Homeಮುಖಪುಟಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

ಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’

- Advertisement -
- Advertisement -

ಆನ್‌ಲೈನ್ ಸುದ್ದಿ ಮಾಧ್ಯಮಗಳ ಸಂಪೂರ್ಣ ಚಿತ್ರಣವನ್ನು ಪಡೆಯಲು ಸರ್ಕಾರ ಪ್ರಯತ್ನಿಸುತ್ತಿರುವುದರಿಂದ, ಡಿಜಿಟಲ್ ನ್ಯೂಸ್ ಪೋರ್ಟಲ್‌ಗಳು ತಮ್ಮ ಸಂಪಾದಕೀಯ ಮುಖ್ಯಸ್ಥರು, ಮಾಲೀಕತ್ವ, ವಿಳಾಸ ಮತ್ತು ಗೊತ್ತು ಪಡಿಸಿದ ಕುಂದುಕೊರತೆ ಅಧಿಕಾರಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿವರಗಳನ್ನು ಮಾಹಿತಿ ಮತ್ತು ಪ್ರಸಾರ (ಐ&ಬಿ) ಸಚಿವಾಲಯಕ್ಕೆ ಶೀಘ್ರದಲ್ಲೇ ಒದಗಿಸಬೇಕಾಗುತ್ತದೆ ಎಂದು ಐ&ಬಿ ಕಾರ್ಯದರ್ಶಿ ಅಮಿತ್ ಖರೆ ತಿಳಿಸಿದ್ದಾರೆ.

“ಪ್ರಸ್ತುತ, ಈ ವಲಯದಲ್ಲಿ ಎಷ್ಟು ಸಂಸ್ಥೆಗಳಿವೆ ಮತ್ತು ಅವರು ಯಾರೆಂಬುದರ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಚಿತ್ರಣವಿಲ್ಲ” ಎಂದು ಅವರು ಹೇಳಿದರು. “ನೀವು ಅವರ ವೆಬ್‌ಸೈಟ್‌ಗಳಿಗೆ ಲಾಗ್ ಇನ್ ಮಾಡಿದರೆ, ಅವರ ಕಚೇರಿ ವಿಳಾಸ ಅಥವಾ ಪ್ರಧಾನ ಸಂಪಾದಕರ ಕುರಿತ  ಮೂಲ ಮಾಹಿತಿ ಸಹ ಸಿಗುವುದಿಲ್ಲ’ ಎಂದು ಖರೆ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ಉಲ್ಲೆಖಿಸಿದೆ.

ಮೂಲಗಳ ಪ್ರಕಾರ, ಒಂದು ತಿಂಗಳಲ್ಲಿ ಎಲ್ಲಾ ಡಿಜಿಟಲ್ ಸುದ್ದಿ ಸಂಸ್ಥೆಗಳು ಮೇಲೆ ಉಲ್ಲೇಖಿಸಿದ ವಿವರಗಳನ್ನು ಭರ್ತಿ ಮಾಡಿ ಸಚಿವಾಲಯಕ್ಕೆ ಸಲ್ಲಿಸಬೇಕಾದ ಫಾರ್ಮ್ ಅನ್ನು ಸಚಿವಾಲಯ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

ಗುರುವಾರ (ಫೆ.25) ಐ & ಬಿ ಸಚಿವ ಪ್ರಕಾಶ್ ಜಾವಡೇಕರ್ ಅವರು,  ಡಿಜಿಟಲ್ ಮೀಡಿಯಾ ಸಂಸ್ಥೆಗಳ ಬಗೆಗಿನ ಮಾಹಿತಿಯ ಕೊರತೆಯೇ, ಈ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಕ್ಕೆ ಮೊದಲು ಅವರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರಲು ಕಾರಣ ಎಂದು ತಿಳಿಸಿದ್ದಾರೆ.

