Homeಮುಖಪುಟಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ ಎಂದು ಪತ್ರಕರ್ತ ರಕ್ಷಿತ್ ಸಿಂಗ ಆರೋಪಿಸಿದ್ದರು.

- Advertisement -
- Advertisement -

“ನನ್ನ ಹೆತ್ತವರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನನ್ನ ಶಿಕ್ಷಣಕ್ಕಾಗಿ ಖರ್ಚು ಮಾಡಿದರು. ನಾನು ಈ (ಪತ್ರಿಕಾ) ವೃತ್ತಿಯನ್ನು ಆರಿಸಿಕೊಂಡೆ. ಯಾಕೆ ಎಂದು ನಿಮಗೆ ತಿಳಿದಿದೆಯೇ? ಏಕೆಂದರೆ ನಾನು ಸತ್ಯವನ್ನು ಹೇಳಲು ಬಯಸಿದ್ದೆ” ಎಂದು ಮೀರತ್ ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ರಕ್ಷಿತ್ ಸಿಂಗ್ ಹೇಳಿದ್ದಾರೆ.

ಐತಿಹಾಸಿಕ ರೈತ ಹೋರಾಟವನ್ನು ಬೆಂಬಲಿಸಿ ಫೆಬ್ರವರಿ 27 ರಂದು ಮೀರತ್‌ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ಸುಮಾರು 5,000 ಜನರು ಒಟ್ಟುಗೂಡಿದ್ದರು. ಈ ಸಭೆಯಲ್ಲಿ ಮಾತನಾಡಿದ ರಕ್ಷಿತ್ ಸಿಂಗ್, “ಸುದ್ದಿ ವಾಹಿನಿಗಳು ಸತ್ಯವನ್ನು, ನಿಜವಾದ ಸುದ್ದಿಯನ್ನು ತೋರಿಸುವುದನ್ನು ನಿಲ್ಲಿಸಿವೆ. ಅವು ಕೇವಲ ಸುಳ್ಳು ಹೇಳುತ್ತಿವೆ. ಸತ್ಯವನ್ನು ತೋರಿಸದಿರುವುದು ಸಹ ಸುಳ್ಳಿಗೆ ಸಮ. ನಾನು ಈ ಸುಳ್ಳಿಗೆ ವಿರೋಧಿಯಾಗಿದ್ದೇನೆ, ಹಾಗಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಆಕ್ರೋಶಗೊಂಡರು. ನಂತರ ಎಬಿಪಿ ಲಾಂಛನವಿರುವ ಮೈಕ್ ತೆಗೆದು ಎಸೆದು, ಈಗಲೇ ಈ ವಾಹಿನಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದರು.

“ಎಬಿಪಿ ನ್ಯೂಸ್ ಸತ್ಯವನ್ನು ಹೇಳಲು ಬಯಸುತ್ತಿಲ್ಲ. ಕಿಸಾನ್ ಮಹಾಪಂಚಾಯತ್‌ನಲ್ಲಿ ವಾಸ್ತವದಲ್ಲಿರುವ ಜನಸಂಖ್ಯೆಗಿಂತ ಕಡಿಮೆ ಜನರಿದ್ದಾರೆ ಎಂದು ಹೇಳಲು ನನಗೆ ಈ ಸುದ್ದಿವಾಹಿನಿ ಆದೇಶಿಸಿದೆ” ಎಂದು ಕಿಡಿಕಾರಿದರು. ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಶರವೇಗದಲ್ಲಿ ವೈರಲ್ ಆಗಿತ್ತು.

ಮೀರತ್‌ನಲ್ಲಿನ ಕಿಸಾನ್ ಮಹಾಪಂಚಾಯತ್ ಅನ್ನು ರಾಷ್ಟ್ರೀಯ ಲೋಕ ದಳ ಪಕ್ಷದವರು ಆಯೋಜಿಸಿದ್ದರು. ಇದರ ಉಪಾಧ್ಯಕ್ಷ ಜಯಂತ್ ಚೌಧರಿ ರಕ್ಷಿತ್ ರಾಜೀನಾಮೆ ಘೋಷಿಸುವಾಗ ಅಲ್ಲಿಯೇ ಇದ್ದರು.

ಇದನ್ನೂ ಓದಿ: ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ರಕ್ಷಿತ್ 15 ವರ್ಷಗಳಿಂದ ಪತ್ರಕರ್ತರಾಗಿದ್ದು, ಎಬಿಪಿ ನ್ಯೂಸ್‌ಗೆ ಸೇರುವ ಮೊದಲು ದೈನಿಕ್ ಭಾಸ್ಕರ್ ಪತ್ರಿಕೆಯಲ್ಲಿ ಕೆಲಸ ಮಾಡಿದ್ದರು. ನಂತರ ಎಬಿಪಿ ನ್ಯೂಸ್‌ ಸೇರಿ ಪಶ್ಚಿಮ ಉತ್ತರಪ್ರದೇಶದ ಭಾಗದ ವರದಿಗಳನ್ನು ಮಾಡುತ್ತಿದ್ದರು.

