Homeಕರ್ನಾಟಕಮದ್ಯ ನಿಷೇಧ ಆಂದೋಲನದಿಂದ ಫೆ.28ಕ್ಕೆ ಟ್ವಿಟರ್ ಅಭಿಯಾನ

ಮದ್ಯ ನಿಷೇಧ ಆಂದೋಲನದಿಂದ ಫೆ.28ಕ್ಕೆ ಟ್ವಿಟರ್ ಅಭಿಯಾನ

’ಅಕ್ರಮ ಮದ್ಯ ಮಾರಾಟದ ನಿಯಂತ್ರಣಕ್ಕೆ ಪ್ರತಿ ಹಳ್ಳಿಯಲ್ಲಿ 5 ಜನ ಮಹಿಳೆಯರನ್ನೊಳಗೊಂಡ ಕಾವಲು ಸಮಿತಿ ರಚಿಸಬೇಕು ಮತ್ತು ಆ ಸಮಿತಿಗೆ ಅರೆ ನ್ಯಾಯಾಂಗ ಅಧಿಕಾರ ನೀಡಬೇಕು’

- Advertisement -
- Advertisement -

ರಾಯಚೂರಿನಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಯಬೇಕೆಂದು ಕಳೆದ 16 ದಿನಗಳಿಂದ ಮಧ್ಯ ನಿಷೇಧ ಆಂದೋಲನ ಕರ್ನಾಟಕದ ನೇತೃತ್ವದಲ್ಲಿ ಅನಿರ್ದಿಷ್ಟ ಅವಧಿಯ ಸತ್ಯಾಗ್ರಹ ನಡೆಯುತ್ತಿದೆ. ಸದ್ಯ ಸತ್ಯಾಗ್ರಹ ನಡೆಸುತ್ತಿರುವ ಮದ್ಯ ನಿಷೇಧ ಆಂದೋಲನ ಕರ್ನಾಟಕದ ಸದಸ್ಯರು ಮತ್ತು  ಪ್ರತಿಭಟನಾ ನಿರತ ಮಹಿಳೆಯರು ಫೆ.28ರ ಭಾನುವಾರ ಟ್ವಿಟರ್ ಅಭಿಯಾನ ನಡೆಸಲು ನಿರ್ಧರಿಸಿದ್ದಾರೆ.

ರಾಯಚೂರು ಜಿಲ್ಲೆಯೊಂದರಲ್ಲಿ 177 ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿರುವ ಪಟ್ಟಿಯನ್ನು ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದೇವೆ, ಈ ಅಕ್ರಮ ಮಾರಾಟದ ಮಳಿಗೆಗಳನ್ನು ನಿಲ್ಲಿಸಲು ಹಾಗೂ ಉಚ್ಚನ್ಯಾಯಾಲಯದ ಆದೇಶವನ್ನು ನಿರ್ಧಿಷ್ಟ ಸಮಯದಲ್ಲಿ ಪಾಲನೆ ಮಾಡಲು ಅಬಕಾರಿ ಇಲಾಖೆಗೆ ಇರುವ ಸಮಸ್ಯೆಗಳೇನು ಎಂದು ಪ್ರತಿಭಟನಾ ನಿರತ ಮಹಿಳೆಯರು ಪ್ರಶ್ನಿಸಿದ್ದಾರೆ.

ತಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಕಳೆದ 16 ದಿನಗಳಿಂದಲೂ ಆಲಿಸುತ್ತಿಲ್ಲ ಎಂದು ಆರೋಪಿಸಿ ಈ ಟ್ವಿಟರ್‌ ಅಭಿಯಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಜನವರಿ 26ರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಿಜವಾಗಿಯೂ ನಡೆದಿದ್ದೇನು? ಪ್ರತ್ಯಕ್ಷ ದರ್ಶಿಯ ವರದಿ

ಇವರ ಬೇಡಿಕೆಗಳು

೧. ಅಕ್ರಮ ಮದ್ಯ ಮಾರಾಟ‌ ತಡೆಯಲು ಇತ್ತಿಚೀನ ಉಚ್ಚ ನ್ಯಾಯಾಲಯದ ತೀರ್ಪನ್ನು ಸರ್ಕಾರ ಪಾಲಿಸಬೇಕು.
೩. ಈ ಸಂಬಂಧ ಮದ್ಯ ನಿಷೇಧ ಆಂದೋಲನ ಮಹಿಳೆಯರ‌ ನಿಯೋಗವನ್ನು ಸರ್ಕಾರ ಮಾತುಕತೆಗೆ ಕರೆಯಬೇಕು

ಈ ಬೇಡಿಕೆಗಳೊಂದಿಗೆ ಟ್ವಿಟರ್ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ.