ಕಾರ್ಯದರ್ಶಿ ಖರೆ ಪ್ರಕಾರ, ವೆಬ್‌ಸೈಟ್‌ಗಳು, ಮುದ್ರಣ ಮತ್ತು ಟಿವಿ ಮಾಧ್ಯಮ ಈಗಾಗಲೇ ಅನುಸರಿಸುತ್ತಿರುವ  ಸ್ಥಾಪಿತ ನೀತಿ ಸಂಹಿತೆಯನ್ನು ಮಾತ್ರ ಅನುಸರಿಸುವ ನಿರೀಕ್ಷೆಯಿದೆ. ಅವರ ಮೇಲೆ ಹೊಸ ಬಾಧ್ಯತೆಯಿಲ್ಲ ಎಂದು ಹೇಳಿದ್ದಾರೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ಡಿಜಿಟಲ್ ನ್ಯೂಸ್ ಔಟ್‌ಲೆಟ್‌ಗಳು ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ ನಿಯಂತ್ರಣ ಕಾಯ್ದೆ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಪತ್ರಿಕೋದ್ಯಮ ನಡವಳಿಕೆಯ ಮಾನದಂಡಗಳ ಅಡಿಯಲ್ಲಿ ಪ್ರೋಗ್ರಾಂ ಕೋಡ್ ಅನ್ನು ಅನುಸರಿಸಬೇಕಾಗುತ್ತದೆ. ಇದು ಟಿವಿ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಹಾಕುವ ಕಂಟೆಂಟ್ ಹೇಗಿರಬೇಕು ಎಂಬುದನ್ನು ಸೂಚಿಸುತ್ತದೆ.

ಮುದ್ರಣಕ್ಕಾಗಿ ಅಂತಹ ಯಾವುದೇ ಸಮಿತಿ ಇಲ್ಲದಿದ್ದಾಗ ಡಿಜಿಟಲ್ ನ್ಯೂಸ್ ವೆಬ್‌ಸೈಟ್‌ಗಳಿಗಾಗಿ ಸರ್ಕಾರದ ಮೇಲ್ವಿಚಾರಣಾ ಕಾರ್ಯವಿಧಾನವನ್ನು ಸ್ಥಾಪಿಸುವ ಅಗತ್ಯತೆಯ ಬಗ್ಗೆ ಮಾತನಾಡಿರುವ ಅಮಿತ್ ಖರೆ, ’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: `ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

ಒಟಿಟಿ ಪ್ಲಾಟ್‌ಫಾರ್ಮ್‌ಗಳಿಂದ ಬಂದ ಸಮಾಲೋಚನೆಯ ಬಗ್ಗೆ ಇದೇ ರೀತಿಯ ಟೀಕೆಗಳನ್ನು ಖರೆ ತಳ್ಳಿಹಾಕಿದರು. ’ಐ & ಬಿ ಸಚಿವರು ದೆಹಲಿಯಲ್ಲಿ ಎರಡು ಬಾರಿ ಭೇಟಿಯಾದರು. ಮುಂಬೈ ಮತ್ತು ಚೆನ್ನೈನಲ್ಲಿ ನಾವು ಎರಡು ಸುತ್ತಿನ ಚರ್ಚೆ ನಡೆಸಿದೆವು. ಸಮಾಲೋಚನೆ ಎಂದರೆ ಸಮ್ಮತಿ ಎಂದಲ್ಲ. ತಾತ್ವಿಕವಾಗಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಸ್ವಯಂ ನಿಯಂತ್ರಣಕ್ಕೆ ಒಪ್ಪಿಕೊಂಡಿವೆ, ಆದರೆ ಅವರ ಪ್ರಸ್ತಾಪವು ಮೇಲ್ವಿಚಾರಣೆ ಮತ್ತು ಮೇಲ್ಮನವಿಗಳಿಗಾಗಿ ಸ್ವತಂತ್ರ ಸಂಸ್ಥೆಯನ್ನು ಹೊಂದಿರಲಿಲ್ಲ. ಅವರು ಆಂತರಿಕವಾಗಿ ಕುಂದುಕೊರತೆಗಳನ್ನು ಪರಿಹರಿಸಲು ಬಯಸಿದ್ದರು ಆದರೆ ಯಾವುದೇ ಮೇಲ್ಮನವಿಯ ವ್ಯವಸ್ಥೆ ಇರಲಿಲ್ಲ. ಅದು ನಮಗೆ ಸ್ವೀಕಾರಾರ್ಹವಲ್ಲ’ ಎಂದು ಖರೆ ತಿಳಿಸಿದ್ದಾರೆ.

