಾಭಾಯಿಯವರು ಧಾರವಾಡದಲ್ಲಿ ಕೆಲವು ತಿಂಗಳುಗಳ ಕಾಲ ನೆಲೆಸುತ್ತಾರೆ. ಅಲ್ಲದೆ ಈ ಸಮಯವನ್ನು ದಕ್ಷಿಣ ಭಾರತದಲ್ಲಿ ದಲಿತರ ಸ್ವಾಭಿಮಾನದ ಚಳವಳಿಯನ್ನು ಹುಟ್ಟುಹಾಕಲು ಅಸಮಾನತೆಯ ವಿರುದ್ಧ ಹೋರಾಟ ನಡೆಸಲು ಬಳಸಿಕೊಂಡಿದ್ದು ಈಗ ಇತಿಹಾಸ.

ದಲಿತರ ಸಹಕಾರಿ ಒಕ್ಕೂಟಗಳನ್ನು ನಿರ್ಮಿಸುವುದಕ್ಕೆ, 1929ರಲ್ಲಿ ಕೊಪ್ಪಡಕೇರಿಯಲ್ಲಿ ದಮನಿತ ವರ್ಗದ ಹಾಸ್ಟೆಲ್ ಸ್ಥಾಪಿಸುವುದಕ್ಕೆ ಮತ್ತು ಅಂಬೇಡ್ಕರ್ ತಾವೇ ನಿರ್ವಾಹಕ ಟ್ರಸ್ಟಿಯಾಗಿ ಹಾಸ್ಟೆಲ್ ನಡೆಸುವುದಕ್ಕೆ ಮೇಲಿನ ಘಟನೆ ಕಾರಣವಾಯಿತು. 1931ರಲ್ಲಿ ಮತ್ತೆ ಧಾರವಾಡಕ್ಕೆ ಆಗಮಿಸುವ ರಮಾಭಾಯಿಯವರು ಹಾಸ್ಟೆಲ್ ಆರ್ಥಿಕ ಸಮಸ್ಯೆಯಲ್ಲಿದ್ದನ್ನು ಕಂಡು ತಮ್ಮ ಚಿನ್ನಾಭರಣಗಳನ್ನು ಮಾರಿ ಸಹಾಯ ಮಾಡಿದ್ದು ಕೂಡ ಇತಿಹಾಸದ ಪುಟಗಳಲ್ಲಿ ಮರೆಯಲಾಗದ ಅಧ್ಯಾಯವಾಗಿ ಉಳಿದಿದೆ.

ಹೀಗೆ, ಸಾಮಾಜಿಕ ಸಮಾನತೆಗಾಗಿ, ಘನತೆಗಾಗಿ ದಲಿತರು ಮತ್ತು ಇತರ ಶೋಷಿತ ವರ್ಗ ಹೋರಾಡಿದ್ದಕ್ಕೆ ದೀರ್ಘ ಇತಿಹಾಸವಿದೆ. ಇದನ್ನು ಮಾನದಂಡವಾಗಿರಿಸಿಕೊಂಡೇ ಸಂವಿಧಾನದಲ್ಲಿ ಮೀಸಲಾತಿಯನ್ನು ಶಾಸನಬದ್ಧಗೊಳಿಸಿದ್ದು. ಮೀಸಲಾತಿ ಕೇವಲ ಆರ್ಥಿಕ ಸಮಾನತೆಯನ್ನು ಸರಿಪಡಿಸುವ ವಿಧಾನವಾಗಿರಲಿಲ್ಲ.

ಶತಶತಮಾನಗಳಿಂದ ಅನುಭವಿಸಿದ್ದ ಹಿಂಸೆ, ದೌರ್ಜನ್ಯ, ಶೋಷಣೆಯನ್ನು ತಡೆಯಲು ಮತ್ತು ಸರಿಪಡಿಸುವುದಕ್ಕೋಸ್ಕರ, ಎಲ್ಲ ಸಮುದಾಯಗಳಿಗೆ ಪ್ರತಿನಿಧಿತ್ವವನ್ನು ನೀಡಲು ಮಾಡಿದ ವ್ಯವಸ್ಥೆ ಅದಾಗಿತ್ತು.

ಇದರ ಹೊರತಾಗಿಯೂ ಇಂದಿಗೂ ಶೋಷಿತ ಸಮುದಾಯಗಳಿಗೆ ಅವರಿಗೆ ಸಿಕ್ಕಬೇಕಿದ್ದ ಪ್ರತಿನಿಧಿತ್ವ ದೊರಕಿಲ್ಲ ಎಂಬುದು ಅಂಕಿಅಂಶಗಳಲ್ಲೇ ಅಡಕವಾಗಿದೆ. ಸಣ್ಣ ಪುಟ್ಟ ಸರ್ಕಾರಿ ಕೆಲಸಗಳು ಮತ್ತು ಶಿಕ್ಷಣದಲ್ಲಿ ಒಂದಷ್ಟು ಪ್ರಗತಿಯನ್ನು ಸಾಧಿಸಲು ಶೋಷಿತ ಸಮುದಾಯಗಳಿಗೆ ಸಾಧ್ಯವಾಗಿರುವ ಸಮಯದಲ್ಲಿ, ಮೇಲ್ಜಾತಿಗಳು ಅದರ ವಿರುದ್ಧ ಬಂಡಾಯ ಎದ್ದಿರುವುದು ಪ್ರಜಾಪ್ರಭುತ್ವದ ಮತ್ತು ಈ ದೇಶವನ್ನು ಕಟ್ಟಿ ಬೆಳೆಸಲು ಪ್ರಯತ್ನಿಸಿದ ಧೀಮಂತರಿಗೆ ಮಾಡುವ ಅವಮಾನವಲ್ಲದೇ ಮತ್ತೇನು?

