Homeಮುಖಪುಟಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

2013ರಲ್ಲಿ ಚೀನಾದವರು ಭಾರತದ ಗಡಿ ಅತಿಕ್ರಮಿಸಲು ಮುಂದಾದಾಗ ನಾವು ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ನಾವು ಪ್ರತಿಯಾಗಿ ಅವರ ಪ್ರದೇಶಗಳನ್ನು ಆಕ್ರಮಿಸಿಕೊಂಡು, ಅವರೇ ರಾಜಿಮಾಡಿಕೊಳ್ಳುವಂತೆ ಮಾಡಿದ್ದೆವು

- Advertisement -
- Advertisement -

ತಮಿಳುನಾಡು ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚೀನಾ- ಭಾರತದ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ “ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಏಪ್ರಿಲ್‌ 6ಕ್ಕೆ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅವರು ಹಮ್ಮಿಕೊಂಡಿರುವ ಮೂರು ದಿನಗಳ ಪ್ರವಾಸಕ್ಕೆ ಇಂದು (ಫೆ.27) ಚಾಲನೆ ನೀಡಿದ ನಂತರ ವಕೀಲರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಪ್ಯಾಂಗಾಂಗ್‌ ಸರೋವರ ಪ್ರದೇಶಗಳ ಉತ್ತರ ಮತ್ತು ದಕ್ಷಿಣ ದಂಡೆಗಳಿಂದ ಸೇನಾಪಡೆಗಳು, ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಯಂತ್ರೋಪಕರಣಗಳನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಯು ಪೂರ್ಣಗೊಳ್ಳುವ ಮೂಲಕ ಮತ್ತು ಪೂರ್ವ ಲಡಾಖ್‌ನಲ್ಲಿ ಗಡಿ ಸಂಘರ್ಷ ನಿಷ್ಕ್ರಿಯಗೊಳಿಸುವ ಮೊದಲು, ಚೀನಿಯರು ಅತಿಕ್ರಮಣ ಆಲೋಚನೆಯನ್ನು 2017ರಲ್ಲಿ ದೋಕಲಾದಲ್ಲಿ ಪರೀಕ್ಷೆಗೆ ಒಳಪಡಿಸಿದ್ದರು” ಎಂದು ರಾಹುಲ್ ಗಾಂಧಿ ಹೇಳಿದರು.

ಇದನ್ನೂ ಓದಿ: ತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

“ಚೀನೀಯರು ನಮ್ಮ ದೇಶದ ಪ್ರಮುಖ ಕಾರ್ಯತಂತ್ರದ ಪ್ರದೇಶಗಳನ್ನು ಅತಿಕ್ರಮಿಸಿಕೊಂಡಿದ್ದಾರೆ. ಭಾರತದ ಪ್ರತಿಕ್ರಿಯೆ ಏನಿರುತ್ತದೆ ಎಂಬುದನ್ನು ನೋಡಲು ತಮ್ಮ ಅತಿಕ್ರಮಣದ ಆಲೋಚನೆಯನ್ನು ಅವರು ಮೊದಲು ದೋಕಲಾದಲ್ಲಿ ಪರೀಕ್ಷಿಸಿದ್ದರು. ಭಾರತ ಪ್ರತಿಕ್ರಿಯಿಸುವುದಿಲ್ಲ ಎನ್ನುವುದನ್ನು ಅರಿತ ಅವರು, ನಂತರ ಅದನ್ನು ಲಡಾಖ್‌ನಲ್ಲಿ ಮತ್ತೊಮ್ಮೆ ಪರೀಕ್ಷಿಸಿದ್ದಾರೆ. ಮುಂದೆ ಅವರು ಅದನ್ನು ಅರುಣಾಚಲಪ್ರದೇಶದ ಮೇಲೂ ಪರೀಕ್ಷಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಚೀನಾ ಅತಿಕ್ರಮಣ ನಡೆಸಿದಾಗ ಪ್ರಧಾನಿ ಮೋದಿಯವರ ಮೊದಲ ಪ್ರತಿಕ್ರಿಯೆ ‘ಭಾರತದೊಳಕ್ಕೆ ಯಾರೂ ಬಂದಿಲ್ಲ’ ಎನ್ನುವುದಾಗಿತ್ತು. ಇದರಿಂದಾಗಿ ಭಾರತದ ಪ್ರಧಾನಿ ನಮಗೆ ಹೆದರಿಕೊಂಡಿದ್ದಾರೆ ಎನ್ನುವ ಸೂಚನೆ ಚೀನಾದವರಿಗೆ ಸಿಕ್ಕಿತು. ಭಾರತದ ಪ್ರಧಾನಿ ನಮ್ಮ ಎದುರು ನಿಲ್ಲಲು ಹೆದರುತ್ತಾರೆ ಎನ್ನುವುದನ್ನು ಅವರು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅದೇ ಆಧಾರದ ಮೇಲೆ ಚೀನಾದವರು ಈಗಲೂ ಮಾತುಕತೆ ನಡೆಸಿದ್ದಾರೆ” ಎಂದು ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

