Homeಮುಖಪುಟತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

ತಮಿಳುನಾಡು ಚುನಾವಣೆ: ಯಾರ ಜೊತೆಗೆ ಯಾರ ಮೈತ್ರಿ? ಸದ್ಯದ ಸಂಪೂರ್ಣ ಚಿತ್ರಣ

- Advertisement -
- Advertisement -

ಚುನಾವಣಾ ಆಯೋಗವು ನಿನ್ನೆ ತಮಿಳುನಾಡು ಸೇರಿದಂತೆ ಐದು ರಾಜ್ಯಗಳ ಮತದಾನದ ವೇಳಾಪಟ್ಟಿಯನ್ನು ಪ್ರಕಟಿಸುವ ಕೆಲವೇ ನಿಮಿಷಗಳಲ್ಲಿ, ತಮಿಳುನಾಡು ಸರ್ಕಾರವು, ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಸೇವೆಗಳಲ್ಲಿ ಹುದ್ದೆಗಳ ನೇಮಕದಲ್ಲಿ ವನ್ನಿಯಾರ್ ಸಮುದಾಯಕ್ಕೆ 10.5% ಮೀಸಲಾತಿ ನೀಡಲು ಅಂಗೀಕಾರ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವರದಿಯಾಗಿಲ್ಲದ ಸಂಗತಿಯೆಂದರೆ, ಆಡಳಿತಾರೂಢ ಎಐಎಡಿಎಂಕೆ ವನ್ನಿಯಾರ್ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ) ಜೊತೆಗೆ ಚುನಾವಣಾ ಒಪ್ಪಂದ ಮಾಡಿಕೊಂಡಿದೆ.

ತಮಿಳುನಾಡು ರಾಜಕೀಯದಲ್ಲಿ ಇದು ಮಹತ್ತರ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ. ಏಪ್ರಿಲ್ 6 ರಂದು ರಾಜ್ಯವು ಚುನಾವಣೆಗೆ ಹೋಗಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಪಿ.ಎಂ.ಕೆ ಮತ್ತು ಎಐಎಡಿಎಂಕೆ ಇಂದು ಸೀಟು ಹಂಚಿಕೆ ಮಾತುಕತೆಗಳನ್ನು ಪ್ರಾರಂಭಿಸಲಿವೆ, ಆದರೆ ಎಸ್ ರಾಮದಾಸ್‌ರಿಂದ ಸ್ಥಾಪಿತವಾದ ಪಿಎಂಕೆ 25 ಸ್ಥಾನಗಳನ್ನು ಬಿಟ್ಟು ಕೊಡಲು ಒತ್ತಡ ಹೇರುತ್ತಿದೆ. ಈಗ ಜಿ.ಕೆ ಮಣಿ ನೇತೃತ್ವದ ಪಿಎಂಕೆ ಪಕ್ಷಕ್ಕೆ 234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಯಾವುದೇ ಪ್ರತಿನಿಧಿಗಳಿಲ್ಲ.

ಉತ್ತರ ತಮಿಳುನಾಡಿನಲ್ಲಿ ಪ್ರಬಲ ವ್ಯಾಪಾರ ಜಾತಿಯಾಗಿರುವ ವನ್ನಿಯಾರ್‌ಗಳ ಹಿತಾಸಕ್ತಿಗಳನ್ನು ಉತ್ತೇಜಿಸಲು ಪಿಎಂಕೆ ದೀರ್ಘಕಾಲ ಹೋರಾಡಿದೆ. ಕೊನೆಯ ಬಾರಿಗೆ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದದ್ದು 2011 ರಲ್ಲಿ ಮೂರು ಸ್ಥಾನಗಳು, ಆಗ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಪಕ್ಷವು 30 ರಲ್ಲಿ ಸ್ಪರ್ಧಿಸಿದ್ದರೂ ಸಹ, 2016 ರ ಚುನಾವಣೆಯಲ್ಲಿ ಅದು ಆ ಮೂರು ಸ್ಥಾನಗಳನ್ನು ಸಹ ಕಳೆದುಕೊಂಡಿತು. ಕೊನೆಯ ಬಾರಿಗೆ ಪಿಎಂಕೆ 2006 ಮತ್ತು 2011 ರ ನಡುವೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಅನುಭವಿಸಿತ್ತು.

