Homeಕರ್ನಾಟಕಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಪೌರಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿಯಕೂಡದು ಎಂಬ ನಿಯಮವಿದೆ. ಆದರೆ ಅದನ್ನು ಮೀರಿದ ಅಧಿಕಾರಿಗಳು ನಾರಾಯಣ ಅವರನ್ನು ಮ್ಯಾನ್‌ಹೋಲ್‌ಗೆ ಇಳಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

- Advertisement -
- Advertisement -

ಪುರಸಭೆ ಅಧಿಕಾರಿಗಳು ಕಿರುಕುಳ ನೀಡಿತ್ತಿದ್ದಾರೆ ಎಂದು ಆರೋಪಿಸಿರುವ ಪೌರ ಕಾರ್ಮಿಕರೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಮೃತರಿಗೆ ಮೂರು ಜನ ಮಕ್ಕಳಿದ್ದು, ಹೆಂಡತಿ ಕಳೆದ 5 ವರ್ಷಗಳ ಹಿಂದೆಯೇ ಮೃತಪಟ್ಟಿದ್ದರು.

ಪುರಸಭೆ ಪೌರಕಾರ್ಮಿಕರಾದ ನಾರಾಯಣ ಎಂಬುವವರು ನೇಣಿಗೆ ಶರಣಾಗಿದ್ದಾರೆ. ಇದಕ್ಕೆ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಮತ್ತು ಜಾಸ್ಮಿನ್ ಖಾನ್ ಅವರೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಘಟನೆಯ ವಿವರ:

ಪೌರಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿಯಕೂಡದು ಎಂಬ ನಿಯಮವಿದೆ. ಆದರೆ ಅದನ್ನು ಮೀರಿದ ಅಧಿಕಾರಿಗಳು ನಾರಾಯಣ ಅವರನ್ನು ಮ್ಯಾನ್‌ಹೋಲ್‌ಗೆ ಇಳಿಸಿದ್ದರು. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ನಾರಾಯಣ ಅವರನ್ನು ಕರೆದು ಬೆದರಿಕೆ ಹಾಕಿದ್ದಾರೆ. “ತಾನು ಮ್ಯಾನ್‌ಹೋಲ್‌ಗೆ ಇಳಿಯಲು ಅಧಿಕಾರಿಗಳು ಕಾರಣವಲ್ಲ; ನಾನೇ ಸ್ವಯಿಚ್ಚೆಯಿಂದ ಇಳಿದಿದ್ದೇನೆ” ಎಂದು ಆತನಿಂದ ಹೇಳಿಕೆ ಕೊಡಿಸಿದ್ದಾರೆ.

ಈ ಘಟನೆಯ ಕುರಿತು ನಾರಾಯಣ ಅವರ ಅತ್ತೆ ಸಂಪೂರ್ಣ ವಿವರ ನೀಡಿದ್ದಾರೆ. ವೀಡಿಯೋ ನೋಡಿ.

ನಂತರ 2018 ರಲ್ಲಿ ಒಮ್ಮೆ ಆರೋಗ್ಯ ಅಧಿಕಾರಿ ಹೇಳಿದ ಕೆಲಸವನ್ನು ಮಾಡಲು ನಿರಾಕರಿಸಿದ ನಾರಾಯಣ ಅವರನ್ನು ಅಧಿಕಾರಿ ಹೊಡೆದಿದ್ದರು. ಈ ಘಟನೆಯಿಂದ ನೊಂದ ನಾರಾಯಣ ದೂರು ನೀಡುವುದಾಗಿ ತಿಳಿಸಿದ್ದಾರೆ. ಆದರೆ ಕೌನ್ಸಿಲರ್ ಸೇರಿದಂತೆ ಕೆಲವರು ಮಧ್ಯಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸಿದ್ದಾರೆ. ಜೊತೆಗೆ ಆರೋಗ್ಯ ಆಧಿಕಾರಿ ನಾರಾಯಣ ಅವರ ಬಳಿ ಕ್ಷಮೆ ಕೇಳುವಂತೆ ಆದೇಶಿಸಿದ್ದಾರೆ. ಹಾಗಾಗಿ ಅಧಿಕಾರಿ ಕ್ಷಮೆ ಕೂಡ ಕೇಳಿದ್ದರು. ಆದರೆ ಇದನ್ನೇ ಗುರಿಯಾಗಿಸಿಕೊಂಡು ಅಂದಿನಿಂದ ಆ ಅಧಿಕಾರಿ ನಾರಾಯಣ ಅವರ ಮೇಲೆ ಸೇಡು ತೀರಿಸಿಕೊಳ್ಳಲು ಆರಂಭಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಗೋಡ್ಸೆ ಬಗ್ಗೆ ಸುಳ್ಳು ಹೇಳಿ ತಪ್ಪುದಾರಿಗೆಳೆದಿದ್ದರು: ಕಾಂಗ್ರೆಸ್ ಸೇರಿದ ಹಿಂದೂ ಮಹಾಸಭಾ ಸದಸ್ಯ

