Homeಮುಖಪುಟಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

ಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’

- Advertisement -
- Advertisement -

ಆನ್‌ಲೈನ್ ಸುದ್ದಿ ಮಾಧ್ಯಮಗಳ ಸಂಪೂರ್ಣ ಚಿತ್ರಣವನ್ನು ಪಡೆಯಲು ಸರ್ಕಾರ ಪ್ರಯತ್ನಿಸುತ್ತಿರುವುದರಿಂದ, ಡಿಜಿಟಲ್ ನ್ಯೂಸ್ ಪೋರ್ಟಲ್‌ಗಳು ತಮ್ಮ ಸಂಪಾದಕೀಯ ಮುಖ್ಯಸ್ಥರು, ಮಾಲೀಕತ್ವ, ವಿಳಾಸ ಮತ್ತು ಗೊತ್ತು ಪಡಿಸಿದ ಕುಂದುಕೊರತೆ ಅಧಿಕಾರಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿವರಗಳನ್ನು ಮಾಹಿತಿ ಮತ್ತು ಪ್ರಸಾರ (ಐ&ಬಿ) ಸಚಿವಾಲಯಕ್ಕೆ ಶೀಘ್ರದಲ್ಲೇ ಒದಗಿಸಬೇಕಾಗುತ್ತದೆ ಎಂದು ಐ&ಬಿ ಕಾರ್ಯದರ್ಶಿ ಅಮಿತ್ ಖರೆ ತಿಳಿಸಿದ್ದಾರೆ.

“ಪ್ರಸ್ತುತ, ಈ ವಲಯದಲ್ಲಿ ಎಷ್ಟು ಸಂಸ್ಥೆಗಳಿವೆ ಮತ್ತು ಅವರು ಯಾರೆಂಬುದರ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಚಿತ್ರಣವಿಲ್ಲ” ಎಂದು ಅವರು ಹೇಳಿದರು. “ನೀವು ಅವರ ವೆಬ್‌ಸೈಟ್‌ಗಳಿಗೆ ಲಾಗ್ ಇನ್ ಮಾಡಿದರೆ, ಅವರ ಕಚೇರಿ ವಿಳಾಸ ಅಥವಾ ಪ್ರಧಾನ ಸಂಪಾದಕರ ಕುರಿತ  ಮೂಲ ಮಾಹಿತಿ ಸಹ ಸಿಗುವುದಿಲ್ಲ’ ಎಂದು ಖರೆ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ಉಲ್ಲೆಖಿಸಿದೆ.

ಮೂಲಗಳ ಪ್ರಕಾರ, ಒಂದು ತಿಂಗಳಲ್ಲಿ ಎಲ್ಲಾ ಡಿಜಿಟಲ್ ಸುದ್ದಿ ಸಂಸ್ಥೆಗಳು ಮೇಲೆ ಉಲ್ಲೇಖಿಸಿದ ವಿವರಗಳನ್ನು ಭರ್ತಿ ಮಾಡಿ ಸಚಿವಾಲಯಕ್ಕೆ ಸಲ್ಲಿಸಬೇಕಾದ ಫಾರ್ಮ್ ಅನ್ನು ಸಚಿವಾಲಯ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

ಗುರುವಾರ (ಫೆ.25) ಐ & ಬಿ ಸಚಿವ ಪ್ರಕಾಶ್ ಜಾವಡೇಕರ್ ಅವರು,  ಡಿಜಿಟಲ್ ಮೀಡಿಯಾ ಸಂಸ್ಥೆಗಳ ಬಗೆಗಿನ ಮಾಹಿತಿಯ ಕೊರತೆಯೇ, ಈ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಕ್ಕೆ ಮೊದಲು ಅವರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರಲು ಕಾರಣ ಎಂದು ತಿಳಿಸಿದ್ದಾರೆ.