ಎಐಎಡಿಎಂಕೆ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದೆ, ಬಿಜೆಪಿ ನಾಯಕರಾದ ಕಿಶನ್ ರೆಡ್ಡಿ, ವಿಕೆ ಸಿಂಗ್, ಮತ್ತು ತಮಿಳುನಾಡು ಪಕ್ಷದ ಅಧ್ಯಕ್ಷ ಎಲ್ ಮುರುಗನ್ ಸೇರಿದಂತೆ ಹಲವರು ಇಂದು ಬೆಳಿಗ್ಗೆ ಎಐಎಡಿಎಂಕೆ ನಾಯಕರನ್ನು ಭೇಟಿಯಾದರು. ತಮಿಳು ಪಕ್ಷವನ್ನು ಮುಖ್ಯಮಂತ್ರಿ ಎಡಪ್ಪಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ಪ್ರತಿನಿಧಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ 10 ಗಂಟೆ ಸುಮಾರಿಗೆ ಚೆನ್ನೈ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಎಡಿಎಂಕೆ ಮುಂಬರುವ ಚುನಾವಣೆಗೆ ಬಿಜೆಪಿಗೆ ಸುಮಾರು 20 ಸ್ಥಾನಗಳನ್ನು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಧ್ಯೆ ಪ್ರತಿಪಕ್ಷ ಡಿಎಂಕೆ ಮಿತ್ರಪಕ್ಷ್ರಗಳೊಂದಿಗೆ ಸೀಟು ಹಂಚಿಕೆ ಮಾತುಕತೆಗಾಗಿ ಟಿ.ಆರ್ ಬಾಲು ಅಡಿಯಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಕಾಂಗ್ರೆಸ್ ಜೊತೆಗಿನ ಎರಡನೇ ಸುತ್ತಿನ ಸಭೆ ಒಂದು ಅಥವಾ ಎರಡು ದಿನಗಳಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರು ಗುರುವಾರ ತಮ್ಮ ಮಾತುಕತೆಯನ್ನು ಪ್ರಾರಂಭಿಸಿದ್ದಾರೆ. ಕಾಂಗ್ರೆಸ್‌ನ ಒಮ್ಮನ್ ಚಾಂಡಿ, ದಿನೇಶ್ ಗುಂಡುರಾವ್ ಮತ್ತು ರಂದೀಪ್ ಸುರ್ಜೆವಾಲಾ ಅವರು ಮಾತುಕತೆಯಲ್ಲಿ ಭಾಗವಹಿಸಿದ್ದರು.

ಈ ಮಧ್ಯೆ ಸಣ್ಣ ಪಕ್ಷಗಳು ಸಹ ರಾಜ್ಯದಲ್ಲಿ ತಮ್ಮದೇ ಆದ ಲೆಕ್ಕಾಚಾರದಲ್ಲಿ ಮುಳುಗಿವೆ.
ಉದಾಹರಣೆಗೆ ಎಐಎಡಿಎಂಕೆಯ ಮಾಜಿ ಶಾಸಕ ಪಾಲಾ ಕರುಪ್ಪಯ್ಯ ಅವರು ಕಮಲ್ ಹಾಸನ್ ಅವರ ಮಕ್ಕಲ್ ನಿಧಿ ಮಾಯಂ (ಎಂಎನ್‌ಎಂ) ಗೆ ಸೇರಿದ್ದಾರೆ ಮತ್ತು ಈ ಬಾರಿ ಅಭ್ಯರ್ಥಿಯಾಗಲಿದ್ದಾರೆ. ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 7 ರಂದು ಎಂಎನ್‌ಎಂ ಬಿಡುಗಡೆ ಮಾಡಲಿದೆ. ಇದು 2019 ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 4% ಮತಗಳನ್ನು ಗಳಿಸಿದೆ. ಕೆಲವು ನಗರ ಪ್ರದೇಶಗಳಲ್ಲಿ 10% ವರೆಗೆ ಮತ ಗಳಿಸಿದೆ.

