Homeಮುಖಪುಟಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

- Advertisement -
- Advertisement -

ಇತ್ತೀಚೆಗೆ ಗುಜರಾತ್ ಮಕ್ಕಳಲ್ಲಿನ ಅಪೌಷ್ಟಿಕತೆಯ ಕುರಿತಾದ ಆಘಾತಕಾರಿ ವರದಿಯೊಂದು ಪ್ರಕಟವಾಗಿದೆ. ಅದೇ ರೀತಿ 2019ರ ಅಕ್ಟೋಬರ್‌ನಲ್ಲಿ ಫೋರ್ಬ್ಸ್ ಪ್ರಕಟಿಸಿದ ಶ್ರೀಮಂತರ ಪಟ್ಟಿಯನ್ನು ಗಣನೆಗೆ ತೆಗೆದುಕೊಂಡರೆ, ಅದರಲ್ಲಿ ಐವರು ಟಾಪ್ ಶ್ರೀಮಂತ ಭಾರತೀಯರಲ್ಲಿ ನಾಲ್ವರು ಗುಜರಾತಿಗಳೇ ಆಗಿದ್ದಾರೆ. ಟಾಪ್ ಎರಡು ಸ್ಥಾನಗಳಲ್ಲಿರುವವರು ಮೋದಿಯವರಿಗೆ ಹತ್ತಿರದ ಸ್ನೇಹಿತರಾಗಿದ್ದಾರೆ. ಅಪೌಷ್ಟಿಕತೆ ಮತ್ತು ಕೊಬ್ಬು (FAT) ಸಂಪತ್ತಿನ ಅಸಮಾನ ಹಂಚಿಕೆಗೆ ಒಂದು ರೂಪಕದಂತೆ ಭಾಸವಾಗುತ್ತಿದೆ.

ಗುಜರಾತ್‌ನ ಸಾಮಾಜಿಕ-ಆರ್ಥಿಕ ಪರಿಶೀಲನೆಯ ವರದಿಯ ಪ್ರಕಾರ, ರಾಜ್ಯದ ಅಂಗನವಾಡಿಗಳಲ್ಲಿರುವ 43 ಲಕ್ಷ ಮಕ್ಕಳಲ್ಲಿ 1.47 ಲಕ್ಷ ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ (severe acute malnutrition- SAM) ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ‘ಆರ್ಥಿಕವಾಗಿ ಪ್ರಗತಿಪರ’ ರಾಜ್ಯವಾದ ಗುಜರಾತ್‌ನಲ್ಲಿ ಅಪೌಷ್ಟಿಕತೆ ಹೇಗೆ ಒಂದು ಸವಾಲಾಗಿ ಮುಂದುವರೆದಿದೆ ಎಂಬುದನ್ನು ಈ ವರದಿ ಬಹಿರಂಗಪಡಿಸುತ್ತದೆ. ಗುಜರಾತಿನ ಅಭಿವೃದ್ಧಿ ಮಾದರಿಯನ್ನು ಕೇಂದ್ರ ಸರ್ಕಾರವು ಭಾರತದಾದ್ಯಂತ ಪುನರಾವರ್ತಿಸುವ ಮಾತನಾಡುತ್ತಿರುವ ಈ ಸಂದರ್ಭದಲ್ಲಿಯೇ ಈ ವರದಿ ಹೊರಬಿದ್ದಿದೆ.

ಈಗ ನಮಗೆ ಥಟ್ಟನೆ ನೆನಪಾಗುವುದು 2019ರ ಫೋರ್ಬ್ಸ್ ಶ್ರೀಮಂತರ ಪಟ್ಟಿ. ಭಾರತದ ಮೊದಲ ಐವರು ಶ್ರೀಮಂತರ ಪೈಕಿ ನಾಲ್ವರು ಗುಜರಾತಿಗಳು! ಅಸಮಾನ ಸಂಪತ್ತಿನ ಹಂಚಿಕೆಗೆ ಮತ್ತು ಕೇಂದ್ರ, ಗುಜರಾತ್ ಸರ್ಕಾರಗಳ ಪಾಲಿಸಿಗಳಿಗೆ ಇವೆರಡೂ-ಅಪೌಷ್ಟಿಕತೆ ಮತ್ತು ‘ಕೊಬ್ಬು’ ಹೆಚ್ಚಿದವರು- ಕನ್ನಡಿ ಹಿಡಿಯುತ್ತಿವೆ.

ಶೇ. 3.41 ಅಂಗನವಾಡಿ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇರುವುದು ಕಂಡುಬಂದಿದೆ. ಅಂಗನವಾಡಿ ಹೊರಗಿರುವ ಮಕ್ಕಳನ್ನು ಗಣನೆಗೆ ತೆಗೆದುಕೊಂಡರೆ ಒಟ್ಟು ಅಪೌಷ್ಟಿಕ ಮಕ್ಕಳ ಸಂಖ್ಯೆ ತುಂಬಾ ಹೆಚ್ಚಿರಬಹುದು.

ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾದ ಉತ್ತರಗಳ ಪ್ರಕಾರ, ರಾಜ್ಯದ ಐದು ಜಿಲ್ಲೆಗಳ 46 ತಾಲೂಕುಗಳಲ್ಲಿ 1.97 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಮತ್ತು 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಬನಸ್ಕಂತ, ಪಟಾನ್, ನವಸಾರಿ, ಜುನಾಗಢ್ ಮತ್ತು ಖೇಡಾ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ತೀವ್ರವಾಗಿದೆ.

