Homeಮುಖಪುಟತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲೆಕ್ಟ್ರಿಕ್ ಸ್ಕೋಟರ್‌ ಓಡಿಸುವ ಮೂಲಕ ಇಂಧನ ಬೆಲೆ ಹೆಚ್ಚಳದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ತೈಲ ಬೆಲೆ ಹೆಚ್ಚಳ ಹಿನ್ನೆಲೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗುತ್ತಿದೆ. ವಿರೋಧ ಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಬೀದಿಗಿಳಿದಿವೆ. ವಿಭಿನ್ನ ರೀತಿಯ ಪ್ರತಿಭಟನೆಗೆ ತೈಲ ದರ ಹೆಚ್ಚಳ ಕಾರಣವಾಗುತ್ತಿದ್ದು. ಶುಕ್ರವಾರ ಕೇರಳದಲ್ಲಿ ಸಂಸದ ಶಶಿ ತರೂರ್ ಆಟೋ ಎಳೆದರೆ, ಇತ್ತ ಬಿಹಾರದಲ್ಲಿ ತೇಜಸ್ವಿ ಯಾದವ್ ಸೈಕಲ್ ಸವಾರಿ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಇಂಧನ ಬೆಲೆ ಏರಿಕೆ ವಿರುದ್ಧ ಕೇರಳದಲ್ಲಿ ಪ್ರತಿಭಟನೆ ನಡೆಯುತ್ತಲೇ ಇದೆ. ಯುವ ಜನತೆ ವಿಭಿನ್ನ ರೀತಿಯಲ್ಲಿ ಸರ್ಕಾರದ ಗಮನ ಸೆಳೆಯುತ್ತಿದ್ದಾರೆ. ಕೇರಳ ಸಚಿವಾಲಯದ ಹೊರಗೆ ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಇತರ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ತೈಲ ದರ ಹೆಚ್ಚಾದ ಹಿನ್ನೆಲೆ ಆಟೋ ಚಾಲಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಆಟೋಗಳಿಗೆ ಹಗ್ಗ ಹಾಕಿ ಎಳೆದುಕೊಂಡು ಹೋಗುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ಬಿಹಾರ ವಿಧಾನಸಭೆ ಬಜೆಟ್ ಅಧಿವೇಶನದ 6 ನೇ ದಿನವಾದ ಶುಕ್ರವಾರ, ವಿರೋಧ ಪಕ್ಷದ ನಾಯಕ, ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್ ಅಧಿವೇಶನದಲ್ಲಿ ಭಾಗವಹಿಸಲು ಸೈಕಲ್ ಮೂಲಕ ವಿಧಾನಸಭೆಯನ್ನು ತಲುಪಿದರು. ಸೋಮವಾರ ಕೂಡ ತೇಜಸ್ವಿ ಅಸೆಂಬ್ಲಿಗೆ ಟ್ಯ್ರಾಕ್ಟರ್‌ನಲ್ಲಿ ಬಂದಿದ್ದರು. ಇಂಧನ ಬೆಲೆ ಹೆಚ್ಚಳದ ವಿರುದ್ಧ ತೇಜಸ್ವಿ ಯಾದವ್ ಪ್ರತಿಭಟನೆ ನಡೆಸುತ್ತಿರುವ ಪರಿ ಇದಾಗಿದೆ.

ನಂತರ ಟ್ವೀಟ್ ಮಾಡಿರುವ ತೇಜಶ್ವಿ ಯಾದವ್, “ಹೆಚ್ಚುತ್ತಿರುವ ತೈಲ ಬೆಲೆಗಳನ್ನು ವಿರೋಧಿಸಿ, ಅಸೆಂಬ್ಲಿಗೆ ಇಂದು ಸೈಕ್ಲಿಂಗ್ ಮೂಲಕ ತಲುಪಿದೆ. ಬಡವರ ರಕ್ತ ಹೀರಿಕೊಂಡ ಶ್ರೀಮಂತರ ಪ್ರೀತಿಯ ಸರ್ಕಾರ ಪೆಟ್ರೋಲ್, ಡೀಸೆಲ್, ಅನಿಲದ ಬೆಲೆಯನ್ನು ಹೆಚ್ಚಿಸಿ, ಸಾಮಾನ್ಯ ಜನರನ್ನು ಸಾಯುವಂತೆ ಮಾಡಿದೆ. ಡಬಲ್ ಎಂಜಿನ್ ಸರ್ಕಾರ ಬಡವರನ್ನು ಲೂಟಿ ಮಾಡುತ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ

ಇನ್ನು ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲೆಕ್ಟ್ರಿಕ್ ಸ್ಕೋಟರ್‌ ಓಡಿಸುವ ಮೂಲಕ ಇಂಧನ ಬೆಲೆ ಹೆಚ್ಚಳದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಎಲೆಕ್ಟ್ರಿಕ್ ಸ್ಕೂಟರ್ ಓಡಿಸಿಕೊಂಡು ತಮ್ಮ ಕಚೇರಿಗೆ ಹೋಗಿದ್ದಾರೆ. ಇಂಧನ ಬೆಲೆ ಏರಿಕೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೂ ಅವರು ಎಲೆಕ್ಟ್ರಿಕ್ ಸ್ಕೂಟರ್‌ ಬಳಸಿ ಹೋಗಿದ್ದರು.

ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

PC: ANI

ಈ ಬಾರಿಯ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರದ ವಿರುದ್ಧ ಸಿಗುವ ಯಾವುದೇ ಅವಕಾಶವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಟ್ಟು ಕೊಡುತ್ತಿಲ್ಲ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ, ರೈತರಿಗೆ ಬೆಂಬಲ ನೀಡಿದ್ದಾರೆ. ಈಗ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...