ಕಾರ್ಯದರ್ಶಿ ಖರೆ ಪ್ರಕಾರ, ವೆಬ್‌ಸೈಟ್‌ಗಳು, ಮುದ್ರಣ ಮತ್ತು ಟಿವಿ ಮಾಧ್ಯಮ ಈಗಾಗಲೇ ಅನುಸರಿಸುತ್ತಿರುವ  ಸ್ಥಾಪಿತ ನೀತಿ ಸಂಹಿತೆಯನ್ನು ಮಾತ್ರ ಅನುಸರಿಸುವ ನಿರೀಕ್ಷೆಯಿದೆ. ಅವರ ಮೇಲೆ ಹೊಸ ಬಾಧ್ಯತೆಯಿಲ್ಲ ಎಂದು ಹೇಳಿದ್ದಾರೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ಡಿಜಿಟಲ್ ನ್ಯೂಸ್ ಔಟ್‌ಲೆಟ್‌ಗಳು ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ ನಿಯಂತ್ರಣ ಕಾಯ್ದೆ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಪತ್ರಿಕೋದ್ಯಮ ನಡವಳಿಕೆಯ ಮಾನದಂಡಗಳ ಅಡಿಯಲ್ಲಿ ಪ್ರೋಗ್ರಾಂ ಕೋಡ್ ಅನ್ನು ಅನುಸರಿಸಬೇಕಾಗುತ್ತದೆ. ಇದು ಟಿವಿ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಹಾಕುವ ಕಂಟೆಂಟ್ ಹೇಗಿರಬೇಕು ಎಂಬುದನ್ನು ಸೂಚಿಸುತ್ತದೆ.

ಮುದ್ರಣಕ್ಕಾಗಿ ಅಂತಹ ಯಾವುದೇ ಸಮಿತಿ ಇಲ್ಲದಿದ್ದಾಗ ಡಿಜಿಟಲ್ ನ್ಯೂಸ್ ವೆಬ್‌ಸೈಟ್‌ಗಳಿಗಾಗಿ ಸರ್ಕಾರದ ಮೇಲ್ವಿಚಾರಣಾ ಕಾರ್ಯವಿಧಾನವನ್ನು ಸ್ಥಾಪಿಸುವ ಅಗತ್ಯತೆಯ ಬಗ್ಗೆ ಮಾತನಾಡಿರುವ ಅಮಿತ್ ಖರೆ, ’ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮುದ್ರಣ ಮಾಧ್ಯಮವನ್ನು ನಿಯಂತ್ರಿಸುತ್ತದೆ. ಡಿಜಿಟಲ್ ಮಾಧ್ಯಮದಕ್ಕೆ ಅಂತಹ ಸಂಸ್ಥೆಯಿಲ್ಲ. ಭವಿಷ್ಯದಲ್ಲಿ ಅಂಥದ್ದು ಬರಬಹುದಾದರೆ, ಸಮಿತಿಯ ಅಗತ್ಯವಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ: `ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

ಒಟಿಟಿ ಪ್ಲಾಟ್‌ಫಾರ್ಮ್‌ಗಳಿಂದ ಬಂದ ಸಮಾಲೋಚನೆಯ ಬಗ್ಗೆ ಇದೇ ರೀತಿಯ ಟೀಕೆಗಳನ್ನು ಖರೆ ತಳ್ಳಿಹಾಕಿದರು. ’ಐ & ಬಿ ಸಚಿವರು ದೆಹಲಿಯಲ್ಲಿ ಎರಡು ಬಾರಿ ಭೇಟಿಯಾದರು. ಮುಂಬೈ ಮತ್ತು ಚೆನ್ನೈನಲ್ಲಿ ನಾವು ಎರಡು ಸುತ್ತಿನ ಚರ್ಚೆ ನಡೆಸಿದೆವು. ಸಮಾಲೋಚನೆ ಎಂದರೆ ಸಮ್ಮತಿ ಎಂದಲ್ಲ. ತಾತ್ವಿಕವಾಗಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಸ್ವಯಂ ನಿಯಂತ್ರಣಕ್ಕೆ ಒಪ್ಪಿಕೊಂಡಿವೆ, ಆದರೆ ಅವರ ಪ್ರಸ್ತಾಪವು ಮೇಲ್ವಿಚಾರಣೆ ಮತ್ತು ಮೇಲ್ಮನವಿಗಳಿಗಾಗಿ ಸ್ವತಂತ್ರ ಸಂಸ್ಥೆಯನ್ನು ಹೊಂದಿರಲಿಲ್ಲ. ಅವರು ಆಂತರಿಕವಾಗಿ ಕುಂದುಕೊರತೆಗಳನ್ನು ಪರಿಹರಿಸಲು ಬಯಸಿದ್ದರು ಆದರೆ ಯಾವುದೇ ಮೇಲ್ಮನವಿಯ ವ್ಯವಸ್ಥೆ ಇರಲಿಲ್ಲ. ಅದು ನಮಗೆ ಸ್ವೀಕಾರಾರ್ಹವಲ್ಲ’ ಎಂದು ಖರೆ ತಿಳಿಸಿದ್ದಾರೆ.

