Homeಮುಖಪುಟ’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ' - ಕೇಂದ್ರ ಸರ್ಕಾರ ಹೇಳಿಕೆ

’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಕೇಂದ್ರ ಸರ್ಕಾರ ಹೇಳಿಕೆ

- Advertisement -
- Advertisement -

’ಒಂದೇ ಲಿಂಗದ ದಂಪತಿಗಳು ತಮ್ಮ ಮದುವೆಯನ್ನು (ಸಲಿಂಗ ವಿವಾಹ) ಮೂಲಭೂತ ಹಕ್ಕು ಎಂದು ಕಾನೂನು ಮಾನ್ಯತೆ ಪಡೆಯಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರ ಗುರುವಾರ ದೆಹಲಿ ಹೈಕೋರ್ಟ್ ಮುಂದೆ ಅಫಿಡವಿಟ್ ಸಲ್ಲಿಸಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ. ಭಾರತದಲ್ಲಿ ವಿವಾಹವು “ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬಹುದೇ ಎಂಬ ಪ್ರಶ್ನೆಯನ್ನು ಶಾಸಕಾಂಗಕ್ಕೆ ಬಿಡಬೇಕು ಎಂದು ಅದು ಪ್ರತಿಪಾದಿಸಿದೆ.

“ಒಂದೇ ಲಿಂಗದ ಇಬ್ಬರು ವ್ಯಕ್ತಿಗಳ ನಡುವಿನ ವಿವಾಹದ ಅಂಗೀಕಾರವನ್ನು ಯಾವುದೇ ಕ್ರೋಡೀಕರಿಸದ ವೈಯಕ್ತಿಕ ಕಾನೂನುಗಳು ಅಥವಾ ಯಾವುದೇ ಕ್ರೋಡೀಕರಿಸಿದ ಶಾಸನಬದ್ಧ ಕಾನೂನುಗಳಲ್ಲಿ ಗುರುತಿಸಲಾಗುವುದಿಲ್ಲ ಅಥವಾ ಸ್ವೀಕರಿಸಲಾಗುವುದಿಲ್ಲ” ಎಂದು ಅದು ಹೇಳಿದೆ.

ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

“ಅಂತಹ ಸಂಬಂಧವನ್ನು ವಿವಾಹದ ಕಾನೂನು ಮಾನ್ಯತೆಯ ಮೂಲಕ ಔಪಚಾರಿಕಗೊಳಿಸಲು ಅನುಮತಿಸಲಾಗಿದೆಯೇ ಎಂಬ ಪ್ರಶ್ನೆಯು ಮೂಲಭೂತವಾಗಿ ಶಾಸಕಾಂಗವು ನಿರ್ಧರಿಸಬೇಕಾದ ಪ್ರಶ್ನೆಯಾಗಿದೆ; ಮತ್ತು ಇದು ಎಂದಿಗೂ ನ್ಯಾಯಾಂಗ ತೀರ್ಪಿನ ವಿಷಯವಾಗಿರಬಾರದು” ಎಂದು ಕೇಂದ್ರ ಹೇಳಿದೆ.

ಹಿಂದೂ ವಿವಾಹ ಕಾಯ್ದೆ 1955 ರ ಅಡಿಯಲ್ಲಿ ಸಲಿಂಗಿ ಸಮುದಾಯಕ್ಕೆ ಮದುವೆ ಹಕ್ಕು ಕೋರಿ ಕಳೆದ ವರ್ಷ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆಗಳನ್ನು ನೀಡಲಾಗಿದೆ.

ಈ ಮನವಿಯನ್ನು ಎಲ್ಜಿಬಿಟಿಕ್ಯೂ+ (ಸಲಿಂಗಿ, ದ್ವಿಲಿಂಗಿ, ಟ್ರಾನ್ಸ್‌ಜೆಂಡರ್, ಕ್ವೀರ್ ಮತ್ತು ಇತರರು) ಸಮುದಾಯದ ನಾಲ್ಕು ಸದಸ್ಯರು ಸಲ್ಲಿಸಿದ್ದಾರೆ. ಭದ್ರತೆ ಮತ್ತು ವಿದೇಶಾಂಗ ನೀತಿ ನಿರೂಪಕ ಅಭಿಜಿತ್ ಅಯ್ಯರ್ ಮಿತ್ರ, ತಮಿಳುನಾಡು ಮೂಲದ ಇಂಟರ್‌ಸೆಕ್ಸ್ ಕಾರ್ಯಕರ್ತ ಗೋಪಿ ಶಂಕರ್ ಎಂ., 2016 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ, ಭಾರತದ ಸಮಕಾಲೀನ ಮತ್ತು ಐತಿಹಾಸಿಕ ಸಲಿಂಗಿಗಳ ಜೀವನದ ಸಖಿ ಸಾಮೂಹಿಕ ಜರ್ನಲ್‌ನ ಸ್ಥಾಪಕ ಸದಸ್ಯರಾದ ಗೀತಿ ಥಡಾನಿ ಮತ್ತು ಟ್ರಾನ್ಸ್‌ಜೆಂಡರ್ ಕಾರ್ಯಕರ್ತೆ ಜಿ.ಊರ್ವಶಿ ಸಲ್ಲಿಸಿದ್ದಾರೆ.

ಕೇಂದ್ರವು, “ಆರ್ಟಿಕಲ್ 21 ರ ಅಡಿಯಲ್ಲಿರುವ ಮೂಲಭೂತ ಹಕ್ಕು ಕಾನೂನಿನಿಂದ ಸ್ಥಾಪಿಸಲ್ಪಟ್ಟ ಕಾರ್ಯವಿಧಾನಕ್ಕೆ ಒಳಪಟ್ಟಿರುತ್ತದೆ ಮತ್ತು ಅದನ್ನು ಒಂದೇ ರೀತಿಯ ಲಿಂಗದವರ ವಿವಾಹಗಳಿಗೆ ವಿಸ್ತರಿಸಿ, ಮೂಲಭೂತ ಹಕ್ಕು ಎನ್ನಲು ಸಾಧ್ಯವಿಲ್ಲ” ಎಂದಿದೆ.