ಪ್ರಮುಖ ಆಟಗಾರರಲ್ಲದಿದ್ದರೂ, ಎಂಎನ್‌ಎಂ ಮತ್ತು ನಟ-ರಾಜಕಾರಣಿ ಆರ್ ಶರಥ್‌ಕುಮಾರ್ ಅವರ ಅಖಿಲ ಭಾರತ ಸಮತುವಾ ಮಕ್ಕಲ್ ಕಚ್ಚಿ (ಎಐಎಸ್‌ಎಂಕೆ) ನಂತಹ ಪಕ್ಷಗಳು ರಾಜ್ಯದಲ್ಲಿ ತಮ್ಮದೇ ಆದ ನೆಲೆಗಳನ್ನು ಹೋದಿವೆ.

ಇಂದು, ಶರತ್‌ಕುಮಾರ್ ಅವರು ಕಮಲ್‌ಹಾಸನ್ ಅವರನ್ನು ಭೇಟಿಯಾದರು. “ಸಮಾನ ಮನಸ್ಕ ಜನರು ಭೇಟಿಯಾಗಿದ್ದು ಸಂತೋಷವಾಗಿದೆ. ನಾವು ಎಐಎಡಿಎಂಕೆ ಕರೆಗಾಗಿ ಕಾಯುತ್ತಿದ್ದೆವು, ನಾವು ಈಗ ಬೇರೆ ಹಾದಿ ತುಳಿದಿದ್ದೇವೆ” ಎಂದು ಶರತ್‌ಕುಮಾರ್ ಹೇಳಿದರು.

ಎಐಎಸ್‌ಎಂಕೆ ಸಂಸ್ಥಾಪಕರು ಈ ಹಿಂದೆ ಡಿಎಂಕೆ ಸಂಸದರಾಗಿದ್ದರು ಮತ್ತು ಅವರ ಪಕ್ಷವೂ ಒಮ್ಮೆ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ 73 ನೇ ಹುಟ್ಟುಹಬ್ಬದ ನೆನಪಿಗಾಗಿ ಅವರು ನಟಿ ಪತ್ನಿ ರಾಧಿಕಾ ಅವರೊಂದಿಗೆ ಇಂದು ವಿ.ಕೆ.ಶಶಿಕಲಾ ಅವರನ್ನು ನಿವಾಸದಲ್ಲಿ ಭೇಟಿಯಾದರು. ಅಕ್ರಮ ಆಸ್ತಿ ಪ್ರಕರಣದಲ್ಲಿ ತನ್ನ ಪಾತ್ರಕ್ಕಾಗಿ ಶಿಕ್ಷೆಯನ್ನು ಪೂರೈಸಿದ ನಂತರ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಮರಳಿದ್ದಾರೆ.

ಎಐಎಡಿಎಂಕೆಯಿಂದ ಪದಚ್ಯುತಗೊಂಡ ನಂತರ ಶಶಿಕಲಾ, ಅಮ್ಮ ಮಕ್ಕಲ್ ಮುನ್ನೇಟ್ರಾ ಕಝಗಂ(ಎಎಂಎಂಕೆ) ಪಕ್ಷ ರಚಿಸಿದರು. ಮುಂಬರುವ ಚುನಾವಣೆಯಲ್ಲಿ ಎರಡು ಪಕ್ಷಗಳು (ಶರತ್ ಪಕ್ಷ ಮತ್ತು ಶಶಿಕಲಾ ಪಕ್ಷ) ಒಟ್ಟಾಗಿ ಸ್ಪರ್ಧಿಸಬೇಕು ಎಂದು ಹೇಳಿದರು.
ನಾಮ್ ತಮಿಳಾರ್ ಕಚ್ಚಿಯ ಮುಖ್ಯಸ್ಥರಾಗಿರುವ ಮತ್ತೊಬ್ಬ ನಟ-ರಾಜಕಾರಣಿ ಸೀಮನ್ ಸಹ ಇಂದು ಶಶಿಕಲಾರನ್ನು ಭೇಟಿ ಮಾಡಿದ್ದಾರೆ.


ಇದನ್ನೂ ಓದಿ: ಟಿಪ್ಪು ಜಯಂತಿ ಕುರಿತ ಟ್ವೀಟ್: ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...