“ನನ್ನ ಮಾತನ್ನು ಚೆನ್ನಾಗಿ ನೆನಪಿಟ್ಟುಕೊಳ್ಳಿ, ಡೆಪ್ಸಾಂಗ್‌ನಲ್ಲಿರುವ ನಮ್ಮ ನೆಲ ಅತ್ಯಂತ ಮುಖ್ಯವಾದುದು. ಇದನ್ನು ಚೀನಾದವರು ಆಕ್ರಮಿಸಿಕೊಂಡಾಗಿದೆ. ಇದು ನಮಗೆ ಮರಳಿ ಸಿಗದು, ನಮ್ಮ ಪ್ರಧಾನಿ ಕೂಡ ಆ ಭೂಮಿಯನ್ನು ಮರಳಿ ಪಡೆಯುವುದಿಲ್ಲ. ಎಲ್ಲ ಸಮಸ್ಯೆಗಳನ್ನೂ ಸರಿಪಡಿಸಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಅಷ್ಟೇ. ಆದರೆ, ನಮ್ಮ ದೇಶ ಆ ಪ್ರದೇಶವನ್ನು ಕಳೆದುಕೊಳ್ಳಲಿದೆ” ಎಂದು ವಿವರಿಸಿದರು.

“ದೇಶದೊಳಕ್ಕೆ ಯಾರೂ ಬಂದಿಲ್ಲ” ಎಂದು ಪ್ರಧಾನಿ ನೀಡಿರುವ ಹೇಳಿಕೆ ಭವಿಷ್ಯದಲ್ಲಿ ಭಾರತಕ್ಕೆ ಅಪಾಯವನ್ನು ತಂದೊಡ್ಡಲಿದೆ. ಇದರಿಂದಾಗಿ ಚೀನಾದವರು ಲಡಾಖ್‌ನಲ್ಲಿ ನಡೆಸುತ್ತಿರುವ ಸಂಘರ್ಷವನ್ನು ಇಷ್ಟಕ್ಕೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

“ಕಾಂಗ್ರೆಸ್‌ ನೇತೃತ್ವದ ಸರ್ಕಾರ ಇದ್ದಾಗ ಯಾವುದೇ ಹಿಂಜರಿಕೆ ಇಲ್ಲದೇ ಚೀನಾದೊಂದಿಗೆ ವ್ಯವಹರಿಸಿದೆ. ಭಾರತವನ್ನು ಸುತ್ತುವರಿಯಲು ನಮ್ಮಿಂದ ಸಾಧ್ಯವಿಲ್ಲವೆಂದು ಚೀನಾದವರು ಚೆನ್ನಾಗಿ ಅರ್ಥಮಾಡಿಕೊಂಡಿದ್ದರು. 2013ರಲ್ಲಿ ಚೀನಾದವರು ಭಾರತದ ಗಡಿ ಅತಿಕ್ರಮಿಸಲು ಮುಂದಾದಾಗ ನಾವು ದಿಟ್ಟ ಕ್ರಮ ತೆಗೆದುಕೊಂಡಿದ್ದೇವೆ. ನಾವು ಪ್ರತಿಯಾಗಿ ಅವರ ಪ್ರದೇಶಗಳನ್ನು ಆಕ್ರಮಿಸಿಕೊಂಡು, ಅವರೇ ರಾಜಿಮಾಡಿಕೊಳ್ಳುವಂತೆ ಮಾಡಿದ್ದೆವು. ಈಗಿನ ಪ್ರಧಾನಿಗೆ ಆ ಧೈರ್ಯವಿಲ್ಲ, ಪ್ರಧಾನಿಯೇ ರಾಜಿ ಮಾಡಿಕೊಳ್ಳಲಿದ್ದಾರೆ ಎನ್ನುವುದು ಚೀನಾದವರಿಗೆ ತಿಳಿದಿದೆ” ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.


ಇದನ್ನೂ ಓದಿ: ಆಘಾತಕಾರಿ ಸುದ್ದಿ: ವಸತಿ ಶಾಲೆಯೊಂದರಲ್ಲಿನ 317 ಹೆಣ್ಣುಮಕ್ಕಳ ಸಾಮೂಹಿಕ ಅಪಹರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...