Homeಕರೋನಾ ತಲ್ಲಣಸಂಸದರು, ಸಚಿವರ ಕಾರು ಖರೀದಿಯ ಹಣ ಹೆಚ್ಚಿಸಿದ ಯಡಿಯೂರಪ್ಪ ಸರ್ಕಾರ!

ಸಂಸದರು, ಸಚಿವರ ಕಾರು ಖರೀದಿಯ ಹಣ ಹೆಚ್ಚಿಸಿದ ಯಡಿಯೂರಪ್ಪ ಸರ್ಕಾರ!

ಕೊರೊನಾದಿಂದ ರಾಜ್ಯದ ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ಬೆಲೆ ಏರಿಕೆ ಜನ ಸಾಮಾನ್ಯರನ್ನು ಹಿಂಸಿಸುತ್ತಿದೆ. ಇಂತಹ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಕಾರು ಖರೀದಿಯ ಮೊತ್ತ ಹೆಚ್ಚಿಸಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಇಡೀ ವಿಶ್ವವೇ ತಲ್ಲಣಿಸಿದೆ. ರಾಜ್ಯ ಕೂಡ ಆರ್ಥಿಕ ಬಿಕ್ಕಟಿನಲ್ಲಿದೆ ಎಂದು ಸರ್ಕಾರ ಹೇಳಿಕೊಂಡಿದೆ . ಈ ನಡುವೆಯೇ ಕರ್ನಾಟಕ ಸರ್ಕಾರ ತನ್ನ 32 ಮಂತ್ರಿಗಳು ಮತ್ತು 28 ಸಂಸದರಿಗೆ ಕಾರು ಖರೀದಿಸಲು ನೀಡುತ್ತಿದ್ದ ಹಣವನ್ನು 23 ಲಕ್ಷಕ್ಕೆ ಏರಿಕೆ ಮಾಡಿದೆ.

ಸಿಬ್ಬಂದಿ ಮತ್ತು ಆಡಳಿತ ಸೇವೆಗಳ ಇಲಾಖೆ (ಡಿಪಿಎಆರ್) ಹೊರಡಿಸಿರುವ ಆದೇಶದ ಪ್ರಕಾರ, ರಾಜ್ಯದ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಮಂತ್ರಿಗಳು ಮತ್ತು ಸಂಸದರಿಗೆ ವಾಹನಗಳನ್ನು ಖರೀದಿಸುವ ಭತ್ಯೆಯನ್ನು 22 ಲಕ್ಷ ರೂ.ಗಳಿಂದ 23 ಲಕ್ಷ ರೂ.ಗೆ ಹೆಚ್ಚಿಸಿದೆ.

ಕೊರೊನಾ ಸಂಕಷ್ಟದಿಂದ ಈಗಾಗಲೇ ರಾಜ್ಯದ ಜನರು ಸಂಕಷ್ಟಕ್ಕೆ ಈಡಾಗಿದ್ದಾರೆ. ಬೆಲೆ ಏರಿಕೆ ಎಂಬುದು ಜನ ಸಾಮಾನ್ಯರನ್ನು ಹಿಂಸಿಸುತ್ತಿದೆ. ಇಂತಹ ಸಂದರ್ಭದಲ್ಲಿ ಯಡಿಯೂರಪ್ಪ ಸರ್ಕಾರ ಕಾರು ಖರೀದಿಯ ಮೊತ್ತವನ್ನು ಹೆಚ್ಚಿಸಿದೆ. ಕಾರು ಖರೀದಿಗೆ ಮೊತ್ತವನ್ನು ಹೆಚ್ಚು ಮಾಡಬೇಕೆಂದು ಸಂಸದರು, ಶಾಸಕರು ಒತ್ತಡ ಹೇರಿದ್ದ ಹಿನ್ನೆಲೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

ಸರ್ಕಾರದ ಈ ಕ್ರಮವನ್ನು ವಿರೋಧ ಪಕ್ಷಗಳು ಟೀಕಿಸಿವೆ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ’ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಒಂದು ವರ್ಷಕ್ಕೆ ನಿರ್ಧಾರವನ್ನು ಮುಂದೂಡಬೇಕಾಗಿತ್ತು, ಸರ್ಕಾರ ಈಗಾಗಲೇ 85,000 ಕೋಟಿ ರೂ.ಗಳ ಸಾಲವನ್ನು ತೆಗೆದುಕೊಂಡಿದೆ’ ಎಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೆಖಿಸಿದೆ.

ಇನ್ನು ನಿಯಮಗಳ ಪ್ರಕಾರ, ಮಂತ್ರಿಗಳು ಅಥವಾ ಚುನಾಯಿತ ಪ್ರತಿನಿಧಿಗಳು ತಮ್ಮ ಕಾರುಗಳನ್ನು ಒಂದು ಲಕ್ಷ ಕಿ.ಮೀ ಓಟವನ್ನು ಪೂರ್ಣಗೊಳಿಸಿದ ನಂತರ ಅಥವಾ ಖರೀದಿಸಿದ ಏಳು ವರ್ಷಗಳ ನಂತರ ಮಾತ್ರ ಬದಲಾಯಿಸಬಹುದು. ಅದರ ನಂತರ, ಈ ಕಾರನ್ನು ಸಾಮಾನ್ಯವಾಗಿ ಜಿಲ್ಲಾ ಕೇಂದ್ರಗಳಲ್ಲಿ ಇರಿಸಲಾಗುತ್ತದೆ. ವಿಐಪಿಗಳು ಜಿಲ್ಲೆಗಳಿಗೆ ಭೇಟಿ ನೀಡುವಾಗ ಅವರ ಪ್ರಯಾಣದ ಅವಶ್ಯಕತೆಗಳಿಗಾಗಿ ಇವುಗಳನ್ನು ಬಳಸಲಾಗುತ್ತದೆ.

ಈ ವರ್ಷದ ಆರಂಭದಲ್ಲಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂದಾಜು 33 ಲಕ್ಷ ರೂ ಬೆಲೆಬಾಳುವ ಟೊಯೋಟಾ ಫಾರ್ಚೂನರ್ ಎಂಬ ಐಷಾರಾಮಿ ಕಾರು ಖರೀದಿಸಿದ್ದಾರೆ. ಜೆಡಿಎಸ್ ವರಿಷ್ಠ ಹಾಗೂ ರಾಜ್ಯಸಭಾ ಸದಸ್ಯ ದೇವೇಗೌಡರು ರಾಜ್ಯಸಭಾ ಸದಸ್ಯರಾದ ನಂತರ ರಾಜ್ಯ ಸರ್ಕಾರ 60 ಲಕ್ಷ ರೂ. ಬೆಲೆಯ ವೋಲ್ವೋ ಹೊಸ ಕಾರನ್ನು ಖರೀದಿಸಿ ನೀಡಿದೆ.

ಸಾಂಕ್ರಾಮಿಕ ರೋಗ ಕೊರೊನಾದಿಂದ ರಾಜ್ಯದ ಆರ್ಥಿಕ ಸ್ಥಿತಿ ನೆನೆಗುದಿಗೆ ಬಿದ್ದಿದೆ. ಇದರ ನೆಪದಲ್ಲಿ ರಾಜ್ಯದಲ್ಲಿ ಅನೇಕ ಮೂಲಭೂತ ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ಕಡಿತಗೊಳಿಸಲಾಗಿದೆ. ಆದರೆ ಜನಪ್ರತಿನಿಧಿಗಳ ದುಂದುವೆಚ್ಚಕ್ಕೆ ಮಾತ್ರ ಕಡಿವಾಣ ಬಿದ್ದಿಲ್ಲ.


ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...