Homeಮುಖಪುಟಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

- Advertisement -
- Advertisement -

ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ (ಫೆ.26) ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ.

ಮಾರ್ಚ್ 27 ರಿಂದ ಮತದಾನ ಆರಂಭವಾಗಲಿದ್ದು, ಮೇ 2ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು.

ಕೊರೊನಾ  ಸಾಂಕ್ರಾಮಿಕ ಹಿನ್ನೆಲೆ ಈ ಬಾರಿ ಮತದಾನ ಅವಧಿಯನ್ನು 1 ಗಂಟೆ ಹೆಚ್ಚಿಸಲಾಗುವುದು, ಕೊರೊನಾದಿಂದಾಗಿ ಮತಗಟ್ಟೆಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಮತದಾನ ನಡೆಯಲಿದೆ.

ಮೊದಲ ಹಂತ- 30 ಕ್ಷೇತ್ರಗಳು- ಮಾರ್ಚ್ 27ರಂದು ಮತದಾನ,

2ನೇ ಹಂತ- 30 ಕ್ಷೇತ್ರಗಳು- ಏಪ್ರಿಲ್ 1ರಂದು ಮತದಾನ

3ನೇ ಹಂತ-  31 ಕ್ಷೇತ್ರಗಳು- ಏಪ್ರಿಲ್ 6ರಂದು ಮತದಾನ.

4ನೇ ಹಂತ – 44 ಕ್ಷೇತ್ರಗಳು- ಏಪ್ರಿಲ್ 10ರಂದು ಮತದಾನ

5ನೇ ಹಂತ- 45 ಕ್ಷೇತ್ರಗಳು-  ಏಪ್ರಿಲ್ 17ರಂದು ಮತದಾನ

6ನೇ ಹಂತ-  43 ಕ್ಷೇತ್ರಗಳು-  ಏಪ್ರಿಲ್ 22ರಂದು ಮತದಾನ

7ನೇ ಹಂತ- 36 ಕ್ಷೇತ್ರಗಳು – ಏಪ್ರಿಲ್ 26ರಂದು ಮತದಾನ

8ನೇ ಹಂತ- 35 ಕ್ಷೇತ್ರಗಳು- ಏಪ್ರಿಲ್ 29ರಂದು ಮತದಾನ

ಮೇ 2ಕ್ಕೆ ಮತ ಏಣಿಕೆ ನಡೆಯಲಿದೆ.

ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ಅಸ್ಸಾಂ: ಅಸ್ಸಾಂ ರಾಜ್ಯದಲ್ಲಿ ಮೂರು ಹಂತದ ವಿಧಾನಸಭಾ ಚುನಾವಣೆ ನಡೆಯಲಿದೆ. ಮಾರ್ಚ್ 27 ರಂದು ಮೊದಲ ಹಂತದ ಚುನಾವಣೆ ಆರಂಭವಾಗಿದೆ. 2ನೇ ಹಂತ ಏಪ್ರಿಲ್ 1, 3ನೇ ಹಂತ ಏಪ್ರಿಲ್ 6ಕ್ಕೆ ನಡೆಯಲಿದೆ.

ಕೇರಳ, ಪುದುಚೇರಿ ಮತ್ತು ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಎಪ್ರಿಲ್ 6ರಂದು ಮತದಾನ ನಡೆಯಲಿದ್ದು, ಮೇ 2ಕ್ಕೆ ಮತ ಏಣಿಕೆ ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ 294, ತಮಿಳುನಾಡಿನಲ್ಲಿ 234, ಕೇರಳದಲ್ಲಿ 140, ಅಸ್ಸಾಂನಲ್ಲಿ 126 ಮತ್ತು ಕೇಂದ್ರ ಪ್ರದೇಶದ ಪುದುಚೇರಿಯಲ್ಲಿ 30 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಈ ಚುನಾವಣೆಯಲ್ಲಿ 18 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಹೇಳಿದ್ದಾರೆ.

ಪಶ್ವಿಮ ಬಂಗಾಳದಲ್ಲಿ ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮತ್ತು ಚುನಾವಣೆಗೆ ಗೆಲ್ಲಲು ಭಾರೀ ಸಿದ್ದತೆ ನಡೆಸುತ್ತಿರುವ ಬಿಜೆಪಿ ಮಧ್ಯೆ ತೀವ್ರ ಪೈಪೋಟಿ ನಡೆಯಲಿದೆ.

ಇದನ್ನೂ ಓದಿ: ತೈಲ ದರ ಹೆಚ್ಚಳ: ಆಟೋ ಎಳೆದ ಶಶಿ ತರೂರ್, ಸೈಕಲ್ ಸವಾರರಾದ ತೇಜಸ್ವಿ ಯಾದವ್

ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಂಡು ಬಿಜೆಪಿ ಕಣಕ್ಕಿಳಿದರೆ, ಡಿಎಂಕೆಯೊಂದಿಗೆ ಕಾಂಗ್ರೆಸ್‌ ಅಖಾಡಕ್ಕಿಳಿಯಲಿದೆ. ಅಲ್ಲದೆ, ಸ್ಟಾರ್‌ ನಟ ಕಮಲ್‌ ಹಾಸನ್‌ ಅವರ ಪಕ್ಷವು ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿರುವ ಶಶಿಕಲಾ ಕೂಡ ಚುನಾವಣಾ ಕಣದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ.

ಕೇರಳದಲ್ಲಿ ಎಡಪಕ್ಷಗಳ ಎಲ್​ಡಿಎಫ್ ಮತ್ತು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ ಮಧ್ಯೆ ಹಣಾಹಣಿ ನಡೆಯಲಿದೆ. ಈ ಮಧ್ಯೆ ತಮಿಳುನಾಡಿನಲ್ಲಿ ಖಾತೆ ತೆರೆಯಲು ಬಿಜೆಪಿಯೂ ಕಣಕ್ಕೆ ಇಳಿದಿದೆ.

ರಾಜಕೀಯ ಹೈಡ್ರಾಮಕ್ಕೆ ವೇದಿಕೆಯಾಗಿದ್ದ ಪುದುಚೇರಿಯಲ್ಲಿ ಕಾಂಗ್ರೆಸ್‌ ಸರ್ಕಾರ ಪತನಗೊಂಡು, ರಾಷ್ಟ್ರಪತಿ ಆಡಳಿತ ಜಾರಿಯಾಗಿದೆ. ಕಳೆದ ಚುನಾವಣೆಯಲ್ಲಿ ಹೆಚ್ಚೇನು ಪ್ರಭಾವ ಬೀರದ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂಬ ವಿಶ್ವಾಸದಲ್ಲಿದೆ.

ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 824 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಪುರಸಭೆ ಅಧಿಕಾರಿಗಳಿಂದ ಕಿರುಕುಳ: ಡೆತ್‌ನೋಟ್ ಬರೆದಿಟ್ಟು ಪೌರಕಾರ್ಮಿಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಮಿಳುನಾಡಿನ ಚುನಾವಣಾ ಕಣದಲ್ಲಿ ನಿರ್ಣಯಕ ಪಾತ್ರ ನಿರ್ವಹಿಸುವ ಎನ್ ಟಿ ಕೆ ಬಗ್ಗೆ ತಾವು ಏನೂ ಹೇಳದೇ ಬಿಟ್ಟಿರಲು ಕಾರಣವೇನು…?

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...