Homeಮುಖಪುಟಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

ಗುಜರಾತ್ ಮಾಡೆಲ್: ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು & ಕೊಬ್ಬುತ್ತಿರುವ ಉದ್ಯಮಿಗಳು!

- Advertisement -
- Advertisement -

ಇತ್ತೀಚೆಗೆ ಗುಜರಾತ್ ಮಕ್ಕಳಲ್ಲಿನ ಅಪೌಷ್ಟಿಕತೆಯ ಕುರಿತಾದ ಆಘಾತಕಾರಿ ವರದಿಯೊಂದು ಪ್ರಕಟವಾಗಿದೆ. ಅದೇ ರೀತಿ 2019ರ ಅಕ್ಟೋಬರ್‌ನಲ್ಲಿ ಫೋರ್ಬ್ಸ್ ಪ್ರಕಟಿಸಿದ ಶ್ರೀಮಂತರ ಪಟ್ಟಿಯನ್ನು ಗಣನೆಗೆ ತೆಗೆದುಕೊಂಡರೆ, ಅದರಲ್ಲಿ ಐವರು ಟಾಪ್ ಶ್ರೀಮಂತ ಭಾರತೀಯರಲ್ಲಿ ನಾಲ್ವರು ಗುಜರಾತಿಗಳೇ ಆಗಿದ್ದಾರೆ. ಟಾಪ್ ಎರಡು ಸ್ಥಾನಗಳಲ್ಲಿರುವವರು ಮೋದಿಯವರಿಗೆ ಹತ್ತಿರದ ಸ್ನೇಹಿತರಾಗಿದ್ದಾರೆ. ಅಪೌಷ್ಟಿಕತೆ ಮತ್ತು ಕೊಬ್ಬು (FAT) ಸಂಪತ್ತಿನ ಅಸಮಾನ ಹಂಚಿಕೆಗೆ ಒಂದು ರೂಪಕದಂತೆ ಭಾಸವಾಗುತ್ತಿದೆ.

ಗುಜರಾತ್‌ನ ಸಾಮಾಜಿಕ-ಆರ್ಥಿಕ ಪರಿಶೀಲನೆಯ ವರದಿಯ ಪ್ರಕಾರ, ರಾಜ್ಯದ ಅಂಗನವಾಡಿಗಳಲ್ಲಿರುವ 43 ಲಕ್ಷ ಮಕ್ಕಳಲ್ಲಿ 1.47 ಲಕ್ಷ ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ (severe acute malnutrition- SAM) ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ‘ಆರ್ಥಿಕವಾಗಿ ಪ್ರಗತಿಪರ’ ರಾಜ್ಯವಾದ ಗುಜರಾತ್‌ನಲ್ಲಿ ಅಪೌಷ್ಟಿಕತೆ ಹೇಗೆ ಒಂದು ಸವಾಲಾಗಿ ಮುಂದುವರೆದಿದೆ ಎಂಬುದನ್ನು ಈ ವರದಿ ಬಹಿರಂಗಪಡಿಸುತ್ತದೆ. ಗುಜರಾತಿನ ಅಭಿವೃದ್ಧಿ ಮಾದರಿಯನ್ನು ಕೇಂದ್ರ ಸರ್ಕಾರವು ಭಾರತದಾದ್ಯಂತ ಪುನರಾವರ್ತಿಸುವ ಮಾತನಾಡುತ್ತಿರುವ ಈ ಸಂದರ್ಭದಲ್ಲಿಯೇ ಈ ವರದಿ ಹೊರಬಿದ್ದಿದೆ.

