Homeಮುಖಪುಟಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

- Advertisement -
- Advertisement -

ಇತ್ತೀಚೆಗೆ ಗುಜರಾತ್ ಮಕ್ಕಳಲ್ಲಿನ ಅಪೌಷ್ಟಿಕತೆಯ ಕುರಿತಾದ ಆಘಾತಕಾರಿ ವರದಿಯೊಂದು ಪ್ರಕಟವಾಗಿದೆ. ಅದೇ ರೀತಿ 2019ರ ಅಕ್ಟೋಬರ್‌ನಲ್ಲಿ ಫೋರ್ಬ್ಸ್ ಪ್ರಕಟಿಸಿದ ಶ್ರೀಮಂತರ ಪಟ್ಟಿಯನ್ನು ಗಣನೆಗೆ ತೆಗೆದುಕೊಂಡರೆ, ಅದರಲ್ಲಿ ಐವರು ಟಾಪ್ ಶ್ರೀಮಂತ ಭಾರತೀಯರಲ್ಲಿ ನಾಲ್ವರು ಗುಜರಾತಿಗಳೇ ಆಗಿದ್ದಾರೆ. ಟಾಪ್ ಎರಡು ಸ್ಥಾನಗಳಲ್ಲಿರುವವರು ಮೋದಿಯವರಿಗೆ ಹತ್ತಿರದ ಸ್ನೇಹಿತರಾಗಿದ್ದಾರೆ. ಅಪೌಷ್ಟಿಕತೆ ಮತ್ತು ಕೊಬ್ಬು (FAT) ಸಂಪತ್ತಿನ ಅಸಮಾನ ಹಂಚಿಕೆಗೆ ಒಂದು ರೂಪಕದಂತೆ ಭಾಸವಾಗುತ್ತಿದೆ.

ಗುಜರಾತ್‌ನ ಸಾಮಾಜಿಕ-ಆರ್ಥಿಕ ಪರಿಶೀಲನೆಯ ವರದಿಯ ಪ್ರಕಾರ, ರಾಜ್ಯದ ಅಂಗನವಾಡಿಗಳಲ್ಲಿರುವ 43 ಲಕ್ಷ ಮಕ್ಕಳಲ್ಲಿ 1.47 ಲಕ್ಷ ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ (severe acute malnutrition- SAM) ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ‘ಆರ್ಥಿಕವಾಗಿ ಪ್ರಗತಿಪರ’ ರಾಜ್ಯವಾದ ಗುಜರಾತ್‌ನಲ್ಲಿ ಅಪೌಷ್ಟಿಕತೆ ಹೇಗೆ ಒಂದು ಸವಾಲಾಗಿ ಮುಂದುವರೆದಿದೆ ಎಂಬುದನ್ನು ಈ ವರದಿ ಬಹಿರಂಗಪಡಿಸುತ್ತದೆ. ಗುಜರಾತಿನ ಅಭಿವೃದ್ಧಿ ಮಾದರಿಯನ್ನು ಕೇಂದ್ರ ಸರ್ಕಾರವು ಭಾರತದಾದ್ಯಂತ ಪುನರಾವರ್ತಿಸುವ ಮಾತನಾಡುತ್ತಿರುವ ಈ ಸಂದರ್ಭದಲ್ಲಿಯೇ ಈ ವರದಿ ಹೊರಬಿದ್ದಿದೆ.

ಈಗ ನಮಗೆ ಥಟ್ಟನೆ ನೆನಪಾಗುವುದು 2019ರ ಫೋರ್ಬ್ಸ್ ಶ್ರೀಮಂತರ ಪಟ್ಟಿ. ಭಾರತದ ಮೊದಲ ಐವರು ಶ್ರೀಮಂತರ ಪೈಕಿ ನಾಲ್ವರು ಗುಜರಾತಿಗಳು! ಅಸಮಾನ ಸಂಪತ್ತಿನ ಹಂಚಿಕೆಗೆ ಮತ್ತು ಕೇಂದ್ರ, ಗುಜರಾತ್ ಸರ್ಕಾರಗಳ ಪಾಲಿಸಿಗಳಿಗೆ ಇವೆರಡೂ-ಅಪೌಷ್ಟಿಕತೆ ಮತ್ತು ‘ಕೊಬ್ಬು’ ಹೆಚ್ಚಿದವರು- ಕನ್ನಡಿ ಹಿಡಿಯುತ್ತಿವೆ.

ಶೇ. 3.41 ಅಂಗನವಾಡಿ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇರುವುದು ಕಂಡುಬಂದಿದೆ. ಅಂಗನವಾಡಿ ಹೊರಗಿರುವ ಮಕ್ಕಳನ್ನು ಗಣನೆಗೆ ತೆಗೆದುಕೊಂಡರೆ ಒಟ್ಟು ಅಪೌಷ್ಟಿಕ ಮಕ್ಕಳ ಸಂಖ್ಯೆ ತುಂಬಾ ಹೆಚ್ಚಿರಬಹುದು.

ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾದ ಉತ್ತರಗಳ ಪ್ರಕಾರ, ರಾಜ್ಯದ ಐದು ಜಿಲ್ಲೆಗಳ 46 ತಾಲೂಕುಗಳಲ್ಲಿ 1.97 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಮತ್ತು 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಬನಸ್ಕಂತ, ಪಟಾನ್, ನವಸಾರಿ, ಜುನಾಗಢ್ ಮತ್ತು ಖೇಡಾ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ತೀವ್ರವಾಗಿದೆ.

