Homeಮುಖಪುಟನಾಳೆ 19 ಉಪಗ್ರಹ ಉಡಾವಣೆ: ಒಂದು ಉಪಗ್ರಹದ ಮೇಲೆ ಮೋದಿ ಚಿತ್ರ!

ನಾಳೆ 19 ಉಪಗ್ರಹ ಉಡಾವಣೆ: ಒಂದು ಉಪಗ್ರಹದ ಮೇಲೆ ಮೋದಿ ಚಿತ್ರ!

- Advertisement -
- Advertisement -

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ವಾಣಿಜ್ಯ ಕಂಪನಿ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್‌ಎಸ್‌ಐಎಲ್)ಗಾಗಿ ಮೊದಲ ವಾಣಿಜ್ಯ ಪಿಎಸ್‌ಎಲ್‌ವಿ ಕಾರ್ಯಾಚರಣೆಯ ಭಾಗವಾಗಿ ಭಾನುವಾರ 19 ಉಪಗ್ರಹಗಳನ್ನು ಉಡಾಯಿಸಲು ಸಜ್ಜಾಗಿದೆ ಎಂದು ಪ್ರಿಂಟ್ ವರದಿ ಮಾಡಿದೆ.

ಪಿಎಸ್‌ಎಲ್‌ವಿ-ಸಿ 51 / ಅಮೆಝೋನಿಯಾ -1 ಮಿಷನ್ ಬ್ರೆಜಿಲ್‌ನ ಅಮೆಝೋನಿಯಾ -1 ಅನ್ನು ಪ್ರಾಥಮಿಕ ಪೇಲೋಡ್ ಆಗಿ ಸಾಗಿಸುತ್ತದೆ, ಜೊತೆಗೆ ಐದು ಭಾರತೀಯ ಉಪಗ್ರಹಗಳು ಸೇರಿದಂತೆ 18 ಇತರ ಅತಿಥಿ ಉಪಗ್ರಹಗಳನ್ನು ಸಾಗಿಸಲಿದೆ. ಒಂದು ನ್ಯಾನೋ ಉಪಗ್ರಹದ ಫಲಕದ ಮೇಲೆ ಪ್ರಧಾನಿ ಮೋದಿ ಭಾವಚಿತ್ರ ಸೇರಿಸಲಾಗಿದೆ.

ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್‌ಎಸ್‌ಐಎಲ್) ಕಂಪನಿಯನ್ನು ಬಾಹ್ಯಾಕಾಶ ಇಲಾಖೆಯ ಅಡಿಯಲ್ಲಿ ಮಾರ್ಚ್ 2019 ರಲ್ಲಿ ಸ್ಥಾಪಿಸಲಾಯಿತು. ಇದು ವಿವಿಧ ದೇಶಗಳಿಗಾಗಿ ಉಪಗ್ರಹಗಳನ್ನು ಹಾರಿಸುವ ವಾಣಿಜ್ಯ ಚಟುವಟಿಕೆಗಳನ್ನು ನಡೆಸುತ್ತಿದೆ.

ಅಮೇರಿಕನ್ ಕಂಪನಿ ಸ್ಪೇಸ್‌ಫ್ಲೈಟ್ ಜೊತೆಗಿನ ವಾಣಿಜ್ಯ ಒಪ್ಪಂದದ ಮೂಲಕ ಎನ್‌ಎಸ್‌ಐಎಲ್ ಈ ಕಾರ್ಯಾಚರಣೆಯನ್ನು ನಡೆಸುತ್ತಿದೆ. ರಾಕೆಟ್‌ನಲ್ಲಿ ಐದು ಭಾರತೀಯ ಉಪಗ್ರಹಗಳು ಸಾಗಲಿವೆ.

ಪ್ಯಾನೆಲ್ ಮೇಲೆ ಮೋದಿ ಚಿತ್ರ!

ಸತೀಶ್ ಧವನ್ ಎಸ್‌ಎಟಿ (ಎಸ್‌ಡಿಎಸ್‌ಎಟಿ) ಒಂದು ನ್ಯಾನೊ ಉಪಗ್ರಹವಾಗಿದ್ದು, ಇದು ಬಾಹ್ಯಾಕಾಶ ಹವಾಮಾನ, ಮ್ಯಾಗ್ನೆಟೋಸ್ಪಿಯರ್, ವಿಕಿರಣ ಮಟ್ಟಗಳು ಮತ್ತು ದೀರ್ಘ-ವ್ಯಾಪ್ತಿಯ ಸಂವಹನಕ್ಕೆ ಸಹಾಯ ಮಾಡುತ್ತದೆ. ಇದನ್ನು ಸ್ಪೇಸ್ ಕಿಡ್ಜ್ ಇಂಡಿಯಾ ನಿರ್ಮಿಸಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೆತ್ತನೆಯ ಚಿತ್ರವನ್ನು ಉಪಗ್ರಹದ ಮೇಲಿನ ಫಲಕದಲ್ಲಿ ಮತ್ತು ಭಗವದ್ಗೀತೆಯನ್ನು ಒಂದು ಫ್ಲ್ಯಾಷ್‌ನಲ್ಲಿ ಸೇರಿಸಲಾಗಿದೆ.

“ಅವರ ಆತ್ಮನಿರ್ಭರ್ ಉಪಕ್ರಮ ಮತ್ತು ಬಾಹ್ಯಾಕಾಶ ಖಾಸಗೀಕರಣಕ್ಕೆ ಐಕಮತ್ಯ ಮತ್ತು ಕೃತಜ್ಞತೆಯನ್ನು ತೋರಿಸಲು ಮೋದಿ ಚಿತ್ರ ಹಾಕಲಾಗಿದೆ” ಎಂದು ಮೂಲಗಳು ತಿಳಿಸಿವೆ.
ಭಗವದ್ಗೀತೆಯನ್ನು “ಭಾರತದ ಸರ್ವೋಚ್ಚ ಮಹಾಕಾವ್ಯ” ಮತ್ತು “ವಸುದೈವ ಕುಟುಂಬಕಂ” ಕಲ್ಪನೆಯನ್ನು ಗೌರವಿಸಲು ಸೇರಿಸಲಾಗಿದೆ.


ಇದನ್ನೂ ಓದಿ: ಬಂಗಾಳ ಚುನಾವಣೆ :ಬಿಜೆಪಿ ಗೆದ್ದರೆ ಟ್ವಿಟರ್ ಬಿಡುತ್ತೇನೆ ಮಾತು ಮತ್ತೆ ನೆನಪಿಸಿದ ಪ್ರಶಾಂತ್ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...