ಈಗ ನಮಗೆ ಥಟ್ಟನೆ ನೆನಪಾಗುವುದು 2019ರ ಫೋರ್ಬ್ಸ್ ಶ್ರೀಮಂತರ ಪಟ್ಟಿ. ಭಾರತದ ಮೊದಲ ಐವರು ಶ್ರೀಮಂತರ ಪೈಕಿ ನಾಲ್ವರು ಗುಜರಾತಿಗಳು! ಅಸಮಾನ ಸಂಪತ್ತಿನ ಹಂಚಿಕೆಗೆ ಮತ್ತು ಕೇಂದ್ರ, ಗುಜರಾತ್ ಸರ್ಕಾರಗಳ ಪಾಲಿಸಿಗಳಿಗೆ ಇವೆರಡೂ-ಅಪೌಷ್ಟಿಕತೆ ಮತ್ತು ‘ಕೊಬ್ಬು’ ಹೆಚ್ಚಿದವರು- ಕನ್ನಡಿ ಹಿಡಿಯುತ್ತಿವೆ.

ಶೇ. 3.41 ಅಂಗನವಾಡಿ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇರುವುದು ಕಂಡುಬಂದಿದೆ. ಅಂಗನವಾಡಿ ಹೊರಗಿರುವ ಮಕ್ಕಳನ್ನು ಗಣನೆಗೆ ತೆಗೆದುಕೊಂಡರೆ ಒಟ್ಟು ಅಪೌಷ್ಟಿಕ ಮಕ್ಕಳ ಸಂಖ್ಯೆ ತುಂಬಾ ಹೆಚ್ಚಿರಬಹುದು.

ರಾಜ್ಯ ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾದ ಉತ್ತರಗಳ ಪ್ರಕಾರ, ರಾಜ್ಯದ ಐದು ಜಿಲ್ಲೆಗಳ 46 ತಾಲೂಕುಗಳಲ್ಲಿ 1.97 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಮತ್ತು 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಬನಸ್ಕಂತ, ಪಟಾನ್, ನವಸಾರಿ, ಜುನಾಗಢ್ ಮತ್ತು ಖೇಡಾ ಜಿಲ್ಲೆಗಳಲ್ಲಿ ಅಪೌಷ್ಟಿಕತೆ ತೀವ್ರವಾಗಿದೆ.

1.97 ಲಕ್ಷ ಅಪೌಷ್ಟಿಕ ಮಕ್ಕಳಲ್ಲಿ 68% ಪಟಾನ್ ಜಿಲ್ಲೆಯ ಎಂಟು ತಾಲೂಕಿನಲ್ಲಿದ್ದಾರೆ. ಈ ಐದು ಜಿಲ್ಲೆಗಳಲ್ಲಿ 24,762 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಅದರಲ್ಲಿ 14,371 ಮಕ್ಕಳು ಪಟಾನ್ ಜಿಲ್ಲೆಯವರು.

2015 ರ ಮೇ ತಿಂಗಳಲ್ಲಿ ಗುಜರಾತ್ ಸರ್ಕಾರವು ರಾಜ್ಯವನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸಲು ನಿರ್ಧರಿಸಿದೆ ಎಂದು ಗುಜರಾತ್‌ನ ಸಾಮಾಜಿಕ-ಆರ್ಥಿಕ ವಿಮರ್ಶೆ (2015-16) ತಿಳಿಸಿತ್ತು. ಆದರೆ ಅದಾಗಲೇ ಇಲ್ಲ. ಗುಜರಾತಿನ ನಾಲ್ವರು ಉದ್ಯಮಿಗಳು ಟಾಪ್ 5 ಶ್ರೀಮಂತರ ಪಟ್ಟಿಗೆ ಸೇರಿದ್ದು ಮಾತ್ರ ಸರಾಗವಾಗಿ ನಡೆಯಿತು ಎಂಬುದು ವಿರೋಧಭಾಸವಲ್ಲವೇ?