ಒಟಿಟಿ ಪ್ಲಾಟ್‌ಫಾರ್ಮ್‌ಗಳ ಕೆಲಸದಲ್ಲಿ ಸರ್ಕಾರದ ಅತಿಯಾದ ಹಸ್ತಕ್ಷೇಪದ ಭೀತಿಯ ಬಗಿಗಿನ ಪ್ರಶ್ನೆಗೆ ಉತ್ತರಿಸಿರುವ ಖರೆ, ’ಅಂತಹ ಸಂದೇಹಗಳು ಆಧಾರರಹಿತವಾಗಿವೆ ಎಂದಿದ್ದಾರೆ. ’ಏಕೆಂದರೆ ಮಾರ್ಗಸೂಚಿಗಳು ಒಟಿಟಿ ಮತ್ತು ಆನ್‌ಲೈನ್ ಮಾಧ್ಯಮಗಳಿಗೆ ಮೃದು-ಸ್ಪರ್ಶ ಸ್ವಯಂ-ನಿಯಂತ್ರಣ ಮಾದರಿಯನ್ನು ಪ್ರಸ್ತಾಪಿಸುತ್ತವೆ. “ಇದು ಒಟಿಟಿ ಪ್ಲಾಟ್‌ಫಾರ್ಮ್‌ಗಳ ಸೃಜನಶೀಲತೆ ಮತ್ತು ನಾಗರಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಸುವ ಹಕ್ಕುಗಳನ್ನು ಸಮತೋಲನಗೊಳಿಸುತ್ತದೆ” ಎಂದು ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಔಪಚಾರಿಕ ಮೂರು ಹಂತದ ಪರಿಹಾರ ವ್ಯವಸ್ಥೆಯನ್ನು ಹೊಂದಿರುವುದು ದೀರ್ಘಾವಧಿಯಲ್ಲಿ, ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಮಾತ್ರ ಸಹಾಯ ಮಾಡುತ್ತದೆ ಎಂದು ಖರೆ ಹೇಳಿದರು. “ಪ್ರಸ್ತುತ, ವಿಭಿನ್ನ ವೆಬ್ ಸರಣಿಗಳ ವಿರುದ್ಧ ಹಲವಾರು ಎಫ್‌ಐಆರ್ ದಾಖಲಿಸಲಾಗಿದೆ. ಕುಂದುಕೊರತೆ ಪರಿಹಾರ ಮತ್ತು ಮೇಲ್ಮನವಿಯ ಔಪಚಾರಿಕ ಕಾರ್ಯವಿಧಾನವಿದ್ದರೆ, ಈ ವೇದಿಕೆಗಳು ಈ ಕಾರ್ಯವಿಧಾನವನ್ನು ನ್ಯಾಯಾಲಯಗಳಿಗೆ ತಿಳಿಸಬಹುದು ಮತ್ತು ನ್ಯಾಯಾಲಯಗಳು ಯಾವಾಗಲೂ ಈ ಸಂಸ್ಥೆಗಳನ್ನು ಸಮೀಪಿಸಲು ನಾಗರಿಕರನ್ನು ಪ್ರೋತ್ಸಾಹಿಸುತ್ತದೆ’ ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ರೈತರಿಗೆ ಬೆಂಬಲ ನೀಡಿದ ಪಕ್ಷೇತರ ಶಾಸಕನ ಮನೆ, ಕಛೇರಿ ಮೇಲೆ ಐಟಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...