Homeಮುಖಪುಟತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

- Advertisement -
- Advertisement -

ಚುನಾವಣಾ ಆಯೋಗವು ನಿನ್ನೆ ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ಮತದಾನದ ವೇಳಾಪಟ್ಟಿಯನ್ನು ಪ್ರಕಟಿಸುವ ಕೆಲವೇ ನಿಮಿಷಗಳಲ್ಲಿ, ತಮಿಳುನಾಡು ಸರ್ಕಾರವು, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಸೇವೆಗಳಲ್ಲಿ ಹುದ್ದೆಗಳ ನೇಮಕದಲ್ಲಿ ವನ್ನಿಯಾರ್ ಸಮುದಾಯಕ್ಕೆ 10.5% ಮೀಸಲಾತಿ ನೀಡಲು ಅಂಗೀಕಾರ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವರದಿಯಾಗಿಲ್ಲದ ಸಂಗತಿಯೆಂದರೆ, ಆಡಳಿತಾರೂಢ ಎಐಎಡಿಎಂಕೆ ವನ್ನಿಯಾರ್ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ) ಜೊತೆಗೆ ಚುನಾವಣಾ ಒಪ್ಪಂದ ಮಾಡಿಕೊಂಡಿದೆ.

ತಮಿಳುನಾಡು ರಾಜಕೀಯದಲ್ಲಿ ಇದು ಮಹತ್ತರ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 6 ರಂದು ರಾಜ್ಯವು ಚುನಾವಣೆಗೆ ಹೋಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಪಿ.ಎಂ.ಕೆ ಮತ್ತು ಎಐಎಡಿಎಂಕೆ ಇಂದು ಸೀಟು ಹಂಚಿಕೆ ಮಾತುಕತೆಗಳನ್ನು ಪ್ರಾರಂಭಿಸಲಿವೆ, ಆದರೆ ಎಸ್ ರಾಮದಾಸ್‌ರಿಂದ ಸ್ಥಾಪಿತವಾದ ಪಿಎಂಕೆ 25 ಸ್ಥಾನಗಳನ್ನು ಬಿಟ್ಟು ಕೊಡಲು ಒತ್ತಡ ಹೇರುತ್ತಿದೆ. ಈಗ ಜಿ.ಕೆ ಮಣಿ ನೇತೃತ್ವದ ಪಿಎಂಕೆ ಪಕ್ಷಕ್ಕೆ 234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪ್ರತಿನಿಧಿಗಳಿಲ್ಲ.

ಉತ್ತರ ತಮಿಳುನಾಡಿನಲ್ಲಿ ಪ್ರಬಲ ವ್ಯಾಪಾರ ಜಾತಿಯಾಗಿರುವ ವನ್ನಿಯಾರ್‌ಗಳ ಹಿತಾಸಕ್ತಿಗಳನ್ನು ಉತ್ತೇಜಿಸಲು ಪಿಎಂಕೆ ದೀರ್ಘಕಾಲ ಹೋರಾಡಿದೆ. ಕೊನೆಯ ಬಾರಿಗೆ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದದ್ದು 2011 ರಲ್ಲಿ ಮೂರು ಸ್ಥಾನಗಳು, ಆಗ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಪಕ್ಷವು 30 ರಲ್ಲಿ ಸ್ಪರ್ಧಿಸಿದ್ದರೂ ಸಹ, 2016 ರ ಚುನಾವಣೆಯಲ್ಲಿ ಅದು ಆ ಮೂರು ಸ್ಥಾನಗಳನ್ನು ಸಹ ಕಳೆದುಕೊಂಡಿತು. ಕೊನೆಯ ಬಾರಿಗೆ ಪಿಎಂಕೆ 2006 ಮತ್ತು 2011 ರ ನಡುವೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಅನುಭವಿಸಿತ್ತು.

ಎಐಎಡಿಎಂಕೆ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದೆ, ಬಿಜೆಪಿ ನಾಯಕರಾದ ಕಿಶನ್ ರೆಡ್ಡಿ, ವಿಕೆ ಸಿಂಗ್, ಮತ್ತು ತಮಿಳುನಾಡು ಪಕ್ಷದ ಅಧ್ಯಕ್ಷ ಎಲ್ ಮುರುಗನ್ ಸೇರಿದಂತೆ ಹಲವರು ಇಂದು ಬೆಳಿಗ್ಗೆ ಎಐಎಡಿಎಂಕೆ ನಾಯಕರನ್ನು ಭೇಟಿಯಾದರು. ತಮಿಳು ಪಕ್ಷವನ್ನು ಮುಖ್ಯಮಂತ್ರಿ ಎಡಪ್ಪಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ಪ್ರತಿನಿಧಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ 10 ಗಂಟೆ ಸುಮಾರಿಗೆ ಚೆನ್ನೈ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಎಡಿಎಂಕೆ ಮುಂಬರುವ ಚುನಾವಣೆಗೆ ಬಿಜೆಪಿಗೆ ಸುಮಾರು 20 ಸ್ಥಾನಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಧ್ಯೆ ಪ್ರತಿಪಕ್ಷ ಡಿಎಂಕೆ ಮಿತ್ರಪಕ್ಷ್ರಗಳೊಂದಿಗೆ ಸೀಟು ಹಂಚಿಕೆ ಮಾತುಕತೆಗಾಗಿ ಟಿ.ಆರ್ ಬಾಲು ಅಡಿಯಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಜೊತೆಗಿನ ಎರಡನೇ ಸುತ್ತಿನ ಸಭೆ ಒಂದು ಅಥವಾ ಎರಡು ದಿನಗಳಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರು ಗುರುವಾರ ತಮ್ಮ ಮಾತುಕತೆಯನ್ನು ಪ್ರಾರಂಭಿಸಿದ್ದಾರೆ. ಕಾಂಗ್ರೆಸ್‌ನ ಒಮ್ಮನ್ ಚಾಂಡಿ, ದಿನೇಶ್ ಗುಂಡುರಾವ್ ಮತ್ತು ರಂದೀಪ್ ಸುರ್ಜೆವಾಲಾ ಅವರು ಮಾತುಕತೆಯಲ್ಲಿ ಭಾಗವಹಿಸಿದ್ದರು.

ಈ ಮಧ್ಯೆ ಸಣ್ಣ ಪಕ್ಷಗಳು ಸಹ ರಾಜ್ಯದಲ್ಲಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಮುಳುಗಿವೆ.
ಉದಾಹರಣೆಗೆ ಎಐಎಡಿಎಂಕೆಯ ಮಾಜಿ ಶಾಸಕ ಪಾಲಾ ಕರುಪ್ಪಯ್ಯ ಅವರು ಕಮಲ್ ಹಾಸನ್ ಅವರ ಮಕ್ಕಲ್ ನಿಧಿ ಮಾಯಂ (ಎಂಎನ್‌ಎಂ) ಗೆ ಸೇರಿದ್ದಾರೆ ಮತ್ತು ಈ ಬಾರಿ ಅಭ್ಯರ್ಥಿಯಾಗಲಿದ್ದಾರೆ. ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 7 ರಂದು ಎಂಎನ್‌ಎಂ ಬಿಡುಗಡೆ ಮಾಡಲಿದೆ. ಇದು 2019 ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 4% ಮತಗಳನ್ನು ಗಳಿಸಿದೆ. ಕೆಲವು ನಗರ ಪ್ರದೇಶಗಳಲ್ಲಿ 10% ವರೆಗೆ ಮತ ಗಳಿಸಿದೆ.

