HomeಮುಖಪುಟCOW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

COW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

- Advertisement -
- Advertisement -

‘ಇದೇ ಫೆಬ್ರವರಿ 25ರಂದು ನಡೆಯಬೇಕಾಗಿದ್ದ ಗಾಯ್ ಪರೀಕ್ಷಾ (ಗೋ-ಪರೀಕ್ಷೆ) ರದ್ದು ಮಾಡಿದ್ದಕ್ಕೆ ಪರೀಕ್ಷೆಗೆ ನೋಂದಾಯಿಸಿದ್ದ ಐದುವರೆ ಲಕ್ಷ ಜನರಲ್ಲದೇ ಅವರ ಕುಟುಂಬಗಳ ಸದಸ್ಯರು ನೊಂದಿದ್ದಾರೆ ಎಂದು COW-ACTION ಪೋರ್ಟಲ್ ವರದಿ ಮಾಡಿದೆ.

‘ನೋಡಿ, ನಾನು ಹಸುವನ್ನು ಹತ್ತಿರದಿಂದ ಎಂದೂ ನೋಡಿಲ್ಲ. ಆದರೆ, ಕಾಮಧೇನು ಆಯೋಗ್ ಹಸುವಿನ ಪ್ರಾಮುಖ್ಯತೆ ಕುರಿತು ಪ್ರಕಟಿಸಿದ್ದ ಸಿಲಬಸ್ ನೋಡಿದ ನಂತರ ಈ ಪರೀಕ್ಷೆಗೆ ಹಾಜರಾಗಲೇಬೇಕು ಅನಿಸಿತು’ ಎಂದು ಧಾರವಾಡದ ವಂದನಾ ಹೇಳಿದ್ದಾರೆ.

‘ಹಸುವಿನ ಸೆಗಣಿಯಲ್ಲಿ ವಿಕಿರಣ ಶಕ್ತಿ ಇರುವ ಬಗ್ಗೆ ನಮ್ಮ ಕಣ್ಣು ತೆರೆಸಿದ ಕಾಮಧೇನು ಆಯೋಗಕ್ಕೆ ನಾವು ಋಣಿಯಾಗಿದ್ದೇವೆ. ಈ ಸಲ ನನ್ನ ಮಗ ಗೋವಿಂದನ ಜೊತೆಗೆ ನಾನೂ ಪರೀಕ್ಷೆಗೆ ನೊಂದಾಯಿಸಿದ್ದೆ. ಆದರೆ ದೇಶದ್ರೋಹಿಗಳ ಅಪಪ್ರಚಾರದಿಂದ ಈ ಐತಿಹಾಸಿಕ ಪರೀಕ್ಷೆ ರದ್ದಾಗಿದ್ದನ್ನು ನಾನು ಖಂಡಿಸುತ್ತೇನೆ’ ಎಂದು ದಾವಣಗೆರೆಯ ಗೃಹಿಣಿ ಬಿಂದಕ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಏನೇನು ಪ್ರಶ್ನೆ ಬರಬಹುದು ಎಂದೆಲ್ಲ ಗೆಸ್ ಮಾಡಿದ್ದ ನಾವು ಅದಕ್ಕಾಗಿ ತಯ್ಯಾರಿ ನಡೆಸಿದ್ದೆವು. ನಮ್ಮ ಯುನಿವರ್ಸಿಟಿಯ ಖಾಲಿ ಜಾಗಗಳಲ್ಲಿ ಮಲಗುವ ಹಸುಗಳ ಬಳಿ ಹೋಗಿ ಸ್ಟಡಿ ಮಾಡಿದ್ದೆವು. ಮೊದಲೆಲ್ಲ ಸೆಗಣಿ ಹಸಿರು ಬಣ್ಣದ್ದು ಎಂದು ತಿಳಿದಿದ್ದೆವು. ಪರೀಕ್ಷೆ ಮಾಡಿದಾಗ, ಸೆಗಣಿ ಕಂದು ಮಿಶ್ರಿತ ಹಸಿರು, ಹಸಿರು ಮಿಶ್ರಿತ ಕಪ್ಪು… ಹೀಗೆ ಡಿಫರಂಟ್ ಕಲರ್ ಹೊಂದಿರುವುದನ್ನು ಗಮನಿಸಿದೆವು’ ಎಂದು ಬೆಂಗಳೂರು ವಿವಿಯ ಮನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಗ್ಯಾ ಹೇಳಿದ್ದಾರೆ.

