Homeಮುಖಪುಟ’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ' - ಕೇಂದ್ರ ಸರ್ಕಾರ ಹೇಳಿಕೆ

’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಕೇಂದ್ರ ಸರ್ಕಾರ ಹೇಳಿಕೆ

- Advertisement -
- Advertisement -

’ಒಂದೇ ಲಿಂಗದ ದಂಪತಿಗಳು ತಮ್ಮ ಮದುವೆಯನ್ನು (ಸಲಿಂಗ ವಿವಾಹ) ಮೂಲಭೂತ ಹಕ್ಕು ಎಂದು ಕಾನೂನು ಮಾನ್ಯತೆ ಪಡೆಯಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ದೆಹಲಿ ಹೈಕೋರ್ಟ್ ಮುಂದೆ ಅಫಿಡವಿಟ್ ಸಲ್ಲಿಸಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಭಾರತದಲ್ಲಿ ವಿವಾಹವು “ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬಹುದೇ ಎಂಬ ಪ್ರಶ್ನೆಯನ್ನು ಶಾಸಕಾಂಗಕ್ಕೆ ಬಿಡಬೇಕು ಎಂದು ಅದು ಪ್ರತಿಪಾದಿಸಿದೆ.

“ಒಂದೇ ಲಿಂಗದ ಇಬ್ಬರು ವ್ಯಕ್ತಿಗಳ ನಡುವಿನ ವಿವಾಹದ ಅಂಗೀಕಾರವನ್ನು ಯಾವುದೇ ಕ್ರೋಡೀಕರಿಸದ ವೈಯಕ್ತಿಕ ಕಾನೂನುಗಳು ಅಥವಾ ಯಾವುದೇ ಕ್ರೋಡೀಕರಿಸಿದ ಶಾಸನಬದ್ಧ ಕಾನೂನುಗಳಲ್ಲಿ ಗುರುತಿಸಲಾಗುವುದಿಲ್ಲ ಅಥವಾ ಸ್ವೀಕರಿಸಲಾಗುವುದಿಲ್ಲ” ಎಂದು ಅದು ಹೇಳಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

“ಅಂತಹ ಸಂಬಂಧವನ್ನು ವಿವಾಹದ ಕಾನೂನು ಮಾನ್ಯತೆಯ ಮೂಲಕ ಔಪಚಾರಿಕಗೊಳಿಸಲು ಅನುಮತಿಸಲಾಗಿದೆಯೇ ಎಂಬ ಪ್ರಶ್ನೆಯು ಮೂಲಭೂತವಾಗಿ ಶಾಸಕಾಂಗವು ನಿರ್ಧರಿಸಬೇಕಾದ ಪ್ರಶ್ನೆಯಾಗಿದೆ; ಮತ್ತು ಇದು ಎಂದಿಗೂ ನ್ಯಾಯಾಂಗ ತೀರ್ಪಿನ ವಿಷಯವಾಗಿರಬಾರದು” ಎಂದು ಕೇಂದ್ರ ಹೇಳಿದೆ.

ಹಿಂದೂ ವಿವಾಹ ಕಾಯ್ದೆ 1955 ರ ಅಡಿಯಲ್ಲಿ ಸಲಿಂಗಿ ಸಮುದಾಯಕ್ಕೆ ಮದುವೆ ಹಕ್ಕು ಕೋರಿ ಕಳೆದ ವರ್ಷ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆಗಳನ್ನು ನೀಡಲಾಗಿದೆ.

ಈ ಮನವಿಯನ್ನು ಎಲ್ಜಿಬಿಟಿಕ್ಯೂ+ (ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್, ಕ್ವೀರ್ ಮತ್ತು ಇತರರು) ಸಮುದಾಯದ ನಾಲ್ಕು ಸದಸ್ಯರು ಸಲ್ಲಿಸಿದ್ದಾರೆ. ಭದ್ರತೆ ಮತ್ತು ವಿದೇಶಾಂಗ ನೀತಿ ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ, ತಮಿಳುನಾಡು ಮೂಲದ ಇಂಟರ್‌ಸೆಕ್ಸ್ ಕಾರ್ಯಕರ್ತ ಗೋಪಿ ಶಂಕರ್ ಎಂ., 2016 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ, ಭಾರತದ ಸಮಕಾಲೀನ ಮತ್ತು ಐತಿಹಾಸಿಕ ಸಲಿಂಗಿಗಳ ಜೀವನದ ಸಖಿ ಸಾಮೂಹಿಕ ಜರ್ನಲ್‌ನ ಸ್ಥಾಪಕ ಸದಸ್ಯರಾದ ಗೀತಿ ಥಡಾನಿ ಮತ್ತು ಟ್ರಾನ್ಸ್‌ಜೆಂಡರ್ ಕಾರ್ಯಕರ್ತೆ ಜಿ.ಊರ್ವಶಿ ಸಲ್ಲಿಸಿದ್ದಾರೆ.

ಕೇಂದ್ರವು, “ಆರ್ಟಿಕಲ್ 21 ರ ಅಡಿಯಲ್ಲಿರುವ ಮೂಲಭೂತ ಹಕ್ಕು ಕಾನೂನಿನಿಂದ ಸ್ಥಾಪಿಸಲ್ಪಟ್ಟ ಕಾರ್ಯವಿಧಾನಕ್ಕೆ ಒಳಪಟ್ಟಿರುತ್ತದೆ ಮತ್ತು ಅದನ್ನು ಒಂದೇ ರೀತಿಯ ಲಿಂಗದವರ ವಿವಾಹಗಳಿಗೆ ವಿಸ್ತರಿಸಿ, ಮೂಲಭೂತ ಹಕ್ಕು ಎನ್ನಲು ಸಾಧ್ಯವಿಲ್ಲ” ಎಂದಿದೆ.

