Homeಮುಖಪುಟಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ: ಪ್ರಧಾನಿ ಮೋದಿ

- Advertisement -
- Advertisement -

“ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಹಾಗೇ ಮುಂದುವರೆಸಬೇಕು ಎಂದೇನಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ಖಾಸಗೀಕರಣ ಕುರಿತಾದ ವೆಬಿನಾರ್‌ನಲ್ಲಿ ಹೇಳಿದ್ದಾರೆ.

2021ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಹಲವು ಸುಧಾರಣಾ ಕ್ರಮಗಳ ಕುರಿತು ಮಾತನಾಡಿದ ಪ್ರಧಾನಿ, “ವ್ಯಾಪಾರ ವ್ಯವಹಾರಕ್ಕೆ ಬೆಂಬಲ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಆದರೆ ಕೇಂದ್ರ ಸರ್ಕಾರವೇ ನೇರವಾಗಿ ವ್ಯಾಪಾರ ವಹಿವಾಟು ನಡೆಸಬೇಕು, ಕಂಪನಿ ನಡೆಸಬೇಕು ಎನ್ನುವ ಅವಶ್ಯಕತೆ ಇಲ್ಲ. ಈ ಹಿಂದೆ ಕಾಲದ ಅಗತ್ಯಕ್ಕೆ ತಕ್ಕಂತೆ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಸ್ಥಾಪಿಸಲಾಗಿತ್ತು, ಜೊತೆಗೆ ಅವುಗಳನ್ನು ಸ್ಥಾಪಿಸಿದ ಉದ್ದೇಶವೂ ವಿಭಿನ್ನವಾಗಿತ್ತು. 50-60 ವರ್ಷಗಳಷ್ಟು ಹಳೆಯ ಕಾಯ್ದೆಗಳನ್ನು ಈಗ ಸುಧಾರಣೆ ಮಾಡಲು ಸಾಧ್ಯವಿದೆ. ನಾವು ಈಗ ಸುಧಾರಣೆಯನ್ನು ತರುತ್ತಿದ್ದೇವೆ. ಹಾಗಾಗಿ ಸಾರ್ವಜನಿಕರ ಹಣವನ್ನು ಎಚ್ಚರಿಕೆಯಿಂದ ಖರ್ಚು ಮಾಡಲು ನಾವು ಆದ್ಯತೆ ನೀಡಿದ್ದೇವೆ” ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರಿ ಸ್ವಾಮ್ಯದ 4 ಪ್ರಮುಖ ಕ್ಷೇತ್ರಗಳ ಕಂಪನಿಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿರುವ ಸುಮಾರು 100 ಕಂಪನಿಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ ಎಂಬುದಾಗಿ ಲೈವ್ ಮಿಂಟ್ ವರದಿ ಮಾಡಿದೆ.

“ಹಲವು ವರ್ಷಗಳಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಕೇಂದ್ರ ಸರ್ಕಾರ ನಡೆಸಿಕೊಂಡು ಬಂದಿದೆ ಎಂಬ ಮಾತ್ರಕ್ಕೆ ನಾವು ಅದನ್ನು ಮುಂದುವರೆಸಬೇಕು ಎಂದೇನಿಲ್ಲ. ಸಮಾಜದ ಕಲ್ಯಾಣ ಮತ್ತು ದೇಶದ ಜನತೆಗೆ ಸಂಬಂಧಿಸಿದ ನೀತಿ ನಿಯಮಗಳ ಮೇಲೆ ಮಾತ್ರ ಸರ್ಕಾರದ ಗಮನ ಇರಬೇಕು. ಪ್ರಸ್ತುತ ಇರುವ ವ್ಯವಸ್ಥೆಯಲ್ಲಿ ಅಧಿಕಾರಿಗಳು ತಮ್ಮ ಸಾಮರ್ಥ್ಯವನ್ನು ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ವ್ಯವಹಾರ ಮಾಡಲು ವಿನಿಯೋಗಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಜ್ಞಾನಿಗಳು, ಶಿಕ್ಷಣತಜ್ಞರ ಆಕ್ಷೇಪ: ವೆಬಿನಾರ್ ನಿರ್ಬಂಧ ಹಿಂಪಡೆದ ಕೇಂದ್ರ ಸರ್ಕಾರ

