Homeಕರ್ನಾಟಕರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ರಾಯಚೂರು: ಬೆಲೆ ಏರಿಕೆ ವಿರುದ್ಧ ಮಾರ್ಚ್ 6ಕ್ಕೆ ಬೃಹತ್ ಪ್ರತಿಭಟನಾ ರ್‍ಯಾಲಿ

ಸಿಂಧನೂರಿನಲ್ಲಿಯು ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸೋಮವಾರ (ಮಾರ್ಚ್ 1)ಕ್ಕೆ ಟ್ರಾಕ್ಟರ್ ಎಳೆದು ಪ್ರತಿಭಟನಾ ರ್‍ಯಾಲಿ ನಡೆಸಲು ನಿರ್ಧರಿಸಲಾಗಿದೆ

- Advertisement -
- Advertisement -

’ಆನೆಗೆ ಅಂಕುಶ ಇರುವಂತೆ ಆಡಳಿತಗಾರರನ್ನು ಎಚ್ಚರಿಸಲು ಹೋರಾಟ ಎನ್ನುವ ಅಂಕುಶ ಬೇಕೇ ಬೇಕು’ ಎಂದು ಬೆಲೆ ಏರಿಕೆ ವಿರುದ್ಧ ಮಾರ್ಚ್ 6ರಂದು ರಾಯಚೂರಿನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ್‍ಯಾಲಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ನಾಗರಿಕರು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಯಚೂರಿನ ಸ್ಪಂದನ ಭವನದಲ್ಲಿ ಭಾನುವಾರ (ಫೆ.28) ಬೆಳಿಗ್ಗೆ ವಿವಿಧ ವಿಭಾಗಗಳ ಜನರು ಈ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದ್ದರು. ಮಾರ್ಚ್ 6ರಂದು ಬೆಳಿಗ್ಗೆ 11ಕ್ಕೆ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದೆ.

SUCI(C) ಪಕ್ಷದ ರಾಯಚೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಾಕ್ಟರ್ ಚಂದ್ರಗಿರೀಶ್ ಮಾತನಾಡಿ, ’ಅಚ್ಛೇ ದಿನ ತರುತ್ತೇವೆ ಎಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವು ಜನಗಳ ಜೇಬಿಗೆ ಕೈಹಾಕಿ ಲೂಟಿ ಮಾಡುತ್ತಿದೆ. ಎಲ್ಲಾ ಅಗತ್ಯ ವಸ್ತುಗಳ ಮೇಲೆ ಅತೀ ಹೆಚ್ಚು ತೆರಿಗೆ ಹಾಕಿ, ಬೆಲೆ ಏರಿಕೆ ಮಾಡಿದೆ. ಜನರು ಒಂದೊತ್ತಿನ ಊಟಕ್ಕೆ ಪರದಾಡುವಂತಾಗಿದೆ’ ಎಂದರು.

ಮುಂದುವರಿದು, ’ಅಂಬಾನಿ, ಅದಾನಿ, ಟಾಟಾ, ಬಿರ್ಲಾ ಅಂತಹ ಕಾರ್ಫೊರೇಟರ್‌ಗಳ ಸಂಪತ್ತಿನ ಹೆಚ್ಚಳವಾಗುತ್ತಿದೆ‌. ಜನರು ದರಿದ್ರರಾಗುತ್ತಿದ್ದಾರೆ. ಅಧಿಕಾರಕ್ಕೆ ಬಂದ ಸರ್ಕಾರಗಳು ಬಂಡವಾಳಗಾರರ ಸೇವೆಗೆ ನಿಂತಿವೆ. ಇದರ ವಿರುದ್ಧ ಹೋರಾಟ ಮಾಡುವುದನ್ನು ಬಿಟ್ಟು ಬೇರೆ ದಾರಿ ಇಲ್ಲವಾಗಿದೆ. ಸಣ್ಣಪುಟ್ಟ ಹೋರಾಟಗಳಿಗೆ ಇವರು ಮಣಿಯುವುದಿಲ್ಲ. ಹಾಗಾಗಿ ಜನರು ಬೃಹತ್ ಹೋರಾಟಕ್ಕೆ ತಯಾರಾಗಬೇಕಾದ ಅವಶ್ಯಕತೆ ಇದೆ. ಈಗ ಅಂತಹ ಸಮಯ ಬಂದಿದೆ. ಪ್ರತಿಯೊಬ್ಬರು ಆ ದಿಕ್ಕಿನಲ್ಲಿ ಕೆಲಸ ಮಾಡಲು ತಯಾರಾಗಬೇಕು’ ಎಂದರು.