Image

ಕಳೆದ ಫೆಬ್ರವರಿ 11 ರಿಂದಲೂ ರಾಯಚೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಒನಕೆಗಳನ್ನು ಹಿಡಿದು ಮಹಿಳೆಯರು ರ್‍ಯಾಲಿ ನಡೆಸಿದ್ದಾರೆ. ಮದ್ಯ ನಿಷೇಧ ಆಂದೋಲನ ಕರ್ನಾಟಕ ಸಂಘಟನೆಯು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ಸಮೀಕ್ಷೆ ನಡೆಸಿ  ಪಟ್ಟಿಯನ್ನು ಅಬಕಾರಿ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ನೀಡಲಾಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

Image
PC:Twitter@madyanishedakar

ಆಂದೋಲನವು, “ಹೈಕೋರ್ಟ್ ಆದೇಶದಂತೆ ಅಕ್ರಮ ಮದ್ಯ ಮಾರಾಟವನ್ನು ತಕ್ಷಣವೇ ನಿಲ್ಲಿಸಬೇಕು. ಅಕ್ರಮ ಮದ್ಯ ಮಾರಾಟದ ನಿಯಂತ್ರಣಕ್ಕೆ ಪ್ರತಿ ಹಳ್ಳಿಯಲ್ಲಿ 5 ಜನ ಮಹಿಳೆಯರನ್ನೊಳಗೊಂಡ ಕಾವಲು ಸಮಿತಿ ರಚಿಸಬೇಕು ಮತ್ತು ಆ ಸಮಿತಿಗೆ ಅರೆ ನ್ಯಾಯಾಂಗ ಅಧಿಕಾರ ನೀಡಬೇಕು” ಎಂದು ಆಗ್ರಹಿಸಿದೆ.

ಈಗಾಗಲೆ ಕರ್ನಾಟಕ ಪಾನ ನಿಷೇಧ ಕಾಯ್ದೆ 1961 ರ, 2 ನೇ ಅಧ್ಯಾಯ ಕ್ರಮ ಸಂಖ್ಯೆ 8 ಪ್ರಕಾರ ಸಾಮಾನ್ಯ ಸರಕಾರಿ ಆದೇಶ (G.O) ದಲ್ಲಿ ಈ ಅಧಿಕಾರವನ್ನು ನೀಡಬಹುದಾಗಿದೆ ಎಂದು ‘ಮದ್ಯ ನಿಷೇಧ ಆಂದೋಲನ ಕರ್ನಾಟಕ’ ಹೇಳಿದೆ.

ಟ್ವಿಟರ್‌ ಅಭಿಯಾನದಲ್ಲಿ ಜನರು ಹೆಚ್ಚು ಟ್ವೀಟ್‌ಗಳನ್ನು ಬರೆದು ನಮ್ಮೊಂದಿಗೆ ಹಂಚಿಕೊಳ್ಲಿ ಮತ್ತು ಅಭಿಯಾನವನ್ನು ಬೆಂಬಲಿಸಿ ಎಂದು ಪ್ರತಿಭಟನಾ ನಿರತ ಹೋರಾಟಗಾರರು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ರಾಜಸ್ತಾನದಲ್ಲಿ ಭಾರಿ ಬೆಂಬಲ ಪಡೆಯುತ್ತಿರುವ ಮಹಾಪಂಚಾಯತ್‌ಗಳು: ಟಿಕಾಯತ್ ಹಿಂದೆ ಬೃಹತ್ ಜನಸ್ತೋಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...