ಇವತ್ತು ಮೇಲ್ಜಾತಿಯ ಮುಖಂಡರು, ಆ ಜಾತಿಗಳ ಮಠಾಧೀಶರುಗಳು ತಮ್ಮ ಸಮುದಾಯದ ಜನರಿಗೆ ಶಿಕ್ಷಣ ನೀಡುವ ಅಗತ್ಯವಿದೆ. ಯಾವ ಶಿಕ್ಷಣ? ವ್ಯವಹಾರಕ್ಕಾಗಿ ದೊಡ್ಡ ದೊಡ್ಡ ಶಿಕ್ಷಣ ಸಂಸ್ಥೆಗಳನ್ನು ತೆರೆದು, ತಮ್ಮ ಜಾತಿಯ ಮಕ್ಕಳಿಗೆ ಹಾಸ್ಟೆಲ್‌ಗಳನ್ನು ತೆರೆದು ನೀಡುವ ಸೌಲಭ್ಯಗಳು ಮಾತ್ರವಲ್ಲ ಆ ಶಿಕ್ಷಣ. ದೇಶದ ಭವಿಷ್ಯಕ್ಕಾಗಿ ಎಲ್ಲ ಸಮುದಾಯಗಳನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಒಂದೇ ಮಟ್ಟಕ್ಕೆ ತರಬೇಕಾದ ಜವಾಬ್ದಾರಿಯ ಶಿಕ್ಷಣ ಅದಾಗಬೇಕಿದೆ. ಶತಮಾನಗಳಿಂದ ಸಾಮಾಜಿಕವಾಗಿ ತಮಗೆ ಸಿಕ್ಕಿರುವ ಸವಲತ್ತುಗಳನ್ನು ನೆನಪಿಸಿಕೊಂಡು, ಎಲ್ಲರನ್ನೂ ಒಳಗೊಳ್ಳುವ ಮತ್ತು ಸಾಮಾಜಿಕ ಸಮಾನತೆಯ ಕಡೆಗೆ ಕೊಂಡೊಯ್ಯಬೇಕಾದ ಅಗತ್ಯದ ಬಗ್ಗೆ ತಮ್ಮ ಸಮುದಾಯದ ಜನರನ್ನು ಸೆನ್ಸಿಟಿವ್ ಮಾಡುವುದಕ್ಕೆ, ತಮ್ಮ ಆಧ್ಯಾತ್ಮವನ್ನು ಈ ಮಠಾಧೀಶರು ಬಳಸಿಕೊಳ್ಳಬೇಕಿತ್ತು. ಆದರೆ ಸ್ವಜಾತಿ ಪ್ರೇಮವನ್ನು ಮೀರದ, ತಮಗಿಂತಲೂ ಶೋಷಿತರ ಪಾಲನ್ನು ಕಬಳಿಸಲು ನಡೆಸಿರುವ ಈ ಮೀಸಲಾತಿ ಹೋರಾಟವನ್ನು ಎಲ್ಲ ಪಾಜ್ಞರೂ ಒಕ್ಕೊರಲಿನಿಂದ ವಿರೋಧಿಸಬೇಕಿದೆ. ಸಾಮಾಜಿಕ ಸಮಾನತೆಯ ಕನಸು ನನಸಾದ ಮೇಲೆ ತಮ್ಮ ಸಮುದಾಯದ ಜನಗಳ ಆರ್ಥಿಕ ಸಮಾನತೆಗೆ ಇಂತಹ ಮೀಸಲಾತಿ ಕೇಳುವ ಸಮಯ ಮುಂದೆ ಬಂದೀತು! ಆದರೆ ಆ ಸಮಾನತೆಗೆ ಶ್ರಮಿಸಬೇಕಿರುವುದು ಹಿಂದಿನಿಂದ ಸವಲತ್ತು ಪಡೆದುಕೊಂಡು ಬಂದಿರುವ ಸಮುದಾಯಗಳೇ.


ಇದನ್ನೂ ಓದಿ: 2ಎ ಮೀಸಲಾತಿಗಾಗಿ ಬೃಹತ್ ರ‍್ಯಾಲಿ: ಪಂಚಮಸಾಲಿ ಸಮುದಾಯದ 10 ಲಕ್ಷ ಜನ ಸೇರುವ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...