1.97 ಲಕ್ಷ ಅಪೌಷ್ಟಿಕ ಮಕ್ಕಳಲ್ಲಿ 68% ಪಟಾನ್ ಜಿಲ್ಲೆಯ ಎಂಟು ತಾಲೂಕಿನಲ್ಲಿದ್ದಾರೆ. ಈ ಐದು ಜಿಲ್ಲೆಗಳಲ್ಲಿ 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅದರಲ್ಲಿ 14,371 ಮಕ್ಕಳು ಪಟಾನ್ ಜಿಲ್ಲೆಯವರು.

2015 ರ ಮೇ ತಿಂಗಳಲ್ಲಿ ಗುಜರಾತ್ ಸರ್ಕಾರವು ರಾಜ್ಯವನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸಲು ನಿರ್ಧರಿಸಿದೆ ಎಂದು ಗುಜರಾತ್‌ನ ಸಾಮಾಜಿಕ-ಆರ್ಥಿಕ ವಿಮರ್ಶೆ (2015-16) ತಿಳಿಸಿತ್ತು. ಆದರೆ ಅದಾಗಲೇ ಇಲ್ಲ. ಗುಜರಾತಿನ ನಾಲ್ವರು ಉದ್ಯಮಿಗಳು ಟಾಪ್ 5 ಶ್ರೀಮಂತರ ಪಟ್ಟಿಗೆ ಸೇರಿದ್ದು ಮಾತ್ರ ಸರಾಗವಾಗಿ ನಡೆಯಿತು ಎಂಬುದು ವಿರೋಧಭಾಸವಲ್ಲವೇ?

ವೈದ್ಯಕೀಯ ತೊಂದರೆಗಳನ್ನು ಹೊಂದಿರುವ ಮತ್ತು ಹಸಿವು ಪರೀಕ್ಷೆಯಲ್ಲಿ ವಿಫಲರಾದ ಅಪೌಷ್ಟಿಕ ಮಕ್ಕಳನ್ನು ಮಕ್ಕಳ ಅಪೌಷ್ಟಿಕತೆ ಚಿಕಿತ್ಸಾ ಕೇಂದ್ರಗಳಿಗೆ ಅಥವಾ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಗಳಿಗೆ ಸೇರಿಸಲು ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ರಾಜ್ಯ ಸಚಿವ ವಾಸುಬೆನ್ ತ್ರಿವೇದಿ, “ರಾಜ್ಯ ಸರ್ಕಾರವು ಸಹ ಅಷ್ಟೇ ಚಿಂತಿತವಾಗಿದೆ. ಆದ್ದರಿಂದ 2016-17ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ ದೂಧ್ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲು ನಾವು ನಿರ್ಧರಿಸಿದ್ದೇವೆ ಎಂದಿದ್ದಾರೆ. ಈಗ ಅಲ್ಲಿನ ಅಂಗನವಾಡಿಗಳಲ್ಲಿ ವಾರದಲ್ಲಿ ಎರಡು ಸಲ ಮಾತ್ರ ಹಾಲು ನೀಡಲಾಗುತ್ತಿದೆ.

ಕೊಬ್ಬಿದ ಕುಬೇರರು

2019ರಲ್ಲಿ ಫೋರ್ಬ್ಸ್ ಪ್ರಕಟಿಸಿದ ಪಟ್ಟಿ ಪ್ರಕಾರ, 51.4 ಬಿಲಿಯನ್ ಡಾಲರ್‌ಗಳ ಒಡೆಯ ಅಂಬಾನಿ ಮೊದಲ ಸ್ಥಾನದಲ್ಲಿ, 15.7 ಬಿಲಿಯನ್ ಡಾಲರ್ ಹೊಂದಿರುವ ಅದಾನಿ 2ನೆ ಸ್ಥಾನದಲ್ಲಿ, 15 ಬಿಲಿಯನ್ ಡಾಲರ್ ಶ್ರೀಮಂತ ಪಲ್ಲೊಂಜಿ ಮಿಸ್ತ್ರಿ 4ನೆ ಸ್ಥಾನದಲ್ಲಿ ಮತ್ತು 14 ಬಿಲಿಯನ್ ಡಾಲರ್ ಹೊಂದಿರುವ ಉದಯ ಕೊಟಕ್ 5ನೆ ಸ್ಥಾನದಲ್ಲಿದ್ದಾರೆ. ಇವರೆಲ್ಲ ಗುಜರಾತಿಗಳು.

ಕೊರೋನಾ-ಲಾಕ್‌ಡೌನ್ ಸಮಯದಲ್ಲೇ ಅಂಬಾನಿ-ಅದಾನಿ ಗಳಿಕೆ ತೀವ್ರ ಏರಿಕೆಯಾಗಿದೆ!
ಗುಜರಾತ್ ಅಂಗನವಾಡಿಗಳಲ್ಲಿ ವಾರಕ್ಕೆ ಕೇವಲ ಒಂದಿನ ಅಥವಾ ಎರಡು ದಿನ ಹಾಲು ವಿತರಿಸಲಾಗುತ್ತಿದೆ. ಗುಜರಾತಿನಲ್ಲಿ ಸುಪ್ರಸಿದ್ಧ ಅಮುಲ್ ಡೈರಿ ಇದ್ದರೂ ಅಲ್ಲಿನ ಮಕ್ಕಳಿಗೆ ಹಾಲು, ಮೊಟ್ಟೆಯಂತಹ ಪೌಷ್ಠಿಕ ಆಹಾರಗಳನ್ನು ನೀಡಲು ಸರ್ಕಾರ ವಿಫಲವಾಗಿದೆ ಅಂದರೆ ಅದರ ಆದ್ಯತೆ ಯಾವುದಾಗಿದೆ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...