ಭಾರತದಲ್ಲಿ, “ವಿವಾಹವು ಕೇವಲ ಇಬ್ಬರು ವ್ಯಕ್ತಿಗಳ ಸಂಗಮದ ವಿಷಯವಲ್ಲ, ಆದರೆ ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಗಂಭೀರ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ವಾದಿಸಲಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಗೌಪ್ಯತೆಯ ಹಕ್ಕಿನಲ್ಲಿ ಮದುವೆಯಾಗಲು ಮೂಲಭೂತ ಹಕ್ಕಿದೆ ಎಂಬ ರ್ಜಿದಾರರ ಸಲ್ಲಿಕೆಯನ್ನು ನಿರಾಕರಿಸುವ ಕೇಂದ್ರ ಸರ್ಕಾರ, “ಮದುವೆಯಾಗುವುದು ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿರುವ ಸಂಬಂಧವನ್ನು ಪ್ರವೇಶಿಸಿದಂತೆ” ಎಂದು ಪ್ರತಿಪಾದಿಸಿದೆ.

ಸಂಗಾತಿಗಳಾಗಿ ಒಟ್ಟಿಗೆ ವಾಸಿಸುವುದು (ಲಿವಿಂಗ್ ಟುಗೆದರ್) ಮತ್ತು ಅದೇ ಲಿಂಗದ ವ್ಯಕ್ತಿಗಳಿಂದ ಲೈಂಗಿಕ ಸಂಬಂಧವನ್ನು ಹೊಂದಿರುವುದನ್ನು (ಈಗ ನಿರ್ಣಯಿಸಲ್ಪಟ್ಟು ಮಾನ್ಯತೆ ಪಡೆದಿದೆ) ಭಾರತೀಯ ಕುಟುಂಬ ಘಟಕದ ಗಂಡ, ಹೆಂಡತಿ ಮತ್ತು ಮಕ್ಕಳ ಪರಿಕಲ್ಪನೆಯೊಂದಿಗೆ ಹೋಲಿಸಲಾಗುವುದಿಲ್ಲ. ಈ ಪರಿಕಲ್ಪನೆಯು, ಜೈವಿಕ ಮನುಷ್ಯನನ್ನು ’ಗಂಡ’, ಜೈವಿಕ ಮಹಿಳೆಯನ್ನು ’ಹೆಂಡತಿ’ ಮತ್ತು ಇಬ್ಬರ ನಡುವಿನ ಸಂಗದಿಂದ ಹುಟ್ಟಿದವರನ್ನು ಮಕ್ಕಳು ಎನ್ನುತ್ತದೆ” ಎಂದು ಅಫಿಡ್‌ವಿಟ್ ಪ್ರತಿಪಾದಿಸಿದೆ.

ಆದ್ದರಿಂದ, “ವಿರುದ್ಧ ಲಿಂಗದ ವ್ಯಕ್ತಿಗಳಿಗೆ ಮಾತ್ರ ವಿವಾಹದ ಕಾನೂನು ಮಾನ್ಯತೆಯನ್ನು ಸೀಮಿತಗೊಳಿಸುವಲ್ಲಿ ಕಾನೂನುಬದ್ಧವಾದ ಹಿತಾಸಕ್ತಿ ಇದೆ” ಮತ್ತು “ಭಾರತೀಯ ನೀತಿಶಾಸ್ತ್ರದ ಆಧಾರದ ಮೇಲೆ ಅಂತಹ ಸಾಮಾಜಿಕ ನೈತಿಕತೆ ಮತ್ತು ಸಾರ್ವಜನಿಕ ಸ್ವೀಕಾರವನ್ನು ನಿರ್ಣಯಿಸುವುದು ಮತ್ತು ಜಾರಿಗೊಳಿಸುವುದು ಶಾಸಕಾಂಗಕ್ಕೆ ಸೇರಿದೆ” ಎಂದು ಕೇಂದ್ರ ವಾದಿಸಿದೆ.

ಕಳೆದ ವರ್ಷದಿಂದ ದೆಹಲಿ ಹೈಕೋರ್ಟ್ ಸಲಿಂಗ ಮದುವೆಗಳಿಗೆ ಮಾನ್ಯತೆ ನೀಡುವಂತೆ ಕೋರಿದ ಅರ್ಜಿಗಳನ್ನು ಆಲಿಸುತ್ತಿದೆ. ಅರ್ಜಿಗಳು ಮುಂದಿನ ಏಪ್ರಿಲ್‌ನಲ್ಲಿ ವಿಚಾರಣೆಗೆ ಬರಲಿವೆ.

2018ರಲ್ಲಿ ಸಲಿಂಗಕಾಮವನ್ನು ಸುಪ್ರೀಂ ಕೋರ್ಟ್ ಅಪರಾಧವಲ್ಲವೆಂದು ನಿರ್ಣಯಿಸಿ ಮಾನ್ಯತೆ ಮಾಡಿದೆ ಎಂಬುದನ್ನು ಇಲ್ಲಿ ಗಮನಿಸಬೇಕು.


ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...