Homeಮುಖಪುಟಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ ಎಂದು ಪತ್ರಕರ್ತ ರಕ್ಷಿತ್ ಸಿಂಗ ಆರೋಪಿಸಿದ್ದರು.

- Advertisement -
- Advertisement -

“ನನ್ನ ಹೆತ್ತವರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನನ್ನ ಶಿಕ್ಷಣಕ್ಕಾಗಿ ಖರ್ಚು ಮಾಡಿದರು. ನಾನು ಈ (ಪತ್ರಿಕಾ) ವೃತ್ತಿಯನ್ನು ಆರಿಸಿಕೊಂಡೆ. ಯಾಕೆ ಎಂದು ನಿಮಗೆ ತಿಳಿದಿದೆಯೇ? ಏಕೆಂದರೆ ನಾನು ಸತ್ಯವನ್ನು ಹೇಳಲು ಬಯಸಿದ್ದೆ” ಎಂದು ಮೀರತ್ ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ರಕ್ಷಿತ್ ಸಿಂಗ್ ಹೇಳಿದ್ದಾರೆ.

ಐತಿಹಾಸಿಕ ರೈತ ಹೋರಾಟವನ್ನು ಬೆಂಬಲಿಸಿ ಫೆಬ್ರವರಿ 27 ರಂದು ಮೀರತ್‌ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ಸುಮಾರು 5,000 ಜನರು ಒಟ್ಟುಗೂಡಿದ್ದರು. ಈ ಸಭೆಯಲ್ಲಿ ಮಾತನಾಡಿದ ರಕ್ಷಿತ್ ಸಿಂಗ್, “ಸುದ್ದಿ ವಾಹಿನಿಗಳು ಸತ್ಯವನ್ನು, ನಿಜವಾದ ಸುದ್ದಿಯನ್ನು ತೋರಿಸುವುದನ್ನು ನಿಲ್ಲಿಸಿವೆ. ಅವು ಕೇವಲ ಸುಳ್ಳು ಹೇಳುತ್ತಿವೆ. ಸತ್ಯವನ್ನು ತೋರಿಸದಿರುವುದು ಸಹ ಸುಳ್ಳಿಗೆ ಸಮ. ನಾನು ಈ ಸುಳ್ಳಿಗೆ ವಿರೋಧಿಯಾಗಿದ್ದೇನೆ, ಹಾಗಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಆಕ್ರೋಶಗೊಂಡರು. ನಂತರ ಎಬಿಪಿ ಲಾಂಛನವಿರುವ ಮೈಕ್ ತೆಗೆದು ಎಸೆದು, ಈಗಲೇ ಈ ವಾಹಿನಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದರು.

“ಎಬಿಪಿ ನ್ಯೂಸ್ ಸತ್ಯವನ್ನು ಹೇಳಲು ಬಯಸುತ್ತಿಲ್ಲ. ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ” ಎಂದು ಕಿಡಿಕಾರಿದರು. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಶರವೇಗದಲ್ಲಿ ವೈರಲ್ ಆಗಿತ್ತು.

ಮೀರತ್‌ನಲ್ಲಿನ ಕಿಸಾನ್ ಮಹಾಪಂಚಾಯತ್ ಅನ್ನು ರಾಷ್ಟ್ರೀಯ ಲೋಕ ದಳ ಪಕ್ಷದವರು ಆಯೋಜಿಸಿದ್ದರು. ಇದರ ಉಪಾಧ್ಯಕ್ಷ ಜಯಂತ್ ಚೌಧರಿ ರಕ್ಷಿತ್ ರಾಜೀನಾಮೆ ಘೋಷಿಸುವಾಗ ಅಲ್ಲಿಯೇ ಇದ್ದರು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ರಕ್ಷಿತ್ 15 ವರ್ಷಗಳಿಂದ ಪತ್ರಕರ್ತರಾಗಿದ್ದು, ಎಬಿಪಿ ನ್ಯೂಸ್‌ಗೆ ಸೇರುವ ಮೊದಲು ದೈನಿಕ್ ಭಾಸ್ಕರ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ನಂತರ ಎಬಿಪಿ ನ್ಯೂಸ್‌ ಸೇರಿ ಪಶ್ಚಿಮ ಉತ್ತರಪ್ರದೇಶದ ಭಾಗದ ವರದಿಗಳನ್ನು ಮಾಡುತ್ತಿದ್ದರು.

