Homeಮುಖಪುಟಅಂಬಾನಿ ಮನೆ ಹತ್ತಿರ ಇದ್ದ ವಾಹನದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ: ಮಹಾರಾಷ್ಟ್ರ ಗೃಹ ಸಚಿವರು

ಅಂಬಾನಿ ಮನೆ ಹತ್ತಿರ ಇದ್ದ ವಾಹನದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ: ಮಹಾರಾಷ್ಟ್ರ ಗೃಹ ಸಚಿವರು

- Advertisement -
- Advertisement -

ಉದ್ಯಮಿ ಮುಖೇಶ್ ಅಂಬಾನಿ ಅವರ ಮುಂಬೈ ಮನೆಯ ಬಳಿ ಗುರುವಾರ ಸ್ಫೋಟಕ ಸಾಮಗ್ರಿಗಳೊಂದಿಗೆ ನಿಲುಗಡೆ ಮಾಡಿದ್ದ ವಾಹನ ಪತ್ತೆಯಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.

ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಹೆಚ್ಚಿನ ಭದ್ರತೆಯಲ್ಲಿ ವಾಸಿಸುವ ಸ್ಥಳದಿಂದ ಕೆಲವೇ ಮೀಟರ್ ದೂರದಲ್ಲಿ ಈ ವಾಹನ ನಿಲ್ಲಿಸಲಾಗಿತ್ತು ಎಂದು ಎನ್‌ಡಿಟಿವಿ, ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿವೆ.

“ಮುಂಬೈನ ಮುಖೇಶ್ ಅಂಬಾನಿಯ ಮನೆಯಿಂದ ಸ್ವಲ್ಪ ದೂರದಲ್ಲಿ ಕೆಲವು ಜೆಲಟಿನ್ ಕಡ್ಡಿಗಳಿರುವ ಸ್ಕಾರ್ಪಿಯೋ ವ್ಯಾನ್ ಪತ್ತೆಯಾಗಿದೆ. ಮುಂಬೈ ಅಪರಾಧ ಶಾಖೆ ಇದರ ಬಗ್ಗೆ ತನಿಖೆ ನಡೆಸುತ್ತಿದೆ. ಸತ್ಯ ಹೊರಬರಲಿದೆ” ಎಂದು ದೇಶಮುಖ್ ಹೇಳಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಕಾರ್ಮೈಕಲ್ ರಸ್ತೆಯಲ್ಲಿ ಗುರುವಾರ ಸಂಜೆ ಅನುಮಾನಾಸ್ಪದ ವಾಹನ ವರದಿಯಾಗಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಯಿತು. ನಂತರ ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ ಅಥವಾ ಬಿಡಿಡಿಎಸ್ ತಂಡ ಮತ್ತು ಇತರ ಪೊಲೀಸ್ ತಂಡಗಳು ತಕ್ಷಣ ಸ್ಥಳಕ್ಕೆ ತಲುಪಿದವು.

ಇದನ್ನೂ ಓದಿ: ಹೊಸ ಮಾರ್ಗಸೂಚಿ: ಆನ್‌ಲೈನ್ ಸುದ್ದಿ ಮಾಧ್ಯಮ, ಒಟಿಟಿ ಮೇಲಾಗುವ ಪರಿಣಾಮವೇನು?

“ಅವರು ವಾಹನವನ್ನು ಪರಿಶೀಲಿಸಿದಾಗ ಒಳಗೆ 20 ಸ್ಫೋಟಕ ಜೆಲಟಿನ್ ತುಂಡುಗಳು ಕಂಡುಬಂದಿವೆ. ಇದು ಜೋಡಿಸಲಾದ ಸ್ಫೋಟಕ ಸಾಧನವಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ ನಿನ್ನೆ (ಬುಧವಾರ-ಗುರುವಾರ ಮಧ್ಯರಾತ್ರಿ) ರಾತ್ರಿ 1 ಗಂಟೆ ಸುಮಾರಿಗೆ ಕಾರನ್ನು ಈ ಪ್ರದೇಶದಲ್ಲಿ ನಿಲ್ಲಿಸಲಾಗಿದೆ ಎಂದು ಅವರು ಹೇಳಿದರು.

ವಾಹನದೊಳಗೆ ಪತ್ರವೊಂದು ಕಂಡುಬಂದಿದೆ ಆದರೆ ಅದರ ವಿಷಯಗಳನ್ನು ಬಹಿರಂಗಪಡಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕುತೂಹಲಕಾರಿಯೆಂದರೆ, ವಾಹನದ ನೋಂದಣಿ ಸಂಖ್ಯೆ ಅಂಬಾನಿಯ ಭದ್ರತಾ ವ್ಯವಸ್ಥೆಯ ವಾಹನದ ನೋಂದಣಿ ಸಂಖ್ಯೆಗೆ ಹೊಂದಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ಈ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಅಂಬಾನಿ, ದಕ್ಷಿಣ ಮುಂಬೈನ ಐಷಾರಾಮಿ ಕುಂಬಲ್ಲಾ ಹಿಲ್ ಪ್ರದೇಶದಲ್ಲಿ ಆಂಟಿಲಿಯಾ ಎಂಬ ಐಷಾರಾಮಿ, 27 ಅಂತಸ್ತಿನ, 400,000 ಚದರ ಅಡಿ ವಿಶಾಲವಾದ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಅವರ ಕುಟುಂಬವು 2012 ರಲ್ಲಿ ಕಟ್ಟಡಕ್ಕೆ ಸ್ಥಳಾಂತರಗೊಂಡಿತು.

ಚಿಕಾಗೊ ಮೂಲದ ಸಂಸ್ಥೆ ಪರ್ಕಿನ್ಸ್ ಮತ್ತು ವಿಲ್ ವಿನ್ಯಾಸಗೊಳಿಸಿದ ಇದು ಮೂರು ಹೆಲಿಪ್ಯಾಡ್‌ಗಳು, 168 ಕಾರುಗಳ ಗ್ಯಾರೇಜ್, ಬಾಲ್ ರೂಂ, ಒಂಬತ್ತು ಹೈಸ್ಪೀಡ್ ಎಲಿವೇಟರ್‌ಗಳು, 50 ಆಸನಗಳ ಥಿಯೇಟರ್, ಟೆರೇಸ್ ಗಾರ್ಡನ್ಸ್, ಈಜುಕೊಳ, ಸ್ಪಾ, ಹೆಲ್ತ್‌ಸೆಂಟರ್, ದೇವಾಲಯ, ಮತ್ತು ಹಿಮ ಕೋಣೆಯನ್ನು ಹೊಂದಿದೆ.


ಇದನ್ನೂ ಓದಿ: ಗುಜರಾತ್‌ನಲ್ಲಿ 25 ವರ್ಷದಿಂದ ಬಿಜೆಪಿಯೊಂದೇ ಏಕೆ ಆಡಳಿತ ನಡೆಸುತ್ತಿದೆ..?- ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...