1.97 ಲಕ್ಷ ಅಪೌಷ್ಟಿಕ ಮಕ್ಕಳಲ್ಲಿ 68% ಪಟಾನ್ ಜಿಲ್ಲೆಯ ಎಂಟು ತಾಲೂಕಿನಲ್ಲಿದ್ದಾರೆ. ಈ ಐದು ಜಿಲ್ಲೆಗಳಲ್ಲಿ 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅದರಲ್ಲಿ 14,371 ಮಕ್ಕಳು ಪಟಾನ್ ಜಿಲ್ಲೆಯವರು.

2015 ರ ಮೇ ತಿಂಗಳಲ್ಲಿ ಗುಜರಾತ್ ಸರ್ಕಾರವು ರಾಜ್ಯವನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸಲು ನಿರ್ಧರಿಸಿದೆ ಎಂದು ಗುಜರಾತ್‌ನ ಸಾಮಾಜಿಕ-ಆರ್ಥಿಕ ವಿಮರ್ಶೆ (2015-16) ತಿಳಿಸಿತ್ತು. ಆದರೆ ಅದಾಗಲೇ ಇಲ್ಲ. ಗುಜರಾತಿನ ನಾಲ್ವರು ಉದ್ಯಮಿಗಳು ಟಾಪ್ 5 ಶ್ರೀಮಂತರ ಪಟ್ಟಿಗೆ ಸೇರಿದ್ದು ಮಾತ್ರ ಸರಾಗವಾಗಿ ನಡೆಯಿತು ಎಂಬುದು ವಿರೋಧಭಾಸವಲ್ಲವೇ?

ವೈದ್ಯಕೀಯ ತೊಂದರೆಗಳನ್ನು ಹೊಂದಿರುವ ಮತ್ತು ಹಸಿವು ಪರೀಕ್ಷೆಯಲ್ಲಿ ವಿಫಲರಾದ ಅಪೌಷ್ಟಿಕ ಮಕ್ಕಳನ್ನು ಮಕ್ಕಳ ಅಪೌಷ್ಟಿಕತೆ ಚಿಕಿತ್ಸಾ ಕೇಂದ್ರಗಳಿಗೆ ಅಥವಾ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಗಳಿಗೆ ಸೇರಿಸಲು ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ರಾಜ್ಯ ಸಚಿವ ವಾಸುಬೆನ್ ತ್ರಿವೇದಿ, “ರಾಜ್ಯ ಸರ್ಕಾರವು ಸಹ ಅಷ್ಟೇ ಚಿಂತಿತವಾಗಿದೆ. ಆದ್ದರಿಂದ 2016-17ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ ದೂಧ್ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲು ನಾವು ನಿರ್ಧರಿಸಿದ್ದೇವೆ ಎಂದಿದ್ದಾರೆ. ಈಗ ಅಲ್ಲಿನ ಅಂಗನವಾಡಿಗಳಲ್ಲಿ ವಾರದಲ್ಲಿ ಎರಡು ಸಲ ಮಾತ್ರ ಹಾಲು ನೀಡಲಾಗುತ್ತಿದೆ.

ಕೊಬ್ಬಿದ ಕುಬೇರರು

2019ರಲ್ಲಿ ಫೋರ್ಬ್ಸ್ ಪ್ರಕಟಿಸಿದ ಪಟ್ಟಿ ಪ್ರಕಾರ, 51.4 ಬಿಲಿಯನ್ ಡಾಲರ್‌ಗಳ ಒಡೆಯ ಅಂಬಾನಿ ಮೊದಲ ಸ್ಥಾನದಲ್ಲಿ, 15.7 ಬಿಲಿಯನ್ ಡಾಲರ್ ಹೊಂದಿರುವ ಅದಾನಿ 2ನೆ ಸ್ಥಾನದಲ್ಲಿ, 15 ಬಿಲಿಯನ್ ಡಾಲರ್ ಶ್ರೀಮಂತ ಪಲ್ಲೊಂಜಿ ಮಿಸ್ತ್ರಿ 4ನೆ ಸ್ಥಾನದಲ್ಲಿ ಮತ್ತು 14 ಬಿಲಿಯನ್ ಡಾಲರ್ ಹೊಂದಿರುವ ಉದಯ ಕೊಟಕ್ 5ನೆ ಸ್ಥಾನದಲ್ಲಿದ್ದಾರೆ. ಇವರೆಲ್ಲ ಗುಜರಾತಿಗಳು.

ಕೊರೋನಾ-ಲಾಕ್‌ಡೌನ್ ಸಮಯದಲ್ಲೇ ಅಂಬಾನಿ-ಅದಾನಿ ಗಳಿಕೆ ತೀವ್ರ ಏರಿಕೆಯಾಗಿದೆ!
ಗುಜರಾತ್ ಅಂಗನವಾಡಿಗಳಲ್ಲಿ ವಾರಕ್ಕೆ ಕೇವಲ ಒಂದಿನ ಅಥವಾ ಎರಡು ದಿನ ಹಾಲು ವಿತರಿಸಲಾಗುತ್ತಿದೆ. ಗುಜರಾತಿನಲ್ಲಿ ಸುಪ್ರಸಿದ್ಧ ಅಮುಲ್ ಡೈರಿ ಇದ್ದರೂ ಅಲ್ಲಿನ ಮಕ್ಕಳಿಗೆ ಹಾಲು, ಮೊಟ್ಟೆಯಂತಹ ಪೌಷ್ಠಿಕ ಆಹಾರಗಳನ್ನು ನೀಡಲು ಸರ್ಕಾರ ವಿಫಲವಾಗಿದೆ ಅಂದರೆ ಅದರ ಆದ್ಯತೆ ಯಾವುದಾಗಿದೆ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...