‘ಪಂಚಗವ್ಯ-ಅಂದರೆ ಹಸುವಿನ ಸೆಗಣಿ, ಮೂತ್ರ ಇವೆಲ್ಲ ಆರೋಗ್ಯವರ್ಧಕ ಎನ್ನಲಾಗಿದೆ. ನಿಮ್ಮ ಸ್ವಂತ ಅಭಿಪ್ರಾಯವೇನು?’ ಎಂದು ಹಲವರನ್ನು COW-ACTION ಪ್ರಶ್ನಿಸಿದೆ.
‘ಖಂಡಿತ, ಆರೋಗ್ಯವರ್ಧಕಗಳು.. ನಾನು ಟೆಸ್ಟ್ ಮಾಡಲು 15 ದಿನದಿಂದ ದಿನಕ್ಕೆ ಮೂರು ಹೊತ್ತು 10 ಎಂಎಲ್ ಗೋಮೂತ್ರ ಸೇವಿಸುತ್ತಿದ್ದೇನೆ… ಫುಲ್ ರಿಲ್ಯಾಕ್ಸ್ ಆಗಿದ್ದೇನೆ’ ಎಂದು ಸುಳ್ಯದ ರಾಮಚಂದ್ರಭಟ್ಟರು ತಿಳಿಸಿದ್ದಾರೆ.

‘ಸೂರ್ಯನ ಕಿರಣಗಳನ್ನು ಡುಬ್ಬದಲ್ಲಿ ಹಿಡಿದು ಇಟ್ಟುಕೊಂಡು ಚಿನ್ನವನ್ನೇ ಉತ್ಪಾದಿಸುವ ಹಸುವಿನ ಪಂಚಗವ್ಯ ಅದ್ಭುತ… ಹಸುವಿನ ಮೂತ್ರ ನೋಡಿದ್ದೀರಾ? ಅದು ಹಳದಿ ಬಣ್ಣ ಇರಲು ಕಾರಣ, ಅದರಲ್ಲಿ ಚಿನ್ನದ ಅಂಶವಿರುತ್ತದೆ’ ಎಂದು ಮೈಸೂರಿನ ಬಿಎಸ್‌ಸಿ ವಿದ್ಯಾರ್ಥಿ ಅಕುಲ್ ಅಭಿಪ್ರಾಯಪಟ್ಟಿದ್ದಾರೆ,

‘ಜ್ವರಪೀಡಿಯ ಮನುಷ್ಯನ ಮೂತ್ರವೂ ಹಳದಿ ಇರುತ್ತಲ್ಲ’ ಎಂದು ಕೊಂಕು ನುಡಿಯುವವರ ಬಗ್ಗೆ ಕಿಡಿ ಕಾರಿರುವ ಬೀದರ್‌ನ ಗಂಗಾ, ‘ಛೇ, ಮಾನವ ಮೂತ್ರವನ್ನು ನಮ್ಮ ಗೋಮಾತೆಯ ಮೂತ್ರಕ್ಕೆ ಹೋಲಿಸಿತ್ತಾರಲ್ಲ? ದೆಹಲಿ ಆಗಿದ್ದರೆ ದೇಶದ್ರೋಹ ಕೇಸ್ ಜಡಿದು ಒಳಗೆ ಹಾಕುತ್ತಿದ್ದರು’ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ, ಈಗ ಕಾಮಧೇನು ಆಯೋಗ್‌ನ ಅಧ್ಯಕ್ಷ ವಲ್ಲಭ್‌ಭಾಯ್ ಕಥಿರಿಯಾ ಯಾರ ಫೋನನ್ನು ರಿಸೀವ್ ಮಾಡುತ್ತಿಲ್ಲ. ‘ಗಾಯ್‌ವಾಲಾ ಗಾಯಬ್’ ಎಂಬ ಟೀಕೆಗೆ ಸ್ಪಷ್ಟೀಕರಣ ನೀಡಿರುವ COW-ACTION ಪೋರ್ಟಲ್, ಕಥಿರಿಯಾ ಅವಧಿ ಫೆ. 20ಕ್ಕೆ ಮುಗಿದಿದೆ. ಗಾಯ್ ಪರೀಕ್ಷಾ ರದ್ದಾಗಿದ್ದಕ್ಕೆ ನೊಂದಿರುವ ಅವರು, ಹಿಮಾಲಯದ ತಪ್ಪಲಿನಲ್ಲಿ ಐದಾರು ಗೋಮಾತೆಯರೊಂದಿಗೆ ಗೋ-ತಪಸ್ ನಡೆಸುತ್ತಿದ್ದಾರೆ ಎಂದು ಹೇಳಿದೆ.