ಫೆ.22 ರಂದು ನಾರಾಯಣ ಅವರಿಗೆ ಕೋವಾಕ್ಸಿನ್ ಲಸಿಕೆ ನೀಡಲಾಗಿತ್ತು. ನಂತರ ಸ್ವಲ್ಪ ಚಳಿ-ಜ್ವರ ಕಾಣಿಸಿಕೊಂಡಿದ್ದರಿಂದ ಅವರು ಕೆಲಸಕ್ಕೆ ಹೋಗಲು ಸಾಧ್ಯವಾಗಿಲ್ಲ. ಮರುದಿನ ಕೆಲಸಕ್ಕೆ ಹೋದಾಗ ಮುಖ್ಯ ಅಧಿಕಾರಗಳಿಂದ ಅನುಮತಿ ಪಡೆದು ಕೆಲಸಕ್ಕೆ ಬರಬೇಕು ಎಂದು ಮೇಸ್ತ್ರಿಗಳು ಹೇಳಿಕಳುಹಿಸಿದ್ದಾರೆ. ಆಗ ನಾರಾಯಣ ಆರೋಗ್ಯ ಅಧಿಕಾರಿಗಳ ಬಳಿ ಹೋದಾಗ, ಅಲ್ಲಿ ಅವರು “ನೀನು ಟ್ರ್ಯಾಕ್ಟರ್ ಕೆಲಸಕ್ಕೆ ಹೋಗು” ಎಂದು ಹೇಳಿದ್ದಾರೆ. ಇದು ತುಂಬಾ ಕಷ್ಟದ ಕೆಲಸವಾಗಿರುವುದರಿಂದ, ಜೊತೆಗೆ ತನಗೆ ಆರೋಗ್ಯ ಸರಿಯಿಲ್ಲದಿರುವುದರಿಂದ ಬೇರೆ ಕೆಲಸ ಕೊಡಿ ಎಂದು ನಾರಾಯಣ ಕೇಳಿದ್ದಾರೆ. ಈ ಹಿಂದೆಯೂ ನಾರಾಯಣ ಇದೇ ಕೆಲಸವನ್ನು ಮಾಡಿದ್ದಾರೆ. ಆದರೆ ಅಂದು ಆರೋಗ್ಯ ಸರಿಯಿಲ್ಲದಿದ್ದುದರಿಂದ ಈ ಕೆಲಸ ಮಾಡಲು ನಿರಾಕರಿಸಿದ್ದಾರೆ. ಆದರೆ ಕಿರುಕುಳ ನೀಡುತ್ತಿದ್ದ ಅಧಿಕಾರಿ ಈ ಅವಕಾಶವನ್ನು ಬಳಸಿಕೊಂಡು, “ಮಾಡಿದರೆ ಈ ಕೆಲಸ ಮಾಡು; ಇಲ್ಲದಿದ್ದರೆ ಮನೆಗೆ ಹೋಗು” ಎಂದು ನಿಂದಿಸಿ ಕಳುಹಿಸಿದ್ದಾರೆ.

ಇದರಿಂದ ಮನನೊಂದ ನಾರಾಯಣ, ತನ್ನ ಮನೆಗೆ ಬಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ, “ಪುರಸಭೆಯ ಮುಖ್ಯ ಅಧಿಕಾರಿ ಮತ್ತು ಆರೋಗ್ಯ ಅಧಿಕಾರಿಗಳೇ ನನ್ನ ಸಾವಿಗೆ ಕಾರಣ. ಅವರು ನನಗೆ ಕಿರುಕುಳ ನೀಡಿದ್ದಾರೆ” ಎಂದು ಬರೆದಿದ್ದಾರೆ.

ಈ ವಿಷಯ ತಿಳಿದ ಅಧಿಕಾರಿಗಳು ಇತರ ಪೌರ ಕಾರ್ಮಿಕರಿಗೂ ಬೆದರಿಕೆ ಹಾಕಿದ್ದು, ಯಾರೂ ಕೂಡ ಅಲ್ಲಿಗೆ ಹೋಗಕೂಡದು ಎಂದು ಒತ್ತಾಯಿಸಿದ್ದಾರೆ. ನಂತರ ಈ ಪ್ರಕರಣವನ್ನು ಮುಚ್ಚಿಹಾಕಲು ಪುರಸಭೆಯ ಇತರ ಅಧಿಕಾರಿಗಳು ಮತ್ತು ಕೌನ್ಸಿಲರ್‌ಗಳು ಸೇರಿ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಈ ವಿಷಯ ಸಮಾಜ ಕಲ್ಯಾಣ ಇಲಾಖೆಯ ಮಟ್ಟದಲ್ಲಿ ಚರ್ಚೆಗೆ ಬಂದು ಪುರಸಭೆಯ ಅಧಿಕಾರಿಗಳನ್ನು ಕರೆದು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಈ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಕಾಂಗ್ರೆಸ್-ಡಿಎಂಕೆ ಸರ್ಕಾರ ಪತನ ಹಿನ್ನೆಲೆ – ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...