Homeಮುಖಪುಟನಭಕ್ಕೆ ಜಿಗಿದ ಮೋದಿ ಫೋಟೊ, ಭಗವದ್ಗೀತೆ ಕಾಪಿ: ಇಲ್ಲೇ ಉಳಿದ 'ಆನಂದ್' ಉಪಗ್ರಹ!

ನಭಕ್ಕೆ ಜಿಗಿದ ಮೋದಿ ಫೋಟೊ, ಭಗವದ್ಗೀತೆ ಕಾಪಿ: ಇಲ್ಲೇ ಉಳಿದ ‘ಆನಂದ್’ ಉಪಗ್ರಹ!

- Advertisement -
- Advertisement -

ಇಂದಿನ ಉಡಾವಣೆಯಲ್ಲಿ ಮೋದಿ ಚಿತ್ರ ಮತ್ತು ಭಗವದ್ಗೀತೆಯ ಇ-ಕಾಪಿಯೇನೋ ನಭಕ್ಕೆ ಜಿಗಿದವು. ಆದರೆ, ತುಂಬ ನಿರೀಕ್ಷಿತ ಭಾರತದ ಮೊದಲ ಖಾಸಗಿ ಉಪಗ್ರಹ ‘ಆನಂದ್’ ಮಾತ್ರ ಇಲ್ಲೆ ಉಳಿದಿದೆ.

ಪಿಎಸ್‌ಎಲ್‌ವಿ-ಸಿ 51 ಘೋಷಿಸಿದಾಗ, ಈ ಆನಂದ್ ಉಪಗ್ರಹದ ಬಗ್ಗೆ ಸಾಕಷ್ಟು ಪ್ರಶಂಸೆ ಕೇಳಿಬಂದಿತ್ತು. ಅದು ಅಂತಿಮವಾಗಿ ಇಂದು ಉಡಾವಣೆಯ ಭಾಗವಾಗಲು ಸಾಧ್ಯವಾಗಲಿಲ್ಲ. ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.

ಇಂದಿನ ಉಡಾವಣೆ ಬೆಂಗಳೂರು ಮೂಲದ ಪಿಕ್ಸೆಲ್ ಕಂಪನಿಯ ಉಪಗ್ರಹ ‘ಆನಂದ್’ ಅನ್ನು ಸಾಗಿಸಬೇಕಿತ್ತು. ಪಿಕ್ಸೆಲ್ ಖಾಸಗಿ ಕ್ಷೇತ್ರದ ಹೊಸ ಸ್ಟಾರ್ಟ್ ಅಪ್‌ಗಳಲ್ಲಿ ಒಂದಾಗಿದ್ದು, ಸ್ಪೇಸ್‌ಎಕ್ಸ್ ಅಥವಾ ಪ್ಲಾನೆಟ್ ಲ್ಯಾಬ್‌ಗಳಂತಹ ಕಂಪನಿಗಳು ಅಮೆರಿಕದಲ್ಲಿ ಏನು ಮಾಡುತ್ತಿವೆಯೋ ಅದನ್ನು ಮಾಡುತ್ತಿದೆ.

ಶನಿವಾರ ಎರಡು ವರ್ಷಗಳನ್ನು ಪೂರ್ಣಗೊಳಿಸಿದ ಬೆಂಗಳೂರು ಮೂಲದ ಪಿಕ್ಸೆಲ್ ಇಂಡಿಯಾ, ಜಗತ್ತಿನ ಪ್ರತಿಯೊಂದು ಭಾಗವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಹೆಚ್ಚಿನ ರೆಸಲ್ಯೂಶನ್ ಚಿತ್ರಣಗಳನ್ನು ಒದಗಿಸುವ ವ್ಯವಸ್ಥೆಯನ್ನು ಉಪಗ್ರಹದಲ್ಲಿ ಅಳವಡಿಸಿದೆ. ಹವಾಮಾನ ಬದಲಾವಣೆ, ಕೃಷಿ ಮತ್ತು ನಗರ ಯೋಜನೆಯಲ್ಲಿ ಈ ಅನ್ವಯಿಕೆಗಳನ್ನು ಬಳಸಿಕೊಳ್ಳಬಹುದು. ಆನಂದ್ ಎಂದು ಕರೆಯಲ್ಪಡುವ ಅದರ ಮೊದಲ ಉಪಗ್ರಹಗಳು ಇಂದು ಬೆಳಿಗ್ಗೆ ಶ್ರೀಹರಿಕೋಟ ಉಡಾವಣಾ ಶ್ರೇಣಿಯಿಂದ ಹೊರಟ ಈ ಪಿಎಸ್‌ಎಲ್‌ವಿ-ಸಿ 51 ರಾಕೆಟ್‌ನಲ್ಲಿ ಇರಬೇಕಿತ್ತು.