ವೈದ್ಯಕೀಯ ತೊಂದರೆಗಳನ್ನು ಹೊಂದಿರುವ ಮತ್ತು ಹಸಿವು ಪರೀಕ್ಷೆಯಲ್ಲಿ ವಿಫಲರಾದ ಅಪೌಷ್ಟಿಕ ಮಕ್ಕಳನ್ನು ಮಕ್ಕಳ ಅಪೌಷ್ಟಿಕತೆ ಚಿಕಿತ್ಸಾ ಕೇಂದ್ರಗಳಿಗೆ ಅಥವಾ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಗಳಿಗೆ ಸೇರಿಸಲು ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ರಾಜ್ಯ ಸಚಿವ ವಾಸುಬೆನ್ ತ್ರಿವೇದಿ, “ರಾಜ್ಯ ಸರ್ಕಾರವು ಸಹ ಅಷ್ಟೇ ಚಿಂತಿತವಾಗಿದೆ. ಆದ್ದರಿಂದ 2016-17ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾದ ದೂಧ್ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಲು ನಾವು ನಿರ್ಧರಿಸಿದ್ದೇವೆ ಎಂದಿದ್ದಾರೆ. ಈಗ ಅಲ್ಲಿನ ಅಂಗನವಾಡಿಗಳಲ್ಲಿ ವಾರದಲ್ಲಿ ಎರಡು ಸಲ ಮಾತ್ರ ಹಾಲು ನೀಡಲಾಗುತ್ತಿದೆ.

ಕೊಬ್ಬಿದ ಕುಬೇರರು

2019ರಲ್ಲಿ ಫೋರ್ಬ್ಸ್ ಪ್ರಕಟಿಸಿದ ಪಟ್ಟಿ ಪ್ರಕಾರ, 51.4 ಬಿಲಿಯನ್ ಡಾಲರ್‌ಗಳ ಒಡೆಯ ಅಂಬಾನಿ ಮೊದಲ ಸ್ಥಾನದಲ್ಲಿ, 15.7 ಬಿಲಿಯನ್ ಡಾಲರ್ ಹೊಂದಿರುವ ಅದಾನಿ 2ನೆ ಸ್ಥಾನದಲ್ಲಿ, 15 ಬಿಲಿಯನ್ ಡಾಲರ್ ಶ್ರೀಮಂತ ಪಲ್ಲೊಂಜಿ ಮಿಸ್ತ್ರಿ 4ನೆ ಸ್ಥಾನದಲ್ಲಿ ಮತ್ತು 14 ಬಿಲಿಯನ್ ಡಾಲರ್ ಹೊಂದಿರುವ ಉದಯ ಕೊಟಕ್ 5ನೆ ಸ್ಥಾನದಲ್ಲಿದ್ದಾರೆ. ಇವರೆಲ್ಲ ಗುಜರಾತಿಗಳು.

ಕೊರೋನಾ-ಲಾಕ್‌ಡೌನ್ ಸಮಯದಲ್ಲೇ ಅಂಬಾನಿ-ಅದಾನಿ ಗಳಿಕೆ ತೀವ್ರ ಏರಿಕೆಯಾಗಿದೆ!
ಗುಜರಾತ್ ಅಂಗನವಾಡಿಗಳಲ್ಲಿ ವಾರಕ್ಕೆ ಕೇವಲ ಒಂದಿನ ಅಥವಾ ಎರಡು ದಿನ ಹಾಲು ವಿತರಿಸಲಾಗುತ್ತಿದೆ. ಗುಜರಾತಿನಲ್ಲಿ ಸುಪ್ರಸಿದ್ಧ ಅಮುಲ್ ಡೈರಿ ಇದ್ದರೂ ಅಲ್ಲಿನ ಮಕ್ಕಳಿಗೆ ಹಾಲು, ಮೊಟ್ಟೆಯಂತಹ ಪೌಷ್ಠಿಕ ಆಹಾರಗಳನ್ನು ನೀಡಲು ಸರ್ಕಾರ ವಿಫಲವಾಗಿದೆ ಅಂದರೆ ಅದರ ಆದ್ಯತೆ ಯಾವುದಾಗಿದೆ?

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ದುಡಿಯೋದು ಯಾರೋ? ಸ್ವಾರ್ಥಕ್ಕೆ ಮಾಡಿಕೊಳ್ಳೋದು ಇನ್ಯಾರೋ?- BSY ವಿರುದ್ಧ ಶ್ರೀನಿವಾಸ್ ಪ್ರಸಾದ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...