ನ್ಯೂಸ್‌ಲಾಂಡ್ರಿಯೊಂದಿಗೆ ಮಾತನಾಡಿದ ರಕ್ಷಿತ್, “ಸುದ್ದಿ ಮಾಧ್ಯಮಗಳ ಒಟ್ಟಾರೆ ಪರಿಸ್ಥಿತಿ ನನ್ನ ಈ ಹತಾಶೆಗೆ ಕಾರಣವಾಗಿದ್ದು, ಇದು ರಾಜೀನಾಮೆ ನೀಡಲು ನನ್ನನ್ನು ಪ್ರೇರೇಪಿಸಿತು. ಈ ಘಟನೆಯ ನಂತರ ನನ್ನನ್ನು ಯಾರೂ ಕೆಲಸಕ್ಕೆ ಸೇರಿಸಿಕೊಳ್ಳುವುದಿಲ್ಲ. ಆದರೆ ಪತ್ರಿಕಾ ವೃತ್ತಿಯನ್ನು ಮುಂದುವರೆಸುತ್ತೇನೆ” ಎಂದು ಹೇಳಿದರು. ಆದರೆ ಈ ವೇದಿಕೆಯನ್ನು ಯಾಕೆ ಆಯ್ಕೆ ಮಾಡಿಕೊಂಡರು ಎಂಬುವುದರ ಬಗ್ಗೆ ರಕ್ಷಿತ್ ಸುಳಿವು ನೀಡಲಿಲ್ಲ.

ರಕ್ಷಿತ್ ಸಿಂಗ್ ರಾಜೀನಾಮೆ ಘೋಷಿಸಿದರು ಸಹ ಇನ್ನೂ ಔಪಚಾರಿಕವಾಗಿ ತನ್ನ ರಾಜೀನಾಮೆಯನ್ನು ನೀಡಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಎಬಿಪಿ ನ್ಯೂಸ್, “ನಾವು ಉನ್ನತ ಮಟ್ಟದ ನೈತಿಕ ಪತ್ರಿಕೋದ್ಯಮದಲ್ಲಿ ನಂಬಿಕೆ ಇರಿಸಿದ್ದೇವೆ. ಇದರ ಆಧಾರದಲ್ಲಿ ನಮ್ಮ ವರದಿಗಾರರಿಗೆ ನಿಷ್ಪಕ್ಷಪಾತತೆಯಿಂದಿರಲು ಆದೇಶ ನೀಡಿದ್ದೇವೆ. ಸ್ವಾತಂತ್ರ್ಯ, ನ್ಯಾಯ, ನೆಲದ ಕಾನೂನು, ಪತ್ರಿಕೋದ್ಯಮದ ನಿಯಮ ಮತ್ತು ಸಂಪಾದಕೀಯ ತತ್ವಗಳಿಗೆ ಕಟ್ಟುನಿಟ್ಟಾಗಿ ನಡೆದುಕೊಳ್ಳುವಂತೆ ಹೇಳಿತ್ತೇವೆ. ಸತ್ಯವನ್ನು ಆಧರಿಸಿದ ವರದಿಗಾರಿಕೆ ಯಾವಾಗಲೂ ನಮ್ಮ ಸಂಸ್ಥೆಯ ಕೇಂದ್ರವಾಗಿದೆ. ನಮ್ಮ ವರದಿಗಾರರೊಬ್ಬರು ನಮ್ಮ ಬ್ರ್ಯಾಂಡ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಸಂಸ್ಥೆಯ ಬಗ್ಗೆ ಸುಳ್ಳು ಹೇಳಿದ್ದಾರೆ ಎಂಬುದನ್ನು ಕೇಳಿ ಆಘಾತವಾಗಿದೆ” ಎಂದು ದೂರಿದ್ದಾರೆ.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ರಕ್ಷಿತ್ ಸಿಂಗ್ ಅವರೊಂದಿಗೆ ಕೆಲಸ ಮಾಡಿದ ಸಹೋದ್ಯೋಗಿಗಳನ್ನು ಮಾತನಾಡಿಸಿದಾಗ, ಅವರೂ ಕೂಡ ರಕ್ಷಿತ್ ಅವರ ಆರೋಪಗಳನ್ನು ದೃಢಪಡಿಸಿದ್ದಾರೆ. ಆದರೆ ಭಯದಿಂದ ಯಾರೂ ಕೂಡ ಹೆಸರು ಹೇಳಲಿಲ್ಲ ಎಂದು ನ್ಯೂಸ್‌ಲಾಂಡ್ರಿಯು ವರದಿ ಮಾಡಿದೆ.

ರಕ್ಷಿತ್ ಅವರ ರಾಜೀನಾಮೆ ಮತ್ತು ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಹಲವಾರು ರಾಜಕೀಯ ನಾಯಕರು ರಾಜೀನಾಮೆ ನೀಡಿದ್ದಾರೆ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಮೈತ್ರಿಯಿಂದ ಹೊರಬಂದಿವೆ.

ಕಳೆದ 95 ದಿನಗಳಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಹೋರಾಟ ಮಾಡುತ್ತಿರುವವರು ರೈತರಲ್ಲ; ಖಲೀಸ್ತಾನಿಗಳು, ಭಯೋತ್ಪಾದಕರು, ನಕ್ಸಲರು ಎಂದು ಮುಂತಾಗಿ ಬಿಂಬಿಸಿ ಕೆಲವು ಮಾಧ್ಯಮಗಳಿಂದ ವರದಿ ಮಾಡಿಸಲಾಗುತ್ತಿದೆ. ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದೆ. ಆದರೆ ಇದಾವುದಕ್ಕೂ ಮಣಿಯದ ರೈತರು ತಮ್ಮ ಬೇಡಿಕೆಯೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...