ಆದರೆ ಉಡಾವಣೆಗೆ ಒಂದು ವಾರಕ್ಕಿಂತಲೂ ಮೊದಲು, ಕಂಪನಿಯು, ‘ಪರೀಕ್ಷೆಯ ಸಮಯದಲ್ಲಿ “ಕೆಲವು ಸಾಫ್ಟ್‌ವೇರ್ ಸಮಸ್ಯೆಗಳ’ ಕಾರಣದಿಂದಾಗಿ, ಈ ಸಮಯದಲ್ಲಿ ಉಪಗ್ರಹವನ್ನು ಉಡಾಯಿಸುವುದಿಲ್ಲ ಎಂದು ಘೋಷಿಸಿತು. “ಉಪಗ್ರಹವನ್ನು ತಯಾರಿಸಲು ವ್ಯಯಿಸಿದ ಸಮಯ ಮತ್ತು ಶ್ರಮವನ್ನು ಗಮನಿಸಿದರೆ, ಉಪಗ್ರಹವನ್ನು ಉಡಾಯಿಸಲು ಮುಂದಾಗುವುದರಲ್ಲಿ ಅರ್ಥವಿಲ್ಲ, ಈ ಸಮಯದಲ್ಲಿ ನಮಗೆ ಸಂಪೂರ್ಣ ವಿಶ್ವಾಸವಿಲ್ಲ’ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿತ್ತು.

ಪಿಕ್ಸೆಲ್ ಉಪಗ್ರಹದಿಂದಾಗಿ ಪಿಎಸ್‌ಎಲ್‌ವಿ-ಸಿ 51 ಉಡಾವಣೆಯು “ವಿಶೇಷ” ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ಕೂಡ ಹೇಳಿದ್ದರು, ‘ಏಕೆಂದರೆ ಇದು ಹೊಸ ಯುಗದ ಆರಂಭದ ಪ್ರತೀಕವಾಗಿದ್ದು, ಖಾಸಗಿ ಕಂಪನಿಗಳು ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಮಾನ ಪಾಲುದಾರರಾಗುವ ಅಪೂರ್ವ ಸಂದರ್ಭ’ ಎಂದು ಅವರು ಡಿಸೆಂಬರ್‌ನಲ್ಲಿ ಹೇಳಿದ್ದರು.

‘ಭಾರತ ಸರ್ಕಾರವು ಸುಧಾರಣೆಗಳನ್ನು ಪ್ರಾರಂಭಿಸಿದ (ಖಾಸಗಿ ಕಂಪನಿಗಳ ಭಾಗವಹಿಸುವಿಕೆಗೆ ಅನುಕೂಲವಾಗುವಂತೆ ಬಾಹ್ಯಾಕಾಶ ಕ್ಷೇತ್ರವನ್ನು ತೆರೆದಿದ್ದು) ಎಂಟು ತಿಂಗಳಲ್ಲಿ, ಪಿಕ್ಸೆಲ್ ಇಂಡಿಯಾ ಎಂಬ ಸ್ಟಾರ್ಟ್ ಅಪ್‌ನಿಂದ ಆನಂದ್ ಎಂಬ ಮೊದಲ ಉಪಗ್ರಹವನ್ನು ಉಡಾವಣೆ ಮಾಡಲಾಗುವುದು, ” ಎಂದು ಶಿವನ್ ಹೆಮ್ಮೆ ಪಟ್ಟಿದ್ದರು.

ಉಡಾವಣೆಯು ಅಂತಿಮವಾಗಿ ಪಿಕ್ಸೆಲ್ ಇಂಡಿಯಾ ಉಪಗ್ರಹವಿಲ್ಲದೆ ಸಂಭವಿಸಿತು, ಇಂದು ಉಡಾಯಿಸಲ್ಪಟ್ಟ ದೇಸಿ ಉಪಗ್ರಹಗಳನ್ನು ವಿವಿಧ ಇಂಜಿನಿಯರಿಂಗ್ ಕಾಲೇಜುಗಳು ಸಹಯೋಗದಲ್ಲಿ ಅಭಿವೃದ್ಧಿಪಡಿಸಿವೆ.


ಇದನ್ನೂ ಓದಿ: SD ಕಾರ್ಡ್‌ನಲ್ಲಿನ ಭಗವದ್ಗೀತೆ ಹೊತ್ತೊಯ್ದ ಉಪಗ್ರಹ: ಲೈವ್ ವೀಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...