Homeಚಳವಳಿದಲಿತ ಕಾರ್ಮಿಕ ಮುಖಂಡ ಶಿವಕುಮಾರ್‌ಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ವೈದ್ಯರ ವರದಿ

ದಲಿತ ಕಾರ್ಮಿಕ ಮುಖಂಡ ಶಿವಕುಮಾರ್‌ಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ವೈದ್ಯರ ವರದಿ

- Advertisement -
- Advertisement -

ಜನವರಿ 16 ರಂದು ದೆಹಲಿಯ ಸಿಂಘು ಗಡಿ ಪ್ರತಿಭಟನಾ ಸ್ಥಳದಿಂದ ಬಂಧಿಸಲ್ಪಟ್ಟ 24 ವರ್ಷದ ದಲಿತ ಕಾರ್ಮಿಕ ಸಂಘಟಕರಾದ ಶಿವಕುಮಾರ್ ಅವರಿಗೆ ಹರಿಯಾಣ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ ಎಂದು ಸರ್ಕಾರಿ ವೈದ್ಯರ ತಂಡ ಹೇಳಿರುವುದಾಗಿ ಆರ್ಟಿಕಲ್ 14 ವರದಿ ಮಾಡಿದೆ.

ಈ ಕುರಿತು ಸಾಕ್ಷ್ಯ ನೀಡಿರುವ ವೈದ್ಯರು, “ಶಿವಕುಮಾರ್ ದೇಹದಲ್ಲಿ ಅನೇಕ ಗಾಯಗಳಾಗಿವೆ. ಅವರ ಕಾಲ್ಬೆರಳುಗಳು ಕಿತ್ತುಹೋಗಿವೆ. ಪೊಲೀಸ್ ಕಸ್ಟಡಿಯಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳಕ್ಕೊಳಗಾಗಿದ್ದಾರೆ” ಎಂದು ಚಂಡೀಗಡದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ನಾಲ್ಕು ಪುಟಗಳ ವರದಿಯಲ್ಲಿ ತಿಳಿಸಲಾಗಿದೆ.

ಈ ವರದಿಯನ್ನು ಫೆಬ್ರವರಿ 23 ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಸೋನಿಪತ್ ಜಿಲ್ಲಾ ಜೈಲಿನ ಅಧೀಕ್ಷಕರು ಸಲ್ಲಿಸಿದ್ದಾರೆ. ಅಲ್ಲಿ ಶಿವಕುಮಾರ್‌ರನ್ನು 23 ದಿನಗಳಿಂದ ಜೈಲಿನಲ್ಲಿರಿಸಲಾಗಿದೆ.

ಶಿವಕುಮಾರ್‌ರವರ ಅಧಿಕೃತ ಬಂಧನಕ್ಕೂ ಮುನ್ನ ಒಂದು ವಾರದ ಮೊದಲೇ ಆತನನ್ನು ಪೊಲೀಸರು ಕರೆದೊಯ್ದಿದ್ದಾರೆ ಎಂದು ಅವರ ಕುಟುಂಬ ಮತ್ತು ವಕೀಲರು ಆರೋಪಿಸಿದ್ದಾರೆ. ಇದು ನಿಜವಾಗಿದ್ದರೆ, ಅವರು ಏಳು ದಿನಗಳ ಕಾಲ ಅಕ್ರಮ ಬಂಧನದಲ್ಲಿದ್ದರು ಆರ್ಟಿಕಲ್ 14 ಆತಂಕ ವ್ಯಕ್ತಪಡಿಸಿದೆ. ಶಿವಕುಮಾರ್ ಅವರ ದೇಹದ ಮೇಲಿನ ಎಲ್ಲಾ ಗಾಯಗಳು “ಎರಡು ವಾರಗಳಿಗಿಂತಲೂ ಹಳೆಯವು ಮತ್ತು ಮೊಂಡಾದ ವಸ್ತು / ಆಯುಧದಿಂದ ಉಂಟಾಗಿವೆ” ಎಂದು ವೈದ್ಯಕೀಯ ವರದಿ ಹೇಳಿದೆ.

ಮನೋವೈದ್ಯರನ್ನು ಒಳಗೊಂಡ ವೈದ್ಯರ ತಂಡವು ಶಿವಕುಮಾರ್ ಅನುಭವಿಸಿದ “ಕ್ರೂರತೆಯ ಫ್ಲ್ಯಾಷ್‌ಬ್ಯಾಕ್” ನಿಂದ ನಂತರದ ಆಘಾತಕಾರಿ ಒತ್ತಡದ ಕಾಯಿಲೆಯ ಲಕ್ಷಣಗಳನ್ನು ದಾಖಲಿಸಿದೆ. ಅವರು “ದುಃಖ ಮತ್ತು ತೊಂದರೆಗೀಡಾಗಿದ್ದಾರೆ” ಎಂದು ವೈದ್ಯರು ಗಮನಿಸಿದರು ಮತ್ತು ಪರೀಕ್ಷಿಸುವಾಗ ಅಳುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ‘ಪೊಲೀಸ್‌ ಠಾಣೆಯಲ್ಲಿ ತನಗೆ ಥಳಿಸಲಾಗಿದೆ’- ಹೈಕೋರ್ಟ್‌ನಲ್ಲಿ ಹೋರಾಟಗಾರ್ತಿ ನೊದೀಪ್