ಒಟಿಟಿ ಪ್ಲಾಟ್‌ಫಾರ್ಮ್‌ಗಳ ಕೆಲಸದಲ್ಲಿ ಸರ್ಕಾರದ ಅತಿಯಾದ ಹಸ್ತಕ್ಷೇಪದ ಭೀತಿಯ ಬಗಿಗಿನ ಪ್ರಶ್ನೆಗೆ ಉತ್ತರಿಸಿರುವ ಖರೆ, ’ಅಂತಹ ಸಂದೇಹಗಳು ಆಧಾರರಹಿತವಾಗಿವೆ ಎಂದಿದ್ದಾರೆ. ’ಏಕೆಂದರೆ ಮಾರ್ಗಸೂಚಿಗಳು ಒಟಿಟಿ ಮತ್ತು ಆನ್‌ಲೈನ್ ಮಾಧ್ಯಮಗಳಿಗೆ ಮೃದು-ಸ್ಪರ್ಶ ಸ್ವಯಂ-ನಿಯಂತ್ರಣ ಮಾದರಿಯನ್ನು ಪ್ರಸ್ತಾಪಿಸುತ್ತವೆ. “ಇದು ಒಟಿಟಿ ಪ್ಲಾಟ್‌ಫಾರ್ಮ್‌ಗಳ ಸೃಜನಶೀಲತೆ ಮತ್ತು ನಾಗರಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸುವ ಹಕ್ಕುಗಳನ್ನು ಸಮತೋಲನಗೊಳಿಸುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಔಪಚಾರಿಕ ಮೂರು ಹಂತದ ಪರಿಹಾರ ವ್ಯವಸ್ಥೆಯನ್ನು ಹೊಂದಿರುವುದು ದೀರ್ಘಾವಧಿಯಲ್ಲಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಮಾತ್ರ ಸಹಾಯ ಮಾಡುತ್ತದೆ ಎಂದು ಖರೆ ಹೇಳಿದರು. “ಪ್ರಸ್ತುತ, ವಿಭಿನ್ನ ವೆಬ್ ಸರಣಿಗಳ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಲಾಗಿದೆ. ಕುಂದುಕೊರತೆ ಪರಿಹಾರ ಮತ್ತು ಮೇಲ್ಮನವಿಯ ಔಪಚಾರಿಕ ಕಾರ್ಯವಿಧಾನವಿದ್ದರೆ, ಈ ವೇದಿಕೆಗಳು ಈ ಕಾರ್ಯವಿಧಾನವನ್ನು ನ್ಯಾಯಾಲಯಗಳಿಗೆ ತಿಳಿಸಬಹುದು ಮತ್ತು ನ್ಯಾಯಾಲಯಗಳು ಯಾವಾಗಲೂ ಈ ಸಂಸ್ಥೆಗಳನ್ನು ಸಮೀಪಿಸಲು ನಾಗರಿಕರನ್ನು ಪ್ರೋತ್ಸಾಹಿಸುತ್ತದೆ’ ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ರೈತರಿಗೆ ಬೆಂಬಲ ನೀಡಿದ ಪಕ್ಷೇತರ ಶಾಸಕನ ಮನೆ, ಕಛೇರಿ ಮೇಲೆ ಐಟಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...