Homeಕರ್ನಾಟಕದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ಆಡಳಿತ ವಿರೋಧಿ ಅಲೆ ಸೃಷ್ಟಿಯಾಗುತ್ತಿದೆ; ಬಿಜೆಪಿಯಲ್ಲಿ ನನ್ನನ್ನು ನಿರ್ಲಕ್ಷಿಸಲಾಗಿದೆ - ಶ್ರೀನಿವಾಸ್ ಪ್ರಸಾದ್

- Advertisement -
- Advertisement -

“ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗುತ್ತಿದೆ” ಎಂದು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, “ಪಕ್ಷಕ್ಕಾಗಿ ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ? ತಮ್ಮ ಮನೆ ಬೆಳೆಸಿಕೊಳ್ಳೋದೇ ಆಯ್ತು. ತಮ್ಮ ಅವಧಿ ಮುಗಿಯಿತು ಎಂದು ತಪ್ಪು ಮಾಡಬಾರದು” ಎಂದು ಯಡಿಯೂರಪ್ಪ ಹೆಸರು ಪ್ರಸ್ತಾಪಿಸದೇ ಕಿಡಿಕಾರಿದ್ದಾರೆ.

“ಆಡಳಿತದ ಬಗ್ಗೆ ನಮಗೆ ತೃಪ್ತಿ ಇರಬಹುದು. ಆದರೆ, ಜನರಲ್ಲಿ ಅತೃಪ್ತಿ ಇದೆ. ಅವರಲ್ಲಿ ಹತಾಶೆ, ನಿರಾಸೆ ಮೂಡಿದೆ. ಇದು ನನ್ನ ಅನುಭವಕ್ಕೂ ಬರುತ್ತಿದೆ. ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಇದು ಜನರಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಲು ಕಾರಣವಾಗುತ್ತಿದೆ ಎಂಬ ವಿವೇಚನೆ ನಮ್ಮ ರಾಜ್ಯದ ಯಾವೊಬ್ಬ ನಾಯಕರಿಗೂ ಇಲ್ಲವಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಮೋದಿ ಹೆದರಿದ್ದಾರೆ ಎಂದು ಚೀನಾಕ್ಕೆ ಗೊತ್ತಾಗಿದೆ: ಅತಿಕ್ರಮಣದ ವಿರುದ್ಧ ರಾಹುಲ್ ವಾಗ್ದಾಳಿ

ಚುನಾವಣೆಗೆ ಇನ್ನೂ ಸಮಯವಿದೆ ಎಂದುಕೊಂಡು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೇ ಕಣ್ಮುಚ್ಚಿ ಕುಳಿತಿದ್ದರೆ, ಅಧಿಕಾರದ ಅಮಲನ್ನು ತಲೆಗೇರಿಸಿಕೊಂಡರೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಶ್ರೀನಿವಾಸ ಪ್ರಸಾದ್‌ ಎಚ್ಚರಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್‌ ವಿರುದ್ಧ ವೇದಿಕೆಯಲ್ಲೇ ಹರಿಹಾಯ್ದ ಶ್ರೀನಿವಾಸ್ ಪ್ರಸಾದ್, “ನಾನು ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಕಾಂಗ್ರೆಸ್‌ನಲ್ಲಿದ್ದಾಗ ಕೆಪಿಸಿಸಿ ಅಧ್ಯಕ್ಷ ಆಗಲಿಲ್ಲ ಎಂಬುದೊಂದನ್ನು ಹೊರತುಪಡಿಸಿದರೆ ಇನ್ನುಳಿದ ಎಲ್ಲ ಜವಾಬ್ದಾರಿ ನಿಭಾಯಿಸಿ ಪಕ್ಷ ಸಂಘಟಿಸಿದವನು. ಇದುವರೆಗೆ, ನನ್ನನ್ನು ಒಂದೇ ಒಂದು ರಾಜ್ಯ ಕಾರ್ಯಕಾರಿಣಿಗೆ ಆಹ್ವಾನಿಸಿದ್ದೀರಾ? ನನ್ನ ಸಲಹೆ ಪಡೆದಿದ್ದೀರಾ?” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಿಜೆಪಿ ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದಿರುವುದನ್ನು ಒಪ್ಪಿಕೊಳ್ಳಬೇಕು. ಮತದಾರರು ಪ್ರಜ್ಞಾವಂತರಿದ್ದಾರೆ. ತಿದ್ದಿಕೊಳ್ಳದಿದ್ದರೆ ಜನರು ತಕ್ಕ ಪಾಠ ಕಲಿಸುತ್ತಾರೆ” ವಿ.ಶ್ರೀನಿವಾಸ ಪ್ರಸಾದ್‌ ಹೇಳಿದ್ದಾರೆ.

ನಂತರ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, “ಶ್ರೀನಿವಾಸ ಪ್ರಸಾದ್‌ ಬಿಜೆಪಿಯ ಸೌಭಾಗ್ಯ. ಅವರ ಭಾವನೆಗಳನ್ನು ವರಿಷ್ಠರ ಗಮನಕ್ಕೆ ತರುವೆ” ಎಂದು ಸಮಾಧಾನಪಡಿಸಿದರು.


ಇದನ್ನೂ ಓದಿ: ತಮಿಳುನಾಡು: ದಿ. ಕರುಣಾನಿಧಿ ಮೊಮ್ಮಗ ಉದಯನಿಧಿ ವಿರುದ್ಧ ಸ್ಪರ್ಧಿಸಲಿದ್ದಾರಾ ನಟಿ ಖುಷ್ಬೂ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...