ಭಾರತದಲ್ಲಿ, “ವಿವಾಹವು ಕೇವಲ ಇಬ್ಬರು ವ್ಯಕ್ತಿಗಳ ಸಂಗಮದ ವಿಷಯವಲ್ಲ, ಆದರೆ ಜೈವಿಕ ಪುರುಷ ಮತ್ತು ಜೈವಿಕ ಮಹಿಳೆಯ ನಡುವಿನ ಗಂಭೀರ ಸಂಬಂಧ” ಎಂದು ಅಫಿಡ್‌ವಿಟ್‌ನಲ್ಲಿ ವಾದಿಸಲಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಗೌಪ್ಯತೆಯ ಹಕ್ಕಿನಲ್ಲಿ ಮದುವೆಯಾಗಲು ಮೂಲಭೂತ ಹಕ್ಕಿದೆ ಎಂಬ ರ್ಜಿದಾರರ ಸಲ್ಲಿಕೆಯನ್ನು ನಿರಾಕರಿಸುವ ಕೇಂದ್ರ ಸರ್ಕಾರ, “ಮದುವೆಯಾಗುವುದು ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿರುವ ಸಂಬಂಧವನ್ನು ಪ್ರವೇಶಿಸಿದಂತೆ” ಎಂದು ಪ್ರತಿಪಾದಿಸಿದೆ.

ಸಂಗಾತಿಗಳಾಗಿ ಒಟ್ಟಿಗೆ ವಾಸಿಸುವುದು (ಲಿವಿಂಗ್ ಟುಗೆದರ್) ಮತ್ತು ಅದೇ ಲಿಂಗದ ವ್ಯಕ್ತಿಗಳಿಂದ ಲೈಂಗಿಕ ಸಂಬಂಧವನ್ನು ಹೊಂದಿರುವುದನ್ನು (ಈಗ ನಿರ್ಣಯಿಸಲ್ಪಟ್ಟು ಮಾನ್ಯತೆ ಪಡೆದಿದೆ) ಭಾರತೀಯ ಕುಟುಂಬ ಘಟಕದ ಗಂಡ, ಹೆಂಡತಿ ಮತ್ತು ಮಕ್ಕಳ ಪರಿಕಲ್ಪನೆಯೊಂದಿಗೆ ಹೋಲಿಸಲಾಗುವುದಿಲ್ಲ. ಈ ಪರಿಕಲ್ಪನೆಯು, ಜೈವಿಕ ಮನುಷ್ಯನನ್ನು ’ಗಂಡ’, ಜೈವಿಕ ಮಹಿಳೆಯನ್ನು ’ಹೆಂಡತಿ’ ಮತ್ತು ಇಬ್ಬರ ನಡುವಿನ ಸಂಗದಿಂದ ಹುಟ್ಟಿದವರನ್ನು ಮಕ್ಕಳು ಎನ್ನುತ್ತದೆ” ಎಂದು ಅಫಿಡ್‌ವಿಟ್ ಪ್ರತಿಪಾದಿಸಿದೆ.

ಆದ್ದರಿಂದ, “ವಿರುದ್ಧ ಲಿಂಗದ ವ್ಯಕ್ತಿಗಳಿಗೆ ಮಾತ್ರ ವಿವಾಹದ ಕಾನೂನು ಮಾನ್ಯತೆಯನ್ನು ಸೀಮಿತಗೊಳಿಸುವಲ್ಲಿ ಕಾನೂನುಬದ್ಧವಾದ ಹಿತಾಸಕ್ತಿ ಇದೆ” ಮತ್ತು “ಭಾರತೀಯ ನೀತಿಶಾಸ್ತ್ರದ ಆಧಾರದ ಮೇಲೆ ಅಂತಹ ಸಾಮಾಜಿಕ ನೈತಿಕತೆ ಮತ್ತು ಸಾರ್ವಜನಿಕ ಸ್ವೀಕಾರವನ್ನು ನಿರ್ಣಯಿಸುವುದು ಮತ್ತು ಜಾರಿಗೊಳಿಸುವುದು ಶಾಸಕಾಂಗಕ್ಕೆ ಸೇರಿದೆ” ಎಂದು ಕೇಂದ್ರ ವಾದಿಸಿದೆ.

ಕಳೆದ ವರ್ಷದಿಂದ ದೆಹಲಿ ಹೈಕೋರ್ಟ್ ಸಲಿಂಗ ಮದುವೆಗಳಿಗೆ ಮಾನ್ಯತೆ ನೀಡುವಂತೆ ಕೋರಿದ ಅರ್ಜಿಗಳನ್ನು ಆಲಿಸುತ್ತಿದೆ. ಅರ್ಜಿಗಳು ಮುಂದಿನ ಏಪ್ರಿಲ್‌ನಲ್ಲಿ ವಿಚಾರಣೆಗೆ ಬರಲಿವೆ.

2018ರಲ್ಲಿ ಸಲಿಂಗಕಾಮವನ್ನು ಸುಪ್ರೀಂ ಕೋರ್ಟ್ ಅಪರಾಧವಲ್ಲವೆಂದು ನಿರ್ಣಯಿಸಿ ಮಾನ್ಯತೆ ಮಾಡಿದೆ ಎಂಬುದನ್ನು ಇಲ್ಲಿ ಗಮನಿಸಬೇಕು.


ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...