ಪ್ರಮುಖ ಆಟಗಾರರಲ್ಲದಿದ್ದರೂ, ಎಂಎನ್‌ಎಂ ಮತ್ತು ನಟ-ರಾಜಕಾರಣಿ ಆರ್ ಶರಥ್‌ಕುಮಾರ್ ಅವರ ಅಖಿಲ ಭಾರತ ಸಮತುವಾ ಮಕ್ಕಲ್ ಕಚ್ಚಿ (ಎಐಎಸ್‌ಎಂಕೆ) ನಂತಹ ಪಕ್ಷಗಳು ರಾಜ್ಯದಲ್ಲಿ ತಮ್ಮದೇ ಆದ ನೆಲೆಗಳನ್ನು ಹೋದಿವೆ.

ಇಂದು, ಶರತ್‌ಕುಮಾರ್ ಅವರು ಕಮಲ್‌ಹಾಸನ್ ಅವರನ್ನು ಭೇಟಿಯಾದರು. “ಸಮಾನ ಮನಸ್ಕ ಜನರು ಭೇಟಿಯಾಗಿದ್ದು ಸಂತೋಷವಾಗಿದೆ. ನಾವು ಎಐಎಡಿಎಂಕೆ ಕರೆಗಾಗಿ ಕಾಯುತ್ತಿದ್ದೆವು, ನಾವು ಈಗ ಬೇರೆ ಹಾದಿ ತುಳಿದಿದ್ದೇವೆ” ಎಂದು ಶರತ್‌ಕುಮಾರ್ ಹೇಳಿದರು.

ಎಐಎಸ್‌ಎಂಕೆ ಸಂಸ್ಥಾಪಕರು ಈ ಹಿಂದೆ ಡಿಎಂಕೆ ಸಂಸದರಾಗಿದ್ದರು ಮತ್ತು ಅವರ ಪಕ್ಷವೂ ಒಮ್ಮೆ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ 73 ನೇ ಹುಟ್ಟುಹಬ್ಬದ ನೆನಪಿಗಾಗಿ ಅವರು ನಟಿ ಪತ್ನಿ ರಾಧಿಕಾ ಅವರೊಂದಿಗೆ ಇಂದು ವಿ.ಕೆ.ಶಶಿಕಲಾ ಅವರನ್ನು ನಿವಾಸದಲ್ಲಿ ಭೇಟಿಯಾದರು. ಅಕ್ರಮ ಆಸ್ತಿ ಪ್ರಕರಣದಲ್ಲಿ ತನ್ನ ಪಾತ್ರಕ್ಕಾಗಿ ಶಿಕ್ಷೆಯನ್ನು ಪೂರೈಸಿದ ನಂತರ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಮರಳಿದ್ದಾರೆ.

ಎಐಎಡಿಎಂಕೆಯಿಂದ ಪದಚ್ಯುತಗೊಂಡ ನಂತರ ಶಶಿಕಲಾ, ಅಮ್ಮ ಮಕ್ಕಲ್ ಮುನ್ನೇಟ್ರಾ ಕಝಗಂ(ಎಎಂಎಂಕೆ) ಪಕ್ಷ ರಚಿಸಿದರು. ಮುಂಬರುವ ಚುನಾವಣೆಯಲ್ಲಿ ಎರಡು ಪಕ್ಷಗಳು (ಶರತ್ ಪಕ್ಷ ಮತ್ತು ಶಶಿಕಲಾ ಪಕ್ಷ) ಒಟ್ಟಾಗಿ ಸ್ಪರ್ಧಿಸಬೇಕು ಎಂದು ಹೇಳಿದರು.
ನಾಮ್ ತಮಿಳಾರ್ ಕಚ್ಚಿಯ ಮುಖ್ಯಸ್ಥರಾಗಿರುವ ಮತ್ತೊಬ್ಬ ನಟ-ರಾಜಕಾರಣಿ ಸೀಮನ್ ಸಹ ಇಂದು ಶಶಿಕಲಾರನ್ನು ಭೇಟಿ ಮಾಡಿದ್ದಾರೆ.


ಇದನ್ನೂ ಓದಿ: ಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...