‘ಎರಡು ವರ್ಷದಲ್ಲಿ 750 ಕೋಟಿ ಬಜೆಟ್ ಅನ್ನು ಕಾಮಧೇನು ಆಯೋಗ್ ಏನು ಮಾಡಿತು?’ ಎಂದು ಹಿರಿಯ ನಾಗರಿಕರೊಬ್ಬರು ಕೇಳಿದ ಪ್ರಶ್ನೆಗೆ COW-ACTION ಉತ್ತರಿಸಿದ್ದು, ‘ನೋಡಿ ತಾತ, ಗೋಮಾತೆಯ ಬಗ್ಗೆ ಎಷ್ಟೊಂದು ಪ್ರಚಾರ ಮಾಡಲಾಗಿದೆ…. ಎಷ್ಟೊಂದು ಜಾಹಿರಾತು ನೀಡಲಾಗಿದೆ… ಎಷ್ಟೋ ಗೋರಕ್ಷಕರಿಗೆ ನಗದು ಬಹುಮಾನ ನೀಡಲಾಗಿದೆ’ ಎಂದು ವಿವರಿಸಿದೆ.
ಆಯೋಗ್‌ನ ಕಚೇರಿಯಿಂದ ನಾವು ಎಗರಿಸಿದ ಡಾಕ್ಯುಮೆಂಟ್ ಒಂದರ ಪ್ರಕಾರ, ಗೋ-ಪರೀಕ್ಷೆಗೆ ಸಿದ್ಧವಾಗಿದ್ದ ಪ್ರಶ್ನೆಗಳ ಸ್ಯಾಂಪಲ್ ಹೀಗಿವೆ:

1. ಮಗುವೊಂದು ಹೇಳುವ ವಾಕ್ಯವಿದು. ಇದರಲ್ಲಿ ಯಾವುದು ಸರಿ?
ಎ. ‘ಯವ್ವಾ ಆಕಳ ಸೆಗಣಿ ಹಾಕೈತಿ ನೋಡ್ಬೆ’
ಬಿ. ’ಅಮ್ಮಾ, ಹಸು ಸೆಗಣಿ ಹಾಕಿದೆ’
ಸಿ. ‘ಅಮ್ಮ, ಗೋಮಾತೆ ಪಂಚಗವ್ಯದ ಘನ ಪದಾರ್ಥವನ್ನು ಧರೆಗೆ ಇಳಿಸಿದ್ದಾಳೆ. ವಿಕಿರಣ ಹೊರಹೊಮ್ಮುತ್ತಿದೆ ಅಮ್ಮ’
ಡಿ. ‘ಬೇ ಯವ್ವಾ ಆಕ್ಳ ಹೇತೈತಿ ನೋಡು’

ಪರೀಕ್ಷೆ ರದ್ದಾಗಿದ್ದರೂ ಮುಂದೆ ನಡೆಯಲಿದೆಯಂತೆ. ಈಗಲೇ ತಯ್ಯಾರಿ ಶುರು ಮಾಡಿ ಭಕ್ತರೇ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...