ಅನೇಕ ತರಚಿದ ಗಾಯಗಳು, ತೀವ್ರವಾದ ಗಾಯಗಳು ಮತ್ತು ಆಳವಾದ ಮಾನಸಿಕ ಯಾತನೆಗಳ ಉದಾಹರಣೆಗಳನ್ನು ಉಲ್ಲೇಖಿಸಿ, ಅವರ ವಕೀಲರು ಫೆಬ್ರವರಿ 24 ರಂದು ಶಿವಕುಮಾರ್ ಅವರನ್ನು ಸ್ಥಳಾಂತರಿಸಲು ಹರಿಯಾಣ ಸರ್ಕಾರಕ್ಕೆ ಆದೇಶ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅವರನ್ನು ಅವರ ತಂದೆ ಅಥವಾ ವಕೀಲರು ಸಹ ಭೇಟಿಯಾಗಲು ಹರಿಯಾಣ ಪೊಲೀಸರು ಅನುಮತಿಸಿಲ್ಲ, ಅವರಿಗೆ ತಕ್ಷಣ ಚಿಕಿತ್ಸೆಯ ಅಗತ್ಯವಿದೆ ಎಂದು ಕುಟುಂಬ ಹೇಳಿದೆ.

ಶಿವಕುಮಾರ್‌ರವರ ಸಹ ಕಾರ್ಯಕರ್ತೆ ದಲಿತ ನೊದೀಪ್ ಕೌರ್ (25) ಅವರನ್ನು ಬಂಧಿಸಿದಾಗ ಎಫ್‌ಐಆರ್‌ನಲ್ಲಿ ಶಿವಕುಮಾರ್‌ರವರನ್ನು ಹೆಸರಿಸಿಲ್ಲ. ಆದರೆ ನೊದೀಪ್ ಕೌರ್ ಬಂಧನದ ನಂತರ ಅವರ ಮೇಲೆ ಜನವರಿ 12 ರಂದು ಎಫ್ಐಆರ್ ಸಲ್ಲಿಸಿದ್ದು, ಕೊಲೆ ಯತ್ನ ಮತ್ತು ಸುಲಿಗೆ ಸೇರಿದಂತೆ 11 ಅಪರಾಧಗಳನ್ನು ಪಟ್ಟಿ ಮಾಡಿದೆ. ಕೌರ್ ಅವರ ಕುಟುಂಬವೂ ಸಹ ಹರಿಯಾಣ ಪೊಲೀಸರು ಆಕೆಗೆ ಚಿತ್ರಹಿಂಸೆ ಮತ್ತು ಲೈಂಗಿಕ ದೌರ್ಜನ್ಯ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದೆ. ಆರೋಪಗಳನ್ನು ಪೊಲೀಸರು ನಿರಾಕರಿಸಿದ್ದಾರೆ.

ಭೂಹೀನ ದಲಿತ ಕೃಷಿ ಕೆಲಸಗಾರ ಮತ್ತು ಅರೆಕಾಲಿಕ ಭದ್ರತಾ ಸಿಬ್ಬಂದಿಯ ಮಗ ಶಿವಕುಮಾರ್ ಅವರು 2016 ರಲ್ಲಿ ಸೋನಿಪತ್‌ನಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ-ಉಪಕರಣಗಳನ್ನು ನಿರ್ವಹಿಸುವ ತರಬೇತಿಯಲ್ಲಿ ಪದವಿ ಪಡೆದರು. ಕುಂಡ್ಲಿಯಲ್ಲಿ ಎಲ್‌ಇಡಿ ದೀಪಗಳು ಮತ್ತು ವಾಹನ ಭಾಗಗಳನ್ನು ತಯಾರಿಸುವ ಕಾರ್ಖಾನೆಗಳಲ್ಲಿ ಎರಡು ವರ್ಷ ಕೆಲಸ ಮಾಡಿದರು. 2018 ರಲ್ಲಿ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ಸಂಘಟನೆ ಸೇರಿದರು.

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು. ಆ ನಂತರ ಅವರನ್ನು ಬಂಧಿಸಲಾಗಿತ್ತು.

ಎಫ್‌ಐಆರ್‌ಗಳಲ್ಲಿ ಶಿವ ಕುಮಾರ್‌ ಹೆಸರಿಲ್ಲದಿದ್ದರೂ ಸಹ ನೊದೀಪ್ ಕೌರ್‌ ಬಂಧಿಸಿದ ನಾಲ್ಕು ದಿನಗಳ ನಂತರ ಪೊಲೀಸರು ಕುಂಡ್ಲಿಯ ಪಕ್ಕದ ಸಿಂಘು ಗಡಿಯಿಂದ ಶಿವಕುಮಾರ್‌ರವರನ್ನು ಸಹ ಬಂಧಿಸಿದ್ದಾರೆ.


ಇದನ್ನೂ ಓದಿ; ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...