“ಹಲವು ಸರ್ಕಾರಿ ಸ್ವಾಮ್ಯದ ಕಂಪನಿಗಳು ನಷ್ಟದಲ್ಲಿವೆ. ಹಲವು ಕಂಪನಿಗಳಿಗೆ ಜನರ ಹಣದಿಂದ ಬೆಂಬಲ ನೀಡಬೇಕಾದ ಸ್ಥಿತಿ ಇದೆ. ಹಲವು ವರ್ಷಗಳ ಹಿಂದೆ ಯಾರದೋ ಪ್ರಿಯ ಯೋಜನೆಯಾದ ಈ ಕಂಪನಿಗಳನ್ನು ಜನರ ಹಣದಿಂದ ನಡೆಸಬೇಕಾದ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ವ್ಯವಹಾರ ನಡೆಸಲು ಬಯಸುವುದಿಲ್ಲ. ಸರ್ಕಾರ ಖಾಸಗೀಕರಣ ಮಾಡಿದಾಗ ಖಾಸಗಿ ಕಂಪನಿಗಳು ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಹೂಡಿಕೆ ಮಾಡುತ್ತವೆ. ಖಾಸಗಿ ಕಂಪನಿಗಳು ಬಂಡವಾಳವನ್ನು ತರುತ್ತವೆ ಮತ್ತು ವಿಶ್ವದರ್ಜೆಯ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತವೆ ಮತ್ತು ಹೆಚ್ಚು ಹೆಚ್ಚು ಉದ್ಯೋಗವನ್ನು ಒದಗಿಸುತ್ತವೆ” ಎಂದು ಸ್ಪಷ್ಟನೆ ನೀಡಿದರು.

ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ 100 ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಮೂಲಕ 2.5 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿ ಹೊಂದಿದೆ. ಖಾಸಗೀಕರಣ ಪ್ರಕ್ರಿಯೆಯಿಂದ ಸಂಗ್ರಹವಾಗುವ ಹಣವನ್ನು ಗ್ರಾಮೀಣ ಭಾಗದಲ್ಲಿ ರಸ್ತೆ ಅಭಿವೃದ್ಧಿಗೆ, ಸ್ವಚ್ಛ ಕುಡಿಯುವ ನೀರು ಪೂರೈಕೆಗೆ ಮತ್ತು ಎಲ್ಲರಿಗೂ ಸೂರು ಕಲ್ಪಿಸಿಕೊಡುವ ಯೋಜನೆಗಳಲ್ಲಿ ವಿನಿಯೋಗಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಈ ನಿರ್ಧಾರಗಳ ವಿರುದ್ಧ ಮೊದಲಿನಿಂದಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರಿ ಸ್ವಾಮ್ಯದಲ್ಲಿರುವ ಮತ್ತು ಹೆಚ್ಚು ಲಾಭ ಗಳಿಸುತ್ತಿರುವ ಬಹುತೇಕ ಉದ್ಯಮಗಳನ್ನು ಖಾಸಗಿಯವರಿಗೆ ಮಾರಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಅಂದರೆ ಕೇವಲ ಅಂಬಾನಿ-ಅದಾನಿಗಾಗಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇತ್ತೀಚೆಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದು “ನಾವಿಬ್ಬರು-ನಮಗಿಬ್ಬರು” ಎನ್ನುವ ಸರ್ಕಾರ ಎಂದು ಛೇಡಿಸಿದ್ದರು.

ಇತ್ತೀಚೆಗೆ ವಿಮಾನ ನಿಲ್ದಾಣ ಮತ್ತು ರೈಲುಗಳನ್ನು ಖಾಸಗೀಕರಣಗೊಳಿಸಲಾಗಿತ್ತು. ಇದೀಗ ಕೇಂದ್ರ ಸರ್ಕಾರದಿಂದ ಮತ್ತೊಂದು ಅಚ್ಚರಿಯ ಸುದ್ದಿ ಹೊರಬಿದ್ದಿದೆ.


ಇದನ್ನೂ ಓದಿ: ‘ಮೋದಿ ಉದ್ಯೋಗ ಕೊಡಿ, ಇಲ್ಲ ಕುರ್ಚಿ ಬಿಡಿ’ ವಿಶ್ವದಾದ್ಯಂತ ಟ್ವಿಟರ್ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...