ಇದನ್ನೂ ಓದಿ: ಪಂಚ ರಾಜ್ಯ ಚುನಾವಣೆ ಕುರಿತು ಎಬಿಪಿ-ಸಿ- ಓಟರ್ ಸಮೀಕ್ಷೆ ಹೇಳಿದ್ದೇನು…ಇಲ್ಲಿದೆ ವಿವರ

ಸಭೆಯ ಅಧ್ಯಕ್ಷತೆ ವಹಿಸಿದ್ದ AIUTUC ಜಿಲ್ಲಾಧ್ಯಕ್ಷ ವೀರೇಶ್ ಎನ್.ಎಸ್ ಮಾತನಾಡಿ, ’ನಿರುದ್ಯೋಗ, ಬಡತನ, ಬೆಲೆಯೇರಿಕೆ ಜನಗಳ ದಿನನಿತ್ಯ ಸಮಸ್ಯೆಗಳಾಗಿವೆ. ಕೊರೊನಾ ಕಾಲದಲ್ಲಿ ಜನಗಳಲ್ಲಿ ನೆರವಿಗೆ ಬರಬೇಕಾದ ಸರಕಾರ ಬಂಡವಾಳಗಾರರ ಸೇವೆಗೆ ನಿಂತಿದೆ. ಈ ಸಮಯದಲ್ಲಿ ರೈತ- ಕಾರ್ಮಿಕರ ವಿರೋಧಿ ನೀತಿಗಳನ್ನು ಜಾರಿಗೆ ತಂದಿದೆ. ಇಂತಹ ಜನವಿರೋಧಿ ನೀತಿಗಳ ವಿರುದ್ಧ ಜನಗಳು ಒಂದುಗೂಡಿ ಹೋರಾಟಕ್ಕೆ ಮುಂದಾಗಬೇಕು’ ಎಂದರು.

’ಜನಕಲ್ಯಾಣ ಯೋಜನೆಗಳಿಗೆ ಬೊಕ್ಕಸದಲ್ಲಿ ಹಣವಿಲ್ಲವೆಂದು ಹೇಳುವ ಸರ್ಕಾರಗಳು ಮಂತ್ರಿಗಳು ಐಷಾರಾಮಿ ಕಾರುಗಳನ್ನು ಖರೀದಿಸಲು ಹಣ ಹೆಚ್ಚಳ ಮಾಡಿದೆ. ತಿರುಪತಿಯಲ್ಲಿ ಬೃಹತ್ ವಸತಿ ಗೃಹ ಕಟ್ಟಿಸಲು 200 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಆದ್ದರಿಂದ ಈ ಬೆಲೆ ಏರಿಕೆ ವಿರುದ್ಧ ಜನರ ನಡುವೆ ವ್ಯಾಪಕ ಪ್ರಚಾರ ಮಾಡಿ ಮಾರ್ಚ್ 6ರಂದು ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದು ಡೆಮಾಕ್ರಟಿಕ್ ಯೂತ್ ಆರ್ಗನೈಸೆಷನ್ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್ ಹೇಳಿದರು.

ಹಿರಿಯ ನಾಗರಿಕರಾದ ಖಂಡೇರಾವ್, ದಯಾನಂದ, ಅಣ್ಣಪ್ಪ, ಫ್ರಾಂಕ್ಲಿನ್ ರಾಜು, ನಿಸಾರ್, ನೂರ್, ಜಮಾಲುದ್ದಿನ್, ರಾಮಣ್ಣ ಎಂ, ಜಾವೇದ್, ಭೀಮಣ್ಣ, ಪ್ರಮೋದ್ ಕುಮಾರ್, ರವೂಫ್ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

May be an image of 5 people, outdoors and text that says "ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಟಾ ಕ ರ‍ಗೆ ಹಗ ಕಟ್ಟಿ பவி ಪ ಎಳೆಯುವ ಮೂಲಕ ಪ್ರತಿಭಟನಾ ಮೆರವಣಿಗೆ TRAKSTER 536 ದಿನಾಂಕ: 1.3.2021 ಬೆಳಿಗ್ಗೆ 10.30 ಗಂಟೆಗೆ ಸ್ಥಳ: ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಹಾತ್ಮ ಗಾಂಧಿ ವೃತ್ತದವರೆಗೆ... ಪ್ರಗತಪರ ಸಂಘಟನಗಳ ಒಕ್ಕೂಟ ಸಿಂಧನೂರು"

ಇತ್ತ ಸಿಂಧನೂರಿನಲ್ಲಿಯೂ ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸೋಮವಾರ (ಮಾರ್ಚ್ 1)ಕ್ಕೆ ಸಿಂಧನೂರಿನ ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಹಾತ್ಮ ಗಾಂಧಿ ಸರ್ಕಲ್ ವರೆಗೆ ಟ್ರಾಕ್ಟರ್ ಎಳೆದು ಪ್ರತಿಭಟನಾ ಮೆರವಣಿಗೆ ನಡೆಸಲು ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.


ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...