ನ್ಯೂಸ್‌ಲಾಂಡ್ರಿಯೊಂದಿಗೆ ಮಾತನಾಡಿದ ರಕ್ಷಿತ್, “ಸುದ್ದಿ ಮಾಧ್ಯಮಗಳ ಒಟ್ಟಾರೆ ಪರಿಸ್ಥಿತಿ ನನ್ನ ಈ ಹತಾಶೆಗೆ ಕಾರಣವಾಗಿದ್ದು, ಇದು ರಾಜೀನಾಮೆ ನೀಡಲು ನನ್ನನ್ನು ಪ್ರೇರೇಪಿಸಿತು. ಈ ಘಟನೆಯ ನಂತರ ನನ್ನನ್ನು ಯಾರೂ ಕೆಲಸಕ್ಕೆ ಸೇರಿಸಿಕೊಳ್ಳುವುದಿಲ್ಲ. ಆದರೆ ಪತ್ರಿಕಾ ವೃತ್ತಿಯನ್ನು ಮುಂದುವರೆಸುತ್ತೇನೆ” ಎಂದು ಹೇಳಿದರು. ಆದರೆ ಈ ವೇದಿಕೆಯನ್ನು ಯಾಕೆ ಆಯ್ಕೆ ಮಾಡಿಕೊಂಡರು ಎಂಬುವುದರ ಬಗ್ಗೆ ರಕ್ಷಿತ್ ಸುಳಿವು ನೀಡಲಿಲ್ಲ.

ರಕ್ಷಿತ್ ಸಿಂಗ್ ರಾಜೀನಾಮೆ ಘೋಷಿಸಿದರು ಸಹ ಇನ್ನೂ ಔಪಚಾರಿಕವಾಗಿ ತನ್ನ ರಾಜೀನಾಮೆಯನ್ನು ನೀಡಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಎಬಿಪಿ ನ್ಯೂಸ್, “ನಾವು ಉನ್ನತ ಮಟ್ಟದ ನೈತಿಕ ಪತ್ರಿಕೋದ್ಯಮದಲ್ಲಿ ನಂಬಿಕೆ ಇರಿಸಿದ್ದೇವೆ. ಇದರ ಆಧಾರದಲ್ಲಿ ನಮ್ಮ ವರದಿಗಾರರಿಗೆ ನಿಷ್ಪಕ್ಷಪಾತತೆಯಿಂದಿರಲು ಆದೇಶ ನೀಡಿದ್ದೇವೆ. ಸ್ವಾತಂತ್ರ್ಯ, ನ್ಯಾಯ, ನೆಲದ ಕಾನೂನು, ಪತ್ರಿಕೋದ್ಯಮದ ನಿಯಮ ಮತ್ತು ಸಂಪಾದಕೀಯ ತತ್ವಗಳಿಗೆ ಕಟ್ಟುನಿಟ್ಟಾಗಿ ನಡೆದುಕೊಳ್ಳುವಂತೆ ಹೇಳಿತ್ತೇವೆ. ಸತ್ಯವನ್ನು ಆಧರಿಸಿದ ವರದಿಗಾರಿಕೆ ಯಾವಾಗಲೂ ನಮ್ಮ ಸಂಸ್ಥೆಯ ಕೇಂದ್ರವಾಗಿದೆ. ನಮ್ಮ ವರದಿಗಾರರೊಬ್ಬರು ನಮ್ಮ ಬ್ರ್ಯಾಂಡ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಸಂಸ್ಥೆಯ ಬಗ್ಗೆ ಸುಳ್ಳು ಹೇಳಿದ್ದಾರೆ ಎಂಬುದನ್ನು ಕೇಳಿ ಆಘಾತವಾಗಿದೆ” ಎಂದು ದೂರಿದ್ದಾರೆ.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ರಕ್ಷಿತ್ ಸಿಂಗ್ ಅವರೊಂದಿಗೆ ಕೆಲಸ ಮಾಡಿದ ಸಹೋದ್ಯೋಗಿಗಳನ್ನು ಮಾತನಾಡಿಸಿದಾಗ, ಅವರೂ ಕೂಡ ರಕ್ಷಿತ್ ಅವರ ಆರೋಪಗಳನ್ನು ದೃಢಪಡಿಸಿದ್ದಾರೆ. ಆದರೆ ಭಯದಿಂದ ಯಾರೂ ಕೂಡ ಹೆಸರು ಹೇಳಲಿಲ್ಲ ಎಂದು ನ್ಯೂಸ್‌ಲಾಂಡ್ರಿಯು ವರದಿ ಮಾಡಿದೆ.

ರಕ್ಷಿತ್ ಅವರ ರಾಜೀನಾಮೆ ಮತ್ತು ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಹಲವಾರು ರಾಜಕೀಯ ನಾಯಕರು ರಾಜೀನಾಮೆ ನೀಡಿದ್ದಾರೆ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಮೈತ್ರಿಯಿಂದ ಹೊರಬಂದಿವೆ.

ಕಳೆದ 95 ದಿನಗಳಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಹೋರಾಟ ಮಾಡುತ್ತಿರುವವರು ರೈತರಲ್ಲ; ಖಲೀಸ್ತಾನಿಗಳು, ಭಯೋತ್ಪಾದಕರು, ನಕ್ಸಲರು ಎಂದು ಮುಂತಾಗಿ ಬಿಂಬಿಸಿ ಕೆಲವು ಮಾಧ್ಯಮಗಳಿಂದ ವರದಿ ಮಾಡಿಸಲಾಗುತ್ತಿದೆ. ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರಿಸಲಾಗುತ್ತಿದೆ. ಆದರೆ ಇದಾವುದಕ್ಕೂ ಮಣಿಯದ ರೈತರು ತಮ್ಮ ಬೇಡಿಕೆಯೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...